ಸುಡುವ ಬಿಸಿಲಲ್ಲಿ ಶಾಲೆ ಆರಂಭ!

ಕುಡಿಯುವ ನೀರಿನ ಸಮಸ್ಯೆಯಲ್ಲಿ ಶಾಲಾ ಚಟುವಟಿಕೆ ನಡೆಸುವುದು ಹೇಗೆ?

Team Udayavani, May 31, 2019, 9:57 AM IST

1-June-2

ಔರಾದ: ಪಟ್ಟಣದ ಆದರ್ಶ ಶಾಲೆ.

•ರವೀಂದ್ರ ಮುಕ್ತೇದಾರ್‌
ಔರಾದ:
ಭೀಕರ ಬರದಲ್ಲಿ ತಾಲೂಕಿನ ಜನರು ಕುಡಿಯುವ ನೀರಿಗಾಗಿ ಸಮಸ್ಯೆ ಎದುರಿಸುತ್ತಿದ್ದು, ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮನೆಯಿಂದ ಹೊರ ಬಾರದ ಸ್ಥಿತಿ ಇದೆ. ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಮಾತ್ರ ಇಂತಹ ಬರದಲ್ಲಿ ಶಾಲೆ ಆರಂಭಿಸಲು ಹೊರಟಿರುವುದು ಮಕ್ಕಳ ಹಿತಕ್ಕೆ ಒಳ್ಳೆಯದಲ್ಲ.

ಪ್ರಸಕ್ತ ಸಾಲಿನಲ್ಲಿ ತಾಲೂಕಿನ ಇತಿಹಾಸದಲ್ಲಿಯೇ ಕಂಡರಿಯದ ರೀತಿಯಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಕಳೆದ ಒಂದು ತಿಂಗಳಿಂದ ತಾಲೂಕು ಆಡಳಿತ ಪಟ್ಟಣ ಸೇರಿದಂತೆ ಗ್ರಾಮೀಣ ಭಾಗಕ್ಕೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಸುತ್ತಿದೆ. ಅದರಂತೆ ಜಿಲ್ಲೆಯ ಇನ್ನುಳಿದ ತಾಲೂಕಿನಲ್ಲಿ ಜಿಲ್ಲಾಡಳಿತ ಟ್ಯಾಂಕರ್‌ ಮೂಲಕ 92 ಲಕ್ಷ ರೂ. ಮೌಲ್ಯದ ನೀರು ಸರಬರಾಜು ಮಾಡಿದೆ.

ತಾಲೂಕಿನಿಂದ ನಾಲ್ಕು ಕಿ.ಮೀ. ಅಂತರದಲ್ಲಿರುವ ನೆರೆಯ ತೆಲಂಗಾಣ ರಾಜ್ಯದ ಸರ್ಕಾರ ಅಲ್ಲಿನ ಶಾಲೆಗಳ ಆರಂಭವನ್ನು ಜೂನ್‌ 14ರ ತನಕ ಮುಂದೂಡಿದೆ. ಅದರಂತೆ ರಾಜ್ಯದ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಜಿಲ್ಲಾಡಳಿತ ಹಾಗೂ ಸರ್ಕಾರ ಅಲ್ಲಿನ ಮಕ್ಕಳ ಶಾಲೆ ಆರಂಭವನ್ನು ಕೂಟ ಜೂನ್‌ 14ರ ತನಕ ಮುಂದೂಡಿದೆ. ಆದರೆ ಗಡಿ ತಾಲೂಕು ಔರಾದ ಸೇರಿದಂತೆ ಬೀದರ ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾಗಿದ್ದರೂ ಸರ್ಕಾರ ಹಾಗೂ ಜಿಲ್ಲಾಡಳಿತ ಮೇ 29ರಂದು ಶಾಲೆ ಆರಂಭೋತ್ಸವ ಮೂಲಕ ಶಾಲೆ ಶುರು ಮಾಡಿವೆ.

ಮಕ್ಕಳ ಭವಿಷ್ಯ ಉಜ್ವಲವಾಗಲಿ ಮಕ್ಕಳಿಗೆ ಶಿಕ್ಷಣ ನೀಡುತ್ತೇವೆ. ಆದರೆ ಮಕ್ಕಳು ಬೆಂಕಿಯಂತಹ ಬಿಸಿಲಿನಲ್ಲಿ ಶಾಲೆಗೆ ಹೋಗಿ ಬರುವಾಗ ಆರೋಗ್ಯ ಸಮಸ್ಯೆ ಎದುರಿಸಬಹುದಾದ ಸ್ಥಿತಿ ಇದೆ. ಆದ್ದರಿಂದ ಜಿಲ್ಲಾಡಳಿತಕ್ಕೆ ಮಕ್ಕಳ ಕುರಿತು ಕಾಳಜಿ ಇದ್ದರೆ ಕೂಡಲೆ ಶಾಲೆ ಆರಂಭವನ್ನು ಮುಂದಕ್ಕೆ ಹಾಕಬೇಕು. ಇಲ್ಲವಾದಲ್ಲಿ ಬಿಸಿಲು ಕಡಿಮೆ ಆಗುವ ತನಕ ನಮ್ಮ ಮಕ್ಕಳನ್ನು ನಾವು ಶಾಲೆಗೆ ಕಳುಹಿಸುವುದಿಲ್ಲ ಎನ್ನುವುದು ಪಾಲಕರ ಮಾತು.

ಶಾಲೆ ಆರಂಭೋತ್ಸವದ ಸಿದ್ಧತೆಗೆ ಬಂದಿದ್ದ ಔರಾದ ತಾಲೂಕಿನ ರಾಯಿಪಳ್ಳಿ ಶಾಲೆಯ ಶಿಕ್ಷಕ ಅನುರ್ಜುನ ತಾರೆ ಬೆಂಕಿಯಂತಹ ಬಿಸಿಲಿನಿಂದ ಮೃತ ಪಟ್ಟಿದ್ದಾರೆ. ಅಲ್ಲದೆ ಎರಡು ದಿನಗಳ ಹಿಂದೆ ಬೀದರ ಜಿಲ್ಲಾ ಕೇಂದ್ರದಲ್ಲಿ ನಿಂತಿದ್ದ ವಾಹನಕ್ಕೆ ಬೆಂಕಿ ಹತ್ತಿರುವ‌ ಉದಾರಣೆ ಕೂಡ ಇದೆ.

ಶಾಲೆಗಳಲ್ಲಿ ನೀರಿಲ್ಲ: ಸಾರ್ವಜನಿಕ ಶಿಕ್ಷಣ ಇಲಾಖೆ ತಾಲೂಕಿನಲ್ಲಿ ಶಾಲೆ ಆರಂಭೋತ್ಸವ ಮಾಡಿದೆ. ವಿದ್ಯಾರ್ಥಿಗಳು ನಿತ್ಯ ಶಾಲೆಗೆ ಬಂದಾಗ ಕನಿಷ್ಠ ಕುಡಿಯಲೂ ನೀರು ಇಲ್ಲದ ಸ್ಥಿತಿ ಶಾಲೆಯಲ್ಲಿ ಇದೆ. ಅಲ್ಲದೆ ಮಧ್ಯಾಹ್ನದ ಬಿಸಿ ಊಟ ತಯ್ನಾರಿಸಲು ಕೂಡ ನೀರು ಇಲ್ಲದಂತಾಗಿದೆ. ಇಂಥ ಸ್ಥಿತಿಯಲ್ಲಿ ನಾವು ಹೇಗೆ ಮಾಡುವುದು ಎನ್ನುವುದು ತಾಲೂಕಿನ ಪ್ರತಿಯೊಂದು ಶಾಲೆಯ ಶಿಕ್ಷಕರ ಮಾತು.

ನೆರೆಯ ತೆಲಂಗಾಣ ಹಾಗೂ ಯಾದಗಿರಿ ಮತ್ತು ಕಲಬುರಗಿ ಜಿಲ್ಲಾಡಳಿತಕ್ಕೆ ಅಲ್ಲಿನ ಮಕ್ಕಳ ಬಗ್ಗೆ ಇರುವ ಕಾಳಜಿ ಬೀದರ ಜಿಲ್ಲಾಡಳಿತಕ್ಕೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಯಾಕೆ ಇಲ್ಲ ಎಂಬ ಪ್ರಶ್ನೆ ಗಡಿ ತಾಲೂಕಿನ ಪಾಲಕರರು.

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತಮ್ಮ ಊರಿನಲ್ಲಿರುವ ಶಾಲೆಗಳಿಗೆ ಹೋಗುತ್ತಾರೆ. ಪ್ರೌಢಶಾಲೆ ಹಾಗೂ ಖಾಸಗಿ ಶಾಲೆಯ ಮಕ್ಕಳು ನಿತ್ಯ ವಾಹನದಲ್ಲಿ ಸಂಚರಿಸುವಾಗ ಬಿಸಿಲಿನ ತಾಪದಿಂದ ಅಪಾಯದಲ್ಲಿ ಸಿಲುಕುತ್ತಾರೆ. ಹೀಗಾಗಿ ಔರಾದ ತಾಲೂಕು ಸೇರಿದಂತೆ ಬರ ಇರುವ ತಾಲೂಕಿನಲ್ಲಿ ಶಾಲೆ ಆರಂಭವನ್ನು ಮುಂದಕ್ಕೆ ಹಾಕಬೇಕೆಂದು ನಾಗರಿಕರು ಹಾಗೂ ಪಾಲಕರು ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.

ವಿದ್ಯಾರ್ಥಿಗಳ ಸಮಸ್ಯೆಗಳು ಆಲಿಸಿ ಬಗೆ ಹರಿಸುವುದೇ ನಮ್ಮ ಕಾಯಕವಾಗಿದೆ ಎಂದು ಸಣ್ಣ ಪುಟ್ಟ ಸಮಸ್ಯೆಗಳಾದಾಗ ರಸ್ತೆಗೆ ಇಳಿದು ಹೋರಾಟ ಮಾಡುವ ವಿದ್ಯಾರ್ಥಿ ಪರಿಷತ್‌ ಮುಖಂಡರಿಗೆ ಶಾಲೆ ಆರಂಭ ಹಾಗೂ ಬರ ಕುರಿತು ತಿಳಿದಲ್ಲವೇ ಎನ್ನುವುದು ಜನರ ಮಾತು.

ಮನವಿಗೆ ಬೆಲೆಯಿಲ್ಲ: ಹೈ.ಕ. ಭಾಗದ ಜಿಲ್ಲೆಗಳಲ್ಲಿ ಬಿಸಿಲಿನ ತಾಪ 45 ಡಿಗ್ರಿ ಸೆಲ್ಸಿಯಸ್‌ ಇರುವ ಕಾರಣ ಪ್ರಸಕ್ತ ಸಾಲಿನಲ್ಲಿ ಶಾಲೆಗಳ ಆರಂಭೋತ್ಸವವನ್ನು ಜೂನ್‌ 15ರ ವರೆಗೆ ಮುಂದೂಡಬೇಕು. ಸಧ್ಯದ ಪರಿಸ್ಥಿತಿಯ ಬಗ್ಗೆ ಸರ್ಕಾರಕ್ಕೆ ಹಾಗೂ ಇಲಾಖೆಯ ಮೇಲಾಧಿಕಾರಿಗಳಿಗೂ ಗೊತ್ತಿದೆ. ಇಂಥ ಬಿಸಿಲಿನಿಂದ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬಿರುತ್ತದೆ ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಪತ್ರ ಬರೆದರೂ ಸ್ಪಂದಿಸಿಲ್ಲ. ಅದಲ್ಲದೇ ವಿಧಾನ ಪರಿಷತ್‌ ಮಾಜಿ ಸದಸ್ಯ ಸುಶೀಲ ನಮೋಸಿ ಅವರು ಕೂಡ ಸರ್ಕಾರಕ್ಕೆ ಪತ್ರ ಬರೆದು ಜೂನ್‌ 15ರ ತನಕ ಶಾಲೆ ಆರಂಭಿಸದಂತೆ ಮನವಿ ಮಾಡಿದ್ದಾರೆ.

ದಿನದಿಂದ ದಿನಕ್ಕೆ ಬಿಸಿಲಿನ ಕಾವು ಹೆಚ್ಚಾಗಿದೆ. ಕುಡಿಯುವ ನೀರಿನ ಸಮಸ್ಯೆಗೆ ಕೂಡ ಉಲ್ಭಣವಾಗಿದೆ. ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು ಸರ್ಕಾರಕ್ಕೆ ಹಾಗೂ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಬರೆದ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ತೋರಿಸಿದ್ದೆವೆ. ಆದರೂ ಜಿಲ್ಲಾಧಿಕಾರಿಗಳು ಶಾಲೆ ಆರಂಭಿಸುವಂತೆ ಆದೇಶ ಮಾಡಿದ್ದಾರೆ. ಈ ಕುರಿತು ಜಿಲ್ಲಾಕಾರಿಗಳಿಗೆ ಇನ್ನೊಮ್ಮೆ ಮಾತನಾಡುತ್ತೇನೆ.
•ಚಂದ್ರಶೇಖರ,
ಡಿಡಿಪಿಐ ಬೀದರ

ತಾಲೂಕಿನಲ್ಲಿ ಬೆಂಕಿಯಂತಹ ಬಿಸಿಲಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ಆದೇಶದಂತೆ ನಾವಂತೂ ಶಾಲೆ ಆರಂಭಿಸುತ್ತಿದ್ದೇವೆ. ಬಿಸಿಲಿನಿಂದ ಮಕ್ಕಳ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬಿರಿದರೆ ಅದಕ್ಕೆ ಜಿಲ್ಲಾಡಳಿತವೇ ಕಾರಣವಾಗುತ್ತದೆ.
ಬಸವರಾಜ ಶಟಕಾರ,
ಅನುದಾನ ರಹಿತ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ

ಟಾಪ್ ನ್ಯೂಸ್

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.