ಡಿಗ್ರಿ ಕಾಲೇಜು ಆರಂಭಕ್ಕೆ ಮೀನಮೇಷ

ಮನವಿಗೆ ಸ್ಪಂದಿಸದ ಜನಪ್ರತಿನಿಧಿಗಳು •ಸಂತ್ರಸ್ತರ ಮಕ್ಕಳಿಗೆ ಪದವಿ ಶಿಕ್ಷಣ ಮರೀಚಿಕೆ

Team Udayavani, Jun 15, 2019, 10:54 AM IST

15-June-8

ಆಲಮಟ್ಟಿ: ಆಲಮಟ್ಟಿಯಲ್ಲಿ ಡಿಗ್ರಿ ಕಾಲೇಜು ಆರಂಭಿಸಲು ಪರಿಶೀಲನೆ ನಡೆಸುವಂತೆ ಧಾರವಾಡ ಜಂಟಿ ಆಯುಕ್ತರಿಂದ ಬಂದಿರುವ ಪತ್ರ.

•ಶಂಕರ ಜಲ್ಲಿ
ಆಲಮಟ್ಟಿ:
ಕೃಷ್ಣಾ ಮೇಲ್ದಂಡೆ ಯೋಜನೆ ಸಂತ್ರಸ್ತರ ಮಕ್ಕಳಿಗೆ ಶೈಕ್ಷಣಿಕ ಅಭಿವೃದ್ಧಿಗೆ ಆಲಮಟ್ಟಿಯಲ್ಲಿ ಸರ್ಕಾರಿ ಡಿಗ್ರಿ ಕಾಲೇಜು ಆರಂಭಿಸಲು ದಶಕಗಳಿಂದಲೂ ಮನವಿ ಮಾಡುತ್ತ್ತ ಬಂದರೂ ಜನ ಪ್ರತಿನಿಧಿಗಳು ಕ್ಯಾರೇ ಎನ್ನದಿರುವುದರಿಂದ ಸಂತ್ರಸ್ತರ ಮಕ್ಕಳ ಭವಿಷ್ಯ ತೂಗುಯ್ನಾಲೆಯಂತಾಗಿದೆ.

ದೇಶದ ಬೃಹತ್‌ ನೀರಾವರಿ ಯೋಜನೆಗಳಲ್ಲೊಂದಾಗಿರುವ ಕೃಷ್ಣಾ ಮೇಲ್ದಂಡೆ ಯೋಜನೆ ಕೇಂದ್ರ ಸ್ಥಾನವಾಗಿರುವ ಆಲಮಟ್ಟಿಯಲ್ಲಿ ಸಂತ್ರಸ್ತರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರಿ ಡಿಗ್ರಿ ಕಾಲೇಜು ಆರಂಭಿಸಲು 2008ರಲ್ಲಿ ಆಗಿನ ಉನ್ನತ ಶಿಕ್ಷಣ ಸಚಿವರಾಗಿದ್ದ ಅರವಿಂದ ಲಿಂಬಾವಳಿಯವರಲ್ಲಿ ಮನವಿ ಮಾಡಲಾಗಿತ್ತು. ಇದರಿಂದ ಸ್ವತಃ ಮುಳುಗಡೆ ಸಂತ್ರಸ್ತರೂ ಆಗಿದ್ದ ಅರವಿಂದ ಲಿಂಬಾವಳಿಯವರು ಸಂತ್ರಸ್ತರ ಮಕ್ಕಳು ಉನ್ನತ ಶಿಕ್ಷಣದಿಂದ ವಂಚಿತ ಆಗಬಾರದೆಂದು ಆಲಮಟ್ಟಿಯಲ್ಲಿ ಸರ್ಕಾರಿ ಡಿಗ್ರಿ ಕಾಲೇಜು ಆರಂಭಿಸಲು ಸಂಬಂಧಿತ ಇಲಾಖೆಗೆ ಆದೇಶ ಮಾಡಿದ್ದರು.

ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳು ಆಲಮಟ್ಟಿಯಲ್ಲಿ ಡಿಗ್ರಿ ಕಾಲೇಜು ಆರಂಭಿಸಲು ಮೂಲಭೂತ ಸೌಲಭ್ಯಗಳ ಕುರಿತು ಪರಿಶೀಲನೆ ಮಾಡಿ ಗ್ರಾಪಂ ಹಾಗೂ ಶಿಕ್ಷಣ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಭಿಪ್ರಾಯ ಸೇರಿದಂತೆ ಎಲ್ಲವನ್ನೂ ಕ್ರೋಢೀಕರಿಸಿಕೊಂಡು ಅದಕ್ಕೆ ಸಂಬಂಧಿಸಿದ ಒಪ್ಪಿಗೆ ಪತ್ರಗಳನ್ನೂ ಪಡೆದುಕೊಂಡು ಹೋದರು. ಅಷ್ಟರಲ್ಲಾಗಲೇ ಲಿಂಬಾವಳಿಯವರ ಸಚಿವ ಖಾತೆ ಬದಲಾಗಿತ್ತು, ನಂತರ ಬಂದ ಸಚಿವರೂ ಕೂಡ ಇದರ ಬಗ್ಗೆ ಆಸಕ್ತಿ ಹೊಂದಿದ್ದರು. ಆದರೆ ಅಧಿಕಾರಿಗಳು ಮಾತ್ರ ವರದಿ ನೀಡುವುದನ್ನು ವಿಳಂಬ ಮಾಡಿದ್ದರ ಪರಿಣಾಮ 2019-20ನೇ ಶೈಕ್ಷಣಿಕ ವರ್ಷ ಆರಂಭವಾದರೂ ಇನ್ನುವರೆಗೆ ಡಿಗ್ರಿ ಕಾಲೇಜು ಸಂತ್ರಸ್ತರ ಮಕ್ಕಳಿಗೆ ಗಗನ ಕುಸುಮವಾಗಿದೆ.

ಆಲಮಟ್ಟಿಯು ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯ, ವಿವಿಧ ಉದ್ಯಾನಗಳು ಹಾಗೂ ಸುತ್ತಲಿನ ಸುಮಾರು ಗ್ರಾಮೀಣ ಪ್ರದೇಶಗಳಿಗೆ ಕೇಂದ್ರ ಸ್ಥಾನದಲ್ಲಿದೆಯಲ್ಲದೇ ಪಟ್ಟಣಕ್ಕೆ ರೈಲ್ವೆ ಸಂಪರ್ಕವಿದೆ. ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳನ್ನು ಹೊಂದಿದ್ದು ನಿತ್ಯ ನೂರಾರು ಸರ್ಕಾರಿ ಬಸ್‌ಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಖಾಸಗಿ ವಾಹನಗಳು ಸಂಚರಿಸುತ್ತವೆ.

ಹೀಗೆ ಉನ್ನತ ಶಿಕ್ಷಣಕ್ಕೆ ಅಗತ್ಯವಾಗಿ ಬೇಕಾಗಿರುವ ಸರ್ಕಾರಿ ಕಟ್ಟಡಗಳು ಸೇರಿದಂತೆ ಎಲ್ಲ ಮೂಲಭೂತ ಸೌಲಭ್ಯಗಳನ್ನು ಹೊಂದಿದ್ದರೂ ಸರ್ಕಾರ ಡಿಗ್ರಿಕಾಲೇಜು ಆರಂಭ ಮಾಡದೇ ಮೀನಮೇಷ ಎಣಿಸುತ್ತಿರುವುದೇಕೆ ಎಂದು ನಾಗರಿಕರು ಪ್ರಶ್ನಿಸುವಂತಾಗಿದೆ.

ದಿನಗೂಲಿಗಳಾದ ಮಕ್ಕಳು: ಸುಮಾರು 192 ಗ್ರಾಮಗಳು ಕೃ.ಮೇ.ಯೋಜನೆಯಿಂದ ಭಾದಿತಗೊಂಡು ಲಕ್ಷಾಂತರ ಎಕರೆ ಜಮೀನು ಕಳೆದುಕೊಂಡ ಸುಮಾರು 4 ಲಕ್ಷ ಸಂತ್ರಸ್ತರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉನ್ನತ ಶಿಕ್ಷಣ ದೊರೆಯದೇ ಬೆಂಗಳೂರು, ಪುಣೆ, ಮುಂಬೈಯಂತಹ ನಗರಗಳಿಗೆ ವಲಸೆ ಹೋಗಿ ಹಮಾಲಿ ಮಾಡುವಂತಾಗಲು ಜನ ಪ್ರತಿನಿಧಿಗಳ ನಿರ್ಲಕ್ಷ್ಯ ಧೋರಣೆಯೇ ಕಾರಣ ಎನ್ನುತ್ತಾರೆ ಶಿವಾನಂದ.

ಡೋನೇಶನ್‌: ಮುಳುಗಡೆ ಹೊಂದಿ ಪುನರ್ವಸತಿ ಕೇಂದ್ರಗಳಾಗಿರುವ ಗ್ರಾಮಗಳಲ್ಲಿ ಸರ್ಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಕಾಲೇಜುಗಳಿವೆ. ಆದರೆ ಡಿಗ್ರಿ ಕಾಲೇಜುಗಳು ಇಲ್ಲದಿರುವುದರಿಂದ ಖಾಸಗಿ ಶಾಲೆಗಳಲ್ಲಿ ವಿಪರೀತವಾಗಿ ಡೊನೇಶನ್‌ ಪಡೆಯುತ್ತಿದ್ದು ಸಂತ್ರಸ್ತರ ಮಕ್ಕಳು ಉನ್ನತ ವ್ಯಾಸಂಗ ಮಾಡದೇ ದಿನಗೂಲಿ ಕಾರ್ಮಿಕ, ಟ್ರ್ಯಾಕ್ಟರ್‌ ಡ್ರೈವರ್‌, ಟಿಪ್ಪರ್‌ ಡ್ರೈವರ್‌ ಉದ್ಯೋಗ ಅರಸಿಕೊಂಡು ಹೋಗುವಂತಾಗಿದೆ.

ಈ ಕ್ಷೇತ್ರದ ಶಾಸಕರೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿದ್ದಾರಲ್ಲದೇ ಸಂತ್ರಸ್ತರ ನೋವನ್ನು ಹತ್ತಿರದಿಂದ ಕಂಡವರಾಗಿದ್ದಾರೆ. ಇವರಾದರೂ ಆಲಮಟ್ಟಿಯಲ್ಲಿ ಡಿಗ್ರಿ ಕಾಲೇಜು ಆರಂಭಿಸಲು ಪ್ರಯತ್ನಿಸುತ್ತಾರಾ ಕಾದು ನೋಡಬೇಕು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.