ಕಸಾಪ ಸಂತಪೂರ ವಲಯ ಘಟಕ ಉದ್ಘಾಟನೆ


Team Udayavani, May 22, 2019, 4:54 PM IST

22-May-31

ಔರಾದ: ಸಂತಪೂರ ಸರ್ವಜ್ಞ ಕಾಲೇಜಿನಲ್ಲಿ ನಡೆದ ವಲಯ ಕನ್ನಡ ಸಾಹಿತ ಪರಿಷತ್‌ ಘಟಕ ಉದ್ಘಾಟನೆ ಹಾಗೂ ಬುದ್ಧ, ಬಸವ, ಅಂಬೇಡ್ಕರ್‌ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಸೂರೇಶ ಚೆನ್ನಶೆಟ್ಟಿ ಮಾತನಾಡಿದರು.

ಔರಾದ: ಸಂತಪೂರ ಹೋಬಳಿ ಕೇಂದ್ರದಲ್ಲಿ ಮುಂಬರುವ ದಿನಗಳಲ್ಲಿ ಸಂತಪೂರ ವಲಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಸದಾಶಯ ನಮಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನ್ನಶೆಟ್ಟಿ ಹೇಳಿದರು.

ಸಂತಪೂರ ಗ್ರಾಮದ ಸರ್ವಜ್ಞ ಪ‌ದವಿಪೂರ್ವ ಕಾಲೇಜಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್‌ ಸಂತಪೂರ ವಲಯ ಘಟಕ ಉದ್ಘಾಟನೆ ಹಾಗೂ ಬುದ್ಧ, ಬಸವ, ಅಂಬೇಡ್ಕರ್‌ ಕುರಿತ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗಡಿ ನಾಡು ಬೀದರ ಜಿಲ್ಲೆಯಲ್ಲಿ ಕನ್ನಡವನ್ನು ಸಾಹಿತ್ಯಿಕ, ಸಾಂಸ್ಕೃತಿಕವಾಗಿ ಸಂಘಟಿಸುವಲ್ಲಿ ಜಿಲ್ಲಾ ಕಸಾಪ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಜಿಲ್ಲೆ ತಾಲೂಕು ಹಾಗೂ ವಲಯ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಮೂಲಕ ಗಡಿಯಲ್ಲಿ ಕನ್ನಡ ವಾತಾವರಣ ನಿರ್ಮಿಸುತ್ತಿದೆ ಎಂದರು.

ಗಡಿ ತಾಲೂಕು ಔರಾದನಲ್ಲಿ ಈ ಹಿಂದೆ ಮಾಡಿದ ಎಲ್ಲ ಸಮ್ಮೇಳನಗಳು ಅದ್ಧೂರಿ ಹಾಗೂ ಅರ್ಥಪೂರ್ಣವಾಗಿ ನಡೆದಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ನಡೆಸಲು ಬಯಸಿದ ಸಾಹಿತ್ಯ ಸಮ್ಮೇಳನ ಕೂಡ ಈ ಹಿಂದಿನಂತೆ ಅದ್ಧೂರಿಯಾಗಿ ಆಚರಣೆ ಮಾಡಲು ಮುಂದಾಗಬೇಕು ಎಂದು ಮನವಿ ಮಾಡಿದರು.

ಯುವ ಸಾಹಿತಿ ಮೇನಕಾ ಪಾಟೀಲ ಮಾತನಾಡಿ, ಜಗತ್ತಿಗೆ ಶಾಂತಿಯ ಮಂತ್ರ ಬೋಧಿಸಿದ ಕೀರ್ತಿ ಮಹಾತ್ಮ ಗೌತಮ ಬುದ್ಧ ಅವರಿಗೆ ಸಲ್ಲುತ್ತದೆ. ಆಸೆಯೇ ದುಃಖಕ್ಕೆ ಮೂಲ ಎನ್ನುವ ಮೂಲಕ ತನ್ನ ಸಾಂಸಾರಿಕ ಜೀವನ ತ್ಯಾಗ ಮಾಡಿ ಜಗತ್ತಿಗೆ ಬೆಳಕು ಚಲ್ಲಿದರು ಎಂದರು.

ಶಿಕ್ಷಕ ಬೀರಪ್ಪ ಕಡ್ಲಿಮಟ್ಟಿ ಉಪನ್ಯಾಸ ನೀಡಿ, ವೈದಿಕ ವ್ಯವಸ್ಥೆ ಧಿಕ್ಕರಿಸುವ ಮೂಲಕ ಸಮಾನತೆ ಸಮಾಜ ಕಟ್ಟಿದವರು ಬಸವಣ್ಣ. ಜಗತ್ತಿನಲ್ಲಿ ಮೊಟ್ಟಮೊದಲ ಬಾರಿಗೆ ಸ್ತ್ರೀ ಸಮಾನತೆ ನೀಡಿದ ಮಹಾನ್‌ ಚೇತನ ಬಸವಣ್ಣ. ವರ್ಗ, ವರ್ಣ, ಜಾತಿ, ಅಸ್ಪೃಷ್ಯತೆಯ ವಿರುದ್ಧ ಬಂಡಾಯದ ಕಹಳೆ ಊದಿ ಸಮತೆಯ ಸಂಗಮ ಮಾಡಿದ ಶ್ರೇಯಸ್ಸು ಬಸವಣ್ಣನವರಿಗೆ ಸಲ್ಲುತ್ತದೆ ಎಂದರು.

ಯುವಚಿಂತಕ ನಂದಾದೀಪ ಬೋರಾಳೆ ಮಾತನಾಡಿ, ಬುದ್ಧ ಹಾಗೂ ಬಸವಣ್ಣನವರು ಕಟ್ಟಲು ಬಯಸಿದ ಸಮಾನತೆಯ ಸಮಾಜದ ಪರಿಕಲ್ಪನೆಯನ್ನು ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಕೀರ್ತಿ ಅಂಬೇಡ್ಕರ್‌ ಅವರಿಗೆ ಸಲ್ಲುತ್ತದೆ. ಇಡೀ ಜಗತ್ತಿಗೆ ಮಾದರಿಯಾಗುವ ಸಂವಿಧಾನ ರಚಿಸಿ ಭಾರತ ದದೇಶದ ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರದ ಸವಾಂರ್ಗೀಣ ಅಭಿವೃದ್ಧಿಗೆ ಪೂರಕವಾಗಿ ಬದುಕಿದ್ದಾರೆ ಎಂದರು.

ಆಶಯ ನುಡಿ ಹೇಳಿದ ಸಂತಪೂರ ವಲಯ ಅಧ್ಯಕ್ಷ ಬಾಲಾಜಿ ಕುಂಬಾರ, ಸಂತಪೂರ ವಲಯದಲ್ಲಿ ಕನ್ನಡವನ್ನು ಸಾಹಿತ್ಯಕ, ಸಾಂಸ್ಕೃತಿಕವಾಗಿ ಸಂಘಟಿಸಲು ವಲಯ ಘಟಕ ಶ್ರಮಿಸಲು ಸಿದ್ಧವಿದೆ ಎಂದರು.

ತಾಲೂಕು ಕಸಾಪ ಅಧ್ಯಕ್ಷ ಜಗನ್ನಾಥ ಮೂಲಗೆ, ಸಂತಪೂರಗ್ರಾಮ ಪಂಚಾಯತ್‌ ಅಧ್ಯಕ್ಷೆ ಪದ್ಮಾವತಿ ಕೋಳಿ, ಪ್ರಭುಶೆಟ್ಟಿ ಸೈನಿಕಾರ್‌, ರಾಮಚಂದ್ರ ಬಿರಾದಾರ, ವೀರಶೆಟ್ಟಿಚನ್ನಶೆಟ್ಟಿ, ಖಂಡೋಬಾ ಕಂಗಟೆ, ಚನ್ನಬಸವ ಭೂರೆ, ಅಮೀರಖಾನ್‌, ವಿಶ್ವನಾಥ ವಾಡೆ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಮೃತರಾವ ಬಿರಾದಾರ ಸ್ವಾಗತಿಸಿದರು. ಚಿರಂಜೀವಿ ಪಾಟೀಲ ನಿರೂಪಿಸಿದರು. ಮಲ್ಲಿಕಾರ್ಜುನ್‌ ಟಂಕಸಾಲೆ ವಂದಿಸಿದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.