ಜೋಳಕ್ಕೆ ಮಿಡತೆ ಕಾಟ

ಸುಳಿ ರೋಗದಿಂದ ಹಾಳಾಗುತ್ತಿದೆ ಜೋಳ ಎಳ್ಳಮಾವಾಸ್ಯೆಗೆ ಚರಗ ಚೆಲ್ಲಲು ಸಮಸ್ಯೆ

Team Udayavani, Dec 25, 2019, 10:55 AM IST

25-December-2

ಅಫಜಲಪುರ: ಚಿಂಚೋಳಿ ಗ್ರಾಮದ ರೈತರೊಬ್ಬರ ಹೊಲದಲ್ಲಿ ಜೋಳದ ಬೆಳೆಗೆ ಮಿಡತೆ ಹಾರಿ ಎಲೆಗಳು ತೂತಾಗಿವೆ

ಮಲ್ಲಿಕಾರ್ಜುನ ಹಿರೇಮಠ

ಅಫಜಲಪುರ: ಹಿಂಗಾರು ಹಂಗಾಮಿನ ಬೆಳೆಗಳಲ್ಲಿ ಪ್ರಮುಖವಾದ ಜೋಳದ ಬೆಳೆಗೆ ಮಿಡತೆ ಕಾಟ ಶುರುವಾಗಿದ್ದು, ಜೋಳದ ಎಲೆಗಳಿಗೆಲ್ಲ ತೂತು ಬೀಳುತ್ತಿವೆ. ಇದರಿಂದ ಬೆಳೆ ಹಾಳಾಗುತ್ತಿದೆ. ತಾಲೂಕಿನಾದ್ಯಂತ ಹಿಂಗಾರು ಹಂಗಾಮಿನ ಪ್ರಮುಖ ಬೆಳೆಯಾಗಿರುವ ಜೋಳಕ್ಕೆ ಸದ್ಯ ಮಿಡತೆ ಕಾಟ ಕಾಡುತ್ತಿದೆ. ಫಲವತ್ತಾಗಿ ಬೆಳೆದ ಜೋಳಕ್ಕೆ ಮಿಡತೆ ಕಾಟದಿಂದ ದಂಟುಗಳು, ಎಲೆಗಳಿಗೆಲ್ಲ ತೂತುಗಳು ಬೀಳುತ್ತಿವೆ. ಇದರಿಂದ ರೈತರಿಗೆ ಚಿಂತೆ ಶುರುವಾಗಿದೆ.

ಸುಳಿ ರೋಗ: ಜೋಳದ ಬೆಳೆ ಸದ್ಯ ಅನೇಕ ಕಡೆ ತೆನೆ ಕಟ್ಟುವ ಹಂತಕ್ಕೆ ಬಂದಿದೆ. ಆದರೆ ಬಹುತೇಕ ಕಡೆ ಮೊಳಕಾಲುದ್ದ ಬೆಳೆದಿದೆ. ಫಲವತ್ತಾಗಿ ಬೆಳೆಯುತ್ತಿದ್ದ ಜೋಳ ಒಂದು ಕಡೆ ಮಿಡತೆ ಕಾಟದಿಂದ ಹಾಳಾಗುತ್ತಿದ್ದರೆ, ಇನ್ನೊಂದು ಕಡೆ ಸುಳಿ ರೋಗ ಬಾಧಿಸಿ ಇನ್ನಷ್ಟು ಬೆಳವಣಿಗೆ ಕುಂಠಿತವಾಗಿಸಿದೆ.

ಆತಂಕ: ಮುಂಗಾರು ಹಂಗಾಮಿನ ಬೆಳೆಗಳು ಸರಿಯಾಗಿ ಬರಲಿಲ್ಲ. ಇನ್ನೇನು ಊಟಕ್ಕೆ ಜೋಳ, ದನಕರುಗಳಿಗೆ ಮೇವಾಗುತ್ತದೆ ಎನ್ನುವ ಉದ್ದೇಶದಿಂದ ಜೋಳ ಬಿತ್ತನೆ ಮಾಡಿದ ರೈತರಿಗೆ ಮಿಡತೆ ಕಾಟ, ಸುಳಿ ರೋಗ ಆತಂಕ ಉಂಟಾಗುವಂತೆ ಮಾಡಿದೆ.

ನೀರಾವರಿ ಬೇಸಾಯ ಮಾಡುವ ರೈತರಿಗೆ ಜೋಳದ ಬೆಳೆ ಉತ್ತಮವಾಗಿದೆ. ನೀರಾವರಿ ಇಲ್ಲದೇ ಒಣ ಬೇಸಾಯ ಮಾಡುವ ರೈತರಿಗೆ ಬಹಳಷ್ಟು ಹಿನ್ನಡೆಯಾಗುತ್ತಿದೆ.

ಚರಗ ಚೆಲ್ಲಲು ಜೋಳದ ಸಮಸ್ಯೆ: ಪ್ರತಿ ವರ್ಷ ಎಳ್ಳಮವಾಸ್ಯೆ ಪ್ರಯುಕ್ತ ರೈತ ಬಾಂಧವರೆಲ್ಲ ಬಗೆಬಗೆಯ ಅಡುಗೆ ಮಾಡಿಕೊಂಡು ಮನೆ ಮಂದಿಯೆಲ್ಲ ಜೋಳ ಬಿತ್ತಿದ ಹೊಲಕ್ಕೆ ಹೋಗಿ ಭೂತಾಯಿಗೆ ಚರಗ ಚೆಲ್ಲುವ ಪದ್ಧತಿ ಇದೆ. ಆದರೆ ಈ ಬಾರಿ ಒಣ ಬೇಸಾಯ ಮಾಡುವ ರೈತರ ಜಮೀನುಗಳಲ್ಲಿ ಜೋಳದ ಬೆಳೆ ಗುಣಮಟ್ಟದಲ್ಲಿ ಬೆಳವಣಿಗೆ ಆಗುತ್ತಿಲ್ಲ. ಹೀಗಾಗಿ ಎಳ್ಳಮವಾಸ್ಯೆಗೆ ಚರಗ ಚಲ್ಲಲು ಜೋಳ ಇಲ್ಲದಂತಾಗಿದೆ. ಒಟ್ಟಿನಲ್ಲಿ ಜೋಳಕ್ಕೆ ರೋಗ ಬಾಧೆ ಕಾಡುತ್ತಿದ್ದರೆ, ರೈತರಲ್ಲಿ ಹಬ್ಬದ ಕಳೆ ಇಲ್ಲದಂತಾಗಿಸಿದೆ.

ಚರಗ ಚೆಲ್ಲಾಕ್‌ ಜ್ವಾಳ ಇಲ್ಲದಂಗ ಆಗ್ಯಾದ್ರಿ. ಮೊಳಕಾಳುದ್ದ ಬೆಳೆದ ಜ್ವಾಳಕ್‌ ಮಿಡತಿ ಹಾರಿ ಅರ್ಧ ಹಾಳಾಗ್ಯಾವ. ಇನ್ನರ್ಧ ಸುಳಿ ರೋಗ ಬಿದ್ದು ಹಾಳಾಗ್ಯಾವ. ಹೊಟ್ಟಿಗಿ ಗಂಜಿ ಆಗ್ತದ, ದನಕರಗೊಳಿಗೆ ಮೇವಾಗ್ತದ ಅನ್ಕೊಂಡಿದ್ದೆವು. ಈಗ ಎರಡು ಆಗಂಗ ಕಾಣವಲ್ದು.
ಚಾಂದಸಾಬ ನಾಕೇದಾರ,
ರೈತ, ಬಳೂರ್ಗಿ

ತಾಲೂಕಿನಾದ್ಯಂತ 2019ನೇ ಸಾಲಿನಲ್ಲಿ 11580 ಹೆಕ್ಟೇರ್‌ ಜೋಳ ಬಿತ್ತನೆಯಾಗಿದೆ. ಕಳೆದ ವರ್ಷ 23 ಸಾವಿರ ಹೆಕ್ಟೇರ್‌ ಬಿತ್ತನೆಯಾಗಿತ್ತು. ಕಳೆದ ವರ್ಷಕ್ಕಿಂತ ಈ ವರ್ಷ ಜೋಳ ಬಿತ್ತನೆ ಕಡಿಮೆಯಾಗಲು ಕಾರಣ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಹತ್ತಿ, ತೊಗರಿ ಬಿತ್ತನೆ ಕ್ಷೇತ್ರ 80ರಿಂದ 90 ಪ್ರತಿಶತ ಹೆಚ್ಚಳವಾಗಿದೆ. ಹೀಗಾಗಿ ಜೋಳ ಬಿತ್ತನೆ ಈ ವರ್ಷ ಕಮ್ಮಿಯಾಗಿದೆ. ತಡವಾಗಿ ಬಿತ್ತನೆ ಆಗಿದ್ದರಿಂದ ಬೆಳವಣಿಗೆಗೆ ಹಿನ್ನಡೆಯಾಗಿದೆ. ಮಿಡತೆ ಕಾಟದಿಂದ ಜೋಳಕ್ಕೆ ಯಾವ ಹಾನಿಯೂ ಇಲ್ಲ. ಆದರೆ ಜೋಳಕ್ಕೆ ಸುಳಿ ರೋಗ ಬಿದ್ದರೆ ಅದಕ್ಕೆ ಔಷಧ ಸಿಂಪಡಿಸಿ ನಿಯಂತ್ರಣಕ್ಕೆ ತರಬೇಕು.
ಸರ್ದಾರಭಾಷಾ ನದಾಫ್‌,
ತಾಂತ್ರಿಕ ಅಧಿಕಾರಿ, ಕೃಷಿ ಇಲಾಖೆ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.