ಕುಡಿವ ನೀರಿಗೆ ಹಳ್ಳಿಗಳಲ್ಲಿ ಹಾಹಾಕಾರ

ಕೆಲವೆಡೆ ಟ್ಯಾಂಕರ್‌ ನೀರು ಸರಬರಾಜು•ಅಧಿಕಾರಿಗಳ ಮುತುವರ್ಜಿ ಅವಶ್ಯ

Team Udayavani, May 6, 2019, 9:47 AM IST

6–May-1

ಆಳಂದ: ಕವಲಗಾ ಗ್ರಾಮದಲ್ಲಿ ನೀರಿನ ಕೊರತೆಯಿಂದಾಗಿ ದಿನವಿಡಿ ನಲ್ಲಿ ಎದುರು ಸರಣಿಗೆ ನಿಂತಿರುವ ಮಹಿಳೆಯರು.

ಆಳಂದ: ವಿಪರೀತ ಬೇಸಿಗೆ ಬಿಸಿಲಿಗೆ ಬೆಂದು ಹೋಗಿರುವ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆ ಎದುರಾಗಿದ್ದು, ದಿನ ಕಳೆದಂತೆ ನೀರಿನ ಮೂಲಗಳೇ ಬತ್ತಿ, ಅಂತರ್ಜಲ ಕುಸಿಯುತ್ತಿರುವುದರಿಂದ ತಾಲೂಕಿನಾದ್ಯಂತ ಬಹುತೇಕ ಹಳ್ಳಿಗಳಲ್ಲಿ ಆತಂಕ ಸೃಷ್ಟಿಯಾಗಿದೆ.

ಅನೇಕ ಹಳ್ಳಿಗಳಲ್ಲಿನ ನೀರು ಪೂರೈಕೆ ಮೂಲವಾದ ಕೊಳವೆ ಬಾವಿ, ತೆರೆದ ಬಾವಿಗಳಲ್ಲಿ ನೀರು ಬತ್ತಿ ಹೋಗಿದ್ದರಿಂದ ಟ್ಯಾಂಕರ್‌ ಮೂಲಕ ನೀರು ಒದಗಿಸಲಾಗುತ್ತಿದೆ. ಕೆಲವೆಡೆ ಬಾವಿ, ಕೊಳವೆ ಬಾವಿಗಳಲ್ಲಿ ಅಳಿದುಳಿದ ನೀರು ಸರಬರಾಜು ಕೈಗೊಂಡರೂ ಸಮರ್ಪಕವಾಗಿ ನೀರಿನ ದಾಹ ಇಂಗುತ್ತಿಲ್ಲ.

ಟಾಸ್ಕಪೋರ್ಸ್‌ ಸಮಿತಿ ಅಧ್ಯಕ್ಷರೂ ಆದ ಶಾಸಕರು, ಸಮಸ್ಯೆ ನಿವಾರಣೆಗೆ ಸಂಬಂಧಿತ ಅಧಿಕಾರಿಗಳ ಸಭೆ ಕರೆದು ಕ್ರಮ ಕೈಗೊಳ್ಳಬೇಕಿದೆ. ಅಧಿಕಾರಿಗಳು ಮುತುವರ್ಜಿ ವಹಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ನಿಂಬರಗಾ ವಲಯದ ಮಾಡಿಯಾಳ, ಹಿತ್ತಲಶಿರೂರ, ಕುಡಕಿ, ನಿಂಬರಗಾ ಹೊಸಬಡಾವಣೆ, ಬೊಮ್ಮನಳ್ಳಿ, ನಿಂಬರಗಾ ತಾಂಡಾ, ಸುಂಟನೂರ, ಕಡಗಂಚಿ ಗ್ರಾಮದ ಬಸ್‌ ನಿಲ್ದಾಣ ಸುತ್ತಲಿನ ಮೂರು ಲೇಔಟ್ ಪ್ರದೇಶದಲ್ಲಿ ನೀರಿನ ಕೊರತೆ ಇದೆ. ಧರ್ಮವಾಡಿ, ಆಲೂರ, ಬಟ್ಟರಗಾ, ಮಾಡಿಯಾಳ ತಾಂಡಾದಲ್ಲಿ ನೀರಿನ ಸಮಸ್ಯೆ ಎದುರಾಗಿದೆ.

ಜಿಡಗಾ ಗ್ರಾಮದಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ತುರ್ತಾಗಿ ಎರಡು ಕೊಳವೆ ಬಾವಿ ತೋಡಿಸುವಂತೆ ಅಲ್ಲಿನ ಶರಣ ಕಾಳಕಿಂಗೆ ಅವರು ಗ್ರಾಮಸ್ಥರ ಪರ ತಾಲೂಕು ಆಡಳಿತಕ್ಕೆ ಕೋರಿದ್ದಾರೆ.

ಜಿಪಂ ಅಧ್ಯಕ್ಷೆ ಸುವರ್ಣ ಮಲಾಜಿ ಅವರ ಕ್ಷೇತ್ರ ತಡಕಲ್ ವ್ಯಾಪ್ತಿಯ ತೆಲಾಕುಣಿ ಗ್ರಾಮಕ್ಕೆ ಆಳಂದ ಕೆ‌ರೆಯಲ್ಲಿ ತೋಡಿದ ತೆರೆದ ಬಾವಿ ಮೂಲಕ ಸಮರ್ಪಕ ನೀರು ಸರಬರಾಜು ಕೈಗೊಳ್ಳಲಾಗುತ್ತಿದೆ. ಆದರೆ ಪದೇ ಪದೇ ನೀರಿನ ಪೈಪಲೈನ್‌ ಒಡೆದು ನೀರು ಸೋರಿಕೆಯಾದರೂ ದುರಸ್ತಿ ಕೈಗೊಳ್ಳದೆ ಸಾಕಷ್ಟು ಪ್ರಮಾಣದ ನೀರು ಪೋಲಾಗುತ್ತಿದೆ. ಆದರೂ ಸಹಿತ ನೀರಿನ ಸಮಸ್ಯೆ ನಿವಾರಣೆಗೆ ತೆಲಾಕುಣಿ ರಾಮಮಂದಿರ ಹತ್ತಿರ ಕೊಳವೆ ಬಾವಿ ತೋಡುವಂತೆ ಜನ ಕೇಳುತ್ತಿರುವುದು ವಿಪರ್ಯಾಸವಾಗಿದೆ.

ಉಮರಗಾ ಹೆದ್ದಾರಿ ಮಾರ್ಗದಿಂದಲೇ ನೀರಿನ ಪೈಪಲೈನ್‌ ಸಾಗಿರುವುದು ನೀರು ಸೋರಿಕೆಯಾಗಿ ನೆರೆ ಹೊರೆಯ ಹೊಲಗಳಲ್ಲಿ ನೀರು ಹರಿದು ಹೋಗುತ್ತಿದೆ. ಪೋಲಾಗುತ್ತಿರುವ ನೀರು ತಡೆಯಲು ಮೂರ್‍ನಾಲ್ಕು ವರ್ಷಗಳಿಂದಲೂ ಸಾಕಷ್ಟು ಬಾರಿ ದುರಸ್ತಿ, ಖರ್ಚು ಹಾಕಿದ್ದಾರೆ. ಆದರೂ ಇಂದಿಗೂ ಸಮಪರ್ಕ ದುರಸ್ತಿ ಆಗುತ್ತಿಲ್ಲ. ಇಂಥ ಪರಿಸ್ಥಿತಿಯಲ್ಲಿ ಗ್ರಾಪಂಗೆ ಸೂಚಿಸಿ ಮೇಲಾಧಿಕಾರಿಗಳು ಶಾಶ್ವತ ಕ್ರಮ ಕೈಗೊಳ್ಳುವರೇ ಎನ್ನುವುದನ್ನು ಕಾಯ್ದು ನೋಡಬೇಕಿದೆ.

ನೀರಿನ ಸಮಸ್ಯೆ ಉದ್ಭವಿಸದಂತೆ ನೋಡಿಕೊಳ್ಳಬೇಕಾಗಿರುವ ಸರ್ಕಾರದ ಭ್ರಷ್ಟ ವ್ಯವಸ್ಥೆಯಿಂದ ಪ್ರತಿವರ್ಷ ಈ ದುಸ್ಥಿತಿ ಬರುತ್ತಿದೆ. ನಾವು ಕೃಷಿಗೆ ನೀರು ಬೇಕು ಎಂದು ಮೇ 1ರಂದು ಹೋರಾಟ ಹಮ್ಮಿಕೊಂಡಿದ್ದೇವೆ. ಕೃಷಿಗೆ ನೀರು ಸಿಕ್ಕರೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಆಗುತ್ತದೆ. ನೀರಿಗಾಗಿ ಬಂದ ಹಣದಿಂದ ಸಮಸ್ಯೆ ನಿವಾರಿಸಬೇಕಾಗಿತ್ತಾದರೂ, ಸಮರ್ಪಕವಾಗಿ ಖರ್ಚಾಗುತ್ತಿಲ್ಲ. ಇದಕ್ಕೆ ಸರ್ಕಾರದ ಭ್ರಷ್ಟ ಆಡಳಿತವೇ ಹೊಣೆಯಾಗಿದೆ.
• ಮೌಲಾ ಮುಲ್ಲಾ,
ಕಿಸಾನಸಭಾ ಜಿಲ್ಲಾ ಅಧ್ಯಕ್ಷರು

ತಾಲೂಕಿನ 12 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದರಿಂದ ಟ್ಯಾಂಕರ್‌ ಮೂಲಕ ನೀರು ಒದಗಿಸಲಾಗುತ್ತಿದೆ. ಇನ್ನು ನಾಲ್ಕು ಗ್ರಾಮಗಳಲ್ಲಿ ಖಾಸಗಿ ಕೊಳವೆ ಬಾವಿಗಳಿಂದ ನೀರಿ ಖರೀದಿಸಿ ವಿತರಣೆ ಮಾಡಲಾಗುತ್ತಿದೆ. ಇನ್ನು ಹೆಚ್ಚಿನ ಗ್ರಾಮಗಳಿಗೆ ಟ್ಯಾಂಕರ್‌ ಬೇಡಿಕೆ ಇದೆ. ಏ.30ರಂದು ಸಂಬಂಧಿತ ಅಧಿಕಾರಿಗಳ ಸಭೆ ಕರೆಯಲಾಗಿದ್ದು, ವಿಸ್ತೃತ ವರದಿ ಆಧರಿಸಿ ಮಾಹಿತಿ ನೀಡಲಾಗುವುದು.
ಎಂ.ಎನ್‌. ಚೋರಗಸ್ತಿ, ತಹಶೀಲ್ದಾರ್‌

ಸಮಸ್ಯೆ ಇರುವ 43 ಗ್ರಾಮಗಳ ಪೈಕಿ 31 ಗ್ರಾಮಗಳಲ್ಲಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದ್ದು, ಟ್ಯಾಂಕರ್‌ ಬೇಡಿಕೆಯ 28 ಹಳ್ಳಿಗಳ ಪೈಕಿ 22 ಹಳ್ಳಿಗಳಲ್ಲಿ ಪೂರೈಕೆ ಮಾಡಲಾಗುತ್ತಿದೆ. ಅಗತ್ಯವಾಗಿರುವ 52 ಟ್ಯಾಂಕರ್‌ ಪೈಕಿ 44 ಟ್ಯಾಂಕರ್‌ ಬಳಸಿ ಪ್ರತಿದಿನ ಬೇಡಿಕೆಯ 159 ಟ್ರಿಪ್‌ ಪೈಕಿ 135 ಟ್ರಿಪ್‌ ನೀರು ಒದಗಿಸಲಾಗುತ್ತಿದೆ. ಖಾಸಗಿ ನೀರು ಖರೀದಿ 17 ಗ್ರಾಮದ ಬೇಡಿಕೆ ಪೈಕಿ 11 ಕಡೆ ಬಾಡಿಗೆ ಆಧಾರದ ಮೇಲೆ ನೀರು ಒದಗಿಸಿದರೆ, ಇನ್ನು 22 ಖಾಸಗಿ ನೀರು ಪಡೆಯುವ ಯೋಜನೆಯಲ್ಲಿ 16 ಕಡೆ ಜಲಮೂಲಗಳಿಂದ ನೀರು ಪಡೆದು ಟ್ಯಾಂಕರ್‌ನಿಂದ ಒದಗಿಸಲಾಗುತ್ತಿದೆ. ಮಾದನಹಿಪ್ಪರಗಾ, ಧುತ್ತರಗಾಂವ, ಚಿಂಚೋಳಿ ಗ್ರಾಮದಲ್ಲಿ ಟ್ಯಾಂಕರ್‌ ಹಾಗೂ ಬಾಡಿಗೆ ಜಲಮೂಲಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಸಮಸ್ಯೆ ನಿವಾರಣೆಗೆ ಅಂದಾಜು 3 ಕೋಟಿ ರೂ. ಬೇಡಿಕೆಯಲ್ಲಿ ಬರೀ 75 ಲಕ್ಷ ರೂ. ಮಾತ್ರ ಬಿಡುಗಡೆಯಾದಂತೆ ಖರ್ಚಾಗಿದೆ. ಅನುದಾನದ ಬಂದಂತೆ ಕಾಮಗಾರಿ ಕೈಗೊಳ್ಳಲಾಗುವುದು.
ಸಂಗಮೇಶ ಬಿರಾದಾರ,
ಗ್ರಾಮೀಣ ನೀರು ಸರಬರಾಜು ಎಇಇ

ಮಹಾದೇವ ವಡಗಾಂವ

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.