ಬಸಿ ನೀರಿನಿಂದ ಜನ ಕಂಗಾಲು

ಸಾಂಕ್ರಾಮಿಕ ರೋಗ ಭೀತಿಯಲ್ಲಿ ಜನ  ಜನಪ್ರತಿನಿಧಿಗಳು-ಅಧಿಕಾರಿಗಳಿಂದ ಪರಿಶೀಲನೆ

Team Udayavani, Oct 23, 2019, 3:10 PM IST

23-October-15

ಆಲಮಟ್ಟಿ: ಪಟ್ಟಣದಲ್ಲಿ ವ್ಯಾಪಕವಾಗಿ ಮಳೆ ಸುರಿದಿರುವ ಪರಿಣಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸೇರಿದಂತೆ ಸುಮಾರು 20 ಮನೆಗಳಲ್ಲಿ ಭೂಮಿಯಿಂದ ನೀರು ಚಿಮ್ಮುತ್ತಿದ್ದು ಆತಂಕ್ಕೆ ಕಾರಣವಾಗಿದೆ.

ನೀರಿನ ಬುಗ್ಗೆಗಳು ಎಲ್ಲೆಂದರಲ್ಲಿ ಏಳುತ್ತಿದ್ದು ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ. ಪ್ರತಿ ಬಾರಿಯೂ ಹೆಚ್ಚು ಮಳೆಯಾದ ವೇಳೆ ಪಟ್ಟಣದ ಸುಮಾರು 20 ಮನೆಗಳಲ್ಲಿಯೂ ನೀರು ಚಿಮ್ಮುತ್ತದೆ. ಅಲ್ಲದೇ ಸುಮಾರು 280 ವಿದ್ಯಾರ್ಥಿಗಳಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೀರು ಚಿಮ್ಮುತ್ತದೆ.

ಇದನ್ನು ತಡೆಗಟ್ಟಲು ಕೃಷ್ಣಾ ಭಾಗ್ಯಜಲ ನಿಗಮದ ಅಣೆಕಟ್ಟು ವಿಭಾಗದ ಸಮೀಪದ ತಗ್ಗು ಪ್ರದೇಶ ಹಾಗೂ ತೋಟಗಾರಿಕೆ ಇಲಾಖೆ ಕೆರೆ ಪ್ರದೇಶಗಳಲ್ಲಿ ತಡೆಗೋಡೆ ನಿರ್ಮಿಸಬೇಕು ಹಾಗೂ ಎತ್ತರದಲ್ಲಿ ಶಾಲೆ ಕಟ್ಟಡ ನಿರ್ಮಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

ಕಳೆದ ಶುಕ್ರವಾದಿಂದ ಸುರಿದ ಮಳೆಗೆ ಶಾಲೆಯ ಏಳು ಕೋಣೆಗಳು ಸೋರುತ್ತಿವೆ. ಇದರಿಂದ ಮುಂಜಾಗೃತಾ ಕ್ರಮವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಆದೇಶದಂತೆ ಶಾಲೆಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತಾಪಂ ಸದಸ್ಯ ಮಲ್ಲು ರಾಠೊಡ ಹಾಗೂ ಗ್ರಾಪಂ ಅಧ್ಯಕ್ಷೆ ಸೈದಮ್ಮ ಭೇಟಿ ನೀಡಿ, ಶಾಸಕರು ತಮ್ಮ ಅನುದಾನದಡಿ ನಾಲ್ಕು ಕೋಣೆ ನಿರ್ಮಿಸಲು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಆದರೆ ಈಗ ಮತ್ತೆ ನಾಲ್ಕು ಕೋಣೆಗಳು ಅತಿ ಅವಶ್ಯವಾಗಿದ್ದು ಇದರ ಬಗ್ಗೆ ಶಾಸಕರಿಗೆ ಮನವಿ ಮಾಡಲಾಗುವದು ಎಂದು ತಿಳಿಸಿದರು.

ಭೇಟಿ: ಸರ್ಕಾರಿ ಪ್ರಾಥಮಿಕ ಪಕ್ಕದಲ್ಲಿ ನಿರ್ಮಿಸುತ್ತಿರುವ ಚರಂಡಿ ಉಸ್ತುವಾರಿ ನಿರ್ವಹಿಸುತ್ತಿರುವ ಆಲಮಟ್ಟಿ ಅಣೆಕಟ್ಟು ವಿಭಾಗ ವ್ಯಾಪ್ತಿಯ ಎಫ್‌ಆರ್‌ಎಲ್‌ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ವಿ.ಜಿ. ಮಿಕ್ಕಲ್‌ ಭೇಟಿ ನೀಡಿದರು. ಶಾಲೆ ಗೋಡೆಯ ಅಡಿಪಾಯದಿಂದ ನೀರು ತಡೆಗಟ್ಟಲು ನಮ್ಮಿಂದಾಗದು. ಆದರೆ ಶಾಲೆ ಮುಂಭಾಗದ ನಿವಾಸಿಗಳ ಮನೆಗಳ ಮುಂದೆ ಬರುತ್ತಿರುವ ನೀರನ್ನು ಚರಂಡಿಯಲ್ಲಿ ಸೇರ್ಪಡೆಗೊಳಿಸಲು ಅಗತ್ಯ ಕ್ರಮ ಕೈಗೊಂಡು ಹೊರಗಿನ ನೀರು ಶಾಲೆ ಆವರಣದೊಳಕ್ಕೆ ಬಾರದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ವೇಳೆ ಸುರೇಶ ವಡ್ಡರ, ವೆಂಕಟೇಶ ವಡ್ಡರ, ಪ್ರಕಾಶ ಚವ್ಹಾಣ, ಮುಖ್ಯೋಪಾಧ್ಯಾಯ ಎನ್‌.ಎಸ್‌. ಕಾಳಗಿ, ಎನ್‌.ಬಿ. ಭಜಂತ್ರಿ, ಎಲ್‌.ಸಿ. ಚಲವಾದಿ, ಸಮೂಹ ಸಂಪನ್ಮೂಲ ವ್ಯಕ್ತಿ ರಾಘವೇಂದ್ರ ವಂದಗನೂರ ಇದ್ದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.