ನಿವೇಶನಕ್ಕಾಗಿ 200 ಕುಟುಂಬಗಳ ನಿರಶನ

ಸರ್ಕಾರಿ ಜಾಗದಲ್ಲಿ ಗುಡಿಸಲು ನಿರ್ಮಿಸಿಕೊಂಡು ಮೂರು ದಿನಗಳಿಂದ ನಿರಂತರ ಹೋರಾಟ

Team Udayavani, Oct 5, 2019, 5:24 PM IST

5-0ctober-20

ಆಲ್ದೂರು: ನಿವೇಶನಕ್ಕಾಗಿ ಆಗ್ರಹಿಸಿ ಸತ್ತಿಹಳ್ಳಿ ಗ್ರಾಪಂ ವ್ಯಾಪ್ತಿಯ 200ಕ್ಕೂ ಹೆಚ್ಚು ಕುಟುಂಬಗಳು ಸರ್ಕಾರಿ ಜಾಗದಲ್ಲಿ ಗುಡಿಸಲುಗಳನ್ನು ನಿರ್ಮಿಸಿಕೊಂಡು ಮೂರು ದಿನಗಳಿಂದ ಹೋರಾಟ ನಡೆಸುತ್ತಿದ್ದಾರೆ. ಸತ್ತಿಹಳ್ಳಿ ಗ್ರಾಪಂ ವ್ಯಾಪ್ತಿಯ ಸರ್ವೆ ನಂ. 167ರಲ್ಲಿ 117 ಎಕರೆ ಜಾಗವಿದ್ದು, ಅದರಲ್ಲಿ ಮಾಚಗೊಂಡನಹಳ್ಳಿ, ಸತ್ತಿಹಳ್ಳಿ, ಎಲೆಗುಡಿಗೆ, ಇಂದಿರಾನಗರ, ಈದ್ಗಾ ಮೊಹಲ್‌,ದೇವಿಗುಡ್ಡ, ಹರವಿನಗಂಡಿ ಪಾಳ್ಯ, ಕಾರೆಹಟ್ಟಿ ಗ್ರಾಮಗಳ ನಿರಾಶ್ರಿತ ಕುಟುಂಬಗಳು ಗುಡಿಸಲುಗಳನ್ನು ನಿರ್ಮಿಸಿಕೊಂಡು ನಿವೇಶನಕ್ಕಾಗಿ ಧರಣಿ ನಡೆಸುತ್ತಿವೆ.

ಸರ್ವೆ ನಂ. 167ರಲ್ಲಿ 117 ಎಕರೆ ಸರ್ಕಾರಿ ಕಂದಾಯ ಜಾಗವಿದ್ದು, ಅದು ಬಹುತೇಕ ಒತ್ತುವರಿಯಾಗಿ ಕಾμ ತೋಟಗಳಾಗಿವೆ. ಈಗ ಕೇವಲ 6 ಎಕರೆ ಜಾಗ ಮಾತ್ರ ಉಳಿದಿದೆ. ಜಿಲ್ಲಾಧಿಕಾರಿಗಳು 2006ರಲ್ಲಿ 10 ಎಕರೆ ಜಾಗವನ್ನು ಆಶ್ರಯ ವಸತಿ ಯೋಜನೆಗೆ ಕಾಯ್ದಿರಿಸಿದ್ದು, ಈ ಜಾಗವನ್ನು ನಿವೇಶನವನ್ನಾಗಿ ಪರಿವರ್ತಿಸಲು ಸಂಬಂಧಪಟ್ಟ ಗ್ರಾಪಂ ವಿಫಲವಾಗಿದೆ ಎಂದು ನಿವೇಶನಕ್ಕಾಗಿ ಹೋರಾಟ ನಡೆಸುತ್ತಿರುವ ಹಾಂದಿ ಗ್ರಾಮದ ವಿನೋದ್‌ ದೂರಿದರು.

ಸರ್ವೆ ನಂಬರ್‌ 167ರಲ್ಲಿರುವ 117 ಎಕರೆ ಜಾಗ ಪ್ರಭಾವಿಗಳಿಂದ ಒತ್ತುವರಿಯಾಗಿದೆ. ಫಾರಂ ನಂಬರ್‌ 57ರಲ್ಲಿ ಇದೇ ಜಾಗಕ್ಕೆ 74 ಜನ ಅರ್ಜಿ ಸಲ್ಲಿಸಿದ್ದಾರೆ. ಫಾರಂ ನಂಬರ್‌ 53 ಹಾಗೂ 94 ಸಿ ನಲ್ಲಿ ಸಾಕಷ್ಟು ಜನ ಜಾಗ ಮಂಜೂರು ಮಾಡಿಸಿಕೊಂಡಿದ್ದು, ಉಳಿದಿರುವ 16 ಎಕರೆ ಜಾಗವನ್ನು ಜಿಲ್ಲಾಧಿಕಾರಿಗಳು ನಿವೇಶನಕ್ಕೆ ಕಾಯ್ದರಿಸಿದ್ದಾರೆ. ಈ ಜಾಗದಲ್ಲಿ ಗುಡಿಸಲು ಹಾಕಿಕೊಂಡಿದ್ದೇವೆ.

ನಮ್ಮನ್ನು ತೆರವು ಮಾಡಿಸಲು ಅರಣ್ಯ ಇಲಾಖೆ ಮೇಲೆ ಪ್ರಭಾವಿಗಳು ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿದರು. ಇಲ್ಲಿ ಗುಡಿಸಲು ಹಾಕಿಕೊಂಡ ಕುಟುಂಬಗಳು ಬಹುತೇಕ ಕಾರ್ಮಿಕರಾಗಿದ್ದು, ಸೂರಿಗಾಗಿ 20 ವರ್ಷಗಳಿಂದ ಹೋರಾಟ ನಡೆಸುತ್ತಿದ್ದಾರೆ. ಕೂಲಿ ಕೆಲಸವಿಲ್ಲದೇ ಒಂದು ಒತ್ತು ಊಟಕ್ಕೂ ಪರದಾಡುತ್ತಿರುವ ಈ ಕುಟುಂಬಗಳಿಗೆ ವಾಸಿಸಲು ಮನೆಯಿಲ್ಲ. ಬಾಡಿಗೆ ಮನೆಗೆ ಮೂರು ಸಾವಿರ ರೂ.ಬಾಡಿಗೆ ಹಾಗೂ 50 ಸಾವಿರ ರೂ. ಅಡ್ವಾನ್ಸ್‌ ನೀಡಬೇಕು. ಕೂಲಿ ಮಾಡುವವರು ಇಷ್ಟು ಹಣ ಎಲ್ಲಿಂದ ತರಲು ಸಾಧ್ಯ? ಈ ಸಮಸ್ಯೆ ಬಗೆಹರಿಸಬೇಕಾದ ಗ್ರಾಮ ಪಂಚಾಯಿತಿ ಪ್ರಭಾವಿಗಳಿಗೆ ಮಣಿದು ಕೈಕಟ್ಟಿ ಕುಳಿತಿದೆ ಎಂದು ದೂರಿದರು.

ಅರಣ್ಯ ಇಲಾಖೆಯವರು ನಮಗೆ ತೊಂದರೆ ಕೊಡುತ್ತಿದ್ದಾರೆ. ವಲಯ ಅರಣ್ಯಾಧಿಕಾರಿ ಸ್ಥಳಕ್ಕೆ ಬಂದು ಬೆದರಿಕೆ ಹಾಕುತ್ತಿದ್ದಾರೆ. ಜೊತೆಗೆ ಪೊಲೀಸ್‌ ಇಲಾಖೆ ಮುಖಾಂತರ ನಮ್ಮನ್ನು ತೆರವು ಮಾಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಹೋರಾಟದ ಮುಂಚೂಣಿಯಲ್ಲಿರುವ ರವಿ, ಸುಂದರೇಶ್‌, ವಿನೋದ್‌ರಾಜ್‌ ಅವರು ಅಸಮಧಾನ ವ್ಯಕ್ತಪಡಿಸಿದರು.

ಆಲ್ದೂರು ವಲಯ ಅರಣ್ಯಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆಯಲು ಹಲವು ಬಾರಿ ಪ್ರಯತ್ನಿಸಿದರೂ ಅವರು ದೂರವಾಣಿ ಕರೆ ಸ್ವೀಕರಿಸಲಿಲ್ಲ. ಒಂದು ಬಾರಿ ಕರೆ ಸ್ವೀಕರಿಸಿದರಾದರೂ ಮಾಹಿತಿ ನೀಡದೆ ಸಂಪರ್ಕ ಕಡಿತಗೊಳಿಸಿದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.