ಮಾದಕ ವಸ್ತು ವಿರುದ್ಧ ಜಾಗೃತಿ ಅಗತ್ಯ
ಸಮುದಾಯ ಎಚ್ಚೆತ್ತುಕೊಳ್ಳಲಿ •ಶಿಕ್ಷಣ ಸಂಸ್ಥೆಗಳಲ್ಲೂ ಕಠಿಣ ಕ್ರಮ ಅವಶ್ಯ
Team Udayavani, Aug 28, 2019, 12:53 PM IST
ಆಳಂದ: ಕೇಂದ್ರೀಯ ವಿಶ್ವ ವಿದ್ಯಾಲಯ ಸಮಾಜ ಕಾರ್ಯ ವಿಭಾಗ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಕುಲಪತಿ ಪ್ರೊ| ಎಚ್.ಎಂ. ಮಹೇಶ್ವರಯ್ಯ ಮಾತನಾಡಿದರು.
ಆಳಂದ: ಮಾದಕ ವಸ್ತುಗಳ ದುರ್ಬಳಕೆ ವಿರುದ್ಧ ಜನಜಾಗೃತಿ ಅಗತ್ಯವಾಗಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಉಪ ಕುಲಪತಿ ಪ್ರೊ| ಎಚ್.ಎಂ. ಮಹೇಶ್ವರಯ್ಯ ಹೇಳಿದರು.
ತಾಲೂಕಿನ ಕಡಗಂಚಿ ಬಳಿ ಇರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಮಾಜ ಕಾರ್ಯ ವಿಭಾಗ ಹಮ್ಮಿಕೊಂಡಿದ್ದ ಮಾದಕ ವಸ್ತುಗಳ ದುರ್ಬಳಕೆ ತಡೆಯುವಲ್ಲಿ ಸಮಾಜ ಕಾರ್ಯ ವಿದ್ಯಾರ್ಥಿಗಳ ಸಾಮರ್ಥ್ಯ ಅಭಿವೃದ್ಧಿಗೊಳಿಸುವ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಮಾದಕ ವಸ್ತುಗಳ ದುರ್ಬಳಕೆ ದಿನದಿಂದ ದಿನಕ್ಕೆ ಯುವಕರಲ್ಲಿ ಏರಿಕೆ ಪ್ರಮಾಣದಲ್ಲಿ ಕಂಡುಬರುತ್ತಿದೆ. ಇದರಿಂದಾಗಿ ಸಮಾಜದಲ್ಲಿ ಹಲವಾರು ಹೊಸ ಸಮಸ್ಯೆಗಳು ಉದ್ಭವಿಸುತ್ತಿವೆ. ಇದರ ಜೊತೆಗೆ ಶಿಕ್ಷಣ ಸಂಸ್ಥೆಯಲ್ಲಿ ಯುವಕರು ಮಾದಕ ವಸ್ತುಗಳ ದುರ್ಬಳಕೆಗೆ ಬಲಿಯಾಗುತ್ತಿದ್ದಾರೆ. ಹೀಗಾಗಿ ಕಠಿಣ ಕ್ರಮ ಅವಶ್ಯಕ ಎಂದು ಹೇಳಿದರು.
ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹೆಚ್ಚಾಗಿ ಶಿಕ್ಷಣ ಸಂಸ್ಥೆ ಮತ್ತು ಗ್ರಾಮೀಣ ಸಮುದಾಯದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಸಮುದಾಯದ ಜನರಿಗೆ ಜಾಗೃತಿ ಮೂಡಿಸಬೇಕು ಎಂದು ಅವರು ಕರೆ ನೀಡಿದರು.
ಮುಖ್ಯ ಅತಿಥಿಯಾಗಿದ್ದ ಕರ್ನಾಟಕ ರಾಜ್ಯ ಆರ್ಥಿಕ ನಿಗಮದ ಉಪ ವ್ಯವಸ್ಥಾಪಕ ಡಾ| ಚಂದ್ರಕಾಂತ ಚಂದಾಪುರ ಮಾತನಾಡಿ, ಮಾದಕ ವಸ್ತುಗಳು ಇಂದಿನ ಯುಗದಲ್ಲಿ ಹೇಗೆ ಯುವಕರನ್ನು ದುರ್ಬಲರನ್ನಾಗಿಸುತ್ತದೆ. ಮಾದಕ ವ್ಯಸನಕ್ಕೆ ಕಾರಣ, ವ್ಯಸನದ ಗುಣಲಕ್ಷಣ ಮತ್ತು ತಡೆಗಟ್ಟುವ ಕ್ರಮಗಳ ಕುರಿತು ವಿವರಿಸಿದರು.
ಗೌರವಾನಿತ್ವ ಅತಿಥಿ ಸಮಾಜ ಕಾರ್ಯ ವಿಭಾಗದ ಮುಖ್ಯಸ್ಥ ಪ್ರೊ| ಚನ್ನವೀರ ಆರ್. ಎಂ. ಮಾತನಾಡಿ, ಮಾದಕ ವಸ್ತು ಎಂಬ ಸಾಮಾಜಿಕ ಪಿಡುಗನ್ನು ತಡೆಗಟ್ಟುವಲ್ಲಿ ಸಮಾಜ ಕಾರ್ಯ ವಿದ್ಯಾರ್ಥಿಗಳ ಪಾತ್ರದ ಕುರಿತು ಹೇಳಿದರು. ಕಾರ್ಯಕ್ರಮ ಸಂಯೋಜಕ ಡಾ| ಲಕ್ಷ್ಮಣ ಜಿ. ಕಾರ್ಯಾಗಾರದ ಉದ್ದೇಶ ಹಾಗೂ ಇದರಿಂದ ಸಮಾಜಕ್ಕೆ ಆಗುವ ಒಳಿತಿನ ಕುರಿತು ವಿವರಿಸಿದರು.
ಸಂಪನ್ಮೂಲ ವ್ಯಕ್ತಿಯಾಗಿದ್ದ ಮನೋ ವೈದ್ಯಕೀಯ ಸಮಾಜ ಕಾರ್ಯಕರ್ತ ಸುಧಿಧೀರ ಬಾಬು, ಕೇಂದ್ರೀಯ ವಿಶ್ವವಿದ್ಯಾಲಯದ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು, ಸಂಶೋಧಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ