ಸಾಮೂಹಿಕ ವಿವಾಹ ಕಾರ್ಯ ಶ್ಲಾಘನೀಯ

ಅಕ್ಕಲಕೋಟದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ 34 ಜೋಡಿ ವಿವಿಧ ಮಠಾಧೀಶರ ಆಶೀರ್ವಾದ

Team Udayavani, Apr 4, 2019, 4:08 PM IST

4-April-20

ಸೊಲ್ಲಾಪುರ: ಅಕ್ಕಲಕೋಟ ವರಿಷ್ಠ ಪ್ರಾಥಮಿಕ ಶಾಲೆಯಲ್ಲಿ ನಡೆದ ಸರ್ವ ಧರ್ಮ ಸಾಮೂಹಿಕ ವಿವಾಹದಲ್ಲಿ 34 ಜೋಡಿಗಳು ಹಸೆಮಣೆ ಏರಿದರು.

ಸೊಲ್ಲಾಪುರ: ಅತ್ಯಂತ ಸರಳವಾಗಿ ನಡೆಯುವ ಸಾಮೂಹಿಕ ವಿವಾಹ ಸಮಾರಂಭಗಳಲ್ಲಿ ಮದುವೆಯಾಗುವ ನವ ದಂಪತಿಗಳು ಪುಣ್ಯವಂತರಾಗಿದ್ದು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಗೌಡಗಾಂವ ಮಠದ ಡಾ| ಜಯಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ಅಕ್ಕಲಕೋಟ ನಗರದ ವರಿಷ್ಠ ಪ್ರಾಥಮಿಕ ಶಾಲೆ ಕ್ರೀಡಾಂಗಣದಲ್ಲಿ ವಿವೇಕಾನಂದ ಪ್ರತಿಷ್ಠಾನ ವತಿಯಿಂದ ಆಯೋಜಿಸಿದ್ದ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವರು ಮಾತನಾಡಿದರು.

ಅದೇಷ್ಟೋ ತಂದೆ-ತಾಯಿ ತಮ್ಮ ಮಕ್ಕಳ ಮದುವೆಗೆ ಸಾಲ ಮಾಡಿ, ಆಸ್ತಿ-ಅಂತಸ್ತು ಮಾರುವ ಮೂಲಕ ನೋವುಗಳನ್ನು ಅನುಭವಿಸುತ್ತಿದ್ದಾರೆ. ಇಂತಹ ಸಾಮೂಹಿಕ ವಿವಾಹ ಸಮಾರಂಭದಿಂದ ಯಾರಿಗೂ ತೊಂದರೆಯಾಗದಂತೆ ಅತ್ಯಂತ ಸರಳವಾಗಿ ನಡೆಯುವ ಸಾಮೂಹಿಕ ವಿವಾಹ ಸಮಾರಂಭ ಎಲ್ಲರಿಗೂ ಮಾದರಿಯಾಗಿದೆ.

ಇಂತಹ ಜನಪರ ಕಾರ್ಯಕ್ರಮಗಳನ್ನು ವಿವೇಕಾನಂದ ಪ್ರತಿಷ್ಠಾನ ಅಧ್ಯಕ್ಷ ಸಚಿನ ಕಲ್ಯಾಣಶೆಟ್ಟಿ ಮಾಡುವ ಮೂಲಕ ಬಡವರ ಬಾಳಿಗೆ ಬೆಳಕಾಗುತ್ತಿದ್ದಾರೆ. ನವ ದಂಪತಿಗಳ ಬಾಳು ಉಜ್ವಲವಾಗಲಿ. ತಂದೆ-ತಾಯಿ, ಗುರುವಿನ ಸೇವೆಯಲ್ಲಿ ಮುನ್ನಡೆದಾಗ ಬದುಕು ಸಾರ್ಥಕವಾಗುತ್ತದೆ ಎಂದರು.

ಈ ಸರ್ವಧರ್ಮಿಯ ಸಾಮೂಹಿಕ ವಿವಾಹ ಸಮಾರಂಭದಲ್ಲಿ 34 ಜೋಡಿಗಳು ಹಸೆಮಣೆ ಏರಿದರು. ಸಮಾರಂಭದಲ್ಲಿ ಮದುವೆ ಮಾಡಿಕೊಂಡ ಜೋಡಿಗಳಿಗೆ ಬಟ್ಟೆ, ವಧುವಿಗೆ ತಾಳಿ, ಕಾಲುಂಗರ ಮತ್ತಿತರ ವಸ್ತುಗಳನ್ನು ಪ್ರತಿಷ್ಠಾನದ ವತಿಯಿಂದ ನೀಡಿದರು. ಅಲ್ಲದೇ ವಧು-ವರರಿಗೆ ವೈದ್ಯಕೀಯ ಸಲಹೆ, ಜೀವ ವಿಮೆ ಹಾಗೂ ಹೆಣ್ಣು ಮಗು ಜನಿಸಿದರೆ ಎರಡು ಸಾವಿರ ರೂ. ಠೇವಣಿಯ ಬಾಂಡ್‌ ನೀಡಲಾಗುತ್ತದೆ ಎಂದು ಪ್ರತಿಷ್ಠಾನ ಅಧ್ಯಕ್ಷ ಸಚಿನ ಕಲ್ಯಾಣಶೆಟ್ಟಿ ಹೇಳಿದರು.

ಅಕ್ಕಲಕೋಟ ವಿರಕ್ತಮಠದ ಬಸವಲಿಂಗ ಶ್ರೀಗಳು, ಗೌಡಗಾವದ ಡಾ| ಜಯಸಿದ್ದೇಶ್ವರ ಶಿವಾಚಾರ್ಯರು, ನಾಗಣಸೂರದ ಶ್ರೀಕಂಠ ಶಿವಾಚಾರ್ಯರು, ಮಂದ್ರೂಪದ ರೇಣುಕ ಶಿವಾಚಾರ್ಯರು, ಮಾದಾನ ಹಿಪ್ಪರಗಾದ ಶ್ರೀಗಳು ಸೇರಿದಂತೆ ವಿವಿಧ ಮಠಗಳ ಶ್ರೀಗಳು ಆಗಮಿಸಿ ನವ ದಂಪತಿಗಳಿಗೆ ಆಶೀರ್ವದಿಸಿ ಶುಭಾಶಯ ಕೋರಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಶಹಾಜಿ ಪವಾರ, ಯುವ ನಾಯಕ ರೋಹನ ದೇಶಮುಖ, ಮೇಯರ್‌ ಶೋಭಾ ಬನಶೆಟ್ಟಿ, ಜಿಪಂ ಉಪಾಧ್ಯಕ್ಷ ಶಿವಾನಂದ ಪಾಟೀಲ, ಸ್ವಾಮಿ ಸಮರ್ಥ ಅನ್ನಛತ್ರ ಮಂಡಳದ ಸಂಸ್ಥಾಪಕ ಅಧ್ಯಕ್ಷ ಜನ್ಮೆಜಯ ಭೋಸಲೆ, ದೇವಸ್ಥಾನ ಅಧ್ಯಕ್ಷ ಮಹೇಶ ಇಂಗಳೆ, ಆನಂದ ತಾನವಡೆ, ಮಾಜಿ ನಗರಾಧ್ಯಕ್ಷೆ ಡಾ| ಸುವರ್ಣ ಮಲಗೊಂಡ, ಮಹಾನಂದಾ ಸ್ವಾಮಿ, ಉಪ ನಗರಾಧ್ಯಕ್ಷ ಯಶವಂತ ದೋಂಗಡೆ, ಸಂಘರ್ಷ ಸಮಿತಿ ತಾಲೂಕಾಧ್ಯಕ್ಷ ದೀಲಿಪ ಸಿದ್ಧೆ, ಜಯಶೇಖರ ಪಾಟೀಲ, ಅವಿನಾಶ ಮಡಿಖಾಂಬೆ, ಸಂಜಯ ದೇಶಮುಖ, ಸುಧಿಧೀರ ಮಾಳಶೆಟ್ಟಿ, ನಗರ ಸೇವಕ ಮೀಲನ ಕಲ್ಯಾಣಶೆಟ್ಟಿ, ಸುರೇಖಾ ಹೋಳಿಕಟ್ಟಿ, ಸುವರ್ಣಾ ಮಲಗೊಂಡ, ಜಯಶೇಖರ ಪಾಟೀಲ ಸೇರಿದಂತೆ ಮೊದಲಾದವರು ಪಾಲ್ಗೊಂಡಿದ್ದರು.

ಶ್ರೀಮಂತ ರಾಣಿ ನಿರ್ಮಲಾ ರಾಜೆ ಕನ್ಯಾ ಪ್ರಶಾಲೆ ಆವರಣದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 4ರವರೆಗೆ ಭೋಜನ ವ್ಯವಸ್ಥೆ ಮಾಡಲಾಗಿದ್ದು ಸುಮಾರು 30 ಸಾವಿರ ಜನರು ಭೋಜನ ಸ್ವೀಕರಿಸಿದರು. ಕಾರ್ಯಕ್ರಮ ಯಶಸ್ವಿಯಾಗಿ ಸುಮಾರು 27 ವಿವಿಧ ಸಮಿತಿ ನೇಮಿಸಲಾಗಿದ್ದು ನಗರ ಸೇವಕ ಮಿಲನ ಕಲ್ಯಾಣಶೆಟ್ಟಿ, ವಿಲಾಸ ಕೋರೆ, ಶಶಿಕಾಂತ ಲಿಂಬಿತೋಟೆ, ಮಲ್ಲಿನಾಥ ಆಳಗಿ, ಮಲ್ಲಿಕಾರ್ಜುನ ಮಸೂತಿ, ಬಾಬುರಾವ್‌ ಪುಕಾಳೆ, ಬಾಳಾ ಶಿಂಧೆ, ಸ್ವಾಮಿನಾಥ ಧರಣೆ, ಗುರುಪಾದಪ್ಪ ಆಳಗಿ, ಚಂದ್ರಕಾಂತ ದಸಲೆ, ರವಿ ಬಿರಾಜದಾರ ಸೇರಿದಂತೆ ಮೊದಲಾದವರು ಶ್ರಮಿಸಿದರು.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.