ಭಾರತೀಯ ಪರಂಪರೆಗಿದೆ ವೈಶಿಷ್ಟ್ಯ: ವಿಧುಶೇಖರ ಸ್ವಾಮೀಜಿ
Team Udayavani, May 3, 2019, 4:52 PM IST
ಆನಂದಪುರ: ಹೊಸಗುಂದ ದೇವಾಲಯದಲ್ಲಿ ನಡೆದ ಪುನರ್ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಶೃಂಗೇರಿ ಮಠದ ವಿಧುಶೇಖರ ಸ್ವಾಮೀಜಿ ಭಾಗವಹಿಸಿದ್ದರು.
ಆನಂದಪುರ: ಭಾರತೀಯ ಪರಂಪರೆಗೆ ತನ್ನದೇ ಆದ ವೈಶಿಷ್ಟ್ಯವಿದೆ. ಅನಾದಿ ಕಾಲದಿಂದ ಒಂದು ವಿಶಿಷ್ಟ ಸಂಪ್ರದಾಯವನ್ನು ಪರಿಪಾಲನೆ ಮಾಡುವಂತಹ ಪರಂಪರೆ ನಮ್ಮದು ಎಂದು ಶೃಂಗೇರಿಯ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸ್ವಾಮಿಗಳು ನುಡಿದರು.
ಸಮೀಪದ ಹೊಸಗುಂದ ಶ್ರೀ ಉಮಾಮಹೇಶ್ವರ ದೇವಾಲಯದ ಪುನರ್ ಪ್ರತಿಷ್ಠೆ ಹಾಗೂ ಕುಂಬಾಭಿಷೇಕ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಇಲ್ಲಿನ ಹೊಸಗುಂದ ದೇಗುಲ 9ನೇ ಶತಮಾನದ ಅಪರೂಪವಾದ ದೇವಾಲಯವಾಗಿದೆ. ಇಂತಹ ದೇವಾಲಯಗಳ ಜೀರ್ಣೋದ್ಧಾರ ಕಾರ್ಯವಾಗುತ್ತಿರುವುದರಿಂದ ಹಿಂದಿನ ಕೆಳದಿ ಅರಸರ ಆಡಳಿತದಲ್ಲಿ ಇದ್ದಂತಹ ವೈಭವ ಮತ್ತೆ ಕಾಣಲು ಸಾಧ್ಯವಾಗಿದೆ ಎಂದರು.
ಹಿಂದೂಸ್ಥಾನದ ವಿಶಿಷ್ಟ ಪರಂಪರೆಯ ಮೂಲಕ ನಾವು ಪ್ರಪಂಚದ ಎಲ್ಲಾ ದೇಶಗಳಿಗೆ ಉತ್ತಮ ಸಲಹೆಯನ್ನು ನೀಡಬಹುದಾಗಿದೆ. ಆದ್ದರಿಂದ ಪ್ರತಿಯೊಬ್ಬ ಭಕ್ತನು ಪುಣ್ಯದ ಕಾಯಕವನ್ನು ಮಾಡಬೇಕು. ಇದರಿಂದ ನಮ್ಮ ಜೀವನ ಪಾವನವಾಗುತ್ತದೆ. ಮುಂದೆ ಈ ಹೊಸಗುಂದ ನಗರಿಯಲ್ಲಿ ಕೆಳದಿ ಅರಸರ ವೈಭವ ಮರುಕಳಿಸಲಿದೆ ಎಂದರು.
ಸಿಗಂದೂರು ದೇವಾಲಯದ ಧರ್ಮದರ್ಶಿ ಹಾಗೂ ಈ ಕುಂಭ ಮಹೋತ್ಸವದ ಸಮಿತಿಯ ಅಧ್ಯಕ್ಷ ಡಾ| ರಾಮಪ್ಪ ಮಾತನಾಡಿ, ಪಾಳು ಬಿದ್ದ ದೇವಾಲಯಗಳನ್ನು ಒಟ್ಟಾಗಿ ಜೀರ್ಣೋದ್ಧಾರ ಮಾಡಿ ಲೋಕಾರ್ಪಣೆ ಮಾಡುತ್ತಿರುವುದು ಐತಿಹಾಸಿಕ ದಾಖಲೆ ಎಂದರು.
ಸಿ.ಎಂ. ನಾರಾಯಣ ಶಾಸ್ತ್ರಿ, ದೇಹಲಿಯ ಸರ್ವಾನಂದ ಸರಸ್ವತಿಯವರು, ಶೃಂಗೇರಿ ಮಠದ ಆಡಳಿತಾಧಿಕಾರಿ ಗೌರಿಶಂಕರ್, ದೆಹಲಿಯ ರಾಜೇಶ್ ಅಗರವಾಲ್ ಮತ್ತಿತರರು ಇದ್ದರು.
ಕಾರ್ಯಕ್ರಮಕ್ಕೂ ಮೊದಲು ಶೃಂಗೇರಿ ಶ್ರೀಗಳನ್ನು ಸ್ಥಳೀಯ ಸಂಘದ ಮಹಿಳೆಯರು ಸಾವಿರಾರು ಕುಂಭದೊಂದಿಗೆ ಭಾರೀ ವೆರವಣಿಗೆಯ ಮೂಲಕ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್