ಅಂಗವಿಕಲ ಮತದಾರರ ಬಗೆಗೆ ವಿಶೇಷ ಆಸ್ಥೆ


Team Udayavani, Mar 25, 2019, 6:30 AM IST

special

ಉಡುಪಿ: ಬುದ್ಧಿಮಾಂದ್ಯ, ಶ್ರವಣದೋಷ ಸಹಿತ ಎಲ್ಲ ರೀತಿಯ ಅಂಗವೈಕಲ್ಯ ಹೊಂದಿದವರು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವ ನಿಟ್ಟಿನಲ್ಲಿ ಜಿಲ್ಲಾ ಸ್ವೀಪ್‌ ಸಮಿತಿ ವಿಶೇಷ ಮುತುವರ್ಜಿ ವಹಿಸಿದೆ.

ಮತದಾನದ ಬಗ್ಗೆ ಜಾಗೃತಿ, ಆತ್ಮವಿಶ್ವಾಸ ಮತ್ತು ಯಾರ ಸಹಾಯವೂ ಇಲ್ಲದೆ ಮತದಾನ ಮಾಡುವುದಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಮತದಾನ ಉದ್ದೇಶ
ಅಂಗವಿಕಲರ ಕುರಿತು ನ್ಯಾಯಾಲಯ ನೀಡುವ ಆದೇಶದಿಂದ ಅನರ್ಹರಾದವರನ್ನು ಹೊರತು ಪಡಿಸಿ ಉಳಿದ ಎಲ್ಲರೂ ಕೂಡ ಮತದಾನ ಮಾಡಲು ಅರ್ಹರಾಗಿರುತ್ತಾರೆ. ಗುರುತು ಚೀಟಿ ಹೊಂದಿರುವ ಪ್ರತಿಯೊಬ್ಬರೂ ಮತದಾನ ಮಾಡಬೇಕೆಂಬ ಉದ್ದೇಶ ಇದರದ್ದು.

ಪ್ರಸ್ತುತ ಉಡುಪಿ ಜಿಲ್ಲೆಯಲ್ಲಿ 7,385 ಅಂಗವಿಕಲ ಮತದಾರರಿದ್ದಾರೆ. ಇವರಲ್ಲಿ 606 ಅಂಧರು, 700 ಶ್ರವಣದೋಷವುಳ್ಳವರು, 2,028 ದೈಹಿಕ ವಿಕಲಚೇತನರು ಮತ್ತು ಬುದ್ಧಿಮಾಂದ್ಯರು ಸಹಿತ ಇತರ 3,871 ಮತದಾರರಿದ್ದಾರೆ.

701 ಗಾಲಿ ಕುರ್ಚಿಗಳು
ಅಂಗವಿಕಲರು ಮತ್ತು ಹಿರಿಯ ನಾಗರಿಕರು ಮತದಾನ ಮಾಡುವುದಕ್ಕಾಗಿ ಮತದಾನದಂದು ಜಿಲ್ಲೆಯ ಮತಗಟ್ಟೆಗಳಿರುವ ಒಂದು ಕಟ್ಟಡಕ್ಕೆ ಒಂದರಂತೆ ಒಟ್ಟು 701 ಗಾಲಿಕುರ್ಚಿಗಳನ್ನು ವಿತರಿಸಲಾಗುತ್ತದೆ. ಇದನ್ನು ಸಮೀಪದ ಗ್ರಾ.ಪಂ. ಕಚೇರಿ ಅಥವಾ ಆರೋಗ್ಯ ಕೇಂದ್ರಗಳಿಂದ ಪಡೆಯಬಹುದು.

ಜಿಲ್ಲಾಡಳಿತದಿಂದ ವಾಹನ ವ್ಯವಸ್ಥೆ
ದೃಷ್ಟಿ ಸಮಸ್ಯೆ ಇರುವವರಿಗೆ ಬಳಸಲು ಎಲ್ಲ ಮತಗಟ್ಟೆಗಳಿಗೆ ಭೂತಕನ್ನಡಿ ಮತ್ತು ವಾಕರ್‌ ನೀಡಲಾಗುತ್ತದೆ. ಮತದಾನ ಕೇಂದ್ರಗಳಿಗೆ ಬರುವವರಿಗೆ ಅನುಕೂಲವಾಗಲು ವಾಹನದ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತದೆ.

ಆಯೋಗಕ್ಕೆ ಸಲ್ಲಿಕೆ
ಅಂಗವಿಕಲ ಮತದಾರರ ಮಾಹಿತಿ ಪಡೆಯಲು ಜಿಲ್ಲಾಡಳಿತ ವ್ಯವಸ್ಥಿತ ಯೋಜನೆ ಹಾಕಿಕೊಂಡಿದೆ. ಮತದಾನದ ಮುನ್ನಾದಿನ ಮಸ್ಟರಿಂಗ್‌ ಕೇಂದ್ರದಿಂದ ಹೊರಡುವ ಮತಗಟ್ಟೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುತ್ತದೆ. ಅಧಿಕಾರಿಗಳು ಅದರಲ್ಲಿ ಅಂಗವಿಲರು, ಬುದ್ಧಿಮಾಂದ್ಯರು ಮತ ಚಲಾಯಿಸಿದ ವಿವರ ದಾಖಲಿಸಬೇಕಾಗುತ್ತದೆ. ಡಿಮಸ್ಟರಿಂಗ್‌ ಸಮಯದಲ್ಲಿ ಆ ವಿವರವನ್ನು ಆಯಾ ಮತಗಟ್ಟೆ ಅಧಿಕಾರಿಗಳು ಹಿರಿಯ ಅಧಿಕಾರಿಗಳಿಗೆ ಒಪ್ಪಿಸಲಿದ್ದಾರೆ. ಬಳಿಕ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುತ್ತದೆ.

ಅಂಗವಿಕಲರಿಗೆ ವಿಶೇಷ ಮತಗಟ್ಟೆ
ಉಡುಪಿ ತಾಲೂಕಿನ ಕುಂದಾಪುರ ವಿಧಾನಸಭಾ ಕ್ಷೇತ್ರದ ಕೋಡಿ ಕನ್ಯಾನ 217ನೇ ಮತಗಟ್ಟೆಯನ್ನು ಅಂಗವಿಕಲರ ವಿಶೇಷ ಮತಗಟ್ಟೆ ಯಾಗಿ ಗುರುತಿಸಲಾಗಿದೆ. ಈ ಮತಗಟ್ಟೆ ವ್ಯಾಪ್ತಿಯಲ್ಲಿ ಸುಮಾರು 45 ಮಂದಿ ಅಂಗವಿಕಲ ಮತದಾರರಿದ್ದಾರೆ.ಇಲ್ಲಿ ಅಂಗವಿಕಲ ಸ್ನೇಹಿ ಶೌಚಾಲಯ, ರ್‍ಯಾಂಪ್‌ ನಿರ್ಮಿಸಲಾಗುತ್ತದೆ. ಗಾಲಿಕುರ್ಚಿ, ವಾಕರ್‌, ಭೂತಗನ್ನಡಿ ಸಹಿತ ಎಲ್ಲ ವ್ಯವಸ್ಥೆಯನ್ನೂ ಇಲ್ಲಿ ಮಾಡಲಾಗುತ್ತದೆ. ಇದಕ್ಕೆ ಸ್ಥಳೀಯ ಗ್ರಾ.ಪಂ.ನ ಶೇ.3 ಅನುದಾನ ಬಳಸಿಕೊಳ್ಳಲಾಗುತ್ತದೆ.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.