ಗಬ್ಬೆದ್ದು  ನಾರುತ್ತಿದೆ ಅಫಜಲಪುರ

ಎಲ್ಲೆಂದರಲ್ಲಿ ಕಸದ ರಾಶಿರಸ್ತೆಗಿಂತ ಎತ್ತರದಲ್ಲಿ ಚರಂಡಿ ಮಳೆಗಾಲ ಬಂದರೆ ಕೊಳೆಗೇರಿ

Team Udayavani, Oct 10, 2019, 11:01 AM IST

09-October-31

„ಮಲ್ಲಿಕಾರ್ಜುನ ಹಿರೇಮಠ
ಅಫಜಲಪುರ: ಪುರಸಭೆಗೆ ಪ್ರತಿ ವರ್ಷ ಅಭಿವೃದ್ಧಿ ಕೆಲಸಗಳಿಗಾಗಿ ಲಕ್ಷಾಂತರ ರೂ. ಬರುತ್ತದೆ. ಈ ಅನುದಾನ ಖರ್ಚಾದರೂ ಅಭಿವೃದ್ಧಿ ಮಾತ್ರ ಆಗುವುದಿಲ್ಲ. ಪುರಸಭೆ ನಿರ್ಲಕ್ಷ್ಯದಿಂದ ಪಟ್ಟಣವೆಲ್ಲ ಗಬ್ಬೆದ್ದು ನಾರುವಂತಾಗಿದೆ.

ಪಟ್ಟಣದ 23 ವಾರ್ಡ್‌ಗಳ ಪೈಕಿ ಬಹುತೇಕ ವಾರ್ಡ್‌ಗಳಲ್ಲಿ ಸ್ವಚ್ಛತೆ ಸಮಸ್ಯೆ ಇದೆ. ಸರಿಯಾದ ರಸ್ತೆಗಳಿಲ್ಲ, ಚರಂಡಿಗಳಿಲ್ಲ. ಮಳೆ-ಚರಂಡಿ ನೀರು ಒಂದಾಗಿ ರಸ್ತೆಗಳ ಮೇಲೆ ಹರಿದಾಡಿ ಅದರಲ್ಲಿ ಹಂದಿಗಳು ಒದ್ದಾಡಿ ಸಂಕ್ರಾಮಿಕ ರೋಗದ ತಾಣವಾಗಿ ಪಟ್ಟಣ ಮಾರ್ಪಾಡಾಗುತ್ತಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕಾದ ಪುರಸಭೆ ಕಣ್ಣುಮುಚ್ಚಿ ಕುಳಿತಿದೆ.

ರಸ್ತೆಗಿಂತ ಎತ್ತರದಲ್ಲಿ ಚರಂಡಿ: ಪಟ್ಟಣದ ಬಹುತೇಕ ವಾರ್ಡ್‌ಗಳಲ್ಲಿ ಕಸ ವಿಲೇವಾರಿ ಸರಿಯಾಗಿ ಆಗುತ್ತಿಲ್ಲ. ಹೀಗಾಗಿ ಎಲ್ಲೆಂದರಲ್ಲಿ ಕಸದ ರಾಶಿ ಕಂಡು ಬರುತ್ತಿದೆ. ಪಟ್ಟಣದ ಸಾರ್ವಜನಿಕರು ತಮ್ಮ ಮನೆಯ ಕಸ ಕಡ್ಡಿಯನ್ನು ಚರಂಡಿಗೆ ಇಲ್ಲವೇ, ರಸ್ತೆ ಮೇಲೆ ಚೆಲ್ಲುತ್ತಿದ್ದಾರೆ. ಪಟ್ಟಣದ ಅಂಗಡಿ, ಮುಂಗಟ್ಟುಗಳ ಕಸ ಕೂಡ ರಸ್ತೆ ಮೇಲೆ ಬೀಳುತ್ತಿದೆ.

ಪುರಸಭೆಯವರು ಕಸ ವಿಲೇವಾರಿ ಸರಿಯಾಗಿ ಮಾಡುತ್ತಿಲ್ಲ. ಹೀಗಾಗಿ ಇನ್ನಷ್ಟು ಕಸದ ರಾಶಿ ತುಂಬಿಕೊಳ್ಳುತ್ತಿದೆ. ಇನ್ನು ಪುರಸಭೆಯವರ ಅವೈಜ್ಞಾನಿಕ ಕಾಮಗಾರಿಗಳಿಗೆ ಕೊನೆ ಇಲ್ಲವಾಗಿದೆ. ಪಟ್ಟಣದ ಒಳ ರಸ್ತೆಗಳಿಗೆ ಪುರಸಭೆ ನಿರ್ಮಿಸಿದ ಚರಂಡಿಗಳು ರಸ್ತೆಗಳಿಗಿಂತ ಮೇಲಿವೆ. ಇದರಿಂದ ರಸ್ತೆಗಳ ಮೇಲೆ ನಿಲ್ಲುವ ನೀರು ಚರಂಡಿಗೆ ಸೇರದೆ ರಸ್ತೆ ಮೇಲೆ ಹರಿದಾಡುತ್ತಿವೆ.  ಹೀಗಾಗಿ ಇನ್ನಷ್ಟು ಗಲೀಜು ಆಗುತ್ತಿದೆ.

ಮಳೆಗಾಲ ಬಂದರೆ ಕೊಳಗೇರಿ: ಬೇಸಿಗೆಯಲ್ಲಿ ಧೂಳಿನ ಸಮಸ್ಯೆಯಿಂದ ಕಂಗೆಟ್ಟು ಹೋಗುವ ಜನರಿಗೆ ಮಳೆಗಾಲ ಬಂದರೆ ಮನೆಯಿಂದ ಹೊರ ಬರಲಾಗದ ರೀತಿ ಸಮಸ್ಯೆ ಆಗುತ್ತದೆ. ಮಳೆ ಬಂದರೆ ಕೋಳಗೆರಿಯಂತೆ ಆಗುತ್ತಿದೆ ಅಫಜಲಪುರ. ಈ ಸಮಸ್ಯೆಗೆ ಬಹಳ ವರ್ಷಗಳಿಂದ ಪರಿಹಾರವೇ ಸಿಕ್ಕಿಲ್ಲ.

ಅಭಿವೃದ್ಧಿ ಆಗೋದು ಯಾವಾಗ?: ಅಭಿವೃದ್ಧಿ ಹೆಸರಿನಲ್ಲಿ ಪುರಸಭೆ ವತಿಯಿಂದ ಲಕ್ಷಾಂತರ ರೂ. ಖರ್ಚು ಮಾಡಲಾಗುತ್ತದೆ. ಕ್ರಿಯಾ ಯೋಜನೆ ಸಿದ್ಧವಾಗುತ್ತಿವೆ, ಕಾಮಗಾರಿಗಳಾಗುತ್ತಿವೆ. ಆದರೆ ಅಭಿವೃದ್ಧಿ ಮಾತ್ರ ಆಗುತ್ತಿಲ್ಲ. ಇದಕ್ಕೆಲ್ಲ ಪುರಸಭೆಯವರೇ ಉತ್ತರ ನೀಡಬೇಕು. ಪಟ್ಟಣಕ್ಕೆ ಮಾಸ್ಟರ್‌ ಪ್ಲ್ಯಾನ್ ಆಗಬೇಕಿತ್ತು. ಪಟ್ಟಣದ ರಸ್ತೆಗಳ ಸುಧಾರಣೆ, ಚರಂಡಿ ಸುಧಾರಣೆ ಆಗಬೇಕಾಗಿತ್ತು. ಪಟ್ಟಣದ ಜನರಿಗೆ ಮೂಲಭೂತ ಸೌಕರ್ಯ ಸಿಗಬೇಕಿತ್ತು. ಆದರೆ ಯಾವುದೂ ಆಗುತ್ತಿಲ್ಲ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.