ಅಂಕೋಲಾ-ಹುಬ್ಬಳ್ಳಿ ರಸ್ತೆ ಬಂದ್ : ನಾಲ್ಕು ದಿನದಿಂದ ಮುಂದಕ್ಕೆ ಹೋಗದ 700 ವಾಹನಗಳು
Team Udayavani, Jul 25, 2021, 7:14 PM IST
ಅಂಕೋಲಾ : ಅಂಕೋಲಾ- ಹುಬ್ಬಳ್ಳಿ ಮಾರ್ಗದ ರಾ.ಹೆ ೬೩ ಅರಬೈಲ್ ಬಳಿ ಕುಸಿತ ಮತ್ತು ಸುಂಕಸಾಳ ಬಳಿ ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿರುವ ಪರಿಣಾಮ ಕಳೆದ ನಾಲ್ಕು ದಿನಗಳಿಂದ 700ಕ್ಕೂ ಹೆಚ್ಚು ಲಾರಿಗಳು ಬಾಳೆಗುಳಿಯಲ್ಲಿ ಬಿಡು ಬಿಟ್ಟಿದೆ.
ಮಂಗಳೂರು, ಕೇರಳಗಳಿಂದ ಸರಕು ತುಂಬಿಕೊಂಡು ಮಹಾರಾಷ್ಟ್ರ, ಆಂದ್ರಪ್ರದೇಶ, ಗುಜರಾತ ಮತ್ತು ಹುಬ್ಬಳ್ಳಿ ಬೆಳಗಾವಿಯತ್ತ ಸಾಗುವ ಲಾರಿಗಳು ಹಟ್ಟಿಕೇರಿಯ ಐಆರ್ಬಿ ಟೋಲ್ಗೇಟನಿಂದ ಅಂಕೋಲಾ ಅಜ್ಜಿಕಟ್ಟಾದವರೆಗೆ ಸುಮಾರು 10 ದೂರದವರೆಗೆ ಸಾಲಾಗಿ ನಿಂತುಕೊಂಡಿವೆ.
ರಸ್ತೆ ಬೇಗನೆ ಸಂಚಾರಕ್ಕೆ ಮುಕ್ತವಾಗದಿದ್ದರೆ ವಾಣಿಜ್ಯೋದ್ಯಮದ ಮೇಲೆ ಭಾರಿ ಪರಿಣಾಮ ಬೀರಲಿದೆ. ಅನಿಲ ಟ್ಯಾಂಟಕರ್ ಗಳು ಹಾಗೂ ಇತರ ವಸ್ತುಗಳ ಲಾರಿಗಳು ನಡುರಸ್ತೆಯಲ್ಲಿ ಸಿಲುಕಿಕೊಂಡಿವೆ. ಮುಂದಿನ ಒಂದು ವಾರವಾದರು ಈ ಹೆದ್ದಾರಿ ಆರಂಭವಾಗುವುದು ಕಷ್ಟಸಾದ್ಯ ಎಂದು ರಾ.ಹೆ ಇಲಾಖೆ ಅಧಿಕಾರಿಗಳು ಹೆಳುತ್ತಿದ್ದಾರೆ.
ಇಲ್ಲಿ ನಿಲ್ಲಿಸಿಟ್ಟ ಲಾರಿಯ ಚಾಲಕ ಮತ್ತು ಕ್ಲೀನರಗಳು ಲಾರಿಯಲ್ಲಿಯೆ ಅಡುಗೆ ಮಾಡಿ ಉಟ ಮಾಡುತ್ತಿದ್ದರೆ ಇನ್ನೂ ಕೆಲವರು ಹೊಟೇಲಗಳಲ್ಲಿ ಉಟ ಮಾಡುತ್ತಿದ್ದಾರೆ. ನಾಲ್ಕು ದಿನಗಳಿಂದ ಲಾರಿ ನಿಲ್ಲಿಸಿಕೊಂಡು ಹೆದ್ದಾರಿ ಮೇಲೆ ವಾಸ್ತವ್ಯ ಮಾಡಿರುವುದರಿಂದ ಒಂದೆರಡು ದಿನಕ್ಕೆ ಆಗುವಷ್ಟು ತಂದಿರುವ ಅಕ್ಕಿ ಬೆಳೆ ಮತ್ತು ಕೈಯಲ್ಲಿರುವ ಹಣವು ಕಾಲಿ ಆಗಿದೆ. ನಾವು ಉಪವಾಸ ಉಳಿಯುವ ಸ್ಥಿತಿ ಬಂದೋದಗಿದೆ. ಎಂದು ಲಾರಿ ಚಾಲಕರು ಹೇಳಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kumta: ರಾಜಕೀಯದಲ್ಲಿ ಧರ್ಮ ಇರಬೇಕು, ಧರ್ಮದಲ್ಲಿ ರಾಜಕೀಯ ಇರಬಾರದು: ಡಿ.ಕೆ.ಶಿವಕುಮಾರ್
ಪಾದುಕೆ ದರ್ಶನ: ಸಂಭ್ರಮ ಹೆಚ್ಚಿಸಿದ ಮಂತ್ರಾಲಯ ಶ್ರೀಗಳ ಸಂಚಾರ
Karnataka Politics: ಜೆಡಿಎಸ್ ಸರ್ವನಾಶ, ಒಡೆದು ಮನೆಯಂತಾದ ಬಿಜೆಪಿ : ಡಿ.ಕೆ ಶಿವಕುಮಾರ್
Google Map: ಪೂರ್ಣಗೊಳ್ಳದ ಸೇತುವೆ… ಗೂಗಲ್ ಮ್ಯಾಪ್ ನಂಬಿ ಪರದಾಡಿದ ವಾಹನ ಸವಾರರು
Sirsi Marikamba: ಗದ್ದುಗೆಯಿಂದ ಎದ್ದು, ಜಾತ್ರಾ ಚಪ್ಪರ ಬಿಟ್ಟು ಹೊರ ನಡೆಯುತ್ತಿರುವ ದೇವಿ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ