ರೈತ ಬಂಡಾಯದ “ಮೇಳಿ ಕಾಳಗ’ಕ್ಕೆ  41 ವರ್ಷ

ಇಂದು ರೈತ ಹುತಾತ್ಮ ದಿನಾಚರಣೆ! ­ಹುತಾತ್ಮ ರೈತ ಈರಪ್ಪ ಕಡ್ಲಿಕೊಪ್ಪ ವೀರಗಲ್ಲಿಗೆ ನಮನ

Team Udayavani, Jul 21, 2021, 8:22 PM IST

20bgv-13

ವರದಿ : ಸಿದ್ಧಲಿಂಗಯ್ಯ ಮಣ್ಣೂರಮಠ

ನರಗುಂದ: 1980ರಲ್ಲಿ “ಮೇಳಿ ಕಾಳಗ’ ಎಂದೇ ಪ್ರತೀತಿ ಪಡೆದ ನರಗುಂದ ರೈತ ಬಂಡಾಯಕ್ಕೆ ಜುಲೈ 21 ಕ್ಕೆ 41 ವರ್ಷ ಗತಿಸಿದೆ. ರೈತ ಕುಲದ ಏಳ್ಗೆಗೆ ನೆತ್ತರು ಹರಿಸಿದ ರೈತ ಬಂಡಾಯದ ನೆಲದಲ್ಲಿ ಬುಧವಾರ ರೈತ ಹುತಾತ್ಮ ದಿನ ಆಚರಿಸಲಾಗಿದೆ.

ನೆತ್ತರು ಹರಿಸಿದ ಆ ದಿನಗಳು: 1980ರಲ್ಲಿ ನವಿಲುತೀರ್ಥ ಜಲಾಶಯದಿಂದ ಕಾಲುವೆ ನೀರು ರೈತರ ಭೂಮಿಗೆ ದೊರಕದಿದ್ದರೂ ಅಂದಿನ ಗುಂಡೂರಾವ್‌ ಸರ್ಕಾರ ಬೆಟರ್‌ ಮೆಂಟ್‌ ಲೇವಿ(ನೀರಿನ ಕರ ಆಕರಣೆ) ಜಾರಿಗೊಳಿಸಿತು.ನೀರು ಸಿಗದಿದ್ದರೂ ಕರ ಏಕೆ ಕಟ್ಟಬೇಕು? ಎಂಬ ತಾರ್ಕಿಕ ನಿಲುವು ರೈತರ ಚಳವಳಿಗೆ ನಾಂದಿ ಹಾಡಿತು. ಅತ್ತ ನವಲಗುಂದದಲ್ಲೂ ಚಳವಳಿ ಶುರುವಾಗಿ, 1980ರ ಜು.21ರಂದು ನರಗುಂದದಲ್ಲಿ ಅಂದಿನ ತಹಶೀಲ್ದಾರರು ಕಚೇರಿ ಪ್ರವೇಶಕ್ಕೆ ನಿರಾಕರಿಸಿದ ರೈತರನ್ನು ಲೆಕ್ಕಿಸದೇ ಕಚೇರಿ ಪ್ರವೇಶ ಮಾಡಿದ್ದೇ ಬಂಡಾಯಕ್ಕೆ ನಾಂದಿಯಾಯಿತು. ಇದು ರೈತರ ಸಹನೆ ಕೆರಳಿಸಿತ್ತು ಎಂಬ ಹಿನ್ನೆಲೆ ರೈತ ಬಂಡಾಯಕ್ಕಿದೆ. “ಬಡವನ ಕೋಪ ದವಡೆಗೆ ಮೂಲ’ ಎಂಬಂತೆ ಮೇಳಿ(ಕೃಷಿ ಪರಿಕರ) ಹಿಡಿದು ಕುಳಿತಿದ್ದ ರೈತರ ಆಕ್ರೋಶ ತಾರಕಕ್ಕೇರಿದಾಗ ಪೊಲೀಸರ ಗುಂಡಿಗೆ ಚಿಕ್ಕನರಗುಂದ ರೈತ ಈರಪ್ಪ ಕಡ್ಲಿಕೊಪ್ಪ, ನವಲಗುಂದಲ್ಲಿ ಅಳಗವಾಡಿ ರೈತ ಬಸಪ್ಪ ಲಕ್ಕುಂಡಿ ಬಲಿಯಾದರು. ಇದೇ ವೇಳೆ ಓರ್ವ ಪೊಲೀಸ್‌ ಅಧಿಕಾರಿ ಸೇರಿ 4 ಮಂದಿ ಪೊಲೀಸರು ಹತರಾಗಿದ್ದು ಬಂಡಾಯದ ಹಾದಿಯಲ್ಲಿ ಅಚ್ಚೊತ್ತಿದೆ.

ತೀರದ ಗೋಳು: ರೈತ ಬಂಡಾಯದ ನೆಲದಲ್ಲೇ 6 ವರ್ಷದಿಂದ ಮಹದಾಯಿ ಹೋರಾಟ ಹುಟ್ಟಿಕೊಂಡಿದೆ. 2015ರ ಜು.16ರಂದು ಮಹದಾಯಿ ಮತ್ತು ಕಳಸಾ-ಬಂಡೂರಿ ಜೀವಜಲಕ್ಕಾಗಿ ನಡೆಯುತ್ತಿರುವ ಹೋರಾಟ 7ನೇ ವರ್ಷಕ್ಕೆ ಕಾಲಿಟ್ಟಿದೆ. ಜನಾಂದೋಲನ ಸ್ವರೂಪ ಪಡೆದು, ದೇಶದ ಇತಿಹಾಸದಲ್ಲೇ ಹೊಸ ಅಧ್ಯಾಯ ಬರೆದು ವಿಶ್ವ ದಾಖಲೆ ಸೃಷ್ಟಿಸಿದ ಹೋರಾಟ ಸರ್ಕಾರಗಳ ಅಸಡ್ಡೆ ಧೋರಣೆಗೆ ನಿದರ್ಶನವಾಗಿದೆ. ಸುಧಾರಿಸದ ವೀರಗಲ್ಲು: ಈ ನೆಲದ ಹಲವಾರು ನಾಯಕರು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡು ಅಧಿ ಕಾರದ ಚುಕ್ಕಾಣಿ ಹಿಡಿದರೂ ಹೆದ್ದಾರಿ ಬದಿಗಿರುವ ಹುತಾತ್ಮ ರೈತನ ವೀರಗಲ್ಲು ಮಾತ್ರ ಸುಧಾರಣೆ ಕಂಡಿಲ್ಲ. ಇಲ್ಲಿ ರೈತ ಸ್ಮಾರಕ ಭವನ ನಿರ್ಮಿಸಬೇಕೆಂಬ ರೈತರ ಕೂಗು ಇಂದಿಗೂ ಈಡೇರಿಲ್ಲ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.