ಸರ್ಕಾರಿ ಆಸ್ಪತ್ರೆಗೇ ಅಂಟಿದೆ ರೋಗ!

100 ಹಾಸಿಗೆಯಿದ್ದರೂ ಪ್ರಯೋಜನವಿಲ್ಲ •ಕುಡಿಯಲು ನೀರಿಲ್ಲ-ಕುಳಿತುಕೊಳ್ಳಲು ಆಸನಗಳಿಲ್ಲ

Team Udayavani, May 12, 2019, 9:45 AM IST

11-March-1

ಅಫಜಲಪುರ: ವಿವಿಧ ಹಳ್ಳಿಗಳಿಂದ ಆಸ್ಪತ್ರೆಗೆ ಆಗಮಿಸಿದ ರೋಗಿಗಳು ಮಲಗಲು ಬೆಡ್‌ ಇಲ್ಲದ್ದರಿಂದ ಗ್ಲುಕೋಸ್‌ ಬಾಟಲಿಗಳನ್ನು ಕೈಯಲ್ಲಿ ಹಿಡಿದು ನಿಂತಿರುವುದು.

ಅಫಜಲಪುರ: ಸರ್ಕಾರ ಬಡ ಜನರಿಗೆ ಉಚಿತವಾಗಿ ಆರೋಗ್ಯ ಸೇವೆ ಸಿಗಲೆಂದು ಕೋಟ್ಯಂತರ ರೂ. ಖರ್ಚು ಮಾಡಿ ಆಸ್ಪತ್ರೆಗಳನ್ನು ನಿರ್ಮಿಸುತ್ತದೆ. ಆದರೆ ಸರ್ಕಾರಿ ಆಸ್ಪತ್ರೆಗಳು ಬಡ ರೋಗಿಗಳ ಸೇವೆ ಮಾಡದೆ ಸ್ವತಃ ರೋಗಗ್ರಸ್ಥವಾಗಿವೆ. ಇದಕ್ಕೆ ತಕ್ಕ ಉದಾಹರಣೆ ಪಟ್ಟಣದಲ್ಲಿರುವ ಜರ್ಮನ್‌ ತಂತ್ರಜ್ಞಾನದಲ್ಲಿ ಕಟ್ಟಿರುವ ನೂರು ಹಾಸಿಗೆಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ.

ಪಟ್ಟಣದ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ನೂರು ಹಾಸಿಗೆಯ ಹೈಟೆಕ್‌ ಆಸ್ಪತ್ರೆಯಲ್ಲಿ ಎಲ್ಲವೂ ಇವೆ. ಆದರೆ ಯಾವುದೂ ಉಪಯೋಗಕ್ಕಿಲ್ಲ. ಆಸ್ಪತ್ರೆಯಲ್ಲಿ ವೈದ್ಯರು ಇದ್ದಾರೆ. ಆದರೆ ಕರ್ತವ್ಯಕ್ಕೆ ಬರುವುದಿಲ್ಲ. ನೂರು ಹಾಸಿಗೆ ಇವೆ. ಆದರೆ ಅವುಗಳ ಪೈಕಿ 50 ಮಾತ್ರ ಹಾಕಲಾಗಿದೆ. ಉಳಿದ 50 ಹಾಸಿಗೆ ಕತ್ತಲ ಕೋಣೆ ಸೇರಿಕೊಂಡಿವೆ. ಆಸ್ಪತ್ರೆಯಲ್ಲಿ ಸ್ವಚ್ಛತೆ ಕೊರತೆ ಇದೆ. ಸರ್ಕಾರದ ಯೋಜನೆಗಳು, ಅನುದಾನ ಎಲ್ಲವೂ ಬರುತ್ತದೆ. ಇಲ್ಲಿ ಎಲ್ಲ ವಸ್ತುಗಳಿವೆ. ಆದರೆ ಅವು ಪ್ರಯೋಜನಕ್ಕೆ ಬಾರದಂತಾಗಿವೆ. ಇಲ್ಲಿಗೆ ಬರುವ ಹತ್ತಾರು ಹಳ್ಳಿಗಳ ರೋಗಿಗಳ ಪಾಲಿಗೆ ಇದು ಅವಾಂತರಗಳ ತಾಣ ಎನ್ನುವಂತಾಗಿದೆ.

ರೋಗಿಗಳಿಗೆ ನಿತ್ಯ ನರಕ: ಉಚಿತ ಆರೋಗ್ಯ ಸೇವೆ ಸಿಗುತ್ತದೆ ಎಂದು ಸರ್ಕಾರಿ ಆಸ್ಪತ್ರೆಗೆ ಬಡವರು ಬರುತ್ತಾರೆ. ಆದರೆ ಇಲ್ಲಿ ಯಾವ ಸೇವೆಯೂ ಸರಿಯಾಗಿ ಸಿಗುತ್ತಿಲ್ಲ. ವೈದ್ಯರು ಆಸ್ಪತ್ರೆಗೆ ಬರುವುದಿಲ್ಲ, ಇರುವ ವೈದ್ಯರು ಎಲ್ಲವನ್ನು ನೋಡಿಕೊಳ್ಳಬೇಕು. ಅದರಲ್ಲಿ ಗರ್ಭೀಣಿಯರು, ಬಾಣಂತಿಯರಿಗಾಗಿ ವಿಶೇಷ ಕಾಳಜಿ ಬೇಕಾಗುತ್ತದೆ. ಆದರೆ ಅದು ಇಲ್ಲಿಲ್ಲ. ಬಾಣಂತಿಯರಿಗೆ, ಗರ್ಭಿಣಿಯರಿಗೆ ಹಾಗೂ ರೋಗಿಗಳಿಗೆ ಬೆಡ್‌ ಮೇಲೆ ಬೇಡ್‌ಶೀಟ್ ಹಾಕದೆ ಮಲಗಿಸಲಾಗುತ್ತದೆ. ಹೀಗಾಗಿ ರೋಗಿಗಳು ನಿತ್ಯ ನರಕ ಅನುಭವಿಸುವಂತಾಗಿದೆ.

ಶುದ್ಧ ನೀರು, ಆಸನಗಳಿಲ್ಲ: ಆಸ್ಪತ್ರೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಅಳವಡಿಸಲಾಗಿದೆ. ಆದರೆ ಒಮ್ಮೆಯೂ ಶುದ್ಧ ನೀರನ್ನು ಯಾರೂ ಕುಡಿದಿಲ್ಲ. ಶುದ್ಧೀಕರಣ ಘಟಕ ಅಳವಡಿಸಿ ಆರಂಭವೇ ಮಾಡಿಲ್ಲ. ಹೊರಗೆ ರೋಗಿಗಳಿಗೆ ಕುಡಿಯುವ ಹಾಗೂ ಬಳಸುವ ಸಲುವಾಗಿ ಸಿಂಟೆಕ್ಸ್‌ ಇಡಲಾಗಿದೆ. ಆದರೆ ಈ ನೀರು ರೋಗಿಗಳ ಬಳಕೆಗೆ ಸಿಗುತ್ತಿಲ್ಲ. ಆಸ್ಪತ್ರೆ ಹಿಂಭಾಗದಲ್ಲಿ ಆಸ್ಪತ್ರೆ ಕಟ್ಟಡವೊಂದು ನಡೆದಿದೆ. ಗುತ್ತಿಗೆದಾರರು ಆಸ್ಪತ್ರೆಯಲ್ಲಿರುವ ಕುಡಿಯುವ ನೀರನ್ನು ಕಟ್ಟಡಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಹೀಗಾಗಿ ಆಸ್ಪತ್ರೆಗೆ ಬರುವ ರೋಗಿಗಳು ಕುಡಿಯುವ ನೀರು ತರಬೇಕಾದರೆ ಹೊರಗಿನಿಂದ ತರುವಂತಾಗಿದೆ. ಆಸ್ಪತ್ರೆಯೊಳಗೆ ವಿಶ್ರಮಿಸಿಕೊಳ್ಳಬೇಕೆಂದರೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆಯೇ ಇಲ್ಲ. ಹೀಗಾಗಿ ರೋಗ ತಪಾಸಣೆಗೆ ಬಂದು ಸರತಿ ಬರುವ ತನಕ ನಿಲ್ಲಬೇಕಾದ ಪರಿಸ್ಥಿತಿ ಇದೆ.

ಬೆಡ್‌ಶೀಟ್ ತೊಳೆಯುವವರಿಲ್ಲ: ಆಸ್ಪತ್ರೆಯಲ್ಲಿ 41 ಜನ ಗ್ರೂಪ್‌ ಡಿ ನೌಕರರಿದ್ದಾರೆ. ಆದರೂ ಬಾಣಂತಿಯರಿಗೆ, ಗರ್ಭೀಣಿಯರಿಗೆ ಬೆಡ್‌ಶೀಟ್ ತೊಳೆದು ಹಾಕುವರಿಲ್ಲ. ತೊಳೆಯುವುದೇ ಬೇಡವೆಂದು ಬೆಡ್‌ಶೀಟ್ ಹಾಕುವುದನ್ನೆ ಬಿಟ್ಟಂತಿದೆ. ಅಲ್ಲದೆ ಗ್ರೂಪ್‌ ಡಿ ನೌಕರರು ತಮಗೂ ಆಸ್ಪತ್ರೆಗೂ ಸಂಬಂಧವೇ ಇಲ್ಲವೆಂಬಂತೆ ವರ್ತಿಸುತ್ತಾರೆ.

ಕೈತೋಟದಲ್ಲೇ ಹಂದಿಗಳ ತಾಣ: ಆಸ್ಪತ್ರೆ ಮುಂಭಾಗದಲ್ಲಿರುವ ಕೈತೋಟ ಹಂದಿಗಳ ತಾಣವಾಗಿದೆ. ಪಟ್ಟಣದ ಹಂದಿಗಳೆಲ್ಲ ಆಸ್ಪತ್ರೆ ಆವರಣದಲ್ಲಿರುವ ಗಿಡಗಳ ನೆರಳಲ್ಲಿ ವಿಶ್ರಾಂತಿ ಪಡೆಯುತ್ತವೆ. ಆಸ್ಪತ್ರೆಯೊಳಗಡೆ ಕುಳಿತುಕೊಳ್ಳಲು ಆಸನಗಳಿಲ್ಲವೆಂದು ರೋಗಿಗಳು ಕೈತೋಟಕ್ಕೆ ಬಂದರೆ ಹಂದಿಗಳೊಂದಿಗೆ ನೆರಳಲ್ಲಿ ಕುಳಿತುಕೊಳ್ಳಬೇಕಾದ ಪರಿಸ್ಥಿತಿ ಇದೆ. ಸಂಬಂಧಪಟ್ಟವರಿಗೆ ಈ ಎಲ್ಲ ಸಮಸ್ಯೆಗಳ ಅರಿವಿದ್ದರೂ ಶಾಶ್ವತ ಪರಿಹಾರಕ್ಕೆ ಮುಂದಾಗುತ್ತಿಲ್ಲ.

ಆಸ್ಪತ್ರೆ ಸಮಸ್ಯೆ ಬಗ್ಗೆ ಖುದ್ದಾಗಿ ವೀಕ್ಷಿಸಿ ಸಮಸ್ಯೆ ಪರಿಹಸರಿಸುವ ಕೆಲಸ ಮಾಡಲಾಗುತ್ತದೆ. ಕರ್ತವ್ಯಲೋಪ ಎಸಗುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ.
•ಎಂ.ವೈ. ಪಾಟೀಲ, ಶಾಸಕ

ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

6-fusion

UV Fusion: ಇಂಡಿ ಪಂಪ್‌ ಮಟ..

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.