ನದಿ ತೀರದ ಜನರಲ್ಲಿ ಹೆಚ್ಚಿದ ಆತಂಕ

ಮುಳುಗಿದೆ ಘತ್ತರಗಿ-ಬಗಲೂರ ಬ್ಯಾರೇಜ್‌•ದೇವಣಗಾಂವ -ಶಿವಪುರ ಬ್ಯಾರೇಜ್‌ ಜಲಾವೃತ

Team Udayavani, Aug 9, 2019, 11:26 AM IST

9-Agust-9

ಆಲಮೇಲ: ಬರಗಾಲದಿಂದ ತತ್ತರಿಸಿರುವ ಭೀಮಾ ತೀರದ ಜನತೆಗೆ ನದಿಯಲ್ಲಿ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ನದಿ ತೀರದ ಜನರಲ್ಲಿ ಆತಂಕ ಹೆಚ್ಚುತ್ತಿದೆ.

ಭೀಮಾ ನದಿಯಲ್ಲಿ ಕಳೆದ 5 ದಿನಗಳಿಂದ ನೀರಿನ ಹರಿವಿನ ಪ್ರಮಾಣ ಏರುತ್ತಿದ್ದು ನದಿ ತೀರದ ಗ್ರಾಮಗಳ ಜನರಲ್ಲಿ ಭಯ ಹೆಚ್ಚಿದೆ. ಬುಧವಾರ ರಾತ್ರಿಯಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ನದಿ ಎರಡು ಬದಿಯನ್ನು ದಾಟಿ ನೀರು ತನ್ನ ವಿಸ್ತಾರವನ್ನು ಎಲ್ಲೆಡೆ ವ್ಯಾಪಿಸುತ್ತಿರುವುದರಿಂದ ದೇವಣಗಾಂವ, ಶಂಬೇವಾಡ, ಕುಮಸಗಿ, ಬ್ಯಾಡಗಿಹಾಳ ಗ್ರಾಮಗಳ ಮನೆಗಳ ಸಮೀಪ ನೀರು ನುಗ್ಗಿದ್ದು ಆತಂತ ಮತ್ತಷ್ಟು ಹೆಚ್ಚುವಂತಾಗಿದೆ.

ದೇವಣಗಾಂವದ ಭೀಮಾ ಸೇತುವೆ ಮಾಪನ ಪಟ್ಟಿಯಲ್ಲಿ ಗುರುವಾರ ಬೆಳಗ್ಗೆ 6ಕ್ಕೆ 9.10 ಮೀ. ಇದ್ದ ನೀರಿನ ಹರಿವು ಮಧ್ಯಾಹ್ನ 3ಕ್ಕೆ 9.85 ಮೀ. ಗೆ ಹೆಚ್ಚಳವಾಗಿ ಹರಯುತ್ತಿದೆ. ದೇವಣಗಾಂವ ಸಮೀಪದ ಸೊನ್ನ ಬ್ಯಾರೇಜ್‌ಗೆ ಸದ್ಯ 2.64 ಲಕ್ಷ ಕ್ಯೂಸೆಕ್‌ ಒಳಹರಿವು ಇದ್ದು ಅಷ್ಟೇ ಪ್ರಮಾಣದ ನೀರು ಸೋನ್ನ ಬ್ಯಾರೇಜ್‌ನ 21 ಗೇಟ್‌ಗಳ ಹಾಗೂ ಪವರ್‌ ಹೌಸ್‌ನ 3 ಯುನಿಟ್ನಿಂದ ನೀರನ್ನು ನದಿ ಕೆಳಭಾಗಕ್ಕೆ ಹರಿಸಲಾಗುತ್ತಿದೆ. ಈಗಲೂ ಕೂಡಾ ನೀರಿನ ಹರಿವು ಹೆಚ್ಚಾಗುತ್ತಿದ್ದು ಗುರುವಾರ ಮತ್ತೆ ಉಜನಿ ಜಲಾಶಯದಿಂದ 1.20 ಲಕ್ಷ ಕ್ಯೂಸೆಕ್‌, ಮೀರಾ ಜಲಾಶಯದಿಂದ 64 ಸಾವಿರ ಕ್ಯೂಸೆಕ್‌ ನೀರು ನದಿಗೆ ಬಿಟ್ಟಿರುವ ಮಾಹಿತಿ ಇದೆ ಎಂದು ಅಫಜಲಪುರ ಕೆಎನ್‌ಎನ್‌ಎಲ್ ಇಇ ಮಲ್ಲಿಕಾರ್ಜುನ ಜಾಕಾ, ಎಇಇ ಲಕ್ಷ್ಮೀಕಾಂತ ತಿಳಿಸಿದ್ದಾರೆ.

ಸಿಂದಗಿ-ಅಫಜಲಪುರ ತಾಲೂಕಿನ ಮಧ್ಯೆ ಭೀಮಾ ನದಿಗೆ ಕಟ್ಟಿರುವ ಘತ್ತರಗಿ-ಬಗಲೂರ ಬ್ಯಾರೇಜ್‌ ಸಂಪೂರ್ಣ ಮುಳುಗಿ ಹೋಗಿದ್ದು ನಿನ್ನೆಯಿಂದಲೇ ಸಂಚಾರ ಸ್ಥಗಿತ ಗೊಂಡಿದೆ. ದೇವಣಗಾಂವ-ಶಿವಪುರ ಬ್ಯಾರೇಜ್‌ಗಳು ಸಂಪೂರ್ಣ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಬಾರಖೇಡ ಬೀಳಗಿ ರಾಜ್ಯ ಹೆದ್ದಾರಿಯ ಶಿರಸಗಿ ದೇವರನಾವದಗಿ ಗ್ರಾಮದ ಮಧ್ಯೆ ಬರುವ ಹೆಬ್ಬಳ್ಳ (ಹಳ್ಳ)ಕ್ಕೆ ನೀರು ಒತ್ತು ಏರಿರುವುದರಿಂದ ಈ ರಸ್ತೆ ಸಂಪರ್ಕ ಕಡಿತಗೊಂಡಿದೆ. ದೇವಣಗಾಂವ-ಕುಮಸಗಿ ಗ್ರಾಮದ ಮಧ್ಯದ ಕುಂಭಾವತ್ತಿ ಹಾಗೂ ಲಡೇನವತ್ತಿಯಲ್ಲಿ ನೀರು ತುಂಬಿದ್ದು ಕುಮಸಗಿಯಿಂದ ದೇವಣಗಾಂವ, ಕಡ್ಲೇವಾಡ ರಸ್ತೆ ಸಂಪರ್ಕ ಕಡಿತಗೊಂಡಿದೆ. ಶಂಬೇವಾಡ ಗ್ರಾಮದ ರಸ್ತೆಯ ಪಕ್ಕ ನೀರು ನುಗ್ಗಿದ್ದು ಇನ್ನು ಸ್ವಲ್ಪ ನೀರು ಹೆಚ್ಚಾದರೆ ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ.

ಅಧಿಕಾರಿಗಳ ಭೇಟಿ: ದೇವಣಗಾಂವ, ಕಡ್ಲೇವಾಡ, ಶಂಬೇವಾಡ, ಕುಮಸಗಿ ಗ್ರಾಮಗಳಿಗೆ ಸಿಂದಗಿ ತಹಶೀಲ್ದಾರ್‌ ವಿಜಯ ಕಡಕಭಾವಿ, ನೋಡಲ್ ಅಧಿಕಾರಿ ಸಹಾಯಕ ಕೃಷಿ ನಿರ್ದೇಶಕ ಎಸ್‌.ಎಚ್. ಗಡಗಿಮನಿ, ಚೇತನ ಭೊಸಗಿ, ಗ್ರಾಮ ಲೆಕ್ಕಾಧಿಕಾರಿ ಎಸ್‌.ಜಿ. ಕಾಂಬಳೆ, ಸಹಾಯಕ ಕೃಷಿ ಅಧಿಕಾರಿ ಆರ್‌.ಎಸ್‌. ಬಂಡಗಾರ, ಮಹಾಂತ ಕರಶಿ, ಮೈಬೂಬ ಚೌಧರಿ, ಶಿವಾನಂದ ನಿಂಬಾಳ ನದಿ ತೀರದ ಗ್ರಾಮಗಳಿಗೆ ಭೇಟಿ ನೀಡಿ ಪರಸ್ಥಿತಿ ಅವಲೋಕಿಸುತ್ತಿದ್ದಾರೆ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.