ನೀರು ಸಿಕ್ಕರೆ ಯುದ್ದ ಗೆದ್ದ ಭಾವ

ಸ್ನಾನ ಮಾಡದೆ ಬರೀ ಕೈಕಾಲು ಮುಖ ತೊಳೆದುಕೊಳ್ಳುವುದು ಅನಿವಾರ್ಯ ಸ್ಥಿತಿ ನಿರ್ಮಾಣ

Team Udayavani, May 19, 2019, 11:06 AM IST

19-May-7

ಆಳಂದ: ಮಾಡಿಯಾಳ ಗ್ರಾಮದಲ್ಲಿ ಮಹಿಳೆಯರು ನೀರಿಗಾಗಿ ಗುಮ್ಮಿ ಎದುರು ನಿಂತಿರುವು

ಆಳಂದ: ತಾಲೂಕಿನ ಹಳ್ಳಿಗಳಲ್ಲಿ ಹನಿ ನೀರಿಗೂ ಹಾಹಾಕಾರ ಮುಂದುವರಿದಿದ್ದು, ನೀರಿಗಾಗಿ ನೀರೆಯರು ಹಗಲಿರುಳು ಕೊಡಗಳನ್ನು ಕೈಯಲ್ಲಿಡಿದು ಓಡಾಡುವ ದೃಶ್ಯ ಸಾಮಾನ್ಯವಾಗಿದೆ.

ಮಾಡಿಯಾಳ ಗ್ರಾಮಸ್ಥರಿಗೆ ಕುಡಿಯಲು ಟ್ಯಾಂಕರ್‌ ಮೂಲಕವಾದರು ನೀರು ಒದಗಿಸಬೇಕು ಹಾಗೂ ನಿರಂತರ ವಿದ್ಯುತ್‌ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಒತ್ತಾಯಿಸಿ ವಾರದ ಹಿಂದೆ ಪ್ರತಿಭಟನೆ ನಡೆಸಿದ ಬಳಿಕವೂ ಪರಿಸ್ಥಿತಿ ಇನ್ನೂ ಬದಲಾಗಿಲ್ಲ ಎಂದು ಗ್ರಾಮದ ಭೀಮಾಶಂಕರ ಮಾಡಿಯಾಳ, ಅರ್ಜುನ ಬಂಡೆ, ವಿಠuಲ ಮದರಿ, ಕುಪೇಂದ್ರ ಶ್ರೀಗಣಿ ಆರೋಪಿಸಿದ್ದಾರೆ.

ಮಾಡಿಯಾಳ, ಜಿರಹಳ್ಳಿ, ನಿರಗುಡಿ, ಅಂಬಲಗಾ, ಕವಲಗಾ ಹೀಗೆ ಮತ್ತಿತರ ಹಳ್ಳಿಗಳಲ್ಲಿ ಸುಮಾರು ಎರಡು ತಿಂಗಳಿಂದಲೂ ಸಮಸ್ಯೆ ಎದುರಾಗಿದೆ. ನೀರಿಗಾಗಿ ಬಾವಿ, ಕೊಳವೆ ಬಾವಿಗಳಿಗೆ ಮಹಿಳೆಯರು, ಮಕ್ಕಳು, ವಯೋವೃದ್ಧರು ಕೊಡ ಹಿಡಿದು ಒಂದೇ ಸವನೆ ಅಲೆಯುತ್ತಿದ್ದಾರೆ. ಅಲ್ಲೂ ನೀರು ಸಿಕ್ಕರೆ ಸಿಕ್ಕಿತು. ಇಲ್ಲದಿದ್ದರೆ ಇಲ್ಲ. ಒಂದೊಮ್ಮೆ ನೀರು ಸಿಕ್ಕರೆ ಯುದ್ದವೇ ಗೆದ್ದ ಭಾವ ಮೂಡುತ್ತದೆ ಎನ್ನುತ್ತಾರೆ ಹಳ್ಳಿಗರು.

ಯುವಕರು, ಮಕ್ಕಳು ನೀರಿಲ್ಲದಕ್ಕೆ ಸ್ನಾನ ಮಾಡದೆ ಬರೀ ಕೈಕಾಲು ಮುಖ ತೊಳೆದು ದಿನದೂಡಿದರೆ, ಬಟ್ಟೆ ತೊಳೆಯುಲು ಸಹ ಮೂರ್‍ನಾಲ್ಕು ದಿನಕ್ಕೊಮ್ಮೆ ತೊಳೆಯುವ ಸ್ಥಿತಿ ಎದುರಾಗಿದೆ. ಜಾನುವಾರುಗಳನ್ನು ತೊಟ್ಟಿಗಳಿಗೆ ಕೊಂಡ್ಯೊದು ನೀರು ಕುಡಿಸುವ ಅನಿವಾರ್ಯವಾಗಿದೆ. 20ಕ್ಕೂ ಹೆಚ್ಚು ಗ್ರಾಮಗಳಲ್ಲಿ ಈಗಾಗಲೇ ಟ್ಯಾಂಕರ್‌ ಮೂಲಕ ನೀರು ಒದಗಿಸಿದರೆ, ಇನ್ನೂ 30ಕ್ಕೂ ಹೆಚ್ಚು ಹಳ್ಳಿಗಳಿಗೆ ಟ್ಯಾಂಕರ್‌ ನೀರಿನ ಬೇಡಿಕೆ ಬಂದಿದೆ. ಸಮಸ್ಯೆ ಕುರಿತು ತಾಲೂಕಿನ ಅಧಿಕಾರಿಗಳು ಜಿಲ್ಲಾಡಳಿತದ ಗಮನಕ್ಕೆ ತಂದಿದ್ದಾರೆ ಎಂದು ಹೇಳಲಾಗುತ್ತಿದೆ.

ಜಿಲ್ಲಾಡಳಿತ ಕೂಡಲೇ ನೀರಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ ಅಗತ್ಯ ಅನುದಾನ ಒದಗಿಸಿ ಟ್ಯಾಂಕರ್‌, ಕೊಳವೆ ಬಾವಿ, ಜಲ ಮೂಲಗಳಿಂದ ನೀರು ತಂದು ಪೂರೈಸಬೇಕು ಎಂದು ಜನರು ಆಗ್ರಹಿಸಿದ್ದಾರೆ.

ಸಹಾಯವಾಣಿ ಕೇಂದ್ರ ಸ್ಥಾಪನೆ
ಕಲಬುರಗಿ:
ಜಿಲ್ಲೆಯ 7 ತಾಲೂಕುಗಳು ಬರಪೀಡಿತ ಪ್ರದೇಶ ಎಂದು ಘೋಷಣೆಯಾಗಿವ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದಲ್ಲಿ ಸಾರ್ವಜನಿಕರು ದೂರು ನೀಡಲು ಕಲಬುರಗಿ ತಾಪಂ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಾನಿರ್ವಾಹಕ ಅಧಿಕಾರಿ ಡಾ| ಪಿ. ರಾಜಾ ಅವರು ತಿಳಿಸಿದ್ದಾರೆ. ಗ್ರಾಮೀಣ ಪ್ರದೇಶದ ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಇದ್ದಲ್ಲಿ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ದೂರು ನೀಡಬಹುದಾಗಿದೆ. ಅಫಜಲಪುರ 08470-283024. ಆಳಂದ 08477-202102, ಮೊ. ಸಂಖ್ಯೆ 9742971700 ಹಾಗೂ 9036621394. ಚಿಂಚೋಳಿ 9845598521, 7090372995. ಚಿತ್ತಾಪುರ 08474-236111. ಜೇವರ್ಗಿ 08442-236896. ಕಲಬುರಗಿ 08472-249352. ಸೇಡಂ 08441-276036. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 1077 ಹಾಗೂ 08472-278677ಗೆ ಸಂಪರ್ಕಿಸಬೇಕು ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.