ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿ ಆತ್ಮಹತ್ಯೆ
Team Udayavani, Oct 11, 2021, 10:03 PM IST
ಶಿರ್ವ: ಅನಿವಾಸಿ ಸಾಫ್ಟ್ ವೇರ್ ಉದ್ಯಮಿ, ಶಿರ್ವ ನೆಕ್ಕರೆ ನಿವಾಸಿ ಸೈಮನ್ ಡಿಸೋಜ (57) ಸೋಮವಾರ( ಅ.11) ಸಂಜೆ ತಮ್ಮ ಮನೆಯ ಆವರಣದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತರು ತಾಯಿ, ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಸೌದಿಯಲ್ಲಿ ಸುಮಾರು 25 ವರ್ಷಗಳ ಕಾಲ ಸಾಫ್ಟ್ ವೇರ್ ಉದ್ಯಮಿಯಾಗಿದ್ದ ಅವರು ವಿದೇಶದಿಂದ ಬಂದ ಬಳಿಕ ಸಮಾಜ ಸೇವೆ ಯಲ್ಲಿ ತೊಡಗಿಸಿಕೊಂಡಿದ್ದರು. ಪಾಂಬೂರು ಮಾನಸ ಪುನರ್ವಸತಿ ಕೇಂದ್ರದ ಆಡಳಿತ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು. ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾಗಿದ್ದು, ಕೇಂದ್ರದ ಉನ್ನತಿಗಾಗಿ ಶ್ರಮಿಸಿದ್ದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಡುಪಿ ಅಗ್ನಿಶಾಮಕ ದಳ ಶವವನ್ನು ಬಾವಿಯಿಂದ ಹೊರಗೆ ತೆಗೆದಿದೆ. ಈ ಕುರಿತು ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…