ಇನ್ನೂ ಸ್ಥಳಾಂತರವಾಗದ 9 ಕಚೇರಿಗಳು

ಅಧಿವೇಶನದಲ್ಲಿ ಸಿಎಂ ನೀಡಿದ ಭರವಸೆ ಹುಸಿ •ಮತ್ತೆ ಹೋರಾಟಕ್ಕೆ ಸಜ್ಜಾದ ಉಕ ಜನ

Team Udayavani, Apr 27, 2019, 10:40 AM IST

27-April-5

ಆಲಮಟ್ಟಿ: ಕೃಷ್ಣಾಭಾಗ್ಯಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಆಡಳಿತ ಕಚೇರಿ.

ಆಲಮಟ್ಟಿ: ರಾಜ್ಯದ ರಾಜಧಾನಿಯಿಂದ ಉತ್ತರ ಕರ್ನಾಟಕ ಭಾಗಕ್ಕೆ ಕೆಲ ಇಲಾಖೆಗಳ ಕೇಂದ್ರ ಕಚೇರಿಗಳನ್ನು ವರ್ಗಾಯಿಸಿದ್ದರೂ ಕೂಡ ಉತ್ತರ ಕರ್ನಾಟಕಕ್ಕೆ ಬಾರದೇ ಬೆಂಗಳೂರಿನಲ್ಲಿಯೇ ಮುಂದುವರಿಯುತ್ತಿರುವೆ!

ಸಮಗ್ರ ಅಭಿವೃದ್ಧಿಗಾಗಿ ಸಿಎಂ ಕುಮಾರಸ್ವಾಮಿ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ 9 ಕಚೇರಿಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದವರಿಗೆ ಸೂಚಿಸಿದ್ದರೂ ಇನ್ನೂ ಅನುಷ್ಠಾನಗೊಂಡಿಲ್ಲ. ಬೆಂಗಳೂರಿನಲ್ಲಿರುವ ಜಲ ಸಂಪನ್ಮೂಲ ಇಲಾಖೆ ವ್ಯಾಪ್ತಿಯ ಕೃಷ್ಣಾಭಾಗ್ಯ ಜಲ ನಿಗಮದ ಆಡಳಿತ ಕಚೇರಿ ಕೇಂದ್ರ ಸ್ಥಾನವಾಗಿದ್ದ ಆಲಮಟ್ಟಿಗೆ ನೋಂದಾಯಿತ ಕಚೇರಿಯಿಂದ ಆಡಳಿತ ಕಚೇರಿ ಆಲಮಟ್ಟಿಗೆ ಹಾಗೂ ನೀರಾವರಿ ನಿಗಮವನ್ನು ದಾವಣಗೆರೆಗೆ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ (ವಿದ್ಯುತ್‌ ಮಗ್ಗಗಳ ಅಭಿವೃದ್ಧಿ ನಿಗಮ) ಹಾಗೂ ಸಕ್ಕರೆ ನಿರ್ದೇಶಕರು ಮತ್ತು ಕಬ್ಬು ಅಭಿವೃದ್ಧಿ ಆಯುಕ್ತರ ಕೇಂದ್ರ ಕಚೇರಿ. ನಗರಾಭಿವೃದ್ಧಿ ಇಲಾಖೆಯ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯನ್ನು ವಿಭಜಿಸಿ ಉತ್ತರ ಕರ್ನಾಟಕದ ಹುಬ್ಬಳ್ಳಿಗೆ ಪ್ರತ್ಯೇಕವಾಗಿ ಸ್ಥಾಪಿಸುವುದು ಹಾಗೂ ಮೈಸೂರಿನಲ್ಲಿದ್ದ ಪ್ರವಾಸೋದ್ಯಮ ಇಲಾಖೆ ನಿರ್ದೇಶಕರು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರಾ ಇಲಾಖೆಯನ್ನು ಹಂಪಿಗೆ ಹಾಗೂ ಕಾನೂನು ಇಲಾಖೆಯ ಬೆಂಗಳೂರಿನಲ್ಲಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರ ಪೈಕಿ ಒಬ್ಬ ಸದಸ್ಯರ ಕಚೇರಿಯನ್ನು ಧಾರವಾಡಕ್ಕೆ ವರ್ಗಾಯಿಸುವಂತೆ ಸೂಚಿಸಲಾಗಿತ್ತು.

ಬೆಂಗಳೂರಿನಲ್ಲಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ (ಸ್ಪಂದನ) ಇಲಾಖೆಯ ರಾಜ್ಯ ಮಾಹಿತಿ ಆಯೋಗದ ಆಯುಕ್ತರುಗಳ ಪೈಕಿ ಎರಡು ಮಾಹಿತಿ ಆಯುಕ್ತರ ಕಚೇರಿಗಳಲ್ಲಿ ಒಂದು ಪೀಠ ಕಲಬುರಗಿಗೆ ಹಾಗೂ ಒಂದು ಪೀಠ ಬೆಳಗಾವಿಗೆ ಮತ್ತು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ (ಜಾಗೃತ ವಿಭಾಗ) ಇಲಾಖೆಯ ಕರ್ನಾಟಕ ಲೋಕಾಯುಕ್ತದಲ್ಲಿರುವ ಎರಡು ಉಪ ಲೋಕಾಯುಕ್ತ ಕಚೇರಿಗಳ ಪೈಕಿ ಒಂದು ಉಪ ಲೋಕಾಯುಕ್ತ ಕಚೇರಿಯನ್ನು ಧಾರವಾಡಕ್ಕೆ ಸ್ಥಳಾತರಿಸಿ 2019, ಏ.1ರಂದು ಜಾರಿಗೆ ಬರುತ್ತದೆ ಎಂದು ತಿಳಿಸಲಾಗಿತ್ತು. ಆದರೆ ಮಾರ್ಚ್‌ ಮುಗಿದರೂ ಕೂಡ ಯಾವ ಕಚೇರಿಗಳೂ ಕೂಡ ತಮ್ಮ ಮೂಲ ಸ್ಥಾನ ಬಿಟ್ಟು ಕದಲಿಲ್ಲ. ಇದು ಉತ್ತರ ಕರ್ನಾಟಕ ಭಾಗದ ರೈತರು ಹಾಗೂ ಹೋರಾಟಗಾರರನ್ನು ಕೆರಳಿಸುವಂತಾಗಿದೆ.

ಆಡಳಿತ ಸರಳೀಕರಣಕ್ಕಾಗಿ ಬೆಂಗಳೂರಿನಲ್ಲಿದ್ದ ಕಚೇರಿಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಗೊಳಿಸುವ ವಿಚಾರದಲ್ಲಿ ಸರ್ಕಾರ ಉತ್ತರ ಕರ್ನಾಟಕ ಜನತೆಯನ್ನು ದಿಕ್ಕು ತಪ್ಪಿಸುವ ಕೆಲಸದಲ್ಲಿ ತೊಡಗಿದೆ. ಉತ್ತರ ಕರ್ನಾಟಕದಲ್ಲಿದ್ದ ಕೆಲ ಕಚೇರಿಗಳನ್ನು ಹಾಸನಕ್ಕೆ ಸ್ಥಳಾಂತರಗೊಳಿಸಿದ್ದಾರೆ. ಚುನಾವಣೆ ಮುಗಿದ ನಂತರ ಹೋರಾಟ ಮಾಡಲು ಅಣಿಯಾಗಬೇಕಾಗುತ್ತದೆ.
ಬಸವರಾಜ ಕುಂಬಾರ,
ಕೃಷ್ಣಾ ಕಾಡಾ ಮಾಜಿ ಅಧ್ಯಕ್ಷ

ಕೃಷ್ಣಾ ಭಾಗ್ಯ ಜಲ ನಿಗಮದ ಆಡಳಿತ ಕಚೇರಿ ಆಲಮಟ್ಟಿಯೇ ಆಗಿದೆ. ಅಲ್ಲಿ ವ್ಯವಸ್ಥಾಪಕ ನಿರ್ದೇಶಕರ ಕೊಠಡಿಗಳು ಸೇರಿದಂತೆ ಎಲ್ಲ ಸವಲತ್ತುಗಳಿವೆ. ಆದರೆ ರಾಜಧಾನಿಯಲ್ಲಿ ಹಲವಾರು ಸಭೆಗಳು, ಅಧಿವೇಶನಗಳು ಹೀಗೆ ಬಿಡುವಿಲ್ಲದ ಕಾರ್ಯವಿರುವುದರಿಂದ ಬೆಂಗಳೂರಿನಲ್ಲಿರುವ ಕಚೇರಿಯನ್ನು ಸಂಪರ್ಕ ಕಚೇರಿಯನ್ನಾಗಿ ಪರಿವರ್ತಿಸಲಾಗಿದೆ. ಇದರಿಂದ ಈಗ ಇರುವಂತೆಯೇ ಮುಂದುರಿಯಲಿದೆ.
• ವಿ.ಶಂಕರ,
 ಕೆಬಿಜೆಎನ್ನೆಲ್ ವ್ಯವಸ್ಥಾಪಕ ನಿರ್ದೇಶಕ

ಅಧಿವೇಶನದಲ್ಲಿ ಸಿಎಂ ನೀಡಿದ ಭರವಸೆಯಂತೆ ಆಲಮಟ್ಟಿಗೆ ಕೆಬಿಜೆಎನೆಲ್ ಎಂಡಿ ಕಚೇರಿ ಸ್ಥಳಾಂತರಗೊಳಿಸಲು ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಹಾಗೂ ಕುಮಾರಸ್ವಾಮಿ ಅವರನ್ನು ಸೋಮವಾರ ಭೇಟಿಯಾಗಿ ಕಚೇರಿಯನ್ನು ಆಲಮಟ್ಟಿಗೆ ಸ್ಥಳಾಂತರಗೊಳಿಸಲು ವಿನಂತಿಸಲಾಗುವುದು.
ಎಂ.ಸಿ. ಮನಗೂಳಿ,
ಜಿಲ್ಲಾ ಉಸ್ತುವಾರಿ ಸಚಿವ

ಶಂಕರ ಜಲ್ಲಿ

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.