ಖಜೂರಿ ಇಂದಿರಾಗಾಂಧಿ ವಸತಿ ಶಾಲೆ ಕಟ್ಟಡ ವಿಳಂಬ


Team Udayavani, Jul 24, 2019, 12:36 PM IST

24-July-22

ಆಳಂದ: ಖಜೂರಿ ಗಡಿ ಸರಹದ್ದಿನಲ್ಲಿ ನಿರ್ಮಾಣ ಹಂತದಲ್ಲಿರುವ ಇಂದಿರಾಗಾಂಧಿ ವಸತಿ ಶಾಲೆ ಕಟ್ಟಡ.

ಆಳಂದ: ಗಡಿಭಾಗದ ಮಕ್ಕಳ ಶೈಕ್ಷಣಿಕ ಉದ್ದೇಶದಿಂದ 2017ರಂದು ತೆರೆಯಲಾದ ಇಂದಿರಾಗಾಂಧಿ ವಸತಿ ಶಾಲೆಗೆ ಸರ್ಕಾರ ಮಂಜೂರಾತಿ ನೀಡಿದೆ. ಆದರೆ, ಇದುವರೆಗೂ ಸಕಾಲಕ್ಕೆ ಕಟ್ಟಡ, ಕಾಯಂ ಶಿಕ್ಷಕರು, ವಸತಿ ನಿಲಯ ಒದಗಿಸದೆ ದಿನದೊಡುತ್ತಿರುವುದು ಪ್ರವೇಶ ಪಡೆದ ಜಿಲ್ಲೆಯ ವಿವಿಧ ಭಾಗದ 150 ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ.

2017-18ರಂದು ಶೈಕ್ಷಣಿಕ ವರ್ಷದಲ್ಲಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಕಟ್ಟಡದಲ್ಲೇ ಇಂದಿರಾಗಾಂಧಿ ವಸತಿ ಶಾಲೆಗೆ 6ನೇ ತರಗತಿಗೆ ವಿದ್ಯಾರ್ಥಿಗಳ ಪ್ರವೇಶ ಪಡೆದು ಪ್ರಭಾರಿ ಪ್ರಚಾರ್ಯರು, ಮತ್ತು ಅತಿಥಿ ಶಿಕ್ಷಕರ ನಿಯೋಜನೆ ಮೇಲೆ ತರಗತಿ ಪ್ರಾರಂಭಿಸಿದ್ದಾರೆ. 8ನೇ ತರಗತಿವರೆಗೆ ಬರೋಬ್ಬರಿ 150 ಮಕ್ಕಳು ಓದುತ್ತಿದ್ದಾರೆ. ಆದರೆ ಕಾಯಂ ಶಿಕ್ಷರು, ಸ್ವಂತ ಕಟ್ಟಡ ವಸತಿ ವ್ಯವಸ್ಥೆ, ಸುಸಜ್ಜಿತ ಕಟ್ಟಡವನ್ನು ಸಕಾಲಕ್ಕೆ ಒದಗಿಸದೆ ಇರುವುದು ಸಂಬಂಧಿತ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ಕಾರ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಸದ್ಯ ಖಜೂರಿ ಗ್ರಾಮದ ಬಾಡಿಗೆ ಕಟ್ಟಡದಲ್ಲೇ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗಾಗಿ ಪ್ರತ್ತೇಕ ವಸತಿ ನಿಲಯ ನಡೆಸಲಾಗುತ್ತಿದೆ. ಕಟ್ಟಡ ಒದಗಿಸಲು ಶಾಲೆ ಆರಂಭದ ವರ್ಷದಲ್ಲೇ ಸರ್ಕಾರ ಕಾಮಗಾರಿಯನ್ನೂ ಶುರು ಮಾಡಿದೆ. ಆದರೆ ಅನುದಾನದ ಕೊರತೆ ಸೇರಿ ಇನ್ನಿತರ ತಾಂತ್ರಿಕ ತೊಂದರೆ ಉಂಟಾಗಿ ಕಟ್ಟಡ ಕಾಮಗಾರಿ ನಿಗದಿತ ಸಮಯಕ್ಕೆ ಪೂರ್ಣಗೊಳ್ಳದೆ ಒಂದೂವರೆ ವರ್ಷ ವಿಳಂಬವಾಗಿರುವುದು ವಿದ್ಯಾರ್ಥಿಗಳ ಪರದಾಟಕ್ಕೆ ಮುಖ್ಯ ಕಾರಣವಾಗಿದೆ ಎನ್ನಲಾಗಿದೆ.

ಕಟ್ಟಡ ಪೂರ್ಣಗೊಳ್ಳಲು ಇನ್ನೂ ಒಂದು ವರ್ಷವಾದರು ಬೇಕು ಎನ್ನುತ್ತಾರೆ ಸ್ಥಳೀಯರು. ಅಲ್ಲಿವರೆಗೆ ವಿದ್ಯಾರ್ಥಿಗಳು ವರ್ಗ ಕೋಣೆ, ವಸತಿ ನಿಲಯ ಶೌಚಾಲಯ, ನೀರಿನ ಪ್ರತ್ಯೇಕ ವ್ಯವಸ್ಥೆಗೆ ಪರದಾಡುವ ಅನಿವಾರ್ಯತೆ ಎದುರಾಗಿದೆ. ಸಂಬಂಧಿತ ಅಧಿಕಾರಿಗಳು ಈ ಕೂಡಲೇ ಗುಣಮಟ್ಟದೊಂದಿಗೆ ಸುಸಜ್ಜಿತ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಶಾಲೆಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳುವರೆ ಎಂಬುದನ್ನು ಕಾದು ನೋಡುವಂತೆ ಮಾಡಿದೆ.

ಸುಮಾರು 15 ಕೋಟಿ ರೂ. ವೆಚ್ಚದಲ್ಲಿ 2018ರ ಏಪ್ರಿಲ್ 20ರಂದು ಕಟ್ಟಡ ನಿರ್ಮಾಣ ಕಾರ್ಯ ಪ್ರಾರಂಭಿಸಲಾಗಿದೆ. ಪೂರ್ಣಗೊಳಿಸಿ ಶಾಲಾಡಳಿತಕ್ಕೆ ಹಸ್ತಾಂತರಿಸಲು ಇನ್ನೂ ಒಂದುವರ್ಷ ಬೇಕಾಗುತ್ತದೆ.
ಸತೀಶ,
ಗುತ್ತಿಗೆದಾರ ಪರ ಇಂಜಿನಿಯರ್‌

ನಿರ್ಮಾಣ ಹಂತದಲ್ಲಿರುವ ಸ್ವಂತ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಬೇಗ ದೊರೆತರೆ ಎಲ್ಲ ಮಕ್ಕಳನ್ನು ಸುರಕ್ಷಿತವಾಗಿ ಒಂದೇ ಕಡೆ ಇರಿಸಲು. ಬೋಧನೆ ಮಾಡಲು ಅನುಕೂಲವಾಗುತ್ತದೆ. ಸದ್ಯ ಬಾಡಿಗೆ ವಸತಿ ನಿಲಯ ಮತ್ತು ಸರ್ಕಾರಿ ಶಾಲೆಗಳಲ್ಲಿ ಬೋಧನೆ ಮಾಡಲಾಗುತ್ತಿದೆ. ಇಲ್ಲಿ 150 ಮಕ್ಕಳಿಗೆ ಕೋಣೆಗಳು ಸಾಲುತ್ತಿಲ್ಲ. ಸಮಸ್ಯೆ ನಿವಾರಿಸಬೇಕು.
•ಶಾಲೆ ವಿದ್ಯಾರ್ಥಿಗಳ ಪಾಲಕರು

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿ ಈ ಶಾಲೆ ನಡೆಯುತ್ತಿದೆ. ಕಟ್ಟಡ ಕಾಮಗಾರಿಗೆ ಅನುದಾನಕ್ಕೆ ಅಡೆತಡೆಯಾಗಿದ್ದರಿಂದ ವಿಳಂಬವಾಗಿದೆ ಎಂದು ಹೇಳಿದ್ದಾರೆ. ಆದರೂ ಬರುವ ಮಾರ್ಚ್ ನೊಳಗೆ ಕಟ್ಟಡ ಪೂರ್ಣಗೊಳಿಸಿ
ಹಸ್ತಾಂತರಿಸುವ ಕುರಿತು ಭರವಸೆ ನೀಡಿದ್ದಾರೆ.
ಸತೀಶಕುಮಾರ,
ಜಂಟಿ ನಿರ್ದೇಶಕರು ಸಮಾಜ
ಕಲ್ಯಾಣ ಇಲಾಖೆ ಕಲಬುರಗಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.