ನೀರಿಗಾಗಿ ರಾಜಧಾನಿಯತ್ತ ರೈತರ ಚಿತ್ತ

ಬೆಂಗಳೂರಿನಲ್ಲಿಂದು ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ

Team Udayavani, Jul 20, 2019, 10:55 AM IST

20-July-8

ಆಲಮಟ್ಟಿ: ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯ.

ಶಂಕರ ಜಲ್ಲಿ
ಆಲಮಟ್ಟಿ:
ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯ ವ್ಯಾಪ್ತಿಯ ಜಿಲ್ಲೆಗಳ ಕಾಲುವೆಗಳಿಗೆ 2018ನೇ ಸಾಲಿನ ಹಿಂಗಾರು ಹಂಗಾಮಿಗೆ ರೈತರ ಜಮೀನಿಗೆ ನೀರು ಹರಸದಿರುವುದರಿಂದ ನೀರಿಗಾಗಿ ಭಾಗದ ರೈತರ ಚಿತ್ತ ಜು. 20ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿಯತ್ತ ನೆಟ್ಟಿದೆ.

ಉತ್ತರ ಕರ್ನಾಟಕದ ಬರಗಾಲ ನಿವಾರಣೆಗಾಗಿ ಆಲಮಟ್ಟಿಯಲ್ಲಿ ನಿರ್ಮಿಸಲಾಗಿರುವ ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯಕ್ಕೆ ಮಹಾರಾಷ್ಟ್ರದ ಮಹಾಬಳೇಶ್ವರ ಹಾಗೂ ಸಾಂಗ್ಲಿ ಮತ್ತು ಸಾತಾರ ಜಿಲ್ಲೆಗಳು ಹಾಗೂ ರಾಜ್ಯದ ಬೆಳಗಾವಿ ಜಿಲ್ಲೆ ಸೇರಿದಂತೆ ಕೃಷ್ಣಾ ಜಲಾಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗಿರುವ ಪರಿಣಾಮ ಜಲಾಶಯ ಬಹುತೇಕ ತುಂಬಿದೆ.

ಪ್ರತಿ ಬಾರಿಯೂ ಆಲಮಟ್ಟಿಯಲ್ಲಿರುವ ಕೃಷ್ಣಾ ಭಾಗ್ಯಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾಭವನದಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿನ ನೀರಾವರಿ ಸಲಹಾ ಸಮಿತಿ ಸಭೆ ನಡೆಯುವುದು ವಾಡಿಕೆ. ಯುಕೆಪಿ ಫಲಾನುಭವಿ ಜಿಲ್ಲೆಗಳಾಗಿರುವ ವಿಜಯಪುರ, ಬಾಗಲಕೋಟೆ, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಿಗೆ ಆಲಮಟ್ಟಿ ಮಧ್ಯವರ್ತಿ ಸ್ಥಳದಲ್ಲಿರುವುದರಿಂದ ಜನಪ್ರತಿನಿಧಿಗಳು, ಅಧಿಕಾರಿಗಳು ಆಗಮಿಸಿ ಕಾಲುವೆಗಳಲ್ಲಿ ನೀರು ಹರಿಸುವ ಹಾಗೂ ಅವಳಿ ಜಲಾಶಯಗಳಲ್ಲಿರುವ ನೀರಿನ ಲಭ್ಯತೆ ಹಾಗೂ ರೈತರು ಅನುಭವಿಸುವ ಸಮಸ್ಯೆಗಳ ನಿವಾರಣೆ ಹೀಗೆ ಎಲ್ಲ ಬಗೆಯಲ್ಲಿ ಚರ್ಚೆಯಾಗುತ್ತಿತ್ತು.

ಫಲಾನುಭವಿ ಜಿಲ್ಲೆಗಳ ರೈತರೂ ಕೂಡ ತಮ್ಮ ವಿವಿಧ ಸಮಸ್ಯೆಗಳನ್ನು ನೀರಾವರಿ ಸಲಹಾ ಸಮಿತಿ ಸಭೆ ಮುಂದಿಟ್ಟು ಪರಿಹಾರ ಕಂಡುಕೊಳ್ಳುತ್ತಿದ್ದರು. ಆದರೆ ಆಲಮಟ್ಟಿಯಲ್ಲಿ ನಡೆಯಬೇಕಿದ್ದ ನೀರಾವರಿ ಸಲಹಾ ಸಮಿತಿ ಸಭೆ ರಾಜಕೀಯ ಸ್ಥಿತ್ಯಂತರಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವುದಕ್ಕೆ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಮಳೆಯಾದ ಪರಿಣಾಮ ಆಲಮಟ್ಟಿ ಜಲಾಶಯಕ್ಕೆ ಲಕ್ಷಾಂತರ ಕ್ಯೂಸೆಕ್‌ ಒಳಹರಿವು ಬಂದು ಜಲಾಶಯ ತುಂಬುವ ಹಂತದಲ್ಲಿದೆ. ಇನ್ನು ಕಳೆದ ಎರಡು ದಿನಗಳಿಂದ ಒಳಹರಿವಿನಲ್ಲಿ ಇಳಿಕೆಯಾಗಿದ್ದರೂ ಆಲಮಟ್ಟಿ ಲಾಲ್ ಬಹಾದ್ದೂರ್‌ ಶಾಸ್ತ್ರಿ ಜಲಾಶಯ ಹಾಗೂ ನಾರಾಯಣಪುರ ಬಸವಸಾಗರ ಜಲಾಶಯಗಳು ಬಹುತೇಕ ತುಂಬಿದ್ದು ಈ ಬಾರಿಯಾದರೂ ಮುಂಗಾರು ಮತ್ತು ಹಿಂಗಾರು ಹಂಗಾಮಿಗೆ ನೀರು ದೊರೆಯಬಹುದೇ ಎನ್ನುವುದು ರೈತರು ಆಸೆಗಣ್ಣಿನಿಂದ ನೋಡುತ್ತಿದ್ದಾರೆ.

ಪೂರ್ಣಗೊಳ್ಳದ ಕ್ಲೋಸರ್‌ ಕಾಮಗಾರಿ: ಪ್ರತಿ ಬಾರಿ ಕಾಲುವೆಗಳಿಗೆ ನೀರು ಹರಿಸುವ ಮುನ್ನ ಅದರಲ್ಲಿನ ಹೂಳು ಹಾಗೂ ಗಿಡ ಗಂಟಿಗಳನ್ನು ತೆರವುಗೊಳಿಸಿ ನೀರು ಹರಿಸುವುದು ವಾಡಿಕೆ. ಆದರೆ 2018ನೇ ಸಾಲಿನಲ್ಲಿ ಐಸಿಸಿ ಸಭೆ ತೀರ್ಮಾನದಂತೆ ರೈತರ ಜಮೀನಿಗೆ ನೀರುಣಿಸಲು ಯೋಜನೆಯ ಯಾವ ಕಾಲುವೆಗಳಿಗೂ ನೀರು ಹರಿಸುವುದು ಬೇಡವೆಂದು ತೀರ್ಮಾನಿಸಿ ಅದರಂತೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಈಗ ಕಾಲುವೆಗಳ ಹೂಳು ತೆಗೆಯಲು 19.64 ಕೋಟಿ ರೂ. ಕಾಮಗಾರಿಗೆ ಟೆಂಡರ್‌ ಕರೆಯಲಾಗಿದೆ. ಇನ್ನೂ ಕೆಲವು ಗುತ್ತಿಗೆದಾರರಿಗೆ ಕೆಲಸದ ಆದೇಶ ನೀಡಿಲ್ಲ. ಹೀಗಾಗಿ ಕಾಮಗಾರಿ ಆರಂಭಗೊಳ್ಳಲು ಇನ್ನೂ ಒಂದು ವಾರ ವಿಳಂಬವಾಗಲಿದೆ.

ಇದರಿಂದ ಕಾಮಗಾರಿ ಯಾವಾಗ ಪೂರ್ಣಗೊಳಿಸುತ್ತಾರೋ, ಇನ್ನೂ ಕಾಲುವೆಗೆ ಯಾವಾಗ ನೀರು ಹರಿಸುತ್ತಾರೆ? ಎಂಬ ಅನುಮಾನ ಮೂಡಿದೆ.

ಕರೆಯಲಾಗಿರುವ ಟೆಂಡರ್‌ಗಳನ್ನು ಪಡೆದ ಗುತ್ತಿಗೆದಾರರು ಇನ್ನೂವರೆಗೆ ಯಾವುದೇ ಕಾಮಗಾರಿಗಳನ್ನು ಆರಂಭಿಸಿಲ್ಲ. ಇದರಿಂದ ಮೊದಲೇ ಎರಡು ವರ್ಷಗಳಿಂದ ಬರಗಾಲಕ್ಕೆ ತುತ್ತಾಗಿರುವ ರೈತರು ಸಾಲ ಮಾಡಿ ಬಿತ್ತನೆ ಮಾಡಿದ್ದರೆ ಇನ್ನು ಕೆಲವರು ಬಿತ್ತನೆ ಮಾಡಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದರಿಂದ ರೈತರಿಗೆ ಅಗತ್ಯವಾಗಿ ನೀರು ಬೇಕಾದ ಸಮಯದಲ್ಲಿ ಕಾಲುವೆಗಳ ದುರಸ್ತಿ ಹಾಗೂ ಹೂಳು ಮತ್ತು ಕಂಟಿ ತೆರವುಗೊಳಿಸಲು ಸಾಧ್ಯವೇ ಎನ್ನುವುದು ಯಕ್ಷ ಪ್ರಶ್ನೆಯಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.