ಸರ್ಕಾರಿ ಶಾಲೆಗೆ ಮಕ್ಕಳ ಸೇರಿಸಿ

ದೇವಸ್ಥಾನಕ್ಕಿಂತ ಶಾಲೆ ನಿರ್ಮಾಣಕ್ಕೆ ಮಹತ್ವ ಕೊಡಿ

Team Udayavani, Sep 22, 2019, 3:26 PM IST

22-Sepectember-15

ಆಲಮಟ್ಟಿ: ದೇಶದಲ್ಲಿಯೇ ಬೃಹತ್‌ ನೀರಾವರಿ ಯೋಜನೆಯಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಪ್ರತಿಫಲ ಈ ಭಾಗಕ್ಕೆ ದೊರೆಯಬೇಕಾದರೆ ಕಾರ್ಯಾಂಗದಲ್ಲಿರುವವರು ಸಮಯೋಚಿತ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಶಿವಾನಂದ ಪಾಟೀಲ ಹೇಳದರು.

ಚಿಮ್ಮಲಗಿಭಾಗ-1ಬಿದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ನೂತನವಾಗಿ ನಿರ್ಮಿಸಿರುವ
ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಏಷ್ಯಾ ಖಂಡದಲ್ಲಿಯೇ ಬೃಹತ್‌ ನೀರಾವರಿ ಯೋಜನೆಗಳಲ್ಲೊಂದಾಗಿದೆ. ಇದು ಸಾಕಾರಗೊಳ್ಳಲು ಅಖಂಡ ವಿಜಯಪುರ ಜಿಲ್ಲೆಯ ಜನತೆಯ ತ್ಯಾಗದ ಫಲವಾಗಿರುವುದರಿಂದ ಇಡಿ ಉತ್ತರಕರ್ನಾಟಕದ ಜನರು ಕುಡಿಯುವ ನೀರು ಹಾಗೂ ವಿವಿಧ ಉದ್ದೇಶಗಳಿಗೆ ನೀರನ್ನು ಪಡೆಯುವಂತಾಗಿದೆ ಎಂದರು. ನಾಗರಿಕರು ದೇವಾಲಯಗಳನ್ನು ನಿರ್ಮಿಸಲು ಕೊಡುವ ಮಹತ್ವವನ್ನು ಶಾಲೆಗಳನ್ನು ನಿರ್ಮಿಸಲು ಕೊಡಬೇಕು. ತಾವು 15 ವರ್ಷ ಈ ಕ್ಷೇತ್ರದ ಶಾಸಕನಾಗಿದ್ದರೂ ಹೆಚ್ಚಿನ ಪ್ರಮಾಣದಲ್ಲಿ ಧಾರ್ಮಿಕ ಕೇಂದ್ರಗಳಿಗೆ ನೀಡಲಾಗಿದ್ದು ಈಗ ಮೊದಲಿಗಿಂತಲೂ ಕ್ಷೇತ್ರದ ಅಭಿವೃದ್ಧಿಗಾಗಿ 2 ಕೋಟಿವರೆಗೆ ಅನುದಾನ ಲಭ್ಯವಾಗುತ್ತಿದ್ದು ಇದರಲ್ಲಿ ಅತಿ ಹೆಚ್ಚಿನ ಪ್ರಮಾಣದಲ್ಲಿ ಶಾಲೆಗಳ ಅಭಿವೃದ್ಧಿಗಾಗಿ ವಿನಿಯೋಗಿಸಲಾಗುವುದು ಎಂದರು.

ಸರ್ಕಾರಿ ಶಾಲೆಗಳಲ್ಲಿ ಕಲಿಸುವ ಗುರುಗಳು ವಿಶೇಷ ತರಬೇತಿ ಹಾಗೂ ಶಿಕ್ಷಣ ಪಡೆದವರಾಗಿರುತ್ತಾರೆ. ಅಲ್ಲದೇ ಶೈಕ್ಷಣಿಕ ಅಭಿವೃದ್ಧಿಗಾಗಿಯೇ ಸರ್ಕಾರ ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಹಾಲು, ಶೂ, ಬಿಸಿಯೂಟ, ಶಿಷ್ಯವೇತನ ಹೀಗೆ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರೂ ಕೂಡ ಪಾಲಕರು ಖಾಸಗಿ ಶಾಲೆಗಳತ್ತ ಮುಖ
ಮಾಡುತ್ತಿರುವುದು ವಿಪರ್ಯಾಸ ಎಂದರು.

ದೇಶಕ್ಕೆ ಉತ್ತರ ಹಿಂದೂಸ್ತಾನದ ಉತ್ತರಪ್ರದೇಶು ಐವರು ಪ್ರಧಾನ ಮಂತ್ರಿಗಳನ್ನು ನೀಡಿದೆ. ಆದರೆ ಶಾಲೆಗಳನ್ನು ಕೊಟ್ಟಿಲ್ಲ, ನಮ್ಮಲ್ಲಿ ಒಬ್ಬರೇ ಪ್ರಧಾನಿಯಾಗಿದ್ದರೂ ಶಾಲೆಗಳನ್ನು ಅತಿ ಹೆಚ್ಚು ನಿರ್ಮಾಣ ಮಾಡಿದ ರಾಜ್ಯ ಕರ್ನಾಟಕ. ದಿ| ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿರುವ ವೇಳೆಯಲ್ಲಿ ಉಚಿತ ಪಠ್ಯಪುಸ್ತಕದಿಂದ ಆರಂಭವಾಗಿ ನಂತರ ಬಂದಿರುವ ಮುಖ್ಯಮಂತ್ರಿಯವರು ಒಂದೊಂದು ವಿಶೇಷ ಕ್ರಮಗಳನ್ನು ಕೈಗೊಂಡು ಮಾದರಿ ಸೌಲಭ್ಯಗಳನ್ನು ಒದಗಿಸಿದ್ದಾರೆ. ಈ ಎಲ್ಲ ಸೌಲಭ್ಯಗಳನ್ನು ಪಡೆದು ಶಿಕ್ಷಣ ನೀಡದಿದ್ದರೆ ಅವರಿಂಥ ಪಾಪಿಗಳು ಬೇರೆ ಇಲ್ಲ ಎಂದು ಹೇಳಿದರು.

ಈಗ ಐದು ಕೋಣೆ, ಇನ್ನೂ ಐದು ಕೋಣೆ ನಿರ್ಮಿಸಲು ಅನುದಾನ, ಆಲಮಟ್ಟಿ ಪರಿಸರದಲ್ಲಿ ಡೆಂಘೀ ಬರದಂತೆ ತಡೆಯಲು ನಾಗರಿಕರು ತಮ್ಮ ಮನೆ ಮುಂದಿರುವ ಕೊಳಚೆ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಬೇಕು. ನಿಡಗುಂದಿ ಭವಿಷ್ಯದಲ್ಲಿ ಮಾದರಿ ತಾಲೂಕಾಗಲಿದೆ. ಅಧಿಕಾರಿಗಳು ಸಮಸ್ಯೆ ಅರಿತು ಕೆಲಸ ಮಾಡಿದರೆ ಯೋಜನೆ ಸಾಕಾರವಾಗುತ್ತದೆ ಎಂದರು.

ಆಲಮಟ್ಟಿಯ ವಿಶೇಷ ಭೂ ಸ್ವಾಧೀನಾಕಾರಿ ಎ.ರಘು ಮಾತನಾಡಿದರು. ಚಿಮ್ಮಲಗಿ ಅರಳೆಲೆ
ಕಟ್ಟಿಮನಿ ಹಿರೇಮಠದ ನೀಲಕಂಠ ಸ್ವಾಮೀಜಿ ಸಾನ್ನಿಧ್ಯ, ಮಲ್ಲಮ್ಮ ಹಡಪದ ಅಧ್ಯಕ್ಷತೆ ವಹಿಸಿದ್ದರು. ತಾಪಂ ಸದಸ್ಯ ಮಲ್ಲು ರಾಠೊಡ, ಗ್ರಾಪಂ ಅಧ್ಯಕ್ಷೆ ಸೈದಮ್ಮ ಬೆಣ್ಣಿ, ಬಿ.ಟಿ. ಗೌಡರ, ಎ.ಕೆ. ಚಲವಾದಿ, ಎಸ್‌.ಜಿ. ಭೋಸಲೆ, ಡಾ| ಎಸ್‌.ಎಸ್‌. ಓತಗೇರಿ, ಮಂಜುಳಾ ಘಂಟಿ, ನಜೀರಸಾಬ ಮುದ್ದೇಬಿಹಾಳ, ರೇವತಿ ಭಗವತಿ, ಭಾರತಿ ಉಪ್ಪಾರ, ಎಂ.ಆರ್‌. ಕಮತಗಿ, ಸಿ.ಎಸ್‌. ಕುಂಬಾರ, ತಾನಾಜಿ ನಾಗರಾಳ, ರಾಹುಲ್‌ ಕುಬಕಡ್ಡಿ ಮೊದಲಾದವರಿದ್ದರು. ಬಿ.ಐ. ಖ್ಯಾಡಿ ಸ್ವಾಗತಿಸಿದರು. ಮಹೇಶ ಗಾಳಪ್ಪಗೋಳ ನಿರೂಪಿಸಿದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.