ಮುಂಗಾರು ಮಳೆ ಕೊರತೆ: ರೈತರಿಗೆ ಆತಂಕ


Team Udayavani, Jul 18, 2019, 10:45 AM IST

18-July-6

ಔರಾದ: ಮಳೆ ಇಲ್ಲದೆ ಬೆಳೆ ಬಾಡುತ್ತಿದೆ.

ರವೀಂದ್ರ ಮುಕ್ತೇದಾರ
ಔರಾದ:
ಮುಂಗಾರು ಮಳೆ ಕೊರತೆಯಿಂದ ರೈತರು ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಅಲ್ಪ ಸ್ವಲ್ಪವೇ ಬಿದ್ದ ಮುಂಗಾರು ಮಳೆಯಿಂದ ತಾಲೂಕಿನ ರೈತರು ಬಿತ್ತನೆ ಮಾಡಿದ್ದರು. ಆದರೆ ಈಗ ಮಳೆ ಅಭಾವವಾಗಿದ್ದರಿಂದ ಬೆಳೆ ಬಾಡುವ ಹಂತಕ್ಕೆ ಬಂದು ನಿಂತಿದೆ.

ಕಳೆದ ಮೂರು ವರ್ಷದಿಂದ ಭೀಕರ ಬರಗಾಲದಲ್ಲಿ ಜೀವನ ಸಾಗಿಸಿದ ಅನ್ನದಾತರಿಗೆ ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ಸಹ ಕೈಕೊಟ್ಟಿದೆ. ಸ್ವಲ್ಪವೇ ಮಳೆ ಸುರಿದ ಹಿನ್ನೆಲೆಯಲ್ಲಿ ಉದ್ದು, ಹೆಸರು, ಸೊಯಾಬಿನ್‌ ಮತ್ತು ತೊಗರಿ ಬೆಳೆಗಳು ಉತ್ತಮವಾಗಿ ಬೆಳೆದಿವೆ. ವಾಡಿಕೆಯಂತೆ ಜೂನ್‌ ತಿಂಗಳಲ್ಲಿ 138 ಮಿಮೀ ಮಳೆಯಾಗಬೇಕು. ಆದರೆ ತಾಲೂಕಿನಲ್ಲಿ ಕೇವಲ 86 ಮಿಮೀ. ಮಳೆಯಾಗಿದ್ದು, ಶೇ. 52ರಷ್ಟು ಕಡಿಮೆಯಾಗಿದೆ. ಅದರಂತೆ ಜುಲೈನಲ್ಲಿ 199 ಮಿಮೀ ಮಳೆಯಾಗಬೇಕು. ಆದರೆ ಕೇವಲ 37 ಮಳೆ ಬಂದಿದೆ.

ಹೋಬಳಿ ವಾರು ವಿವರ: ಎರಡು ತಿಂಗಳಲ್ಲಿ ತಾಲೂಕಿನಲ್ಲಿ ಶೇ. 46ರಷ್ಟು ಮಳೆ ಕಡಿಮೆಯಾಗಿದೆ. ಔರಾದ ಹೋಬಳಿಯಲ್ಲಿ 227 ಮಿಮೀ. ಆಗಬೇಕಾಗಿತ್ತು. ಆದರೆ ಇಲ್ಲಿಯವರೆಗೆ 133 ಮಿಮೀ ಮಳೆಯಾಗಿದೆ. ಶೇ. 41ರಷ್ಟು ಕಡಿಮೆಯಾಗಿದೆ.

ಚಿಂತಾಕಿ ಹೋಬಳಿಯಲ್ಲಿ 227 ಮಿಮೀ ಮಳೆ ಆಗಬೇಕು. ಆದರೆ 102 ಮಿಮೀ ಮಳೆ ಮಾತ್ರ ಬಂದಿದೆ. ಶೇ. 55ರಷ್ಟು ಕಡಿಮೆಯಾಗಿದೆ. ದಾಬಕಾ ಹೋಬಳಿಯಲ್ಲಿ 227 ಮಿಮೀ ವಾಡಿಕೆ ಮಳೆಯಾಗಬೇಕು. ಆದರೆ 139 ಮಿಮೀ ಮಳೆ ಬಂದಿದೆ. ಶೇ. 39ರಷ್ಟು ಕಡಿಮೆ ಮಳೆಯಾಗಿದೆ.

ಕಮಲನಗರ ಹೋಬಳಿಯಲ್ಲಿ 221 ಮಿಮೀ ವಾಡಿಕೆಯಂತೆ ಮಳೆಯಾಗಬೇಕು. ಆದರೆ 160 ಮಿಮೀ ಮಳೆ ಬಂದಿದೆ. ಶೇ. 50ರಷ್ಟು ಮಳೆ ಕಡಿಮೆಯಾಗಿದೆ. ಸಂತಪುರ ಹೋಬಳಿಯಲ್ಲಿ 231 ಮಿಮೀ ಮಳೆಯಾಗಬೇಕು. 144 ಮಿಮೀ ಮಳೆಯಾಗಿದೆ. ಶೇ. 38ರಷ್ಟು ಕಡಿಮೆಯಾಗಿದೆ.

ಠಾಣಾಕುಶನೂರ ಹೋಬಳಿ ವಾಡಿಕೆಯಂತೆ 228 ಮಳೆಯಾಗಬೇಕು. ಆದರೆ ತಾಲೂಕಿನಲ್ಲಿ 109 ಮಿಮೀ ಮಾತ್ರ ಮಳೆ ಬಂದಿದೆ. ಶೇ. 52ರಷ್ಟು ಕಡಿಮೆಯಾಗಿದೆ. ತಾಲೂಕಿನಲ್ಲಿ ಒಟ್ಟಾರೆ ಎರಡು ತಿಂಗಳಲ್ಲಿ ಶೇ. 46 ಮಳೆ ಕಡಿಮೆಯಾಗಿದೆ.

ತುಂಬದ ಜಲಮೂಲಗಳು: ಎರಡು ತಿಂಗಳು ಮಳೆಗಾಲ ಮುಗಿಯುವ ಹಂತಕ್ಕೆ ಬಂದಿದೆ. ಆದರೂ ಜಲಮೂಲಗಳಿಗೆ ಹನಿ ನೀರು ಬಂದಿಲ್ಲ. ಪಟ್ಟಣ ಸೇರಿದಂತೆ ತಾಲೂಕಿನ ಅರವತ್ತು ಗ್ರಾಮಗಳಿಗೆ ಇಂದಿಗೂ ಟ್ಯಾಂಕರ್‌ ನೀರು ಪೂರೈಕೆ ಮಾಡಲಾಗುತ್ತಿದೆ.

ಮಳೆಗಾಗಿ ದೇವರ ಮೊರೆ: ಮಳೆಗಾಲ ಆರಂಭವಾಗಿ ಎರಡು ತಿಂಗಳು ಕಳೆದರು ಕೂಡ ತಾಲೂಕಿನಲ್ಲಿ ಇನ್ನೂ ವಾಡಿಕೆಯಂತೆ ಮಳೆ ಬಂದಿಲ್ಲ. ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ದಿನದಿಂದ ಹೆಚ್ಚಾಗಿ ಕಾಡುತ್ತಿದೆ. ಹಿಗಾಗಿ ತಾಲೂಕಿನ ಸಂತಪುರ, ಇಟಗ್ಯಾಳ, ಚಿಮ್ಮೇಗಾಂವ,ಬೋಂತಿ ಮತ್ತು ಮಣಿಗಂಪುರ ರೈತರು ಹಾಗೂ ಗ್ರಾಮಸ್ಥರು ಹನುಮಾನ ಮಂದಿರಕ್ಕೆ ಹೋಗಿ ವಿಶೇಷ ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ.

ಮುಂಗಾರು ಮಳೆಯಿಲ್ಲದ ಪರಿಣಾಮ ಉದ್ದು ಹಾಗೂ ಹೆಸರಿನ ಬೆಳೆಗಳ ಇಳುವರಿ ಮೇಲೆ ಪೆಟ್ಟು ಬಿಳುತ್ತದೆ. ವಾರದಲ್ಲಿ ಮಳೆ ಬಂದರೂ ಸೊಯಾಬಿನ್‌ ಹಾಗೂ ತೊಗರಿ ಬೆಳೆಗಳು ಸುಧಾರಣೆಯಾಗುತ್ತವೆ.
•ಚಂದ್ರಕಾಂತ ಉದ್ದಬ್ಯಾಳೆ,
ರೈತ ಸಂಪರ್ಕ ಕೇಂದ್ರದ ಅಧಿಕಾರಿ 

ಮೂರು ವರ್ಷದಿಂದ ಮಳೆಯಿಲ್ಲದೆ ಉತ್ತಮ ಬೆಳೆ ಸಹ ಬೆಳೆಯಲು ಸಾಧ್ಯವಾಗದೆ ಸಾಲದ ಸುಳಿಯಲ್ಲಿ ಸಿಲುಕಿಕೊಂಡು ಜೀವನ ಸಾಗಿಸಿದ್ದೇವೆ. ಆದರೆ ಈ ವರ್ಷವಾದರೂ ಉತ್ತಮ ಫಸಲು ಬೆಳೆಸಬೇಕು ಎನ್ನುವ ತವಕದಲ್ಲಿ ಇದ್ದ ನಮಗೆ ಮಳೆ ಕೈ ಕೊಟ್ಟಿದ್ದರಿಂದ ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದೇವೆ.
•ಮಹಾವೀರ ದೇಶಮುಖ,
ರೈತ

ಟಾಪ್ ನ್ಯೂಸ್

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.