ಮುಸ್ಲಿಂ ನಾಯಕರ ಬೆಳವಣಿಗೆ ಬಯಸದ ಕಾಂಗ್ರೆಸ್‌ : ಅಸಾದುದ್ದೀನ್‌ ಓವೈಸಿ 


Team Udayavani, Aug 31, 2021, 1:30 PM IST

hjyhy

ಬೆಳಗಾವಿ: ಮುಸ್ಲಿಂ ನಾಯಕರು ಬೆಳೆಯಬಾರದು ಅಂತ ಕಾಂಗ್ರೆಸ್‌ ಬಯಸುತ್ತಿದೆ. ಭಾರತದ ಪ್ರಜಾಪ್ರಭುತ್ವದಲ್ಲಿ ಮುಸ್ಲಿಂರಿಗೆ ಅಧಿಕಾರದ ಹಕ್ಕು ಸಿಗಬೇಕು. ಅದಕ್ಕಾಗಿ ಚುನಾವಣೆ ಎದುರಿಸಿ ಗೆಲ್ಲಬೇಕು ಎಂದು ಎಐಎಂಐಎಂ ಮುಖಂಡ ಅಸಾದುದ್ದೀನ್‌ ಓವೈಸಿ ಹೇಳಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಸಂಸತ್‌ನಲ್ಲಿ ಬಹಳಷ್ಟು ಕಾನೂನುಗಳಿಗೆ ಕಾಂಗ್ರೆಸ್‌ ಬೆಂಬಲಿಸುತ್ತದೆ. ಬಿಜೆಪಿಗೆ ಪ್ರತಿಯೊಂದು ಕಾನೂನು ರಚಿಸಲು ಕಾಂಗ್ರೆಸ್‌ ಪರೋಕ್ಷವಾಗಿ ಸಾಥ್‌ ಕೊಡುತ್ತಿದೆ. ಸಂಸತ್‌ನಲ್ಲಿ ಅನೇಕ ಸಲ ವಿರೋಧಿಸಿದ್ದೇನೆ. ಧ್ವನಿ ಎತ್ತುವುದು ಪ್ರಜಾಪ್ರಭುತ್ವದ ಹಕ್ಕಿದೆ. ಬೆಲೆ ಏರಿಕೆ ಬಗ್ಗೆ ಯಾರೂ ಮಾತನಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಸ್ಲಿಂರು ರಾಜಕೀಯ ಹಕ್ಕು ಪಡೆದಾಗ ದೇಶ ಶಕ್ತಿಶಾಲಿಯಾಗಲಿದೆ. ದೇಶದಲ್ಲಿ ಮುಸ್ಲಿಂ ನಾಯಕರು ಯಾರಿದ್ದಾರೆ ಹೇಳಲಿ, ನಾನಂತೂ ಗಲ್ಲಿ ಲೀಡರ್‌. ನಾನು ಬೇಡ, ನನ್ನ ಬಿಟ್ಟು ಬೇರೆ ಯಾರು ಇದ್ದಾರೆ ಹೇಳಲಿ. ಮುಸ್ಲಿಂರನ್ನು ಹೊರತು ಪಡಿಸಿ ಎಲ್ಲ ಜಾತಿಯ ನಾಯಕರು ಇದ್ದಾರೆ. ಸಿದ್ದರಾಮಯ್ಯ ಕುರುಬ, ಯಡಿಯೂರಪ್ಪ ಲಿಂಗಾಯತ, ಡಿ.ಕೆ. ಶಿಕುಮಾರ ಒಕ್ಕಲಿಗ ಸಮುದಾಯದ ನಾಯಕರು ಇದ್ದಾರೆ. ಯಾಕೆ ಮುಸ್ಲಿಂ ಸಮುದಾಯದವರು ಇಲ್ಲ ಎಂದರು.

ಅಜಮ್‌ ಖಾನ್‌ ಆದಷ್ಟು ಬೇಗ ಬಿಡುಗಡೆ ಆಗಲಿ. ಅವರ ಎಲ್ಲಾ ಸಂಕಷ್ಟಗಳು ಬೇಗ ಪರಿಹಾರವಾಗಲಿ. ದೇಶದಲ್ಲಿ ಮುಸ್ಲಿಂರ ಪರಿಸ್ಥಿತಿ ಬ್ಯಾಂಡ್‌ ಬಾಜಾ ಅವರಂತೆ ಆಗಿದೆ. ಮದುಮಗ ಒಳಗೆ ಹೋಗುವವರೆಗೆ ಬ್ಯಾಂಡ್‌ ಬಾಜಾದವರು ಬರುತ್ತಾರೆ. ಮದುಮಗ ಒಳಗೆ ಹೋದರೆ ಬ್ಯಾಂಡ್‌ ಬಾಜಾದವರು ಹೊರಗೆ ಸೆ„ಡ್‌ನ‌ಲ್ಲಿ ಉಳಿದು ಬಿಡುತ್ತಾರೆ ಎಂದರು.

ನನ್ನ ಮೇಲೆ, ನಮ್ಮ ಪಕ್ಷದ ಮೇಲೆ ನಂಬಿಕೆ ಇಟ್ಟು ಮತ ಹಾಕಬೇಕು. ಬೆಳಗಾವಿ ಪಾಲಿಕೆ ಗೆಲ್ಲುವುದೇ ನಮ್ಮ ರಣತಂತ್ರ ಜನರ ವಿಶ್ವಾಸ, ಪ್ರೀತಿ ಗಳಿಸುವುದಾಗಿದೆ. ತಳಮಟ್ಟದಲ್ಲಿ ಪಕ್ಷ ಗಟ್ಟಿ ಮಾಡುವುದೇ ನಮ್ಮ ಅಜೆಂಡಾ ಇದೆ ಎಂದರು.

ಜೆಡಿಎಸ್‌ ಜತೆಗೆ ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದೇವು. ಹೀಗಾಗಿ ನಾವು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿಲ್ಲ. ಜೆಡಿಎಸ್‌-ಕಾಂಗ್ರೆಸ್‌ ಜತೆಗೆ ಹೊಂದಾಣಿಕೆ ಮಾಡಿಕೊಂಡು ತಪ್ಪು ಮಾಡಿದ್ದು, ಆನಂತರ ನಮಗೆ ಮನವರಿಕೆ ಆಯಿತು. ಆಗ ಕುಮಾರಸ್ವಾಮಿ ನನಗೆ ಕರೆ ಮಾಡಿ ಪ್ರಮಾಣ ವಚನಕ್ಕೆ ಬರಲು ಆಹ್ವಾನಿಸಿದ್ದರು. ನೀವು ಬಹಳ ದೊಡ್ಡ ತಪ್ಪು ಮಾಡಿದ್ದೀರಿ ಅಂತ ಆಗಲೇ ತಿರುಗೇಟು ನೀಡಿದ್ದೇನೆ. ಹೀಗಾಗಿಯೇ ನಾವು ಪಾಲಿಕೆಯಲ್ಲಿ ಜೆಡಿಎಸ್‌ ಜತೆಗೆ ಹೊಂದಾಣಿಕೆ ಮಾಡಿಕೊಂಡಿಲ್ಲ ಎಂದರು.

ಒವೈಸಿ ಬಿಜೆಪಿಯ ಬಿ ಟೀಮ್‌ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಓವೈಸಿ, ರಾಹುಲ್‌ ಗಾಂಧಿಯನ್ನು ಅಮೇಥಿ ಕ್ಷೇತ್ರದಲ್ಲಿ ನಾನೇ ಸೋಲಿಸಿದೆ. ಆ ಬಳಿಕ ರಾಹುಲ್‌ ಗಾಂಧಿ ವೈನಾಡಿನಲ್ಲಿ ಗೆದ್ದರು. ಕಾಂಗ್ರೆಸ್‌ನ ಶಾಸಕರು ಹೋಗಿ ಬಿಜೆಪಿ ತೊಡೆ ಮೇಲೆ ಕುಳಿತರೆ ಇದಕ್ಕೂ ನಾನೇ ಕಾರಣನಾ ಎಂದು ಪ್ರಶ್ನಿಸಿದರು. ಅಫ್ಘಾನಿಸ್ತಾನ ತಾಲಿಬಾನ್‌ ವಶವಾಗಿರುವ ಬಗ್ಗೆ ಪ್ರತಿಕ್ರಿಯಿಸಿದ ಓವೈಸಿ, ನನಗೂ ಅಫ್ಘಾನಿಸ್ತಾನಕ್ಕೆ ಸಂಬಂಧವೇ ಇಲ್ಲ. ಅಫ್ಘಾನಿಸ್ತಾನದಲ್ಲಿ ಏನಾಗುತ್ತಿದೆ ಎನ್ನುವುದನ್ನು ಮೋದಿಯವರನ್ನು ಕೇಳಿ ಎಂದರು.

ಟಾಪ್ ನ್ಯೂಸ್

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Udupi: ರಾಜ್ಯದಲ್ಲಿ ಕಾಂಗ್ರೆಸ್ 20 ಸ್ಥಾನ ಗೆಲ್ಲುವುದು ಖಚಿತ – ಡಾ. ಆರತಿ ಕೃಷ್ಣ

Delhi Liquor Scam: ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Delhi Liquor Scam:ತಿಹಾರ್‌ ಜೈಲಿನೊಳಗೆ ಬಿಆರ್‌ ಎಸ್‌ ನಾಯಕಿ ಕವಿತಾಳನ್ನು ಬಂಧಿಸಿದ ಸಿಬಿಐ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Liquor Policy Case: ಅರವಿಂದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಕೆಲಸದಿಂದ ವಜಾ

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

Arvind Kejriwal: ಜಾಮೀನಿಗಾಗಿ ಮತ್ತೆ ಸುಪ್ರೀಂಕೋರ್ಟ್‌ ಕದತಟ್ಟಿದ ಕೇಜ್ರಿವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.