ಅಫಜಲಪುರ: ಮಳೆ ಕೊರತೆಯಲ್ಲೂ ಬಿತ್ತನೆಗೆ ಸಿದ್ಧತೆ


Team Udayavani, Jun 15, 2019, 10:00 AM IST

15-June-2

ಅಫಜಲಪುರ: ಬಳೂರ್ಗಿ ಗ್ರಾಮದಲ್ಲಿ ಬಿತ್ತನೆಗೆ ಭೂಮಿ ಹದಗೊಳಿಸುತ್ತಿರುವ ರೈತ.

ಮಲ್ಲಿಕಾರ್ಜುನ ಹಿರೇಮಠ
ಅಫಜಲಪುರ:
ಕಳೆದ ವರ್ಷ ಮಳೆ ಕೊರತೆಯಾಗಿ ಬಿತ್ತಿದ ಬೆಳೆಗಳೆಲ್ಲ ನಾಶವಾಗಿ ಸಾಕಷ್ಟು ಹಾನಿಯಾಗಿತ್ತು. ಬೆಳೆ ಹಾನಿಯಿಂದ ರೈತಾಪಿ ವರ್ಗದವರು ಸಾಲ ಮಾಡಿಕೊಂಡು ಹೈರಾಣಾಗಿದ್ದರು. ಆದರೆ ಈ ಬಾರಿಯ ಮುಂಗಾರು ಹಂಗಾಮಿನ ಬಿತ್ತನೆಗೆ ಮಳೆ ಕೊರತೆಯಲ್ಲು ಭೂಮಿ ಹದಗೊಳಿಸುತ್ತಿದ್ದಾರೆ. ಈ ಬಾರಿಯಾದರೂ ಉತ್ತಮ ಮಳೆಯಾಗಿ ರೈತರ ಕಷ್ಟ ನಿವಾರಣೆಯಾಗುತ್ತದೆಯೋ ಅಥವಾ ಮತ್ತೂಮ್ಮೆ ಭೀಕರ ಬರಗಾಲ ಆವರಿಸಿ ಜನ ಜಾನುವಾರುಗಳಿಗೆ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿಸುತ್ತಾ ನೋಡಬೇಕು.

99,850 ಹೆಕ್ಟೇರ್‌ ಬಿತ್ತನೆ ಗುರಿ: ತಾಲೂಕಿನ ಒಟ್ಟು ಭೌಗೋಳಿಕ ಕ್ಷೇತ್ರ 13,0478 ಲಕ್ಷ ಹೆಕ್ಟೇರ್‌ ಇದೆ. 11,0590 ಹೆಕ್ಟೇರ್‌ ಸಾಗುವಳಿ ಕ್ಷೇತ್ರ ಇದೆ. ಈ ಪೈಕಿ ಈ ಬಾರಿ 99,850 ಹೆಕ್ಟೇರ್‌ ಬಿತ್ತನೆ ಕ್ಷೇತ್ರವಿದೆ. 2315 ಹೆಕ್ಟೇರ್‌ ಪ್ರದೇಶದಲ್ಲಿ ಏಕದಳ, 73,835 ಹೆಕ್ಟೇರ್‌ ದ್ವಿದಳ, 2490 ಹೆಕ್ಟೇರ್‌ ಎಣ್ಣೆಕಾಳು, 21,210 ಹೆಕ್ಟೇರ್‌ ವಾಣಿಜ್ಯ ಬೆಳೆಗಳ ಕ್ಷೇತ್ರವಾಗಿದೆ. ಕಳೆದ ವರ್ಷದ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಮಳೆಗಳು ಬಾರದ ಹಿನ್ನೆಲೆ ಎಲ್ಲ ಬೆಳೆಗಳು ಶೇ. 80ರಷ್ಟು ಹಾಳಾಗಿ ರೈತರಿಗೆ ಭಾರಿ ಆಘಾತವಾಗಿತ್ತು. ಅಲ್ಲದೆ ಜನ ಸಾಮಾನ್ಯರ ಬದುಕಿಗೆ ಭಾರಿ ಪೆಟ್ಟು ಬಿದ್ದಿತ್ತು.

ವಾಡಿಕೆಗಿಂತ ಕಡಿಮೆ ಮಳೆ: ಈ ಸಾಲಿನ ಜನವರಿಯಿಂದ ಜೂನ್‌ 12 ರ ವರೆಗೆ 160.5 ಮಿಮಿ ಮಳೆಯಾಗಬೇಕಾಗಿತ್ತು. ಆದರೆ ಕೇವಲ 44.03 ಮಿಮೀ ಮಳೆಯಾಗಿದೆ. ಹೀಗಾಗಿ ಸುಮಾರು 116.15 ಮಿಮೀ ಮಳೆ ಕೊರತೆಯಾಗಿದೆ. 2018-19ರ ಜನವರಿಯಿಂದ ಡಿಸೆಂಬರ್‌ ವರೆಗೆ 667.3 ಮಿಮೀ ಮಳೆಯಾಗಬೇಕಾಗಿತ್ತು. ಆದರೆ 469.8 ಮಿಮೀ ಮಾತ್ರ ಮಳೆಯಾಗಿ 107.5 ಮಿಮೀ ಮಳೆ ಕೊರತೆಯಾಗಿತ್ತು.

ಕಳೆದ ವರ್ಷದ ಮುಂಗಾರು ಮತ್ತು ಹಿಂಗಾರು ಮಳೆಗಳು ಕೈ ಕೊಟ್ಟಿದ್ದರಿಂದ ರೈತರು ಬಹಳಷ್ಟು ಸಂಕಷ್ಟ ಅನುಭವಿಸುವಂತಾಗಿತ್ತು. ಕುಡಿಯುವ ನೀರು, ಮೇವಿಲ್ಲದೆ ಜನ ಜಾನುವಾರುಗಳು ಸಂಕಷ್ಟ ಅನುಭವಿಸುವಂತಾಗಿತ್ತು. ಆದರೆ ಈ ಬಾರಿಯಾದರೂ ಉತ್ತಮ ಮಳೆಯಾಗಿ ಉತ್ತಮ ಬೆಳೆಯಾಗಲಿ ಎಂದು ರೈತರು ಮುಗಿಲ ಕಡೆ ಮುಖ ಮಾಡಿ ದೇವರಲ್ಲಿ ಮೊರೆ ಇಡುತ್ತಿದ್ದಾರೆ.

ಕಳೆದ ವರ್ಷ ಬೆಳೆಯಲ್ಲಿ ಬಹುತೇಕ ನಾಶವಾಗಿ ರೈತರಿಗೆ ಬಹಳಷ್ಟು ಹಾನಿಯುಂಟಾಗಿತ್ತು. ಅದರಲ್ಲೂ ವಾಣಿಜ್ಯ ಬೆಳೆಗಳಾದ ಕಬ್ಬು ಬೆಳೆ ಸಂಪೂರ್ಣ ಹಾಳಾಗಿ ಹೋಗಿತ್ತು. ಕಳೆದ ವರ್ಷ 17,955 ಹೆಕ್ಟೇರ್‌ ಪ್ರದೇಶದಲ್ಲಿ ಕಬ್ಬು ಹಾಳಾಗಿತ್ತು. 2018-19ರಲ್ಲಿ 7113 ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ ಬಿತ್ತನೆ ಮಾಡಲಾಗಿತ್ತು. ಈ ಪೈಕಿ 6401 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾಳಾಗಿತ್ತು. ಹೀಗಾಗಿ ಈ ವರ್ಷ ಕಬ್ಬು ಮತ್ತು ಹತ್ತಿ ಬಿತ್ತನೆ ಕ್ಷೇತ್ರ ತೀರಾ ಕಡಿಮೆಯಾಗಿದೆ. ಒಟ್ಟಾರೆಯಾಗಿ ಕಳೆದ ವರ್ಷ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಮಳೆಗಳು ಬಾರದೆ ಎಲ್ಲ ಬೆಳೆಗಳು ನಾಶವಾಗಿದ್ದವು. ಈ ವರ್ಷವಾದರೂ ಉತ್ತಮ ಮಳೆಯಾಗಿ ಒಳ್ಳೆಯ ಫಸಲು ಬಂದು ರೈತರ ಬದುಕು ಹಸನಾಗುತ್ತಾ ಕಾದು ನೋಡಬೇಕಾಗಿದೆ.

ಹ್ವಾದ್‌ ವರ್ಷ ಮಳೆಯಾಗಿಲ್ಲ. ಬೆಳೆ ಹಾಳಾಗಿ ನಮ್ಮ ಹೊಟ್ಟೆ, ಬಟ್ಟೆಗೆ ಕಷ್ಟ ಬಂದಿತ್ತು. ಮೇವು ಸಿಗದೇ ದನ ಕರುಗಳೆಲ್ಲವನ್ನೂ ಮಾರಿದೇವು. ಈಗ ಮತ್‌ ಬಿತ್ತುಣಕಿ ಬಂದಾವ. ದನ ಕರಗೋಳಿಲ್ದೆ ಭಾಳ ಕಷ್ಟ ಬಂದಾದ. ಹೆಚ್ಚಿಗಿ ಬಾಡಗಿ ಕೊಟ್ಟು ಟ್ರ್ಯಾಕ್ಟರ್‌ ಬಿತ್ತನೆ ಮಾಡಬೇಕಾದರ ಮತ್ತೆ ನಾವು ಸಾಲ ಮಾಡಬೇಕು. ಸಾಲ ಮಾಡ್ತೀವಿ ಛೋಲೊ ಮಳಿ ಬಂದ್ರ ಅದೇ ದೊಡ್ಡ ಉಪಕಾರ ಆಗ್ತದ್ರಿ ಎನ್ನುತ್ತಾರೆ ರೈತರಾದ ಸದ್ದಾಂ ನಾಕೇದಾರ, ವಿಠ್ಠಲ ಕುಡಕಿ, ಭೀಮಾ ಕುಡಕಿ, ರಮೇಶ ಕೆ. ಮಠ.

ಮುಂಗಾರು ನಿರೀಕ್ಷೆಯಷ್ಟು ಬಂದಿಲ್ಲ. ಆದರೂ ಚಿಂತೆಗೀಡಾಗಬೇಕಾಗಿಲ್ಲ. ಮಳೆಯಾಗುವ ಲಕ್ಷಣ ಇವೆ. ಹೀಗಾಗಿ ಮುಂಗಾರು ಬಿತ್ತನೆಗೆ ರೈತರು ಭೂಮಿ ಹದಗೊಳಿಸಿಕೊಳ್ಳಬೇಕು. ತಾಲೂಕಿನ
ಅತನೂರ, ಕರ್ಜಗಿ ಹಾಗೂ ಅಫಜಲಪುರ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದೆ. ರೈತರು ಆನ್‌ಲೈನ್‌ ಅರ್ಜಿ ಸಲ್ಲಿಸಿ
ರಿಯಾಯಿತಿ ದರದಲ್ಲಿ ಬೀಜ ಪಡೆಯಬಹುದು ಎಂದು ಕೃಷಿ ಅಧಿಕಾರಿ ಮಹಮದ್‌ ಖಾಸಿಂ, ತಾಂತ್ರಿಕ ಅಧಿಕಾರಿ ಸರ್ದಾರಭಾಷಾ ನದಾಫ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.