ನೀರಿನಲ್ಲಿ ಸಿಲುಕಿದ್ದ 175 ಪ್ರಯಾಣಿಕರ ರಕ್ಷಣೆ

ಮೂರನೇ ದಿನಕ್ಕೆ ಕಾಲಿಟ್ಟ ಮಳೆ•ಗಂಗಾವಳಿಗೆ ಪ್ರವಾಹ: ಮನೆ ಕಳೆದುಕೊಳ್ಳುವ ಭೀತಿಯಲ್ಲಿ ಸಂತ್ರಸ್ತರು

Team Udayavani, Aug 8, 2019, 12:40 PM IST

8–Agust-30

ಅಂಕೋಲಾ: ಹಿಚ್ಕಡ ಕೂರ್ವೇ ಗಂಜಿ ಕೇಂದ್ರದಲ್ಲಿ ಸಂತ್ರಸ್ಥರು.

ಅಂಕೋಲಾ: ತಾಲೂಕಿನಲ್ಲಿ ಸುರಿಯುತ್ತಿರುವ ರಣ ಭೀಕರ ಮಳೆಯಿಂದ ಗಂಗಾವಳಿ ನದಿ ಪ್ರವಾಹಕ್ಕೆ ಸಿಲುಕಿ ಸತತ 48 ಗಂಟೆಯಿಂದ ಹಲವಾರು ಗ್ರಾಮಗಳು ಜಲಾವೃತಗೊಂಡು ನೂರಾರು ಕುಟುಂಬ ಮನೆಗಳನ್ನು ತೊರೆದು ಬೀದಿಗೆ ಬಂದಿವೆ. ಮಳೆಯ ಆರ್ಭಟ, ಗಂಗಾವಳಿ ಪವಾಹ ಮೂರನೇ ದಿನವು ಮುಂದುವರೆದಿದ್ದು ಜನರ ನಿದ್ದೆಗೆಡಿಸುತ್ತಿದೆ.

ಸೋಮವಾರದಿಂದ ಸುರಿಯುತ್ತಿದ್ದ ಮಳೆ ಬುಧವಾರ ಅಲ್ಪಮಟ್ಟಿಗೆ ಕಡಿಮೆ ಆಗಿರುವುದನ್ನು ಕಂಡು ಜನ ಕೊಂಚ ನಿಟ್ಟುಸಿರು ಬಿಡುವ ಸಂದರ್ಭದಲ್ಲಿಯೆ ಸಂಜೆ ನಾಲ್ಕರ ನಂತರ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ಇದರಿಂದ ಗಂಗಾವಳಿ ನದಿ ಪಾತ್ರದ ಜನರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.

ಮನೆ ಕಳೆದು ಕೊಳ್ಳುವ ಭೀತಿ: ಹಿಚ್ಕಡ ದಂಡೆಬಾಗ, ಕೂರ್ವೆ, ಅಗ್ರಗೋಣ ಮೋಟನ ಕೂರ್ವೇ, ವಾಸರಕುದ್ರಿಗೆ ಗ್ರಾ.ಪಂದ ಕೊಡ್ಸಣಿ, ಅಂಭೇರಹಿತ್ಲ, ಮಾವಿನ ಗದ್ದೆ, ಆಂದ್ಲೆ, ಮಾರುಗದ್ದೆ, ಮಕ್ಕಿಗದ್ದೆ, ಹೊನ್ನಳ್ಳಿ, ಅಗಸೂರು, ಡೊಂಗ್ರಿ, ಸುಂಕಸಾಳ, ಹೆಗ್ಗಾರ, ಕಲ್ಲೇಶ್ವರಗಳಂತಹ 18 ಹೆಚ್ಚು ಗ್ರಾಮಗಳು ಸಂಪೂರ್ಣ ಜಲಾವೃತವಾಗಿದೆ.

ಈ ಗ್ರಾಮದಲ್ಲಿ 48 ಗಂಟೆಗು ಅಧಿಕ ಕಾಲ ಅಲ್ಲಿಯ ಮನೆಗಳಲ್ಲಿ ನೀರು ನಿಂತು ಮನೆಗಳು ಬೀಳುವ ಹಂತ ತಲುಪಿವೆ. ಇದರಿಂದಾಗಿ ನೂರಾರು ಬಡ ಕುಟುಂಬಗಳುಸೂರು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ.

ರಕ್ಷಣೆಗೆ ಧಾವಿಸಿದ ಪೊಲೀಸ್‌ ತಂಡ: ಇಲ್ಲಿಯ ಸುಂಕಸಾಳ ಬಳಿ ರಾ.ಹೆ 63ರಲ್ಲಿ ಸುಮಾರು 135 ಪ್ರಯಾಣಿಕರು ಸೋಮವಾರ ಸಂಜೆ ಸಿಲುಕಿದ್ದರು. ಅವರು ಸಿಲುಕಿಕೊಂಡ ಬಳಿ ನೀರಿನ ಮಟ್ಟ ಏರುತ್ತಿದ್ದು ರಸ್ತೆಯ ಎರಡು ಬದಿ ನೀರು ತುಂಬಿಕೊಂಡಿತ್ತು. ಮಧ್ಯದಲ್ಲಿರುವ ಪ್ರಯಾಣಿಕರು ದಿಕ್ಕು ತೋಚದೆ ರಕ್ಷಣೆಗೆ ಅಂಗಲಾಚುತ್ತಿದ್ದರು. ಮಂಗಳವಾರ ರಾತ್ರಿ 9 ರಿಂದ ಸಿಪಿಐ ಪ್ರಮೋದಕುಮಾರ ಮತ್ತು ಪಿಎಸ್‌ಐ ಶ್ರೀಧರ ತಂಡ ದೋಣಿಗಳ ಮೂಲಕ ಸತತ 10 ಗಂಟೆ ಸತತ ಕಾರ್ಯಾಚರಣೆ ನಡೆಸಿ ನೀರಿನ ಮಧ್ಯ ಸಿಲುಕಿದವರನ್ನು ರಕ್ಷಿಸಿದ್ದಾರೆ. ಬುಧವಾರ ಕೋಸ್ಟ್‌ ಗಾರ್ಡ್‌ ತಂಡದಿಂದ 40 ಪ್ರಯಾಣಿಕರ ರಕ್ಷಣೆ ಮಾಡಲಾಗಿದೆ.

ಸಂತ್ರಸ್ತರ ಹಸಿವು ನೀಗಿಸಿದ ಅಧಿಕಾರಿಗಳು: ಸುಂಕಸಾಳ ಹೆದ್ದಾರಿಯಲ್ಲಿ ಸಿಲುಕಿಕೊಂಡ ಪ್ರಯಾಣಿಕರನ್ನು ರಕ್ಷಣೆ ಮಾಡಿಕೊಂಡು ನಸುಕಿನ 6 ಗಂಟೆ ವೇಳೆಗೆ ನಂ.1 ಶಾಲೆ ಗಂಜಿ ಕೇಂದ್ರಕ್ಕೆ ಕರೆತಂದಾಗ ಅಧಿಕಾರಿಗಳ ತಂಡ ಅವರಿಗೆ ಊಟದ ವ್ಯವಸ್ಥೆ ಮಾಡಿ ಅವರ ಹಸಿವನ್ನು ನೀಗಿಸಿದರು.

ಸಹಾಯಕ ಆಯುಕ್ತೆ ಪ್ರೀತಿ ಗೆಹ್ಲೋಟ್, ತಹಶೀಲ್ದಾರ್‌ ಅಶೋಕ ಗುರಾಣಿ, ಬಿಇಒ ಶ್ಯಾಮಲಾ ನಾಯಕ, ಅಕ್ಷರ ದಾಸೋಹದ ಚಂದ್ರಹಾಸ ರಾಯ್ಕರ, ಸಾಕ್ಷರತಾ ಸಂಯೋಜಕ ರಪೀಕ್‌ ಶೇಖ, ಎನ್‌.ವಿ. ನಾಯ್ಕ, ಗಣಪತಿ ನಾಯ್ಕ, ಸಿಆರ್‌ಪಿ ವಿಜಯಲಕ್ಷ್ಮಿ ನಾಯಕ, ಬಿಸಿಯೂಟ ಸಿಬ್ಬಂದಿ ರಾತ್ರಿ ಸಮಯದಲ್ಲೂ ಸಂತ್ರಸ್ತರಿಗೆ ಊಟದ ವ್ಯವಸ್ಥೆ ಮಾಡಿದ್ದಾರೆ.

ಸಾವಿರಾರು ಎಕರೆ ಬೆಳೆ ನಾಶ: ರೈತ ಸಾಲ ಮಾಡಿ ಬೆಳೆದ ಭತ್ತ ಗಂಗಾವಳಿ ಪ್ರವಾಹಕ್ಕೆ ಕೊಚ್ಚಿ ಹೋಗಿದೆ. ಬಾಳೆ, ಅಡಕೆ, ತೆಂಗು, ಕಾಳುಮೆಣಸು ಬೆಳೆದ ತೋಟಗಳಲ್ಲಿಯು ನೆರೆ ಬಂದ ಕಾರಣ ಅವು ನೀರಿನ ರಭಸಕ್ಕೆ ಕೊಚ್ಚಿ ಹೋಗಿವೆ. ತಾಲೂಕಿನಲ್ಲಿ ಸಾವಿರಾರು ಎಕರೆ ಕೃಷಿ ಭೂಮಿ ಜಲಾವೃತವಾಗಿದ್ದು ಸಾಲ ಮಾಡಿ ಬೆಳೆ ಬೆಳೆದ ರೈತ ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾನೆ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

6-

Bhatkal Theft: ನಗರ, ಗ್ರಾಮೀಣ ಪ್ರದೇಶದ ಹಲವೆಡೆ ಮುಂಜಾನೆ ಸರಣಿ ಕಳ್ಳತನ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.