ಸಿದ್ಧಾರ್ಥ್ಗೆ ಕಾಫಿ ಬೆಳೆಗಾರರ ಭಾವಪೂರ್ಣ ಶ್ರದ್ಧಾಂಜಲಿ
ಸಿದ್ಧಾರ್ಥ್ರನ್ನು ಕಳೆದುಕೊಂಡ ಕಾಫಿನಾಡು ಬಡವಾಗಿದೆ: ಸುರೇಶ್
Team Udayavani, Aug 1, 2019, 11:29 AM IST
ಆಲ್ದೂರು: ಕಾಫಿ ಲೋಕದ ದಿಗ್ಗಜ, ಕಾಫಿ ಡೇ ಸಂಸ್ಥಾಪಕ ಜಿ.ವಿ.ಸಿದ್ಧಾರ್ಥ್ ಹೆಗ್ಡೆ ನಿಧನರಾದ ಹಿನ್ನೆಲೆಯಲ್ಲಿ ಪಟ್ಟಣದ ಶಾದಿ ಮಹಲ್ನಲ್ಲಿ ಕಾಫಿ ಬೆಳೆಗಾರರ ಸಂಘದಿಂದ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.
ಆಲ್ದೂರು: ಕಾಫಿ ಲೋಕದ ದಿಗ್ಗಜ, ಕಾಫಿ ಡೇ ಸಂಸ್ಥಾಪಕ ಜಿ.ವಿ.ಸಿದ್ಧಾರ್ಥ್ ಹೆಗ್ಡೆ ನಿಧನರಾದ ಹಿನ್ನೆಲೆಯಲ್ಲಿ ಪಟ್ಟಣದ ಶಾದಿ ಮಹಲ್ನಲ್ಲಿ ಕಾಫಿ ಬೆಳೆಗಾರರ ಸಂಘದಿಂದ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.
ಕಾಫಿ ಬೆಳೆಗಾರರ ಸಂಘದ ಹೋಬಳಿ ಅಧ್ಯಕ್ಷ ಸಿ.ಸಿ.ಸುರೇಶ್ ಮಾತನಾಡಿ, 50 ಸಾವಿರ ಕುಟುಂಬಗಳಿಗೆ ಆಶ್ರಯ ನೀಡಿದ ಆಶಾಕಿರಣ ಇಂದು ಎಲ್ಲರನ್ನೂ ಬಿಟ್ಟು ಅಗಲಿರುವುದು ನೋವು ತಂದಿದೆ. ಕಾಫಿ ಬೆಳೆಗಾರರು ಉನ್ನತ ಮಟ್ಟದಲ್ಲಿ ಬೆಳೆಯಲು ಸಿದ್ಧಾರ್ಥ್ ಹೆಗ್ಡೆ ಕಾರಣ. ನಮ್ಮ ಮಲೆನಾಡಿನ ಕಾಫಿಯನ್ನು ದೇಶ-ವಿದೇಶದಲ್ಲಿ ಪರಿಚಯಿಸಿ ಮಲೆನಾಡಿಗೆ ಕೀರ್ತಿ ತಂದುಕೊಟ್ಟ ಹೆಗ್ಗಳಿಕೆ ಸಿದ್ಧಾರ್ಥ ಅವರಿಗೆ ಸಲ್ಲುತ್ತದೆ. ಅಂತಹ ದಿಗ್ಗಜನನ್ನು ಕಳೆದುಕೊಂಡಿರುವುದು ನಮ್ಮ ದೌರ್ಭಾಗ್ಯ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದರು.
ತಾಪಂ ಸದಸ್ಯೆ ಭವ್ಯಾ ನಟೇಶ್ ಮಾತನಾಡಿ, ಕಾಫಿ ಬೆಳೆಗಾರರು ತಾವು ಬೆಳೆದ ಕಾಫಿ ಬೆಳೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೇಡಿಕೆಯನ್ನು ತಂದುಕೊಟ್ಟ ಧೀಮಂತ ವ್ಯಕ್ತಿ ಸಿದ್ಧಾರ್ಥ ಹೆಗ್ಡೆ. ವಿದೇಶದಲ್ಲೂ ಕಾಫಿ ಡೇಗಳನ್ನು ಪ್ರಾರಂಭಿಸಿ ಕಾಫಿಗೆ ಹೆಚ್ಚಿನ ಬೇಡಿಕೆ ಬರುವಂತೆ ಮಾಡಿದ ಹೆಗ್ಗಳಿಕೆ ಅವರಿಗೆ ಸಲ್ಲುತ್ತದೆ. ಇಂತಹ ವ್ಯಕ್ತಿಯನ್ನು ಕಳೆದುಕೊಂಡ ಕಾಫಿನಾಡು ಬಡವಾಗಿದೆ ಎಂದು ಭಾವುಕರಾದರು.
ಡಿ.ಸಿ.ಗಿರೀಶ್ ಮಾತನಾಡಿ, ಅತ್ಯಲ್ಪ ಬಂಡವಾಳದಿಂದ ಉದ್ಯಮ ಪ್ರಾರಂಭಿಸಿ ಇಂದು 22 ಸಾವಿರ ಕೋಟಿ ರೂ.ಆಸ್ತಿಯ ಒಡೆಯನಾಗಿದ್ದ ಸಿದ್ಧಾರ್ಥ್ ಜಾಗತಿಕ ಮಟ್ಟದ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದರು. ಆದರೆ, ಅವರ ದಾರುಣ ಅಂತ್ಯ ಊಹಿಸಲು ಕಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದರು.
ತಾಪಂ ಮಾಜಿ ಸದಸ್ಯ ಕೃಷ್ಣೇಗೌಡ, ಆಲ್ದೂರು ಗ್ರಾಪಂ ಅಧ್ಯಕ್ಷೆ ಪ್ರತಿಭಾ, ಎಪಿಎಂಸಿ ಸದಸ್ಯ ಕವೀಶ್, ಗ್ರಾಪಂ ಸದಸ್ಯರಾದ ನವರಾಜ್, ಆಶ್ರಫ್, ಜೆಡಿಎಸ್ ಬ್ಲಾಕ್ ಅಧ್ಯಕ್ಷ ರಘು, ಗಿರೀಶ್, ರಾಜೀವ್ ಮಾತನಾಡಿದರು.
ಕಾಫಿ ಬೆಳೆಗಾರರ ಸಂಘದ ಕಾರ್ಯದರ್ಶಿ ಲವ, ವರ್ತಕರ ಸಂಘದ ಅಧ್ಯಕ್ಷ ಅನಿಲ್ ವಾಸ್, ಕಾರ್ಯದರ್ಶಿ ಮೂರ್ತಿ, ಕಸಾಪ ಹೋಬಳಿ ಅಧ್ಯಕ್ಷ ರವಿಕುಮಾರ್, ಬಿಜೆಪಿ ಮಂಡಲದ ಅಧ್ಯಕ್ಷ ಸಂಪತ್, ತಾ. ಪ್ರಧಾನ ಕಾರ್ಯದರ್ಶಿ ನಾರಾಯಣ ಆಚಾರ್ಯ, ಜೆಡಿಎಸ್ ಹೋಬಳಿ ಅಧ್ಯಕ್ಷ ಪ್ರವೀಣ್, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮುದಾಬೀರ್, ತಾಪಂ ಮಾಜಿ ಸದಸ್ಯ ಮಹೇಶ್, ಪ್ರಶಾಂತ್, ಸಿದ್ಧಾರ್ಥ್, ನಾಗೇಶ್ ಹಾಗೂ ನೂರಾರು ಕಾಫಿ ಬೆಳೆಗಾರರು, ವಿವಿಧ ಸಂಘಟನೆಯವರು ಪಾಲ್ಗೊಂಡಿದ್ದರು.
ವಿ.ಜಿ.ಸಿದ್ಧಾರ್ಥ್ ನಿಧನದ ಹಿನ್ನೆಲೆಯಲ್ಲಿ ವರ್ತಕರ ಸಂಘದಿಂದ ಬೆ.11ಗಂಟೆಯಿಂದ 12ರ ವರೆಗೆ ಒಂದು ಗಂಟೆ ಕಾಲ ಅಂಗಡಿಗಳನ್ನು ಬಂದ್ ಮಾಡುವಂತೆ ಕರೆ ನೀಡಿದ್ದರಿಂದ, ಎಲ್ಲಾ ವರ್ತಕರು ಅಂಗಡಿಗಳನ್ನು ಬಂದ್ ಮಾಡಿ ಸಂತಾಪ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ
MUST WATCH
ಹೊಸ ಸೇರ್ಪಡೆ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ