ಗ್ರಾಪಂ ದುರಾಡಳಿತಕ್ಕೆ ಆಕ್ರೋಶ

ಜನರಿಗೆ ತಲುಪದ ಸರ್ಕಾರದ ಯೋಜನೆ ಸೌಲಭ್ಯದಿಂದ ವಂಚಿತರಾದ ಗ್ರಾಮಸ್ಥರು

Team Udayavani, Nov 13, 2019, 2:56 PM IST

13-November-14

ಔರಾದ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತವರು ಕ್ಷೇತ್ರವಾಗಿರುವ ತಾಲೂಕಿನ ಎಕಂಬಾ ಗ್ರಾಮ ಪಂಚಾಯತ ದುರಾಡಳಿತ ನಡೆಸುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಸೋಮವಾರ ಬೀದಿಗಿಳಿದು ಪ್ರತಿಭಟಿಸಿದರು.

ತಾಲೂಕಿನ ಎಕಂಬಾ ಗ್ರಾಮ ಪಂಚಾಯತಿ ಜನಸಾಮಾನ್ಯರಿಗೆ ಸುವ್ಯವಸ್ಥಿತ ಆಡಳಿತ ನೀಡದ ಹಿನ್ನೆಲೆ ಮಹಿಳೆಯರು, ಯುವಕರು ಸೇರಿದಂತೆ ಸಂಘ-ಸಂಸ್ಥೆಯ ಪದಾಧಿಕಾರಿಗಳು ಔರಾದ-ಉದಗೀರ್‌ ರಸ್ತೆ ತಡೆದು ಪ್ರತಿಭಟಿಸಿದ ಹಿನ್ನೆಲೆಯಲ್ಲಿ ಭಂಡಾರ ಕುಮಟಾ, ಲಿಂಗಿ, ಡೊಂಗರಗಾಂವ, ದಾಪಕಾ, ಸಾವರಗಾಂವ, ಬಾದಲಗಾಂವ ಸೇರಿದಂತೆ ಹಲವು ಗ್ರಾಮದ ಜನರಿಗೆ ತಾಲೂಕು ಕೇಂದ್ರ ಔರಾದ್‌ಗೆ ತೆರಳಲು ಕೆಲ ಕಾಲ ಸಮಸ್ಯೆ ಎದುರಾಯಿತು.

ಈ ವೇಳೆ ಸಂಭಾಜಿ ಬ್ರಿಗೇಡ್‌ ಅಧ್ಯಕ್ಷ ಸತೀಶ ವಾಸರೆ ಮಾತನಾಡಿ, ದೇಶದ ಅಭಿವೃದ್ಧಿಯಲ್ಲಿ ಗ್ರಾಮೀಣ ಪ್ರದೇಶಗಳ ಕೊಡುಗೆ ಹೆಚ್ಚಿನದಾಗಿದ್ದರೂ ಅವುಗಳು ಅಭಿವೃದ್ಧಿಯಿಂದ ವಂಚಿತವಾಗುತ್ತಿರುವುದು ದುರಾದೃಷ್ಟಕರ ಸಂಗತಿ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆಂದು ಹತ್ತು ಹಲವು ಯೋಜನೆಗಳನ್ನು ರೂಪಿಸಿದರೂ ಸಂಬಂಧಿತ ಅಧಿಕಾರಿಗಳ, ಜನಪ್ರತಿನಿಧಿ ಗಳ ನಿರ್ಲಕ್ಷ್ಯದಿಂದ ಅನೇಕ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗದೆ ವಿಫಲವಾಗುತ್ತಿವೆ ಎಂದು ಆರೋಪಿಸಿದರು.

ಎಕಂಬಾ ಪಂಚಾಯತಿಯಲ್ಲಿಯೂ ಲಂಚ ಮತ್ತು ಭ್ರಷ್ಟಾಚಾರ ರಾಜಾರೋಷವಾಗಿ ನಡೆಯುತ್ತಿದೆ. ಸೂರಿಲ್ಲದೇ ಕೂಲಿ ನಾಲಿ ಕೆಲಸ ಮಾಡುವ ಬಡವರು, ನಿರ್ಗತಿಕರಿಗೆ ವಿವಿಧ ವಸತಿ ಯೋಜನೆಗಳಡಿ ಮನೆ ಕೊಡಿಸುವುದಾಗಿ ಹೇಳಿ ಅವರಿಂದ ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರು ಸೇರಿ 15ರಿಂದ 20 ಸಾವಿರ ವರೆಗೆ ಲಂಚ ಪಡೆದ ಅನೇಕ ನಿದರ್ಶನಗಳು ಕಾಣಸಿಗುತ್ತವೆ ಎಂದು ದೂರಿದರು.

ಅದಾಗ್ಯೂ ಇಲ್ಲಿವರೆಗೆ ಮನೆಯೂ ಇಲ್ಲ, ಹಣವು ಇಲ್ಲ. ಅಲ್ಲದೇ 14ನೇ ಹಣಕಾಸು ಯೋಜನೆಯಡಿ ಗ್ರಾಪಂಗೆ ಅಂದಾಜು 40 ಲಕ್ಷ ರೂ. ಹಣ ಬಿಡುಗಡೆಯಾದರೂ ಯಾವುದೇ ಅಭಿವೃದ್ಧಿಪರ ಕೆಲಸ ಕಾರ್ಯಗಳನ್ನು ಮಾಡದೆ ಗ್ರಾಪಂ ಅಧ್ಯಕ್ಷರಾದಿಯಾಗಿ ಎಲ್ಲರೂ ಹಣವನ್ನು ಕೊಳ್ಳೆ ಹೊಡೆಯಲು ಯತ್ನಿಸುತ್ತಿದ್ದಾರೆ. ಸತತ ಮೂರು ವರ್ಷಗಳಿಂದ ಗ್ರಾಮಸಭೆಗಳನ್ನು ಮಾಡದೆ ಕೇವಲ ದಾಖಲೆಗೆ ಸೀಮಿತವೆಂಬಂತೆ ಕೆಲಸ ಮಾಡುತ್ತಿರುವುದು ಜನರ ಆಕ್ರೋಶ ಹೆಚ್ಚಾಗಲು ಕಾರಣವಾಗಿದೆ. ಜನರ ಅವಶ್ಯಕತೆಗಳ ಪರಿವೆಯೇ ಇಲ್ಲದಂತೆ ಆಡಳಿತ ನಡೆಸುತ್ತಿರುವ ಗ್ರಾಪಂ ಅವ್ಯವಸ್ಥೆ ಸರಿಪಡಿಸುವಂತೆ ಬ್ರಿಗೇಡ್‌ ಕಾರ್ಯಕರ್ತರು ಆಗ್ರಹಿಸಿದರು.

ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಎಂ. ಚಂದ್ರಶೇಖರ್‌ ಮತ್ತು ತಾಪಂ ಇಒ ಶಿವಾನಂದ ಔರಾದೆ ಪ್ರತಿಭಟನಾಕಾರರಿಂದ ಮನವಿ ಪತ್ರ ಸ್ವೀಕರಿಸಿ, ಎಕಂಬಾ ಗ್ರಾಮ ಪಂಚಾಯತ ಆಡಳಿತದ ವಿಚಾರವಾಗಿ ಕುಲಂಕಶವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು. ಪ್ರಮುಖರಾದ ಅಂಕುಶ ವಾಡಿಕರ್‌, ಗೋವಿಂದ ಪಾಟೀಲ, ದತ್ತಾ ಪಾಟೀಲ, ಸಂತೋಷ ಬಿರಾದಾರ, ಅಮೀತ ಹಂಗರಗೆ, ಜ್ಞಾನೇಶ್ವರ ಪೋಲಕೆವಾರ್‌, ಭಗವಂತ ಘೋರವಾಡೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.