ಅಫಜಲಪುರ ಬಸ್‌ ನಿಲ್ದಾಣವೇ ಅದ್ವಾನ; ತಪ್ಪಿಲ್ಲ ಪರದಾಟ

ಮಾರ್ಗಸೂಚಿ ಹೇಳುವುದಿಲ್ಲ-ಕೇವಲ ಜಾಹೀರಾತು ಮಾತ್ರ

Team Udayavani, Nov 28, 2019, 10:56 AM IST

28-November-1

 

„ಮಲ್ಲಿಕಾರ್ಜುನ ಹಿರೇಮಠ
ಅಫಜಲಪುರ:
ತಾಲೂಕು ಕೇಂದ್ರದ ಬಸ್‌ ನಿಲ್ದಾಣ ಎಂದರೆ ಅದೊಂದು ರೀತಿಯ ಎಲ್ಲ ಸೌಲಭ್ಯಗಳಿರುವ ಸಾರ್ವಜನಿಕ ತಾಣವಾಗಿರಬೇಕು. ಆದರೆ ಅಫಜಲಪುರ ಬಸ್‌ ನಿಲ್ದಾಣವೇ ಅದ್ವಾನವಾಗಿದೆ. ಇಲ್ಲಿ ಯಾವ ಕನಿಷ್ಠ ಸೌಲಭ್ಯಗಳು ಪ್ರಯಾಣಿಕರಿಗೆ ಸಿಗುವುದಿಲ್ಲ. ಸಿಸಿ ಕ್ಯಾಮೆರಾ ಕೆಟ್ಟು ವರ್ಷ ಗತಿಸಿದರೂ ದುರಸ್ತಿಯಿಲ್ಲ: ಬಸ್‌ ನಿಲ್ದಾಣದಲ್ಲಿ ಪ್ರತಿಯೊಂದು ಚಟುವಟಿಕೆ ಮೇಲೆ ನೀಗಾ ಇಡುವ ಸಲುವಾಗಿ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಆದರೆ ಕ್ಯಾಮೆರಾಗಳು ಕೆಟ್ಟು ಸುಮಾರು ಒಂದು ವರ್ಷವೇ ಗತಿಸಿದೆ. ಕ್ಯಾಮೆರಾ ಕೆಟ್ಟಿರುವ ಕುರಿತು ಕೆಲವು ತಿಂಗಳ ಹಿಂದೆ ಉದಯವಾಣಿಯಲ್ಲಿ ವರದಿ ಪ್ರಕಟವಾಗಿತ್ತು. ವರದಿಯ ಬಳಿಕವು ಸಂಬಂಧ ಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ.

ಹೀಗಾಗಿ ವರ್ಷಗಳೇ ಗತಿಸಿದರೂ ಬಸ್‌ ನಿಲ್ದಾಣದ ಕ್ಯಾಮೆರಾಗಳಿಗೆ ದುರಸ್ತಿ ಭಾಗ್ಯ ಸಿಕ್ಕಿಲ್ಲ. ಇದರಿಂದ ಬಸ್‌ ನಿಲ್ದಾಣದಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಮೇಲೆ ನಿಗಾ ಇಡಲಾಗುತ್ತಿಲ್ಲ.

ಮಾರ್ಗಸೂಚಿ ಹೇಳುವುದಿಲ್ಲ: ಬಸ್‌ ನಿಲ್ದಾಣದಲ್ಲಿ ಕರ್ಕಶವಾದ ಸದ್ದಿನಲ್ಲಿ ನಿತ್ಯ ನೂರಾರು ಜಾಹೀರಾತುಗಳನ್ನು ಬಿತ್ತರಿಸಲಾಗುತ್ತಿದೆ. ಆದರೆ ಒಮ್ಮೆಯೂ ಯಾವ ಬಸ್ಸು ಎಲ್ಲಿಗೆ ಹೋಗುತ್ತದೆ, ಎಲ್ಲಿ ನಿಂತಿದೆ ಎಂದು ಹೇಳುವುದಿಲ್ಲ. ಮಾರ್ಗಸೂಚಿ ಹೇಳದೇ ಇರುವುದರಿಂದ ಹಳ್ಳಿಗಳಿಂದ ಬರುವ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಅನೇಕ ಸಲ ಬಸ್ಸುಗಳನ್ನು ತಪ್ಪಿಸಿಕೊಂಡಿದ್ದಾರೆ. ಕೇವಲ ಜಾಹಿರಾತುಗಳನ್ನು ದೊಡ್ಡ ಶಬ್ದದಲ್ಲಿ ಹಾಕವುದರಿಂದ ಪ್ರಯಾಣಿಕರಿಗೆ ಕಿರಿಕಿರಿಯಾಗುತ್ತಿದೆ.

ಆಗಾಗ ಬಣ್ಣ ಮಾತ್ರ ಬಳಿಸುತ್ತಾರೆ: ಬಸ್‌ ನಿಲ್ದಾಣದ ಬಣ್ಣ ಮಾತ್ರ ಆಗಾಗ ಬದಲಿಸಲಾಗುತ್ತದೆ. ಬಣ್ಣ ಬದಲಿಸುವ ಅಧಿ ಕಾರಿಗಳು, ಇಲಾಖೆಯವರು ಇಲ್ಲಿನ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಬಸ್‌ ನಿಲ್ದಾಣದಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಅಂಗವಿಕಲರಿಗೆ ಕರೆದೊಯ್ಯಲು ವ್ಯವಸ್ಥೆ ಇಲ್ಲ. ಸಿಸಿ ಕ್ಯಾಮೆರಾ ಕೆಟ್ಟಿದ್ದರಿಂದ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂತಹ ಅನೇಕ ಸಮಸ್ಯೆಗಳು ಇಲ್ಲಿವೆ. ಬಸ್‌ ನಿಲ್ದಾಣದ ಬಣ್ಣ ಬದಲಿಸುವ ಇಲಾಖೆಗೆ ಇಲ್ಲಿನ ಸಮಸ್ಯೆಗಳು ಕಂಡರೂ ಕಾಣದಂತೆ ಜಾಣ ಕುರುಡುತನ ಪ್ರದರ್ಶನ ಮಾಡುತ್ತಿರುವುದರಿಂದ ಪ್ರಯಾಣಿಕರು ಆಕ್ರೋಶ ವ್ಯಕ್ತ ಪಡಿಸುವಂತಾಗಿದೆ. ಹೀಗಾಗಿ ಆದಷ್ಟು ಬೇಗ ಬಸ್‌ ನಿಲ್ದಾಣದ ಸಮಸ್ಯೆಗಳತ್ತ ಅಧಿಕಾರಿಗಳು, ಇಲಾಖೆಯವರು ಗಮನ ಹರಿಸಲಿ ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಕೇವಲ ಬಣ್ಣ ಬದಲಿಸುವುದರಿಂದ ಸಮಸ್ಯೆ ಬಗೆ ಹರಿಯಲ್ಲ. ಬಸ್‌ ನಿಲ್ದಾಣದಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಕ್ಯಾಮೆರಾ ಅಳವಡಿಸಿ, ಶುದ್ಧ ಕುಡಿಯುವ ನೀರು ಪೂರೈಸುವ ಕೆಲಸವನ್ನು ಸಂಬಂಧ ಪಟ್ಟವರು ಮಾಡಲಿ.
ಪ್ರಯಾಣಿಕರು

ಕ್ಯಾಮೆರಾ ಕೆಟ್ಟಿದ್ದರ ಬಗ್ಗೆ ಮೇಲಾಧಿ ಕಾರಿಗಳ ಗಮನಕ್ಕೆ ತರಲಾಗಿದೆ. ಅಲ್ಲದೇ ಅವುಗಳನ್ನು ದುರಸ್ತಿಗಾಗಿ ನೀಡಲಾಗಿದೆ. ದುರಸ್ತಿಯಾದ ಬಳಿಕ ಕ್ಯಾಮೆರಾ ಅಳವಡಿಸಲಾಗುತ್ತದೆ. ಅಲ್ಲದೆ ಬಸ್‌ ನಿಲ್ದಾಣದಲ್ಲಿ ಸೌಲಭ್ಯಗಳನ್ನು ನೀಡಲು ಗಮನ ಹರಿಸಲಾಗುವುದು.
ಜಿ.ಆರ್‌. ಕುಲಕರ್ಣಿ,
ಬಸ್‌ ಘಟಕ ವ್ಯವಸ್ಥಾಪಕ, ಅಫಜಲಪುರ

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

1-wewewe

Congress;ಪ್ರತಾಪ್‌ಚಂದ್ರ ಶೆಟ್ಟಿ-ಜೆ.ಪಿ.ಹೆಗ್ಡೆ ಭೇಟಿ: ಕಾರ್ಯತಂತ್ರದ ಸಮಾಲೋಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.