ಸಮರ್ಪಣಾ ಮನೋಭಾವದಿಂದ ಯಶಸ್ಸು

ಹೊಸಗುಂದ ಉತ್ಸವ ಸಮಾರೋಪಕಾರ್ತಿಕ ದೀಪದಲ್ಲಿ ಮಿನುಗಿದ ಹೊಸಗುಂದ ದೇಗುಲ

Team Udayavani, Nov 20, 2019, 4:05 PM IST

20-November-14

ಆನಂದಪುರ: ಧಾರ್ಮಿಕ ಮತ್ತು ಸಾಂಸ್ಕೃತಿಕ ಉತ್ಸವಗಳು ಸ್ಥಳೀಯವಾಗಿ ಮನಸ್ಸುಗಳನ್ನು ಕಟ್ಟುವ ಕೆಲಸ ಮಾಡುತ್ತವೆ. ಎಲ್ಲಿ ಶ್ರದ್ಧೆ, ನಂಬಿಕೆ, ಭಕ್ತಿ ಹಾಗೂ ಸಮರ್ಪಣಾ ಮನೋಭಾವ ಇರುತ್ತದೆಯೋ ಅಂತಹ ಕಡೆಗಳಲ್ಲಿ ಯಶಸ್ಸು ತಾನಾಗಿಯೇ ಬರುತ್ತದೆ ಎಂದು ಶೃಂಗೇರಿ ದಕ್ಷಿಣಾಮ್ನಾಯ ಶಾರದಾಪೀಠದ ಡಾ| ವಿ.ಆರ್‌. ಗೌರಿಶಂಕರ್‌ ತಿಳಿಸಿದರು.

ಸಮೀಪದ ಹೊಸಗುಂದದಲ್ಲಿ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್‌ ವತಿಯಿಂದ ಆಯೋಜಿಸಿದ್ದ ಮೂರು ದಿನಗಳ ಹೊಸಗುಂದ ಉತ್ಸವದ ಸಮಾರೋಪ ಸಮಾರಂಭದಲ್ಲಿ ಅವರು ಸಮಾರೋಪ ಭಾಷಣ ಮಾಡಿದರು. ಈ ಭಾಗದ ಜನರು ಉತ್ಸವದ ಯಶಸ್ಸಿಗೆ ತಮ್ಮ ಕಾಯಾ, ವಾಚಾ, ಮನಸಾ ತೊಡಗಿಸಿಕೊಂಡಿದ್ದರು. ಇದರಿಂದ ಮೂರು ದಿನಗಳ ಹೊಸಗುಂದ ಉತ್ಸವ ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸು ಕಾಣಲು ಸಾಧ್ಯವಾಯಿತು ಎಂದು ಹೇಳಿದರು.

ಹಂಪಿ ಉತ್ಸವದಂತೆ ಹೊಸಗುಂದ ಉತ್ಸವ ಸಹ ನಡೆಯಬೇಕು ಎನ್ನುವುದು ನಮ್ಮ ಮನದಿಂಗಿತವಾಗಿದೆ. ಇದಕ್ಕೆ ಶ್ರೀ ಪೀಠದ ಎಲ್ಲ ರೀತಿಯ ಸಲಹೆ ಇರುತ್ತದೆ. ಇದೊಂದು ಮಲೆನಾಡಿನ ಪ್ರತಿಷ್ಠಿತ ಉತ್ಸವವಾಗುವ ಜೊತೆಗೆ ಮುಂದಿನ ಪೀಳಿಗೆ ಇದನ್ನು ಮುಂದುವರಿಸಿಕೊಂಡು ಹೋಗುವ ವಾತಾವರಣ ಕಲ್ಪಿಸುವ ಅಗತ್ಯವಿದೆ. ಲಕ್ಷ ದೀಪೋತ್ಸವದಂತಹ ನಮ್ಮ ಪ್ರಾಚೀನ ಸಂಸ್ಕೃತಿಯ ಕಾರ್ಯವನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ಮಾಡಿರುವುದು ಸ್ಮರಣೀಯ ಕಾರ್ಯ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸೇವಾ ಟ್ರಸ್ಟ್‌ನ ಮುಖ್ಯಸ್ಥ ಸಿ.ಎಂ.ಎನ್‌. ಶಾಸ್ತ್ರಿ, ಎಲ್ಲರ ಸಹಕಾರದಿಂದ ಉತ್ಸವ ಯಶಸ್ವಿಯಾಗಿದೆ. ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಉತ್ಸವದಲ್ಲಿ ಪಾಲ್ಗೊಂಡಿರುವುದು ದಾಖಲೆಯಾಗಿದೆ. ಶೃಂಗೇರಿ ಜಗದ್ಗುರುಗಳ ಮಾರ್ಗದರ್ಶನ, ಡಾ| ವಿ.ಆರ್‌. ಗೌರಿಶಂಕರ್‌ ಅವರು ಸ್ಥಳದಲ್ಲಿಯೇ ಮೂರು ದಿನ ಮೊಕ್ಕಾಂ ಮಾಡಿ ಸಲಹೆ ನೀಡಿರುವುದು ಅರ್ಥಪೂರ್ಣವಾಗಿ ಉತ್ಸವ ಜರುಗಲು ಕಾರಣವಾಗಿದೆ. ಅನೇಕ ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡಲಾಗಿದೆ. ಇನ್ನಷ್ಟು ಸ್ಥಳೀಯ ಕಲಾವಿದರಿಗೆ ವೇದಿಕೆ ಕಲ್ಪಿಸಿಕೊಡುವುದು ಹಾಗೂ ಈ ಉತ್ಸವವನ್ನು ಮಲೆನಾಡಿನ ಮನೆಮಾತಾಗಿಸುವ ನಿಟ್ಟಿನಲ್ಲಿ 7ದಿನಗಳ ಹೊಸಗುಂದ ಉತ್ಸವ ಮುಂದಿನ ವರ್ಷ ಆಯೋಜಿಸುವ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು. ನವದೆಹಲಿ ಭಾರತೀಪೀಠಂನ ಶ್ರೀ ಸರ್ವಾನಂದ ಸರಸ್ವತಿ ಸ್ವಾಮೀಜಿ, ನ್ಯಾಯವಾದಿ ಸುಬ್ರಹ್ಮಣ್ಯ ಜೋಯ್ಸ, ತಾಪಂ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಶೋಭಾ ಶಾಸ್ತ್ರಿ ಇದ್ದರು. ಜ್ಯೋತಿ ಕೋವಿ ಸ್ವಾಗತಿಸಿದರು. ಗಿರೀಶ್‌ ಕೋವಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹೇಶ್‌ ಮಂಕಳಲೆ ವಂದಿಸಿದರು. ದೀಪಕ್‌ ಸಾಗರ್‌ ನಿರೂಪಿಸಿದರು.

ನಂತರ ಮೃದಂಗ ಮಾಂತ್ರಿಕ ಆನೂರು ಅನಂತ ಕೃಷ್ಣ ಶರ್ಮ ಮತ್ತು ಸಂಗಡಿಗರಿಂದ ಮೃದಂಗ ವಾದನ, ಶ್ರೀಧರ ಸಾಗರ್‌ ಮತ್ತು ತಂಡದಿಂದ ಸ್ಯಾಕ್ಸೋಫೋನ್‌ ವಾದನ ಹಾಗೂ ಯಕ್ಷಗಾನ ಕಾರ್ಯಕ್ರಮ ನಡೆಯಿತು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.