ದುಶ್ಚಟಗಳಿಗೆ ದಾಸರಾಗಬೇಡಿ

ಅಂಕಲಗಿ ಜಾತ್ರೆ ವೇಳೆ ಚಟ ಮುಕ್ತರಾಗಿಪುನಃ ಚಟಕ್ಕೆ ದಾಸರಾದರೆ ದೊಡ್ಡ ಪಾಪ

Team Udayavani, Apr 5, 2019, 12:51 PM IST

5-April-14

ಅಫಜಲಪುರ: ಅಂಕಲಗಿ ಗ್ರಾಮದಲ್ಲಿ ಬಡದಾಳ ತೇರಿನ ಮಠದ ಅಭಿನವ ಚನ್ನಮಲ್ಲ ಶಿವಯೋಗಿಗಳು ಚಟಗಳನ್ನು ಜೋಳಿಗೆಗೆ ಹಾಕಿ ಎನ್ನುವ ವಿಭಿನ್ನ ಅಭಿಯಾನ ನಡೆಸಿದರು.

ಅಫಜಲಪುರ: ದುಶ್ಚಟಗಳಿಗೆ ದಾಸರಾಗದೆ ಸಜ್ಜನರಾಗಿ ಬದುಕು ನಡೆಸಿ ಎಂದು ಬಡದಾಳ ತೇರಿನ ಮಠದ ಅಭಿನವ ಚನ್ನಮಲ್ಲ ಶಿವಯೋಗಿಗಳು ಯುವ ಜನಾಂಗಕ್ಕೆ ಕರೆ ನೀಡಿದರು.

ತಾಲೂಕಿನ ಅಂಕಲಗಿ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ 21ನೇ ಜಾತ್ರಾ ಮಹೋತ್ಸವ ಅಂಗವಾಗಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ನಿಮ್ಮ ಚಟಗಳನ್ನು ನಮ್ಮ ಜೋಳಿಗೆಯಲ್ಲಿ ಹಾಕಿ ಎನ್ನುವ ವಿನೂತನ ಅಭಿಯಾನ ನಡೆಸಿದರು.

ನಂತರ ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದ ಅವರು, ಯುವಕರು
ದೇಶದ ಸಂಪತ್ತು. ಜಗತ್ತಿನ ಅತಿ ಹೆಚ್ಚು ಯುವಕರು ಹೊಂದಿರುವ ದೇಶ ನಮ್ಮದು. ಆದರೆ ಅನೇಕ ಚಟಗಳಿಗೆ ದಾಸರಾಗಿ ಯುವಕರು ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಯುಗಾದಿ ಹೊಸ
ವರ್ಷದ ಶುಭ ಸಂದರ್ಭದಲ್ಲಿ ಅಂಕಲಗಿ ಜಾತ್ರೆ ನಡೆಯುತ್ತದೆ. ಈ ಜಾತ್ರೆಯ ಸಮಯದಲ್ಲಿ ಗ್ರಾಮಸ್ಥರು ಚಟ ಮುಕ್ತರಾಗಿ
ಉತ್ತಮ ಜೀವನ ನಡೆಸಬೇಕು. ಯಾರು ಚಟ ಬಿಡುತ್ತೇವೆಂದು ಜೋಳಿಗೆಗೆ ಹಾಕಿ ಪ್ರಮಾಣ ಮಾಡಿದ್ದಿರಿ ಅವರ ಭವಿಷ್ಯ
ಉಜ್ವಲವಾಗಲಿದೆ, ಒಂದು ವೇಳೆ ಕದ್ದು ಪುನಃ ಅದೇ ಚಟಕ್ಕೆ ದಾಸರಾದರೆ ಅದಕ್ಕಿಂತ ದೊಡ್ಡ ಪಾಪ ಮತ್ತೂಂದಿಲ್ಲ ಎಂದರು.

ಈಗಿನ ಬಿಸಿಲು ನೋಡಿದಾಗ ಎಲ್ಲರಿಗೂ ಭಯ ಶುರುವಾಗಿದೆ. ಎಲ್ಲಿ ನೋಡಿದರಲ್ಲಿ ಗಿಡ, ಮರಗಳನ್ನು ದುರಾಸೆಗಾಗಿ ಕಡಿದು
ಮಾರಲಾಗುತ್ತಿದೆ. ಹೀಗಿ ಮುಂದುವರಿದರೆ ಬರುವ ವರ್ಷಗಳಲ್ಲಿ ಹನಿ ನೀರಿಗಾಗಿಯೂ ಎಲ್ಲರೂ ಪರದಾಡಬೇಕಾಗುತ್ತದೆ. ಹೀಗಾಗಿ ಮುಂಬರುವ ದಿನಗಳಲ್ಲಿ ಒಳ್ಳೆಯ ಮಳೆ-ಬೆಳೆಯಾಗಿ ನಾಡು
ಸಮೃದ್ಧವಾಗಿರಬೇಕಾದರೆ ಗಿಡ-ಮರಗಳನ್ನು ನೆಟ್ಟು ಬೆಳೆಸಬೇಕು. ಈ ನಿಟ್ಟಿನಲ್ಲಿ ಈ ಬಾರಿಯ ಮಳೆಗಾಲ ಆರಂಭದಲ್ಲಿ ಮಠದ ವತಿಯಿಂದ ಪ್ರತಿ ಮನೆಗೂ ಸಸಿಗಳನ್ನು ವಿತರಿಸುವ ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಎಲ್ಲರೂ ಸಸಿ ನೆಟ್ಟು ಅವುಗಳನ್ನು ಮಕ್ಕಳಂತೆ
ಬೆಳೆಸಬೇಕು ಎಂದು ಹೇಳಿದರು.

ಪಂಚಾಕ್ಷರಿ ದೇವರು ಮಾತನಾಡಿ, ಗುರುವಿನ ನೆನೆದರೆ ಯಾರಿಗೂ ಕೇಡಿಲ್ಲ. ಚನ್ನಮಲ್ಲ ಶಿವಯೋಗಿಗಳೆ ಸ್ವತಃ ಮನೆ
ಬಾಗಿಲಿಗೆ ಬಂದು ದುಶ್ಚಟ ಬಿಟ್ಟು ಸಜ್ಜನರಾಗಿ ಎಂದು ಸಲಹೆ ನೀಡುತ್ತಿರುವಾಗ, ನಾವೆಲ್ಲ ಚಟ ಬಿಟ್ಟು ಸಜ್ಜನರಾಗದಿದ್ದರೆ ದೇವರು ಮೆಚ್ಚುವುದಿಲ್ಲ ಎಂದರು.

ಮುಖಂಡರಾದ ಚಂದ್ರಕಾಂತ ಪೊಲೀಸ ಪಾಟೀಲ, ಸಾಹೇಬಗೌಡ ಮೂಲಗೆ, ವಿಠ್ಠಲ ರಾವ್‌ ಪಡಶೆಟ್ಟಿ, ಘೋಷಯ್ಯ ಸ್ವಾಮಿ, ಗುರು ಸ್ವಾಮಿ ಹಿರೇಮಠ, ಅಣ್ಣಾರಾವ ಪಡಶೆಟ್ಟಿ, ಏಸಣ್ಣ, ಶಿವರಶಣ ಪಾಟೀಲ, ಬಸಣ್ಣ ಕುಂಬಾರ, ಕಾಶಿರಾಯ ಮೂಲಗೆ, ಬಸಪ್ಪ ಪಾಟೀಲ ಹಾಗೂ ಇತರರು ಇದ್ದರು. ತಬಲಾ ವಾದಕ ಮಹಾಂತೇಶ ಸುತಾರ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.