ಬೆಳೆ ಹಾನಿಗೆ ಪರಿಹಾರ ನೀಡದಿದ್ದರೆ ಪ್ರತಿಭಟನೆ


Team Udayavani, Dec 22, 2019, 5:17 PM IST

22-Decemebrer-29

ಅಜ್ಜಂಪುರ: ಭದ್ರಾ ನದಿ ನೀರು ಹರಿದಬಂದ ಪರಿಣಾಮ ಆಗಿರುವ ಬೆಳೆ ಹಾನಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ಅನಿರ್ದಿಷ್ಠಾವಧಿ
ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ತಾಲೂಕಿನ ಚೌಳಹಿರಿಯೂರು ಹೋಬಳಿ ಎಚ್‌.ತಿಮ್ಮಾಪುರ ಗ್ರಾಮಸ್ಥರು ತಹಶೀಲ್ದಾರ್‌ಗೆ ಎಚ್ಚರಿಕೆ ನೀಡಿದರು.

ಗ್ರಾಮಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ವಿಶ್ವೇಶ್ವರ ರೆಡ್ಡಿ ಮತ್ತು ಭದ್ರಾ ಮೇಲ್ದಂಡೆ ಇಂಜಿನಿಯರ್‌ ಶಿವಕುಮಾರ್‌ ಅವರಿಗೆ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಸಲ್ಲಿಸಿದ ನಂತರ ಈ ರೀತಿ ಎಚ್ಚರಿಕೆ ನೀಡಿದರು.

ಬುಕ್ಕಾಂಬು ದಿಂದ ಹರಿಯುವ 22 ಕೆರೆಗಳ ನೀರು ಗ್ರಾಮದ ಮೂಲಕ ಕುಕ್ಕೆ ಸಮುದ್ರ ಸೇರುತ್ತದೆ. ಬಳಿಕ ವಾಣಿವಿಲಾಸ ಸಾಗರದ ಕಡೆಗೆ ಹರಿಯುತ್ತದೆ. ಭದ್ರಾ ನೀರು ಹರಿಯುವುದರಿಂದ ವರ್ಷವಿಡೀ ಬೆಳೆ ನಾಶವಾಗಿದೆ ಎಂಬ ವಿಷಯವನ್ನು ರೈತ ಸುರೇಶ್‌ ಅಧಿಕಾರಿಗಳ ಗಮನಕ್ಕೆ ತಂದರು.

ಭದ್ರಾ ನೀರು ಕಲ್ಕೆರೆ, ಎಚ್‌.ತಿಮ್ಮಾಪುರ, ಹಡಗಲು, ಸಿದ್ದಾಪುರ, ಚೋಮನಹಳ್ಳಿ, ಆಸಂದಿ, ಮುದಿಗೆರೆ, ಕಳ್ಳಿಹೊಸಹಳ್ಳಿ, ಹನುಮನಹಳ್ಳಿ, ಚಿಕ್ಕಬಳ್ಳೆಕೆರೆಯ ಕೃಷಿ ಭೂಮಿಗೆ ಹಾನಿ ಮಾಡಿದೆ. ಎಚ್‌.ತಿಮ್ಮಾಪುರ ಮತ್ತು ಹನುಮನಹಳ್ಳಿ ಗಡಿ ಭಾಗದಲ್ಲಿ 400 ಎಕರೆಯಷ್ಟು ಬೆಳೆ ನಾಶ ಮಾಡಿದೆ ಎಂದರು.

ಮುಂಗಾರಿನ ಪ್ರಮುಖ ವಾಣಿಜ್ಯ ಬೆಳೆ ಈರುಳ್ಳಿ, ಮೆಣಸಿನಕಾಯಿ, ದನಿಯಾ ಬೆಳೆಗಳು ಭದ್ರಾ ನೀರು ಹರಿದು ಕೊಳೆತು ಹೋದವು ಎಂದು ಮಹೇಶ್ವರಪ್ಪ ಹಾಗೂ ಚನ್ನಬಸಪ್ಪ ಅಳಲು ತೋಡಿಕೊಂಡರು.

ಅಧಿಕಾರಿಗಳು ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಹಾಗೂ ಬೆಳೆ ಹಾನಿ ಪರಿಹಾರವನ್ನೂ ನೀಡಿಲ್ಲ ಎಂದು ರವಿಕುಮಾರ್‌, ಜಗದೀಶ್‌, ಶಿವಕುಮಾರ್‌ ಅಸಮಧಾನ ವ್ಯಕ್ತಪಡಿಸಿದರು. ಭದ್ರಾ ಮೇಲ್ದಂಡೆ ಇಂಜಿನಿಯರ್‌ ಶಿವಕುಮಾರ್‌ ಮಾತನಾಡಿ, ಬೆಂಗಳೂರಿನ ವಿಶ್ವೇಶ್ವರ ಜಲ ನಿಗಮದ ಕಚೇರಿಯಲ್ಲಿ ಸೋಮವಾರ ಸಭೆ ಇದೆ. ತಮ್ಮ ಸಮಸ್ಯೆ ಬಗ್ಗೆ ಸಭೆಯ ಗಮನಕ್ಕೆ ತರಲಾಗುವುದು. ನೀರು, ಹೊಲ-ತೋಟಗಳಿಗೆ ಹರಿಯದಂತೆ ಪರ್ಯಾಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ತಹಶಿಲ್ದಾರ್‌ ವಿಶ್ವೇಶ್ವರ ರೆಡ್ಡಿ ಮಾತನಾಡಿ, ಭದ್ರಾ ನೀರು ಹರಿದು ಹಾನಿಗೀಡಾದ ಕೃಷಿ ಭೂಮಿಯನ್ನು ಗ್ರಾಮ ಲೆಕ್ಕಿಗರ ಮೂಲಕ ಸರ್ವೆ ಮಾಡಿಸಲಾಗುವುದು. ಅದನ್ನು ಸರ್ಕಾರಕ್ಕೆ ಕಳುಹಿಸಿ, ಸಂತ್ರಸ್ತರಿಗೆ ಪರಿಹಾರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು. ಸರ್ಕಾರ, ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಹಾಲಸಿದ್ದಪ್ಪ ಎಚ್ಚರಿಸಿದರು.

ಟಾಪ್ ನ್ಯೂಸ್

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.