ಏಜೆಂಟರ ಕಮಿಷನ್‌ಗೆ ಈರುಳಿ ಬೆಳೆಗಾರ ಸುಸ್ತು

ಈರುಳ್ಳಿ ಖರೀದಿಸುವ ಲೈಸೆನ್ಸ್‌ ಹೊಂದಿದವರಿಲ್ಲದೇ ವಿಜಯಪುರಕ್ಕೆ ಹೋಗುವುದು ಅನಿವಾರ್ಯ

Team Udayavani, Dec 13, 2019, 12:09 PM IST

13-December-8

„ಡಿ.ಬಿ.ವಡವಡಗಿ
ಮುದ್ದೇಬಿಹಾಳ:
ಮೊದಲೇ ಬೆಲೆ ಕುಸಿತದಿಂದ ಕಂಗಾಲಾಗಿರುವ ಗ್ರಾಮೀಣ ಭಾಗದ ಈರುಳ್ಳಿ ಬೆಳೆಗಾರರಿಗೆ ಏಜಂಟರು ಹೆಚ್ಚಿಗೆ ಕಮೀಷನ್‌ ಪಡೆಯುತ್ತಿರುವುದು, ಎಪಿಎಂಸಿಯಲ್ಲಿ ಈರುಳ್ಳಿ ಖರೀದಿಸುವ ಲೈಸೆನ್ಸ್‌ದಾರರು ಇಲ್ಲದೆ ಇರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ.

ಮಾರುಕಟ್ಟೆಯಲ್ಲಿರುವ ಕಮೀಷನ್‌ ಏಜೆಂಟರು ಈರುಳ್ಳಿ ಸವಾಲು ಮಾಡಿದ ಮೇಲೆ ರೂ.100ಕ್ಕೆ ರೂ.10ರಂತೆ ದುಬಾರಿ ಕಮಿಷನ್‌ ಪಡೆಯುತ್ತಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ. ಈರುಳ್ಳಿ ದರ ಕೆಜಿಗೆ 150-200 ರೂ. ವರೆಗೆ ಏರಿಕೆ ಆಗಿದೆ ಎಂಬ ವಿಷಯವನ್ನು ಮಾಧ್ಯಮಗಳು, ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಯುವ ರೈತರು ಲಾಭದ ಆಸೆಯಿಂದ ಈರುಳ್ಳಿ ತಂದರೆ ಏಜಂಟರು ಪ್ಯಾಕೆಟ್‌ ಲೆಕ್ಕದಲ್ಲೇ ಸವಾಲು ಮಾಡುತ್ತಾರೆ.

ಹುಬ್ಬಳ್ಳಿ, ವಿಜಯಪುರದಂತಹ ದೊಡ್ಡ ನಗರಗಳ ಎಪಿಎಂಸಿಯಲ್ಲಿರುವಂತೆ ಕೆಜಿ ಲೆಕ್ಕದಲ್ಲಿ ಸವಾಲು, ಖರೀದಿ ಪದ್ಧತಿ ಇಲ್ಲಿಲ್ಲ. ಈರುಳ್ಳಿ ಗಡ್ಡೆಗಳನ್ನು ಸಣ್ಣ, ಮಧ್ಯಮ, ದೊಡ್ಡ ಗಾತ್ರವನ್ನಾಗಿ ವಿಭಜಿಸಿ ಸವಾಲು ಮಾಡಲಾಗುತ್ತದೆ. ಪ್ರತಿ ಪಾಕೇಟು ಅಂದಾಜು 50, 60 ಕೆಜಿ ತೂಕ ಇರುತ್ತಿದ್ದು, ರೈತರು ಇಲ್ಲಿನ ಸವಾಲು ಪದ್ಧತಿಗೆ ಒಗ್ಗಿಕೊಳ್ಳುವುದು ಅನಿವಾರ್ಯವಾಗಿದೆ. ಹುಬ್ಬಳ್ಳಿ, ಬೆಂಗಳೂರು, ಸೊಲ್ಲಾಪುರ ಮುಂತಾದ ದೊಡ್ಡ ಮಾರುಕಟ್ಟೆಗೆ ಬೆಳೆ ಒಯ್ದರೆ ಅಲ್ಲಿ ಕೆಜಿ ಲೆಕ್ಕದಲ್ಲಿ ಖರೀದಿಸುತ್ತಾರೆ. ಮೇಲಾಗಿ ಕಮೀಷನ್‌ ಕೂಡ 100ಕ್ಕೆ ರೂ.2 ರೂ. ಮಾತ್ರ ಪಡೆಯುತ್ತಾರೆ. ಅಲ್ಲಿ ಹೆಚ್ಚಿನ ದರವೂ ದೊರಕುತ್ತದೆ.

ತಾಲೂಕಿನಲ್ಲಿ ಹಿಂಗಾರು ಹಂಗಾಮಿನಲ್ಲಿ 150 ಹೆಕ್ಟೇರ್‌ವರೆಗೆ ಈರುಳ್ಳಿ ಬೆಳೆ ರೈತರ ಕೈಗೆ ಬಂದಿದ್ದು, ಇನ್ನೂ ಅಂದಾಜು 300 ಹೆಕ್ಟೇರ್‌ವರೆಗೆ ಬೆಳೆ ಜಮೀನಿನಲ್ಲಿ ಇದೆ. ಮುಂಗಾರು ಹಂಗಾಮಿನಲ್ಲಿ 477 ಹೆಕ್ಟೇರ್‌ನಲ್ಲಿ ಈರುಳ್ಳಿ ಬೆಳೆಯಲಾಗಿದೆ. ಹೆಕ್ಟೇರ್‌ಗೆ ಅಂದಾಜು 20-25 ಕ್ವಿಂಟಲ್‌ ಇಳುವರಿ ಬರುತ್ತದೆ. ನಾಸಿಕ್‌ ರೆಡ್‌, ಉಸಾ ಆಸಂಗಿ, ಲೋಕಲ್‌ ಬ್ರ್ಯಾಂಡ್ , ತಾವೇ ತಯಾರಿಸಿದ ಬೀಜಗಳನ್ನು ರೈತರು ಬಳಸುತ್ತಾರೆ. ಜಿಂದಾಲ್‌, ಪಂಚಗಂಗಾ, ಪುಣೆ ಪಸಂಗಿ ಕಂಪನಿಯ ಬೀಜಗಳಿಗೆ ಬೇಡಿಕೆ ಇದೆ. ಬಿಳಿ ಗಡ್ಡಿ, ಕೆಂಪು ಗಡ್ಡಿ ಎಂದು ವಿಭಜಿಸಲಾಗುತ್ತದೆ.

ತಾಲೂಕಿನಲ್ಲಿ ಕೆಂಪು ಗಡ್ಡೆ (ನಾಸಿಕ್‌ ರೆಡ್‌)ಗೆ ರೈತರು ಹೆಚ್ಚು ಒಲವು ತೋರಿಸುತ್ತಿದ್ದಾರೆ ಎಂದು ತೋಟಗಾರಿಕೆ ಇಲಾಖೆ ಪ್ರಭಾರಿ ಅಧಿಕಾರಿ ಸಿ.ಬಿ.ಪಾಟೀಲ, ಸಿಬ್ಬಂದಿ ಸುಭಾಶ್‌ ಟಾಕಳಿ ಉದಯವಾಣಿಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.