ಮತದಾನ ಜಾಗೃತಿಗೆ ಖಾದಿ ಮೊರೆ

ಜಿಲ್ಲಾ ಸ್ವೀಪ್‌ ಸಮಿತಿಯಿಂದ ವಿನೂತನ ಪ್ರಯತ್ನ

Team Udayavani, Apr 10, 2019, 10:15 AM IST

10-April-2

ರಾಯಚೂರು: ನಗರದ ಶಾಪಿಂಗ್‌ ಮಾಲ್‌ ವೊಂದರಲ್ಲಿ ರಶೀದಿ ಹಿಂದೆ ಮತದಾನ ಜಾಗೃತಿಗಾಗಿ ಹಾಕಿರುವ ಮೊಹರು

ರಾಯಚೂರು: ಜನರಿಗೆ ಕಡ್ಡಾಯ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸಲು ನಾನಾ ಕಾರ್ಯಕ್ರಮ ಹಮ್ಮಿಕೊಂಡಿರುವ ಜಿಲ್ಲಾ ಸ್ವೀಪ್‌ ಸಮಿತಿ ಈ ಬಾರಿ ಖಾದಿ ಮೊರೆ ಹೋಗಿದೆ. ಖಾದಿ ಗ್ರಾಮೋದ್ಯೋಗದಿಂದ 5 ಸಾವಿರ ಕೈ ಚೀಲಗಳನ್ನು ಖರೀದಿಸಿ ಅದರ ಮೇಲೆ ಕಡ್ಡಾಯ ಮತದಾನದ ಮಹತ್ವ ಮುದ್ರಿಸಿ ವಿತರಿಸುವ ಯೋಜನೆ ರೂಪಿಸಿದೆ. ಈಗಾಗಲೇ ಚೀಲಗಳನ್ನು ಖರೀದಿಸಿದ್ದು, ಅದರ ಮೇಲೆ ಮತದಾನ ಜಾಗೃತಿ ಸಂದೇಶ ಮುದ್ರಣ ಕಾರ್ಯ ನಡೆದಿದೆ. ಏ.13ರೊಳಗಾಗಿ ಜಿಲ್ಲೆಯ ಎಲ್ಲೆಡೆ ಹಂಚಿಕೆ ಮಾಡುವ ಉದ್ದೇಶವಿದೆ.

ಈ ಚೀಲಗಳನ್ನು ಬಳಸುವುದರಿಂದ ಪ್ಲಾಸ್ಟಿಕ್‌
ಬಳಕೆಗೆ ಕಡಿವಾಣ ಹಾಕಿದಂತಾಗಲಿದೆ. ಈ ಕಾರಣಕ್ಕೆ ಚೀಲದ ಒಂದು ಕಡೆ ಕಡ್ಡಾಯ ಮತದಾನದ ಜಾಗೃತಿ ಮತ್ತೂಂದೆಡೆ
ಪರಿಸರ ಜಾಗೃತಿ ಮೂಡಿಸುವ ಸಂದೇಶ ಮುದ್ರಿಸಲಾಗುತ್ತಿದೆ ಎನ್ನುತ್ತಾರೆ ಅಧಿ ಕಾರಿಗಳು. ಪ್ರತಿ ತಾಲೂಕಿಗೆ ಒಂದು ಸಾವಿರದಂತೆ ಐದು ಸಾವಿರ ಚೀಲಗಳನ್ನು ವಿತರಿಸಲಾಗುತ್ತಿದೆ. ಎಲ್ಲ ತಾಲೂಕುಗಳಲ್ಲಿ ನಡೆಯುವ ಸಂತೆಗಳಲ್ಲಿ ಈ ಚೀಲಗಳನ್ನು
ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಈಗ ಎಲ್ಲ
ಕಡೆ ಪ್ಲಾಸ್ಟಿಕ್‌ ನಿಷೇಧದ ಧ್ವನಿ ಹೆಚ್ಚಾಗಿದ್ದು, ಬಟ್ಟೆ, ಪೇಪರ್‌ ಚೀಲಗಳು ಲಗ್ಗೆ ಇಡುತ್ತಿವೆ. ಇಂಥ ಹೊತ್ತಲ್ಲಿ ಈ ಖಾದಿ ಚೀಲಗಳು
ಜನರನ್ನು ಆಕರ್ಷಿಸಲಿದೆ ಎಂಬುದು ಅ ಧಿಕಾರಿಗಳ ವಿವರಣೆ. ಈ ಮೂಲಕ ಜಿಲ್ಲಾ ಸ್ವೀಪ್‌ ಸಮಿತಿ ಖಾದಿ ಗ್ರಾಮದ್ಯೋಗಕ್ಕೆ ಉತ್ತೇಜನ,
ಮತದಾನ ಜಾಗೃತಿ ಹಾಗೂ ಪರಿಸರ ಕಾಳಜಿ ತೋರುವ ಜಾಣ್ಮೆ
ನಡೆ ತೋರಿದೆ.

ರಶೀದಿ ಮೇಲೆ ಸೀಲ್‌!: ಅದರ ಜತೆಗೆ ಈಗಾಗಲೇ ಕಡ್ಡಾಯ ಮತದಾನ ಮಹತ್ವ ಸಾರುವ ಮೊಹರು (ಸೀಲ್‌) ತಯಾರಿಸಿ ಲೀಡ್‌ ಬ್ಯಾಂಕ್‌ ಗಳಿಗೆ, ಪ್ರಮುಖ ಶಾಪಿಂಗ್‌ ಮಾಲ್‌ಗ‌ಳಿಗೆ ಸ್ವೀಪ್‌ ಸಮಿತಿ ವಿತರಿಸಿದೆ. 160ಕ್ಕೂ ಅಧಿಕ ಬ್ಯಾಂಕ್‌ಗಳಿದ್ದು, ಆಯಾ ಲೀಡ್‌ ಬ್ಯಾಂಕ್‌ ವ್ಯವಸ್ಥಾಪಕರಿಗೆ ಬೇಡಿಕೆಯನುಸಾರ ಮೊಹರುಗಳನ್ನು ಸರಬರಾಜು ಮಾಡಲಾಗಿದೆ. ಸ್ಲಿಪ್‌ಗ್ಳ ಮೇಲೆ ಬ್ಯಾಂಕ್‌ ಸೀಲ್‌ ಜತೆಗೆ ಕಡ್ಡಾಯ ಮತದಾನದ ಮೊಹರು ಕೂಡ ಹಾಕಿ ಗ್ರಾಹಕರಿಗೆ
ನೀಡಲಾಗುತ್ತಿದೆ. ಅದರ ಜತೆಗೆ ಶಾಪಿಂಗ್‌ ಮಾಲ್‌ಗ‌ಳಿಗೂ ಮೊಹರು ನೀಡಲಾಗಿದೆ. ದೊಡ್ಡ ದೊಡ್ಡ ಮಾಲ್‌ಗ‌ಳಲ್ಲಿ ನಿತ್ಯ ನೂರಾರು ಜನ ಆಗಮಿಸುತ್ತಾರೆ. ಅವರಿಗೆ ನೀಡುವ ರಶೀದಿ ಹಿಂಭಾಗವೇ ಸೀಲ್‌
ಹಾಕಿ ನೀಡಲಾಗುತ್ತಿದೆ. ಕೆಲವರಾದರೂ ಈ ಸಂದೇಶ ಓದುವ ಸಾಧ್ಯತೆಗಳಿದ್ದು, ಪರಿವರ್ತನೆ ಹೊಂದುವ ಸಾಧ್ಯತೆ ಇದೆ ಎನ್ನುವುದು ಸ್ವೀಪ್‌ ಸಮಿತಿ ಅಧಿಕಾರಿಗಳ ಅಭಿಪ್ರಾಯ.

ಈ ಬಾರಿ ಮತದಾನ ಜಾಗೃತಿಗೆ ಸಾಕಷ್ಟು ಕಾರ್ಯಕ್ರಮ ಹಮ್ಮಿಕೊಂಡಿದ್ದು, ಹೊಸ ಪ್ರಯೋಗಗಳನ್ನು ಮಾಡಲಾಗಿದೆ. ಖಾದಿ ಚೀಲಗಳನ್ನು ಖರೀದಿಸಿ ಅದರ ಮೇಲೆ ಮತದಾನ ಮಹತ್ವ ಸಾರುವ ಉದ್ದೇಶ ಹೊಂದಿದ್ದೇವೆ. ಶೀಘ್ರದಲ್ಲೇ ಅದು ಜಾರಿಗೆ ಬರಲಿದೆ. ಪರಿಸರ ರಕ್ಷಣೆ, ಮತದಾನ ಜಾಗೃತಿ ಮತ್ತು ಖಾದಿಗೆ ಉತ್ತೇಜನ ನೀಡುವ ಉದ್ದೇಶವಿದು. ಅದರ ಜತೆಗೆ ಜಿಲ್ಲೆಯ ಎಲ್ಲ ಬ್ಯಾಂಕ್‌, ಕೆಲ ಶಾಪಿಂಗ್‌ ಮಾಲ್‌ ಗಳಿಗೆ ಕಡ್ಡಾಯ ಮತದಾನ ಜಾಗೃತಿ ಸಾರುವ ಮೊಹರು ವಿತರಿಸಲಾಗಿದೆ. ಮತದಾನ ಪ್ರಮಾಣ
ಹೆಚ್ಚಿಸಬೇಕು ಎನ್ನುವುದಷ್ಟೇ ನಮ್ಮ ಉದ್ದೇಶ.
.ಜಯಲಕ್ಷ್ಮೀ ,
ಸಹಾಯಕ ಕಾರ್ಯದರ್ಶಿ,
ಜಿಪಂ ರಾಯಚೂರು

„ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.