ರೌದ್ರಾವತಿ ನದಿ ಹೂಳೆತ್ತಲು ಕ್ರಮ

•ನದಿ ಪರಿಶುದ್ಧತೆ ಕಾಪಾಡಿ•ಪ್ಲಾಸ್ಟಿಕ್‌ ನಿಷೇಧಕ್ಕೆ ಒತ್ತು ನೀಡಿ

Team Udayavani, Aug 22, 2019, 10:09 AM IST

22-Agust-2

ಕಾಳಗಿ: ರೌದ್ರಾವತಿ ನದಿಗೆ ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಭೇಟಿ ನೀಡಿ ಪರಿಶೀಲಿಸಿದರು.

ಕಾಳಗಿ: ದಕ್ಷಿಣ ಕಾಶಿ ಎಂದೇ ಪ್ರಸಿದ್ಧಿ ಪಡೆದಿರುವ ನೀಲಕಂಠ ಕಾಳೇಶ್ವರ ದೇವಸ್ಥಾನ ಪಕ್ಕದಲ್ಲಿ ಹರಿಯುವ ರೌದ್ರಾವತಿ ನದಿಗೆ ಜಿಲ್ಲಾಧಿಕಾರಿ ಆರ್‌. ವೇಂಕಟೇಶಕುಮಾರ ಭೇಟಿ ನೀಡಿ, ನದಿಯಲ್ಲಿನ ಕೊಳಚೆ ಹೂಳೆತ್ತುವ ಮೂಲಕ ನೀರಿನ ಸಂರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ನಿರಂತರವಾಗಿ ಪುಟಿದೆಳುವ ಝರಿಗಳಿಂದಲೇ ಹೆಸರಾಗಿರುವ ಪಟ್ಟಣದ ರೌದ್ರಾವತಿ ನದಿಯನ್ನು ಕಂಡು ಆಶ್ಚರ್ಯ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು ಇಂತಹ ನೀರನ್ನು ಸದುಪಯೋಗ ಪಡಿಸಿಕೊಂಡು ಪರಿಶುದ್ಧವಾಗಿ ಇಟ್ಟುಕೊಳ್ಳುವುದು ಗ್ರಾಮಸ್ಥರ ಜವಬ್ದಾರಿ ಆಗಿದೆ. ಸ್ವಚ್ಛತೆ ಕುರಿತಾಗಿ ಪಟ್ಟಣದ ಎಲ್ಲ ಜನರಲ್ಲೂ ಮನವರಿಕೆ ಮಾಡಿಕೊಡಬೇಕು ಎಂದು ಸ್ಥಳೀಯ ಅಧಿಕಾರಿ ಹಾಗೂ ಮುಖಂಡರಿಗೆ ತಿಳಿಸಿದರು.

ನದಿ ನೀರಿನ ಪರಿಶುದ್ಧತೆಯಲ್ಲಿ ಸ್ಥಳೀಯ ಜನರ ಪಾತ್ರ ಬಹು ಮುಖ್ಯವಾಗಿದೆ. ಪ್ರತಿಯೊಬ್ಬರೂ ನದಿ ಬಗ್ಗೆ ಕಾಳಜಿ ವಹಿಸುವುದು ಪ್ರಮುಖವಾಗಿದೆ. ಪೂಜಾ ಸಾಮಗ್ರಿ, ಕಸ-ಕಡ್ಡಿ, ಹರಿದ ಚಿಂದಿ ಬಟ್ಟೆ ಸೇರಿದಂತೆ ತ್ಯಾಜ್ಯ ವಸ್ತುಗಳು ಬಿಸಾಡುವುದರಿಂದ ನೀರು ಮಲೀನವಾಗುತ್ತದೆ. ಅದರಲ್ಲೂ ಪ್ಲಾಸ್ಟಿಕ್‌ ಬಳಕೆ ಮಾರಕವಾಗಿದ್ದು, ಇದು ನೀರಿನ ಪವಿತ್ರತೆ ಹಾಳು ಮಾಡುತ್ತದೆ. ಅಧಿಕಾರಿಗಳು ಪ್ಲಾಸ್ಟಿಕ್‌ ನಿಷೇಧಕ್ಕೆ ಹೆಚ್ಚಿನ ಒತ್ತು ನೀಡಬೇಕು ಎಂದು ಹೇಳಿದರು.

ಮುಖಂಡರಾದ ಶಿವಶರಣಪ್ಪ ಕಮಲಾಪುರ, ರಾಜೇಂದ್ರಬಾಬು ಹೀರಾಪುರ ಮಾತನಾಡಿ, ನದಿಯ ಎರಡು ಕಡೆ ಮೆಟ್ಟಿಲುಗಳ ನಿರ್ಮಾಣ, ಮಹಿಳೆಯರಿಗೆ ಬಟ್ಟೆ ಒಗೆಯುವುದಕ್ಕೆ ಪ್ರತ್ಯೇಕ ದೋಭಿ ಘಾಟ್ ವ್ಯವಸ್ಥೆ, ಉದ್ಯಾನವನ ನಿರ್ಮಾಣ, ರೌದ್ರಾವತಿ ನದಿಗೆ ಚರಂಡಿ ನೀರು ಸೇರದಂತೆ ತಡೆಯುವುದು, ನೀಲಕಂಠ ಕಾಳೇಶ್ವರ ದೇವಸ್ಥಾನವನ್ನು ಪ್ರವಾಸಿ ತಾಣವಾಗಿ ನಿರ್ಮಿಸುವಂತೆ ಮನವಿ ಮಾಡಿದರು.

ಜಿ.ಪಂ ಅಧ್ಯಕ್ಷೆ ಸುವರ್ಣ ಮಲಾಜಿ, ಸೇಡಂ ಸಹಾಯಕ ಆಯುಕ್ತ ರಮೇಶ ಕೊಲಾರ, ಗ್ರೇಡ್‌-1 ತಹಶೀಲ್ದಾರ್‌ ನೀಲಪ್ರಭಾ ಬಬಲಾದ, ಗ್ರೇಡ್‌-2 ತಹಶೀಲ್ದಾರ್‌ ಶಾಂತಗೌಡ ಬಿರಾದಾರ, ಪಶು ವೈದ್ಯಾಧಿಕಾರಿ ಡಾ| ಅಣ್ಣರಾವ್‌ ಪಾಟೀಲ, ಕಾಳೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಶಿವಶರಣಪ್ಪ ಕಮಲಾಪುರ, ಯುವ ಮುಖಂಡ ರಾಜೇಂದ್ರಬಾಬು ಹೀರಾಪುರಕರ್‌, ಕರಬಸಪ್ಪ ಬೇನಕನಳ್ಳಿ, ಸಂತೋಷ, ರಸೀದ್‌ ಹರಸೂರಕರ್‌, ಬಾಬು ಡೊಣ್ಣೂರ ಇದ್ದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.