1970ರ ಪ್ರೌಢಶಾಲೆಗಿಲ್ಲ ದುರಸ್ತಿ ಭಾಗ್ಯ

•ಛಾವಣಿ ಕುಸಿಯುವ ಭೀತಿಯಲ್ಲೇ ವಿದ್ಯಾರ್ಥಿಗಳಿಗೆ ಬೋಧನೆ •ಪಾಲಕರಲ್ಲಿ ಹೆಚ್ಚಿದ ಆತಂಕ

Team Udayavani, Jul 22, 2019, 10:57 AM IST

22-July-10

ಯಾದಗಿರಿ: ಗುರುಮಠಕಲ್ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ಕಟ್ಟಡ.

ಯಾದಗಿರಿ: ಕರ್ನಾಟಕ ಏಕೀಕರಣಕ್ಕೂ ಮುನ್ನ ನಿರ್ಮಾಣವಾಗಿರುವ ಸರ್ಕಾರಿ ಪ್ರೌಢಶಾಲೆ ಕಟ್ಟಡದ ಛಾವಣಿ ಸಂಪೂರ್ಣ ಶಿಥಿಲಗೊಂಡಿದ್ದು, ಆತಂಕದಲ್ಲಿಯೇ ಮಕ್ಕಳು ಪಾಠ ಆಲಿಸುವಂತಾಗಿದೆ.

ಗುರುಮಠಕಲ್ ನಗರದಲ್ಲಿ 1970ರಲ್ಲಿ ಮೈಸೂರು ರಾಜ್ಯವಿದ್ದ ಸಂದರ್ಭದಲ್ಲಿ ದಿ. ವೀರೇಂದ್ರ ಪಾಟೀಲ ಅವರಿಂದ ಉದ್ಘಾಟನೆಗೊಂಡಿರುವ ಪ್ರೌಢಶಾಲೆಯ ಕಟ್ಟಡ 18 ಕೊಠಡಿಗಳನ್ನು ಹೊಂದಿದೆ. ಮಳೆಯ ನೀರು ಗೋಡೆಗೆ ಇಳಿದು ಅಲ್ಲಲ್ಲಿ ಗೋಡೆಗಳು ಹಾಳಾಗುತ್ತಿದ್ದು, ಛಾವಣಿ ಈಗ ಶಿಥಿಲಾವಸ್ಥೆಗೆ ತಲುಪಿದ್ದು, ಶಿಕ್ಷಣ ಇಲಾಖೆ ಇತ್ತ ಗಮನ ಹರಿಸಬೇಕಿದೆ.

ಪ್ರಾಚೀನ ಶಾಲೆಯಲ್ಲಿ ಕನ್ನಡ, ತೆಲುಗು, ಹಿಂದಿ ಹಾಗೂ ಇಂಗ್ಲಿಷ್‌ ಮಾಧ್ಯಮ ಬೋಧಿಸಲಾಗುತ್ತಿದ್ದು, ಸುಮಾರು 450ಕ್ಕೂ ಹೆಚ್ಚು ಮಕ್ಕಳು ಇಲ್ಲಿ ನಿತ್ಯ ಜ್ಞಾನಾರ್ಜನೆಗೆ ಆಗಮಿಸುತ್ತಾರೆ. ಶಾಲೆಯ ಎಲ್ಲಾ ಕೊಠಡಿಗಳ ಛಾವಣಿಗೆ ಬಳಸಲಾದ ಸಲಾಕೆಗಳು ಕಾಣುತ್ತಿದ್ದು, ವಿಜ್ಞಾನ ಲ್ಯಾಬ್‌ ಛಾವಣಿಯ ಸಿಮೆಂಟ್ ಅರ್ಧದಷ್ಟು ಕುಸಿದು ಬಿದ್ದಿದೆ. ನಿತ್ಯ ಇಲ್ಲಿಗೆ ಆಗಮಿಸುವ ಮಕ್ಕಳು ಭಯದಲ್ಲಿಯೇ ಕಾಲ ಕಳೆಯುವಂತಾಗಿದೆ ಎನ್ನುತ್ತಾರೆ ಪಾಲಕರು.

ಬೆಳಗ್ಗೆ ಮನೆಯಿಂದ ಶಾಲೆಗೆ ಬರುವ ಮಕ್ಕಳು ಮರಳಿ ಮನೆ ತಲುಪುವ ಭರವಸೆಯಿಲ್ಲದ ಭಯ ಇಲ್ಲಿನ ಮಕ್ಕಳು ಹಾಗೂ ಶಿಕ್ಷಕರಲ್ಲಿ ಆವರಿಸಿದೆ. ಮಳೆಯಿಂದ ಹೊರ ಭಾಗದ ಗೋಡೆಗಳು ಪಾಚಿಗಟ್ಟಿದ್ದು, ಛಾವಣಿಯಿಂದ ಮಳೆ ನೀರು ಒಳಗೆ ಬರುತ್ತಿರುವುದರಿಂದ ಶಿಕ್ಷಕರ ಸಿಬ್ಬಂದಿ ಕೋಣೆಯಲ್ಲಿಯೂ ಕುಳಿತುಕೊಳ್ಳಲು ಆಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅನಿವಾರ್ಯವಾಗಿ ದಿನ ಕಳೆಯುವಂತಾಗಿದೆ. ಸರ್ಕಾರಿ ಶಾಲೆಗೆ ಬಡವರ ಮಕ್ಕಳೇ ಹೆಚ್ಚಾಗಿ ಬರುತ್ತಾರೆ. ಅದಲ್ಲದೇ ಪ್ರೌಢಶಾಲೆಯೆಂದ ಮೇಲೆ ವಯಸ್ಸಿಗೆ ಬಂದ ಮಕ್ಕಳು ಇರುವುದರಿಂದ ದುರದೃಷ್ಟವಶಾತ್‌ ಏನಾದರೂ ಅವಘಡಗಳು ಸಂಭವಿಸಿದರೆ ಯಾರು ಹೊಣೆ ಎನ್ನುವ ಪ್ರಶ್ನೆ ಉದ್ಭವವಾಗಿದ್ದು, ಇಲ್ಲಿನ ಶಿಕ್ಷಕರಲ್ಲಿಯೂ ಕೂಡ ಭಯ ಆವರಿಸಿದೆ. ಈ ಹಿಂದೆ ಶಾಲೆಯ ಛಾವಣಿ ರಿಪೇರಿಗೆಂದು 12 ಲಕ್ಷ ರೂಪಾಯಿ ಮಂಜೂರಾಗಿದ್ದು, ಕಾಮಗಾರಿಯನ್ನು ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿದೆ ಎಂದು ತಿಳಿದು ಬಂದಿದ್ದು, ಈವರೆಗೆ ಕಾಮಗಾರಿ ಆರಂಭವಾಗಿಲ್ಲ. ಶಾಲೆಯ ಎಲ್ಲಾ ಕಟ್ಟಡಗಳ ಛಾವಣಿಯನ್ನು ತೆಗೆದು ಹೊಸದಾಗಿ ಹಾಕಬೇಕು. ಅಂದಾಗ ಮಾತ್ರ ಇಲ್ಲಿ ಭಯಮುಕ್ತ ಪಾಠ ಆಲಿಸಬಹುದು ಎನ್ನುತ್ತಾರೆ ಇಲ್ಲಿನ ಮಕ್ಕಳು.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.