ಆಲಮೇಲ ಜನರಿಗೆ ಶುದ್ಧ ಕಡಿಯುವ ನೀರು ಮರೀಚಿಕೆ

ನೀರಿನ ಘಟಕ ನಿರ್ಮಿಸಿ ಎರಡು ತಿಂಗಳಾದರೂ ಪ್ರಾರಂಭವಾಗಿಲ್ಲ

Team Udayavani, May 9, 2019, 10:56 AM IST

9-May-7

ಆಲಮೇಲ: ಪಟ್ಟಣದ ಅಕ್ಕ ತಂಗಿ ಬಾವಿ ಸಂಪೂರ್ಣ ಬತ್ತಿದೆ.

ಆಲಮೇಲ: ಪಟ್ಟಣದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣಗೊಂಡು ಎರಡು ತಿಂಗಳಾದರು ಜನರಿಗೆ ಶುದ್ಧ ನೀರು ಇನ್ನೂ ಮರೀಚಿಕೆಯಾಗಿದೆ.

ಪಟ್ಟಣದ ಜನರಿಗೆ ಬಳಕೆ ನೀರಿಗೆ ಸಮಸ್ಯೆ ಇಲ್ಲದಿದ್ದರು ಶುದ್ಧ ಕುಡಿಯುವ ನೀರಿಗೆ ಮಾತ್ರ ಪರದಾಡುವ ಪರಿಸ್ಥಿತಿ ಇದೆ. ಈ ಸಮಸ್ಯೆ ಅರಿತುಕೊಂಡು ಪಟ್ಟಣದ 16ನೇ ವಾರ್ಡ್‌ನಲ್ಲಿರುವ ಪುರಾತನ ಅಕ್ಕ ತಂಗಿ ಬಾವಿ ಹತ್ತಿರ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಿದ್ದರೂ ಪ್ರಯೋಜನಕ್ಕೆ ಬರದಂತಾಗಿದೆ.

ಕಳೆದ ಎರಡು ತಿಂಗಳ ಹಿಂದೆ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ತರಾತುರಿಯಲ್ಲಿ ನೀರಿನ ಘಟಕ ನಿರ್ಮಿಸಲಾಗಿದೆ.ಯಾವುದೇ ಮೂಲದಿಂದ ನೀರಿನ ವ್ಯವಸ್ಥೆ ಕಲ್ಪಿಸದೆ ಉದ್ಘಾಟನೆ ದಿನದಂದು ಬೇರೆ ಕಡೆಯಿಂದ ನೀರು ಸಂಗ್ರಹಿಸಿ ನೀರಿನ ಘಟಕ ಉದ್ಘಾಟಿಸಿ ಕೈ ತೊಳೆದುಕೊಂಡ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಕಾರ್ಯ ವೈಖರಿಯಿಂದ ಸಂತಸದಲ್ಲಿದ್ದ ಜನರಿಗೆ ನಿರಾಶೆಯಾಗಿದೆ.

ಉದ್ಘಾಟನೆಗೊಂಡ ಬಳಿಕ ಅಲ್ಲಿನ ನಿವಾಸಿಗಳು ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸುವುದಿಲ್ಲ ಎಂದುಕೊಂಡಿದ್ದರು. ಆದರೆ ಎರಡು ತಿಂಗಳಾದರು ಘಟಕ ಇನ್ನೂ ಪ್ರಾರಂಭವಾಗಿಲ್ಲ. ಇದರಿಂದ ಜನರಿಗೆ ಶುದ್ಧ ನೀರು ಮರೀಚಿಕೆಯಾದಂತಾಗಿದೆ.

16ನೇ ವಾರ್ಡ್‌ ಜನರು ಪಪಂ ಸದಸ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಕೇಳಿದರೆ ಬಾವಿಯಲ್ಲಿ ನೀರಿಲ್ಲ ನಾವೇನು ಮಾಡುಲು ಸಾಧ್ಯ ಎನ್ನುತ್ತಾರೆ. ಬಾವಿಯಲ್ಲಿ ನೀರಿಲ್ಲದಿದ್ದರೆ ನೀರಿನ ಘಟಕದ ಬಾವಿಯ ಸಮೀಪದಲ್ಲೆ ಕೊಳವೆ ಬಾವಿಯಿದ್ದು ಅದನ್ನು ಬಳಸಿಕೊಂಡು ಶುದ್ಧ ನೀರು ವಿತರಿಸಬೇಕು ಎನ್ನುತ್ತಾರೆ ಸಾರ್ವಜನಿಕರು.

ಬಾವಿ ಸ್ವಚ್ಛಗೊಳಸಿ ನೀರಿನ ಘಟಕ ನಿರ್ಮಾಣ ಮಾಡಿ ಎರಡು ತಿಂಗ ಹಿಂದೆ ಉದ್ಘಾಟಿಸಿ ಪಪಂಗೆ ಹಸ್ತಾಂತರಿಸಲಾಗಿದೆ. ಸದ್ಯ ಬಾವಿಯಲ್ಲಿ ನೀರಿಲ್ಲದಿದ್ದರೆ ನಾವೇನು ಮಾಡಬೇಕು. ಸಮಿಪದಲ್ಲಿ ಕೊಳವೆ ಬಾವಿ ಇದ್ದರೆ ಅಲ್ಲಿಂದ ಪೈಪ್‌ಲೈನ್‌ ಮಾಡಿಕೊಟ್ಟರೆ ಮುಂದಿನ ವ್ಯವಸ್ಥೆ ನಾವು ಮಾಡುತ್ತೇವೆ.
•ಕೋಟ್ಯಾಣನವರ,
ಶುದ್ದ ನೀರಿನ ಘಟಕ ನಿರ್ಮಾಣ ಎಂಜಿನಿಯರ್‌

ನೀರಿನ ಘಟಕ ನಿರ್ಮಾಣದ ಹಂತದಲ್ಲೆ ಬಾವಿಯಲ್ಲಿ ನೀರಿರಲಿಲ್ಲ. ನೀರು ಸರಬರಾಜು ವ್ಯವಸ್ಥೆ ಮಾಡಿಕೊಳ್ಳದೆ ಬೇರೆ ಕಡೆಯಿಂದ ನೀರು ತಂದು ನೀರಿನ ಘಟಕದಲ್ಲಿ ಸಂಗ್ರಹಿಸಿ ಉದ್ಘಾಟಿಸಿ ಕೈತೊಳೆದುಕೊಂಡಿದ್ದಾರೆ. ಬಾವಿಯ ಪಕ್ಕದಲ್ಲೆ ಕೊಳವೆ ಬಾವಿ ಇದ್ದು ಅಲ್ಲಿ ಸಾಕಸ್ಟು ನೀರು ಇದ್ದು ಅದನ್ನು ಬಳಸಿಕೊಂಡು ಶುದ್ಧ ನೀರು ಒದಗಿಸಬೇಕು.
ಕಾಸಿಂ ಸಾಲೋಟಗಿ, ಪಪಂ ಸದಸ್ಯ

ಪಟ್ಟಣದ ಒಂದನೇ ವಾರ್ಡ್‌ ವಿನಾಯಕ ನಗರದಲ್ಲಿ ಹೊರತು ಪಡಿಸಿ ಬೇರೆಲ್ಲೂ ನೀರಿನ ಸಮಸ್ಯೆ ಇಲ್ಲ. ವಿನಾಯಕ ನಗರದಲ್ಲಿ ಟ್ಯಾಂಕರ್‌ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ ಕೆರೆ ಬತ್ತಿದ್ದರಿಂದ ಪಟ್ಟಣದಲ್ಲಿನ ಕೊಳವೆ ಬಾವಿಗಳು ಖಾಲಿಯಾಗಿವೆ. ಕಾಲುವೆ ಮೂಲಕ ಕೆರೆಗೆ ನೀರು ತುಂಬಿದ್ದು ಎಲ್ಲ ಕೊಳವೆ ಬಾವಿಗೆ ನೀರು ಬರುವ ಸಾಧ್ಯತೆಯಿದ್ದು ನೀರಿನ ಸಮಸ್ಯೆ ಆಗುವುದಿಲ್ಲ.
•ಲಾಲ್ಸಾಬ ದೇವರಮನಿ,
ಪಪಂ ಸಿಬ್ಬಂದಿ

ಅವಧೂತ ಬಂಡಗಾರ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.