ಹೇಳ್ಳೋರಿದ್ರೂ ಕೇಳ್ಳೋರಿಲ್ಲ!

ವೈದ್ಯರ ಸಮಸ್ಯೆ-ಸೌಲಭ್ಯವಿದ್ದರೂ ಕಲ್ಪಿಸುವವರಿಲ್ಲ• ಹರಿದ ಹಾಸಿಗೆ-ಹೊದಿಕೆ ವ್ಯವಸ್ಥೆ ಇಲ್ಲ

Team Udayavani, Aug 3, 2019, 9:51 AM IST

3-Agust-1

ಅಫಜಲಪುರ: ಅತನೂರ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ತಾ.ಪಂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ ಭೇಟಿ ನೀಡಿ ಪರಿಶೀಲಿಸಿದರು.

ಮಲ್ಲಿಕಾರ್ಜುನ ಹಿರೇಮಠ
ಅಫಜಲಪುರ:
ಸರ್ಕಾರ ಗ್ರಾಮೀಣ ಭಾಗದ ಜನರಿಗೆ ಸುಲಭವಾಗಿ ಆರೋಗ್ಯ ಸೇವೆಗಳು ಸಿಗಲಿ ಎನ್ನುವ ಉದ್ದೇಶದಿಂದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಕಟ್ಟಿಸಿದೆ. ಆದರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಜನರ ರೋಗ ಕಳೆಯುವ ಬದಲಿಗೆ ಅವುಗಳೇ ರೋಗಗ್ರಸ್ಥವಾಗಿರುವಾಗ ಜನಸಾಮಾನ್ಯರು ಆರೋಗ್ಯ ಸೇವೆಗಳನ್ನು ಅರಸಿ ನಗರ, ಪಟ್ಟಣಗಳಿಗೆ ಹೋಗಬೇಕಾದ ಸನ್ನಿವೇಶ ಬಂದಿದೆ.

ತಾಲೂಕಿನಾದ್ಯಂತ ಆರು ಹಾಸಿಗೆಗಳ ಒಟ್ಟು ಒಂಭತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಈ ಪೈಕಿ ಬಡದಾಳ ಮತ್ತು ದೇಸಾಯಿ ಕಲ್ಲೂರ ಆಸ್ಪತ್ರೆಗಳಲ್ಲಿ ವೈದ್ಯರಿಲ್ಲ. ಇರುವ ಸಿಬ್ಬಂದಿಗಳ ಮೇಲೆ ಆಸ್ಪತ್ರೆ ನಡೆಸಲಾಗುತ್ತಿದೆ. ಉಳಿದಂತೆ ಏಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಾಮಾನ್ಯ ವೈದ್ಯರು, ಐದು ಕಡೆ ಆಯುಷ್‌ ವೈದ್ಯರು ಆಸ್ಪತ್ರೆ ನಡೆಸುಕೊಂಡು ಹೋಗುತ್ತಿದ್ದಾರೆ. ಹಳ್ಳಿಗಳಲ್ಲಿ ಸರ್ಕಾರಿ ಸುಸಜ್ಜಿತ ಆಸ್ಪತ್ರೆಗಳು ನಿರ್ಮಾಣವಾಗುತ್ತಿವೆ. ಇನ್ನೇನು ಉಚಿತವಾಗಿ, ತ್ವರಿತವಾಗಿ ಆರೋಗ್ಯ ಸೇವೆಗಳು ಸಿಗಲಿವೆ ಎಂದು ಜನಸಾಮಾನ್ಯರು ಆಶಾಭಾವನೆ ಇಟ್ಟುಕೊಂಡಿದ್ದರು. ಆದರೆ ಎಲ್ಲ ಕಡೆ ಕಟ್ಟಡಗಳಾಗುತ್ತಿವೆ, ಆದರೆ ವೈದ್ಯರಿಲ್ಲ, ಸಿಬ್ಬಂದಿಗಳಿಲ್ಲ, ಔಷಧಿ ಇಲ್ಲ ಎನ್ನುವ ಅನೇಕ ಕೊರತೆಗಳನ್ನು ಕಂಡು ಜನಸಾಮಾನ್ಯರು ಸರ್ಕಾರಿ ಆಸ್ಪತ್ರೆಗಳಿಂದ ದೂರ ಸರಿಯುತ್ತಿದ್ದಾರೆ.

ಸೌಲಭ್ಯ ಇದ್ದರೂ ಕಲ್ಪಿಸುವವರಿಲ್ಲ: ತಾಲೂಕಿನ ಒಂಭತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬಡದಾಳ ಮತ್ತು ದೇಸಾಯಿ ಕಲ್ಲೂರ ಗ್ರಾಮಗಳಲ್ಲಿ ಆಯುಷ್‌ ಮತ್ತು ಸಾಮಾನ್ಯ ವೈದ್ಯರಿಲ್ಲ. ಇರುವ ಸಿಬ್ಬಂದಿಗಳ ಮೇಲೆ ಆಸ್ಪತ್ರೆ ನಡೆಸಿಕೊಂಡು ಹೋಗಲಾಗುತ್ತಿದೆ. ಉಳಿದ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರಿದ್ದರೂ ಇಲ್ಲದಂತಾಗುತ್ತಿದೆ. ಬಡ ಜನರಿಗೆ ಸರಿಯಾದ ಚಿಕಿತ್ಸೆಗಳು ಸಿಗುತ್ತಿಲ್ಲ. ಸರ್ಕಾರ ಆರೋಗ್ಯ ಸೇವೆಗಳ ಹೆಸರಿನಲ್ಲಿ ಬಿಡುಗಡೆ ಮಾಡುವ ಯೋಜನೆಗಳು, ಸೌಲಭ್ಯಗಳು ಜನರಿಗೆ ತಲುಪಿಸುವವರು ಇಲ್ಲದಂತಾಗಿದೆ. ಆದರೆ ಎಲ್ಲ ಸೇವೆಗಳು, ಸೌಲಭ್ಯಗಳು ಜನರಿಗೆ ತಲುಪಿದಂತೆ ಬಿಂಬಿಸಲಾಗುತ್ತಿದೆ. ಇದು ನಿಜಕ್ಕೂ ದುರಂತದ ಸಂಗತಿಯಾಗಿದೆ.

ಹರಿದ ಬೆಡ್‌: ಆರೋಗ್ಯ ಕೇಂದ್ರಗಳಲ್ಲಿ ಅವಳಡಿಸಲಾಗಿರುವ ಬೆಡ್‌ಗಳು ಹರಿದು ಹೋಗಿದ್ದು, ರೋಗಿಗಳು ಅದರ ಮೇಲೆ ಮಲಗಿ ಚಿಕಿತ್ಸೆ ಪಡೆಯುವ ಸನ್ನಿವೇಶ ಬಂದಿದೆ. ಹರಿದ ಬೆಡ್‌ಗಳ ಮೇಲೆ ಬೆಡ್‌ಶಿಟ್ ಸಹ ಇಲ್ಲ. ಹೀಗಾಗಿ ರೋಗ ವಾಸಿಗೆಂದು ಆಸ್ಪತ್ರೆಗೆ ಬಂದು ರೋಗ ಹಚ್ಚಿಕೊಂಡು ಹೋಗುವ ಪರಿಸ್ಥಿತಿ ರೋಗಿಗಳದ್ದಾಗಿದೆ.

ಬೀದಿ ದೀಪಗಳಿಲ್ಲ: ಆಸ್ಪತ್ರೆ ಮತ್ತು ಸಿಬ್ಬಂದಿಗಳ ವಸತಿ ಗೃಹಗಳ ರಸ್ತೆಗಳಿಗೆ ವಿದ್ಯುತ್‌ ದೀಪದ ವ್ಯವಸ್ಥೆ ಇಲ್ಲದಂತಾಗಿದ್ದು ಸಿಬ್ಬಂದಿ ಭಯದಲ್ಲಿ ಕಾಲ ಕಳೆಯುವಂತಾಗಿದೆ. ಅದರಲ್ಲೂ ಅತನೂರ ಗ್ರಾಮದ ಆರೋಗ್ಯ ಕೇಂದ್ರಕ್ಕೆ ಹೋಗಲು ಇರುವ ದಾರಿಗೆ ವಿದ್ಯುತ್‌ ದೀಪದ ವ್ಯವಸ್ಥೆ ಇಲ್ಲ. ಸಿಬ್ಬಂದಿಗಳಿರುವ ವಸತಿ ಗೃಹದ ಬಳಿ ವಿದ್ಯುತ್‌ ದೀಪಗಳಿಲ್ಲ. ರಾತ್ರಿಯಾದರೆ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ರಾತ್ರಿಯಾಗುತ್ತಿದ್ದಂತೆ ಕುಡುಕರ ಕಾಟ ಹೆಚ್ಚಾಗುತ್ತಿದೆ. ಅತನೂರ ಗ್ರಾಮದ ರೀತಿಯಲ್ಲಿ ಅನೇಕ ಗ್ರಾಮಗಳಲ್ಲಿ ವಿದ್ಯುತ್‌ ದೀಪದ ವ್ಯವಸ್ಥೆ ಇಲ್ಲ. ಹೀಗಾಗಿ ಸಾಕಷ್ಟು ಸಮಸ್ಯೆಯಾಗುತ್ತಿವೆ.

ಸಿಸಿ ಕ್ಯಾಮೆರಾ ಸಮಸ್ಯೆ: ಆರೋಗ್ಯ ಕೇಂದ್ರದಲ್ಲಿ ನಡೆಯುವ ಘಟನೆಗಳ ಬಗ್ಗೆ ನೀಗಾ ಇಡಲು ಸಿಸಿ ಕ್ಯಾಮೆರಾ ಅಳವಡಿಕೆ ಅವಶ್ಯಕವಾಗಿದೆ. ಆದರೆ ತಾಲೂಕಿನ ಗೊಬ್ಬೂರ (ಬಿ) ಮತ್ತು ರೇವೂರ (ಬಿ) ಆಸ್ಪತ್ರೆಗಳಲ್ಲಿ ಮಾತ್ರ ಸಿಸಿ ಅಳವಡಿಸಲಾಗಿದ್ದು, ಉಳಿದ ಆರೋಗ್ಯ ಕೇಂದ್ರಗಳಲ್ಲಿ ಅಳವಡಿಸಿಲ್ಲ. ಹೀಗಾಗಿ ಇಲ್ಲಿ ನಡೆಯುವ ಘಟನೆಗಳು ಯಾರಿಗೂ ತಿಳಿಯದಂತಾಗಿದೆ. ಇನ್ನಾದರೂ ಸಂಬಂಧಿಸಿದವರು ಕ್ರಮ ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.