‘ಕಣಮಸ್’ ದುರಸ್ತಿ ಮಾಡಿ
ಶಾಲೆ-ಕಾಲೇಜಿಗೆ ತೆರಳಲು 5ಕಿ.ಮೀ ಸಂಚಾರ•ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ
Team Udayavani, Aug 18, 2019, 3:06 PM IST
ಆಳಂದ: ಕಣಮಸ್ ಸೇತುವೆ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದ್ದರಿಂದ ದುರಸ್ತಿಗೆ ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಎದುರು ಗ್ರಾಮಸ್ಥರೊಂದಿಗೆ ಮುಖಂಡರು ಪ್ರತಿಭಟನೆ ನಡೆಸಿದರು.
ಆಳಂದ: ತಾಲೂಕಿನ ಕಣಮಸ್ ಗ್ರಾಮದ ಸಂಪರ್ಕ ಸೇತುವೆ ಕುಸಿದು ಸಂಚಾರಕ್ಕೆ ಅಡ್ಡಿಯಾಗಿದ್ದು, ಕೂಡಲೇ ದುರಸ್ತಿ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶುಕ್ರವಾರ ತಹಶೀಲ್ದಾರ್ ಕಚೇರಿ ಎದುರು ಗ್ರಾಮಸ್ಥರು ಹಾಗೂ ರೈತ ಸಂಘಟನೆಗಳ ಮುಖಂಡರು ತಹಶೀಲ್ದಾರ್ ಕಚೇರಿ ಎಂದು ಪ್ರತಿಭಟನೆ ನಡೆಸಿದರು.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಉಪಾಧ್ಯಕ್ಷ ಗ್ರಾಮದ ನಾಗೀಂದ್ರಪ್ಪ ಥಂಬೆ ಮಾತನಾಡಿ, ಸೇತುವೆ ಮಳೆ ನೀರಿಗೆ ಕುಸಿದಿರುವುದರಿಂದ ಗ್ರಾಮದ ಸಂಚಾರಕ್ಕೆ ಅಡ್ಡಿಯಾಗಿ ಜನರು ಹೈರಾಣವಾಗುತ್ತಿದ್ದಾರೆ. ಆದರೂ ತಾಲೂಕು ಆಡಳಿತ ಮತ್ತು ಜನ ಪ್ರತಿನಿಧಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸೇತುವೆ ಕುಸಿದಿರುವದರಿಂದ ಗ್ರಾಮಕ್ಕೆ ಬರುವ ಬಸ್ ಸಂಚಾರ ಸ್ಥಗಿತವಾಗಿದೆ. ಹೀಗಾಗಿ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ಐದು ಕಿ.ಮೀ ನಡೆದುಕೊಂಡು ಹೋಗುವಂತಾಗಿದೆ ಎಂದು ಗೋಳು ತೋಡಿಕೊಂಡರು.
ಸೇತುವೆ ಕುಸಿದಿರುವುದರಿಂದ ವಾಹನಗಳ ಸಂಚಾರ ಸಾಧ್ಯವಿಲ್ಲದಾಗಿದೆ. ಇದೇ ಮಾರ್ಗವಾಗಿ ಭಾಲಖೇಡ, ಕೊತನಹಿಪ್ಪರಗಾ, ನಂದಗೂರ, ಹತ್ತರಗಾ ಗ್ರಾಮದ ಪ್ರಯಾಣಕ್ಕೆ ಅಡ್ಡಿಯಾಗಿದೆ. ಶೀಘ್ರವೇ ದುರಸ್ತಿ ಕಾರ್ಯ ಕೈಗೊಳ್ಳದಿದ್ದರೇ ಆಳಂದ ಹಳೆ ಚೆಕ್ಪೋಸ್ಟ್ ಹತ್ತಿರ ರಸ್ತೆ ತಡೆ ಚಳವಳಿ ಮಾಡಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಬಸವರಾಜ ಎಂ.ಬೆಣ್ಣೆಶಿರೂರ ಮನವಿ ಸ್ವೀಕರಿಸಿ ಸೇತುವೆ ದುರಸ್ತಿ ಮಾಡಿಸುವ ಭರವಸೆ ನೀಡಿದರು.
ಸಂಘದ ತಾಲೂಕು ಅಧ್ಯಕ್ಷ ವಿಜಯಕುಮಾರ ಹತ್ತರಕಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಜುಳಾ ಭಜಂತ್ರಿ, ಪುರಸಭೆ ಸದಸ್ಯ ಶಿವಪುತ್ರ ನಡಗೇರಿ, ಸಿದ್ಧು ವೇದಶಟ್ಟಿ, ಪುರಸಭೆ ಸದಸ್ಯ ದೊಂಡಿಬಾ ಸೋಲಂಕರ್, ಮಲ್ಲಿಕಾರ್ಜುನ ಬೋಳಣಿ, ಶರಣಯ್ಯ ಸ್ವಾಮಿ, ದಶವಂತ, ನೀಲಮ್ಮ ವಾಲಿಕರ್, ಸುಮನಬಾಯಿ ಡಾಕೆ, ಮಹಾನಂದ ನರೋಣಿ, ರಾಜು ಡಾಕೆ, ವಿಶ್ವ ಸ್ವಾಮಿ, ಬಸವರಾಜ ಬಿರಾದಾರ, ಪ್ರವೀಣ ಹೂಗಾರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್ಪೋಸ್ಟ್ಗಳಲ್ಲಿ ತಪಾಸಣೆ