ಅಜ್ಜಂಪುರ ರೈಲ್ವೆ ನಿಲ್ದಾಣದಲ್ಲಿ ಸೌಲಭ್ಯಗಳ ಕೊರತೆ
ನಿರ್ವಹಣೆ ಇಲ್ಲದೇ ಶೌಚಾಲಯ ಬಾಗಿಲು ಬಂದ್ ನಲ್ಲಿಗಳಿದ್ದರೂ ಹಾಳಾದ ಪೈಪ್ನಿಂದ ಬಾರದ ನೀರು
Team Udayavani, Aug 21, 2019, 1:22 PM IST
ಅಜ್ಜಂಪುರ: ರೈಲ್ವೆ ನಿಲ್ದಾಣದಲ್ಲಿ ಶೆಲ್ಟರ್ ಕೊರತೆಯಿಂದ ಪ್ರಯಾಣಿಕರು ಮೆಟ್ಟಿಲುಗಳ ಮೇಲೆ ಕುಳಿತುಕೊಳ್ಳುವಂತಾಗಿದೆ.
ಎನ್.ಎಸ್.ಮಂಜುನಾಥ್
ಅಜ್ಜಂಪುರ: ಅಜ್ಜಂಪುರ ರೈಲ್ವೆ ನಿಲ್ದಾಣ ಮೂಲ ಸೌಲಭ್ಯಗಳ ಕೊರತೆಯಿಂದ ನಲುಗುತ್ತಿದೆ. ಇದರಿಂದ ರೈಲ್ವೆ ನಿಲ್ದಾಣದಿಂದ ಪ್ರಯಾಣ ಬೆಳೆಸುವ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.
ನಿಲ್ದಾಣದಲ್ಲಿ ಶೆಲ್ಟರ್ ಕೊರತೆಯಿದೆ. ನಿರ್ವಹಣೆ ಇಲ್ಲದೇ ಶೌಚಾಲಯ ಬಾಗಿಲು ಬಂದ್ ಆಗಿದೆ. ನಲ್ಲಿಗಳಿದ್ದರೂ ಪೈಪ್ ಹಾಳಾದ ಕಾರಣ ನೀರು ಸರಬರಾಜು ಆಗುತ್ತಿಲ್ಲ. ನಿಲ್ದಾಣಕ್ಕೆ ಹೊಂದಿಕೊಂಡಂತಿರುವ ಮುಳ್ಳಿನ ಪೊದೆಗಳು ತೆರವುಗೊಂಡಿಲ್ಲ. ಇವೆಲ್ಲವೂ ಪಟ್ಟಣದ ರೈಲ್ವೆ ನಿಲ್ದಾಣವನ್ನು ಬಳಸಿ ಸಾಗುವ ಪ್ರಯಾಣಿಕರಿಗೆ ಸಾಕಷ್ಟು ಕಿರಿಕಿರಿ ಉಂಟು ಮಾಡುತ್ತಿವೆ.
ಅಜ್ಜಂಪುರ ತಾಲೂಕು ಕೇಂದ್ರವಾಗಿದೆ. ಎಕ್ಸ್ಪ್ರೆಸ್ ಸೇರಿದಂತೆ ಹತ್ತಾರು ರೈಲ್ವೆ ಗಾಡಿಗಳಿಗೆ ನಿಲ್ದಾಣದಲ್ಲಿ ನಿಲುಗಡೆ ಇದೆ. ಸುತ್ತಲಿನ ಕನಿಷ್ಟ 56 ಗ್ರಾಮಗಳ ಸಾವಿರಾರು ಪ್ರಯಾಣಿಕರು ನಿಲ್ದಾಣದಿಂದ ಇತರೆ ಕಡೆಗೆ ಪ್ರಯಾಣ ಬೆಳೆಸುತ್ತಾರೆ. ಕನಿಷ್ಟ 30 ಸಾವಿರದಿಂದ 1 ಲಕ್ಷದ ವರೆಗೆ ನಿತ್ಯ ಆದಾಯ ಬರುತ್ತದೆ. ಆದರೂ, ರೈಲ್ವೆ ನಿಲ್ದಾಣಕ್ಕೆಅಗತ್ಯ ಸೌಲಭ್ಯಕಲ್ಪಿಸದಿರುವುದು ದುರದೃಷ್ಟಕರ ಎಂದು ಸ್ಥಳೀಯರಾದ ಶಂಕರ್ ಅಸಮಧಾನ ವ್ಯಕ್ತಪಡಿಸಿದ್ದಾರೆ.
ಹತ್ತಾರು ವರ್ಷಗಳಿಂದ ಲೋಕಸಭೆ ಅಥವಾ ವಿಧಾನಸಭೆ ಚುನಾವಣೆ ಪ್ರಚಾರ ಭಾಷಣದಲ್ಲಿ ಎಲ್ಲಾ ಪಕ್ಷದವರೂ ರೈಲ್ವೆ ನಿಲ್ದಾಣ ಅಭಿವೃದ್ಧಿಗೊಳಿಸುವ ಆಶ್ವಾಸನೆ ನೀಡುತ್ತ ಬಂದಿದ್ದಾರೆ. ಚುನಾವಣೆ ಬಳಿಕ ಅದರ ಕಡೆಗೆ ಗಮನ ಹರಿಸಲ್ಲ. ರೈಲ್ವೆ ನಿಲ್ದಾಣ ಅಭಿವೃದ್ಧಿ ಅಥವಾ ಎಕ್ಸ್ಪ್ರೆಸ್ ರೈಲ್ವೆ ನಿಲುಗಡೆಗೊಳಿಸುವ ಬಗ್ಗೆ ಚಕಾರ ಎತ್ತಲ್ಲ. ಇನ್ನು ಗೆಲುವು ಸಾಧಿಸಿದ ಶಾಸಕ-ಸಂಸದರನ್ನು, ಸ್ವಪಕ್ಷ ಅಥವಾ ವಿರೋಧ ಪಕ್ಷದ ಸ್ಥಳೀಯ ರಾಜಕೀಯ ಮುಖಂಡರು ಪ್ರಶ್ನಿಸುವ ಗೋಜಿಗೆ ಹೋಗಲ್ಲ. ಅದರಿಂದಾಗಿಯೇ ರೈಲ್ವೆ ನಿಲ್ದಾಣ ಇಂದಿಗೂ ಸೌಲಭ್ಯ ವಂಚಿತವಾಗಿಯೇ ಮುಂದುವರೆದಿದೆ ಎಂದು ಗಣೇಶ್ ದೂರಿದರು.
ಅಧಿಕ ಕಂದಾಯ ಸಂಗ್ರಹಿಸುತ್ತಿರುವ ಅಜ್ಜಂಪುರದ ನಿಲ್ದಾಣವನ್ನು ರೈಲ್ವೆ ಇಲಾಖೆ ನಿರ್ಲಕ್ಷಿಸಿದೆ. ಇಲ್ಲಿನ ಸಮಸ್ಯೆಗಳನ್ನು ಪರಿಹರಿಸುವಂತೆ ಹಲವು ಬಾರಿ ಮನವಿ ಮಾಡಿಕೊಂಡಿದ್ದರೂ ಕ್ರಮ ಕೈಗೊಂಡಿಲ್ಲ. ಈಗಲಾದರೂ ಹಿರಿಯ ಅಧಿಕಾರಿಗಳು ಇತ್ತ ಗಮನ ಹರಿಸಿ ನಿಲ್ದಾಣದ ಸುಧಾರಣೆಗೆ ಕ್ರಮವಹಿಸಬೇಕೆಂದು ಸಿದ್ಧರಾಮಪ್ಪ ಆಗ್ರಹಿಸಿದ್ದಾರೆ.
ರಾಜಕೀಯದಲ್ಲಿ ಪ್ರಭಾವಿ ಎನಿಸಿಕೊಂಡಿರುವ ಶೋಭಾ ಕರಂದ್ಲಾಜೆ ಸಂಸದರಾಗಿ ಆಯ್ಕೆಯಾಗಿದ್ದಾರೆ. ಅವರು ಅಜ್ಜಂಪುರದಲ್ಲಿ ಮತ್ತಷ್ಟು ಎಕ್ಸ್ಪ್ರೆಸ್ ರೈಲುಗಳ ನಿಲುಗಡೆ ಮಾಡಲು ಮತ್ತು ನಿಲ್ದಾಣದ ಅಭಿವೃದ್ಧಿಗೊಳಿಸಲು ಮುಂದಾಗಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!