ಕೇಂದ್ರ ಯೋಜನೆ ಮನೆ ಬಾಗಿಲಿಗೆ
ದೇಶ ಪ್ರಗತಿಯಾದರೆ ಕ್ಷೇತ್ರ ಅಭಿವೃದ್ಧಿಯಾದಂತೆ • ಕುಂದುಕೊರತೆಗೆ ಸ್ಪಂದಿಸುವೆ
Team Udayavani, Jun 30, 2019, 9:36 AM IST
ಆಳಂದ: ಸಂಸದ ಭಗವಂತ ಖೂಬಾ ಅವರನ್ನು ಬಿಜೆಪಿ ಮುಖಂಡರು, ಅಭಿಮಾನಿ ಕಾರ್ಯಕರ್ತರು ಸನ್ಮಾನಿಸಿದರು. ಶಾಸಕ ಸುಭಾಷ ಗುತ್ತೇದಾರ, ಜಿಪಂ ಅಧ್ಯಕ್ಷೆ ಸುವರ್ಣ ಮಲಾಜಿ, ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗುಳೆ ಇದ್ದರು.
ಆಳಂದ: ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಕ್ಷೇತ್ರದಲ್ಲಿನ ಸಾಮಾನ್ಯ ಜನರ ಮನೆಬಾಗಿಲಿಗೆ ತಲುಪಿಸಲು ಬದ್ಧನಾಗಿದ್ದೇನೆ ಎಂದು ಬೀದರ ಲೋಕಸಭಾ ಕ್ಷೇತ್ರದ ಸಂಸದ ಭಗವಂತ ಖೂಬಾ ಹೇಳಿದರು.
ಪಟ್ಟಣದ ಎ.ವಿ. ಪಾಟೀಲ ಕಲ್ಯಾಣ ಮಂಟಪದಲ್ಲಿ ಶನಿವಾರ ತಾಲೂಕು ಬಿಜೆಪಿ ಹಮ್ಮಿಕೊಂಡಿದ್ದ ಅಭಿನಂದನೆ ಹಾಗೂ ಸನ್ಮಾನ ಸಮಾರಂಭ ಸ್ವೀಕರಿಸಿ ಅವರು ಮಾತನಾಡಿದರು.
ಕಳೆದ ಅವಧಿಯಲ್ಲೂ ಪ್ರಧಾನಿ ಮೋದಿ ದೇಶದ ಪ್ರಗತಿ ಮಾಡಿದಂತೆ, ನಾನು ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇನೆ. ಆದರೆ ನಿರೀಕ್ಷಿತ ಗುರಿ ತಲುಪಲು ಸಾಧ್ಯವಾಗದೆ ಇರಬಹುದು. ಮೊದಲು ದೇಶ ಪ್ರಗತಿಯಾದರೆ ಕ್ಷೇತ್ರ ಪ್ರಗತಿಯಾದಂತೆ. ಪಕ್ಷ ಮತ್ತು ಜನ ಸಾಮಾನ್ಯರ ಯಾವುದೇ ಕುಂದುಕೊರತೆಗಳಿಗೆ ಸ್ಪಂದಿಸಲು ಸದಾ ನಿಮ್ಮೊಂದಿಗೆ ಇರುತ್ತೇನೆ ಎಂದು ಹೇಳಿದರು.
ಕೇಂದ್ರದ ಅನೇಕ ಜನಪರ ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸಲು ಕಾರ್ಯಕರ್ತರು, ಮುಖಂಡರು ಕೈಜೋಡಿಸಬೇಕು. ಕೇಂದ್ರದ ಫಸಲು ಭೀಮಾ ಯೋಜನೆ, ಆಯುಷ್ಯಮಾನ್ ಭಾರತ, ಪಿಎಂ ಕಿಸಾನ ಸಮ್ಮಾನ, ಗ್ಯಾಸ್ ವಿತರಣೆ ಹೀಗೆ ಅನೇಕ ಯೋಜನೆಗಳನ್ನು ಅರ್ಹರಿಗೆ ತಲುಪಿಸಲಾಗಿದೆ. ಮುಂದೆಯೂ ಎಲ್ಲ ಕಾರ್ಯಗಳಿಗೂ ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.
ಇದೇ ವೇಳೆ ಚುನಾವಣೆಯಲ್ಲಿ ಮತ ನೀಡಿದ ಮತದಾರರಿಗೆ ಮತ್ತು ಮುಖಂಡರಿಗೆ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಅಶೋಕ ಸಾವಳೇಶ್ವರ, ಅಪ್ಪಸಾಹೇಬ ಗುಂಡೆ, ಜಿಪಂ ಮಾಜಿ ಸದಸ್ಯ ವೀರಣ್ಣಾ ಮಂಗಾಣೆ ಮಾತನಾಡಿದರು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಮತ್ತು ರೈತರಿಗೆ ನೆರವು ಒದಗಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಪುರಸಭೆ ಸದಸ್ಯೆ ಆಸ್ಮೀತಾ ಚಿಟಗುಪಕರ್ ಸಂಸದರಿಗೆ ಮನವಿ ಸಲ್ಲಿಸಿದರು.
ಜಿಪಂ ಅಧ್ಯಕ್ಷೆ ಸುವರ್ಣ ಮಲಾಜಿ, ಸದಸ್ಯ ಹರ್ಷಾನಂದ ಗುತ್ತೇದಾರ ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗುಳೆ, ಸಂಜಯ ಮಿಸ್ಕಿನ್, ಮಹಾಂತಪ್ಪ ಆಲೂರೆ ಸರಸಂಬಾ, ಹಣಮಂತರಾವ್ ಮಲಾಜಿ ಮತ್ತಿತರ ಮುಖಂಡರು ಹಾಜರಿದ್ದರು.
ಬಿಜೆಪಿ ರೈತ ಮೋರ್ಚಾ ತಾಲೂಕು ಅಧ್ಯಕ್ಷ ರಮೇಶ ಮೂಲಗೆ, ಜಿಲ್ಲಾ ಮುಖಂಡ ಆದಿನಾಥ ಹೀರಾ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಸಂಸದರು ಹಾಗೂ ಶಾಸಕರನ್ನು ಸನ್ಮಾನಿಸಿದರು. ಪಕ್ಷದ ಹಿರಿಯ ಮತ್ತು ಕಿರಿಯ ಹಾಗೂ ಚುನಾಯಿತ ಪ್ರತಿನಿಧಿಗಳು ಭಾಗವಹಿಸಿದ್ದರು.
ಆಳಂದ ಪಟ್ಟಣಕ್ಕೆ ವರ್ತುಲ ರಸ್ತೆ, ಲಾತೂರ ಕಲಬುರಗಿ ಆಳಂದ ವಾಯಾ ರೈಲು ಮಾರ್ಗ, ಕೇಂದ್ರೀಯ ವಿವಿಗೆ ಕುಡಿಯುವ ನೀರು, ಪಟ್ಟಣದಲ್ಲಿ ಒಳಚರಂಡಿ, ಅಂಚೆ ಕಚೇರಿಗೆ ನಿವೇಶನ, ಕಲಬುರಗಿ ಉಮರಗಾ ಚಥುಷ್ಟದ ಹೆದ್ದಾರಿ ನಿರ್ಮಾಣ, ನಿರುದ್ಯೋಗ ನಿವಾರಣೆಗಾಗಿ ಕಾರ್ಖಾನೆ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು.
• ಸುಭಾಷ ಗುತ್ತೇದಾರ, ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್