ಅಫಜಲಪುರಕ್ಕೆ ನೆರೆ-ಬರ ದಾಳಿ

ಬೆಳೆ ಸರ್ವೇ ವರದಿ ಸಲ್ಲಿಕೆಗೆ ಸೂಚನೆ•ಕೃಷಿ, ತೋಟಗಾರಿಕೆ ಅಧಿಕಾರಿಗಳೇ ಜಂಟಿಯಾಗಿ ಕೆಲಸ ಮಾಡಿ

Team Udayavani, Aug 17, 2019, 9:55 AM IST

17-Agust-2

ಅಫಜಲಪುರ: ತಾಪಂ ಸಭಾಂಗಣದಲ್ಲಿ ನೆರೆ ಮತ್ತು ಬರ ಕುರಿತು ಶಾಸಕ ಎಂ.ವೈ. ಪಾಟೀಲ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಅಫಜಲಪುರ: ತಾಲೂಕಿನಲ್ಲಿ ಮಳೆಯಾಗದೆ ಸಾಕಷ್ಟು ಕಡೆ ಬಿತ್ತನೆಯಾಗಿಲ್ಲ, ಬಿತ್ತಿದ ಬೆಳೆಗಳು ಸರಿಯಾಗಿ ಬೆಳವಣಿಗೆಯಾಗುತ್ತಿಲ್ಲ. ಇಂತಹ ಸ್ಥಿತಿಯಲ್ಲಿ ಮಹಾರಾಷ್ಟ್ರದಲ್ಲಿ ಸುರಿದ ಮಳೆಯಿಂದಾಗಿ ಭೀಮಾ ನದಿಯಲ್ಲಿ ಪ್ರವಾಹ ಬಂದು ನದಿ ದಂಡೆ ಊರುಗಳಲ್ಲಿ ಸಾಕಷ್ಟು ಪ್ರಮಾಣದ ಬೆಳೆ, ಜಮೀನು, ಆಸ್ತಿಪಾಸ್ತಿ ನಷ್ಟವಾಗಿದೆ. ಹೀಗಾಗಿ ಅಧಿಕಾರಿಗಳು ಎಲ್ಲದರ ಸರ್ವೇ ಮಾಡಿ, ಮಾಹಿತಿ ಸಲ್ಲಿಸುವಂತೆ ಶಾಸಕ ಎಂ.ವೈ. ಪಾಟೀಲ ಸೂಚಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ತಾಲೂಕಿಗೆ ನೆರೆ ಮತ್ತು ಬರ ಎರಡೂ ದಾಳಿ ಇಟ್ಟಿವೆ. ಒಂದು ಕಡೆ ಮಳೆಯಾಗದೆ ಬೆಳೆ ಒಣಗುತ್ತಿವೆ. ಇನ್ನೊಂದು ಕಡೆ ಮಹಾರಾಷ್ಟ್ರದಲ್ಲಿ ಸುರಿದ ಮಳೆಯಿಂದ ಭೀಮಾ ನದಿ ದಂಡೆಯ ಊರುಗಳಲ್ಲಿ ನೆರೆ ಉಂಟಾಗಿ ಸಾಕಷ್ಟು ಹಾನಿಯಾಗಿದೆ. ಹೀಗಾಗಿ ಅಫಜಲಪುರ ತಾಲೂಕಿಗೆ ವಿಶೇಷ ಪ್ಯಾಕೇಜ್‌ ನೀಡುವಂತೆ ಹಾಗೂ ತಾಲೂಕನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಅನುದಾನ ನೀಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದರು.

ಬೆಳೆ ಸರ್ವೇ ಕೆಲಸಕ್ಕೆ ನೇಮಕವಾದ ನೋಡಲ್ ಅಧಿಕಾರಿಗಳು, ಕೃಷಿ, ತೋಟಗಾರಿಕೆ, ಕಂದಾಯ, ಗ್ರಾಪಂ ಪಿಡಿಒಗಳು ಸೇರಿ ಸರ್ವೇ ಮಾಡಬೇಕು. ಯಾರೂ ತಮ್ಮ ಕರ್ತವ್ಯದಿಂದ ನುಣುಚಿಕೊಳ್ಳದೆ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ನೆರೆಯಿಂದ ತಾಲೂಕಿನಲ್ಲಿ 41 ಗ್ರಾಮಗಳು ನಷ್ಟ ಅನುಭವಿಸಿವೆ. ಉಳಿದ ಕಡೆ ಬರ ಆವರಿಸಿದೆ. ಮೊದಲು ನೆರೆ ಸಮೀಕ್ಷೆ ಮಾಡಿ, ಬಳಿಕ ಬರದ ಸಮೀಕ್ಷೆ ಮಾಡಿ ವರದಿ ಸಲ್ಲಿಸಿ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಜಿಲ್ಲಾ ನೋಡಲ್ ಅಧಿಕಾರಿ ಸೋಮಪ್ಪ ಕಡಕೋಳ, ತಹಶೀಲ್ದಾರ್‌ ಮಧುರಾಜ್‌ ಕೂಡಲಗಿ ಮಾತನಾಡಿ, ಸಮೀಕ್ಷೆ ಸಂದರ್ಭದಲ್ಲಿ ಯಾವ ರೈತರ ಜಮೀನೂ ಬಿಟ್ಟು ಹೋಗದಂತೆ ಎಚ್ಚರಿಕೆಯಿಂದ ಸಮೀಕ್ಷೆ ಮಾಡಬೇಕು. ಯಾವೊಬ್ಬ ರೈತರು ತಮ್ಮ ಜಮೀನು ಸರ್ವೇ ಆಗಿಲ್ಲವೆಂದು ದೂರು ನೀಡಬಾರದು, ಹಾಗೆ ಕೆಲಸ ಮಾಡಿ. ಬೆಳೆ ಹಾಳಾದ ರೈತರಿಗೆ ಎನ್‌ಡಿಆರ್‌ಎಫ್‌ ಅಡಿಯಲ್ಲಿ ಪರಿಹಾರ ನೀಡಲಾಗುತ್ತದೆ ಎಂದರು.

ಸಣ್ಣ ನೀರಾವರಿ ಇಲಾಖೆ ಎಇಇ ಶಾಂತಪ್ಪ ಜಾಧವ ಮಾತನಾಡಿ, ದೇವಲ ಗಾಣಗಾಪುರ ಬ್ರಿಡ್ಜ್ ಕಂ ಬ್ಯಾರೇಜ್‌ ಪ್ರವಾಹದ ನೀರಿನಿಂದ ಹಾನಿಯಾಗಿದೆ. ಕೂಡು ರಸ್ತೆ, ಬ್ಯಾರೇಜ್‌ ತಡೆಗೋಡೆ ಒಡೆದು 5.9 ಕೋಟಿ ರೂ. ನಷ್ಟವಾಗಿದೆ ಎಂದು ಹೇಳಿದರು.

ಶಾಸಕ ಎಂ.ವೈ. ಪಾಟೀಲ ಇದಕ್ಕೆ ಉತ್ತರಿಸಿ, ಗೇಟ್‌ಗಳನ್ನು ತೆಗೆದು ಹೈಡ್ರಾಲಿಕ್‌ ಗೇಟ್ ಅಳವಡಿಸಿದರೆ ಸ್ವಲ್ಪ ಸಮಸ್ಯೆ ಕಡಿಮೆಯಾಗಬಹುದು ಎಂದರು. ಆಗ ಅಧಿಕಾರಿ, ಒಂದು ಬ್ಯಾರೇಜ್‌ನ ಹೈಡ್ರಾಲಿಕ್‌ ಗೇಟ್ ಅಳವಡಿಕೆಗೆ ಅಂದಾಜು 35 ಕೋಟಿ ರೂ. ವೆಚ್ಚವಾಗಲಿದೆ ಎಂದು ತಿಳಿಸಿದರು.

ಪಿಡಬ್ಲ್ಯುಡಿ ಇಲಾಖೆ ಜೆಇ ಉಮೇಶ ಅಲೆಗಾಂವ ಮಾತನಾಡಿ, ನೆರೆಯಿಂದಾಗಿ ಮಂಗಳೂರ, ದುದ್ದುಣಗಿ, ಭೋಸಗಾ ಗ್ರಾಮಗಳು ಸೇರಿದಂತೆ ಒಟ್ಟು 190 ಲಕ್ಷ ರೂ. ಅಂದಾಜಿನ ರಸ್ತೆ ಹಾಗೂ 40 ಲಕ್ಷ ರೂ. ಅಂದಾಜಿನ ಸಿಡಿಗಳು ಹಾನಿಯಾಗಿವೆ ಎಂದು ಮಾಹಿತಿ ನೀಡಿದರು.

ಪಿಆರ್‌ಇ ಜೆಇ ಉಮೇಶ ಮುನವಳ್ಳಿ ಮಾತನಾಡಿ, ಪ್ರವಾಹದ ನೀರಿನಿಂದ ತಾಲೂಕಿನಲ್ಲಿ ಒಂಭತ್ತು ರಸ್ತೆ, ಏಳು ಸಿಡಿಗಳು ಹಾಳಾಗಿವೆ. ಸುಮಾರು 59.75 ಲಕ್ಷ ರೂ. ಗಳಷ್ಟು ನಷ್ಟ ಉಂಟಾಗಿದೆ ಎಂದು ತಿಳಿಸಿದರು.

ಶಿಕ್ಷಣ ಇಲಾಖೆ, ಕೃಷಿ, ತೋಟಗಾರಿಕೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ತಾಪಂ ಉಪಾಧ್ಯಕ್ಷ ಭೀಮಾಶಂಕರ ಹೊನ್ನಕೇರಿ, ಪುರಸಭೆ ಮುಖ್ಯಾಧಿಕಾರಿ ಅಶೋಕ ಬಿಲಗುಂದಿ, ತಾ.ಪಂ ಇಒ ರಮೇಶ ಸುಲ್ಪಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು, ಪಿಡಿಒಗಳು, ಗ್ರಾಮ ಲೆಕ್ಕಿಗರು ಇದ್ದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.