ಸಮಸ್ಯೆಗಳ ಆಗರವಾದ ವಸತಿ ನಿಲಯ

ವಾರ್ಡನ್‌ ಮೋಜು-ಮಸ್ತಿ•ಜಿಪಂ ಅಧ್ಯಕ್ಷರಿಗೆ ಪತ್ರ ಬರೆದು ಸಮಸ್ಯೆ ತೋಡಿಕೊಂಡ ವಿದ್ಯಾರ್ಥಿನಿಯರು

Team Udayavani, Aug 19, 2019, 10:24 AM IST

19-Agust-5

ಔರಾದ: ಪಟ್ಟಣದ ಅಲ್ಪ ಸಂಖ್ಯಾತರ ವಸತಿ ನಿಲಯಕ್ಕೆ ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ ಭೇಟಿ ನೀಡಿ ವಿದ್ಯಾರ್ಥಿನಿಯರ ಸಮಸ್ಯೆ ಆಲಿಸಿದರು.

ಔರಾದ: ಪಟ್ಟಣದ ಅಲ್ಪ ಸಂಖ್ಯಾತರ ವಸತಿ ನಿಲಯದಲ್ಲಿನ ಸಮಸ್ಯೆಗಳ ಕುರಿತು ಅಲ್ಲಿನ 30 ವಿದ್ಯಾರ್ಥಿನಿಯರು ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ ಅವರಿಗೆ ಪತ್ರ ಬರೆದ ಹಿನ್ನೆಲೆಯಲ್ಲಿ ಜಿಪಂ ಅಧ್ಯಕ್ಷರು ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿನಿಯರ ಸಮಸ್ಯೆ ಆಲಿಸಿದರು.

ವಸತಿ ನಿಲಯದ ವಾರ್ಡನ್‌ ಕಚೇರಿಯಲ್ಲಿ ನಿತ್ಯ ತಡರಾತ್ರಿಯಲ್ಲಿ ಪಾರ್ಟಿ ಹಾಗೂ ಮೋಜು ಮಸ್ತಿ ನಡೆಯುತ್ತಿದೆ. ಇದರಿಂದ ನಮಗೆ ಹಲವು ತೊಂದರೆಯಾಗುತ್ತಿವೆ. ಹೆಣ್ಣು ಮಕ್ಕಳ ವಸತಿನಿಲಯಕ್ಕೆ ಯುವಕರು ಬರಬಾರದೆಂದು ನಿಯಮ ಇದ್ದರೂ ದಿನ ರಾತ್ರಿಯಲ್ಲಿ ಯಾವಾಗಲೂ ಇಲ್ಲಿಗೆ ಯುವಕರರು ಬರುತ್ತಿದ್ದಾರೆ. ದಯವಿಟ್ಟು ಪತ್ರ ತಲುಪಿದ ತಕ್ಷಣ ನಮ್ಮ ರಕ್ಷಣೆ ಧಾವಿಸಬೇಕು ಎಂದು ವಿದ್ಯಾರ್ಥಿನಿಯರು ಪತ್ರದಲ್ಲಿ ವಿವರಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಪಂ ಅಧ್ಯಕ್ಷೆ ಗೀತಾ ಚಿದ್ರಿ ಅವರು ಭೇಟಿ ನೀಡಿ ವಸತಿ ನಿಲಯದಲ್ಲಿನ ಸಮಸ್ಯೆಗಳನ್ನು ಆಲಿಸಿ, ವಿದ್ಯಾರ್ಥಿನಿಯರ ಜೊತೆಗೆ ಪ್ರತ್ಯೇಕವಾಗಿ ಮಾತನಾಡಿ ಧೈರ್ಯ ತುಂಬಿದರು.

ವಿದ್ಯಾರ್ಥಿನಿಯರಿಗಷ್ಟೆ ಅಲ್ಲ ವಸತಿ ನಿಲಯದಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಗಳಿಗೂ ವಾರ್ಡನ್‌ ಕಿರುಕುಳ ನೀಡುತ್ತಿದ್ದಾರೆ. ಅಲ್ಲದೆ ಪ್ರತಿನಿತ್ಯ ತಮ್ಮ ವೈಯಕ್ತಿಕ ಕೆಲಸಗಳನ್ನು ಮಾಡುವಂತೆ ಹೇಳುತ್ತಾರೆ. ಮಾತು ಕೇಳದಿದ್ದರೆ ಹೊಡೆಯಲು ಬರುತ್ತಾರೆ ಎಂದು ವಸತಿ ನಿಲಯದ ಸಿಬ್ಬಂದಿಯೊಬ್ಬರು ಅಳುತ್ತ ಅಳಲು ತೋಡಿಕೊಂಡರು.

ಗ್ರಾಮೀಣ ಭಾಗದಲ್ಲಿ ಹೆಣ್ಣು ಮಕ್ಕಳನ್ನು ಪಾಲಕರು ಕಾಲೇಜು ಶಿಕ್ಷಣಕ್ಕೆ ಕಳಿಸುವುದಿಲ್ಲ. ಆದರೆ ನಮ್ಮ ಪಾಲಕರು ನಮ್ಮ ಮೇಲೆ ನಂಬಿಕೆ ಇಟ್ಟು ಶಿಕ್ಷಣಕ್ಕೆ ಕಳಿಸಿದ್ದಾರೆ. ಆದರೆ ಇಲ್ಲಿ ಸಮಸ್ಯೆಗಳಿದ್ದು, ಸೌರ್ಯಗಳೂ ನಮ್ಮಿಂದ ದೂರವಾಗಿವೆ. ಸರ್ಕಾರದ ನಿಯಮದಂತೆ ಸೌಕರ್ಯ ನೀಡಿ ಅಂದರೆ ವಸತಿ ನಿಲಯದಿಂದ ಹೊರಗೆ ಹಾಕುತ್ತಾರೆ ಎಂದು ಜಿಪಂ ಅಧ್ಯಕ್ಷರು ಹಾಗೂ ಜಿಪಂ ಸಿಇಒ ಮುಂದೆ ವಿದ್ಯಾರ್ಥಿ ನಿಯರು ದೂರಿದರು.

ಅಧಿಕಾರಿಗಳ ತರಾಟೆ: ವಸತಿ ನಿಲಯದಲ್ಲಿನ ದುಸ್ಥಿತಿ ಹಾಗೂ ವಾರ್ಡನ್‌ ಮಾಡುತ್ತಿರುವ ಅನಾಚಾರಗಳನ್ನು ಆಲಿಸುವ ಮನಸ್ಸು ನಿಮಗೆ ಯಾಕೆ ಇಲ್ಲದಂತಾಗಿದೆ. ಸರ್ಕಾರ ನಿಮಗೆ ವೇತನ ಕೋಡುತ್ತಿರುವುದು ವಿದ್ಯಾರ್ಥಿಗಳನ್ನು ಪಾಲಕರಂತೆ ಪಾಲನೆ ಪೋಷಣೆ ಮಾಡಲು ಹೊರತು ತಮ್ಮ ಮನಬಂದತೆ ಕೆಲಸ ಮಾಡಿಸಿಕೊಳ್ಳಲು ಅಲ್ಲ ಎಂದು ಜಿಲ್ಲಾ ಅಲ್ಪಸಂಖ್ಯಾತ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿಯಲ್ಲಿ ತರಾಟೆಗೆ ತೆಗೆದುಕೊಂಡರು. ಪಟ್ಟಣದ ಜನರು ಹಾಗೂ ವಸತಿ ನಿಲಯದ ವಿದ್ಯಾರ್ಥಿಗಳು ಈ ಬಗ್ಗೆ ನಿಮ್ಮ ಗಮನಕ್ಕೆ ತಂದರೂ ಯಾಕೆ ಕಣ್ಣಿದ್ದೂ ಕುರುಡರಂತೆ ಕುಳಿತಿದ್ದೀರಿ ಎಂದು ಜಿಪಂ ಅಧ್ಯಕ್ಷರು ವಾಗ್ಧಾಳಿ ನಡೆಸಿದರು.

ಸ್ಥಳಕ್ಕೆ ಬಂದ ಜಿಪಂ ಸಿಇಒ: ವಸತಿ ನಿಲಯ ಸ್ಥಿತಿಗತಿಯ ಬಗ್ಗೆ ಜಿಪಂ ಅಧ್ಯಕ್ಷರು ಸಿಇಒ ಮಹಾಂತೇ ಬೀಳಗಿ ಅವರಿಗೆ ತಿಳಿಸಿದ ಕೂಡಲೆ ಸ್ಥಳಕ್ಕೆ ಬಂದು ವಿದ್ಯಾರ್ಥಿನಿಯರಿಂದ ಸಮಸ್ಯೆ ಆಲಿಸಿ, ಸಿಬ್ಬಂದಿಗಳೊಂದಿಗೂ ಮಾತನಾಡಿದರು. ಬಳಿಕ ವಾರ್ಡನ್‌ರನ್ನು ಕೂಡಲೆ ಬೇರೆ ಕಡೆಗೆ ಕಳುಹಿಸಿ ಕಠಿಣ ಕ್ರಮ ಜರುಗಿಸಲಾಗುತ್ತದೆ. ನಿಮ್ಮೊಂದಿಗೆ ಜಿಲ್ಲಾಡಳಿತವಿದೆ. ಇಂಥ ಸಮಸ್ಯೆಗಳನ್ನು ಇನ್ನು ಮುಂದೆ ಬಾರದಂತೆ ನಾವು ನೋಡಿಕೊಳ್ಳುತ್ತೇವೆ. ಉತ್ತಮ ಶಿಕ್ಷಣ ಪಡೆದುಕೊಂಡು ಸರ್ಕಾರಕ್ಕೆ ಮತ್ತು ವಸತಿ ನಿಲಯಕ್ಕೂ ಗೌರವ ತಂದುವಕೊಡುವಂತೆ ಜಿಪಂ ಸಿಇಒ ಮಹಾಂತೇಶ ಭರವಸೆ ನೀಡಿದರು. ಅಲ್ಪಸಂಖ್ಯಾತರ ತಾಲೂಕು ಅಧಿಕಾರಿ ಹಾಗೂ ವಸತಿ ನಿಲಯ ವಾರ್ಡನ್‌ ಮೀನಾಕ್ಷಿ ಎಂಬುವವರೇ ಆಗಿದ್ದಾರೆ. ಹೀಗಾಗಿ ಸಮಸ್ಯೆಗೆ ಜಾಸ್ತಿಯಾಗುತ್ತಿದೆ. ಹಲವು ವರ್ಷಗಳಿಂದ ಇದೇ ರೀತಿ ನಡೆಯುತ್ತಿದೆ ಎಂದು ಇಲಾಖೆಯಲ್ಲಿ ನಡೆದ ಪ್ರತಿಯೊಂದು ಕೆಲಸಗಳ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸಿ ವಾರ್ಡನ್‌ರನ್ನು ಸೇವೆಯಿಂದ ಅಮಾನತುಗೊಳಿಸುವಂತೆ ಜಿಪಂ ಅಧ್ಯಕ್ಷರು ಸಿಇಒಗೆ ತಿಳಿಸಿದರು.

ಎಬಿವಿಪಿ ಮುಖಂಡರ ವಿರುದ್ಧ ಗರಂ: ವಸತಿ ನಿಲಯಕ್ಕೆ ಜಿಪಂ ಸಿಇಒ ಹಾಗೂ ಜಿಪಂ ಅಧ್ಯಕ್ಷರು ಬಂದ ಬಳಿಕ, ಎಬಿವಿಪಿ ಪ್ರಮುಖ ಅಂಬಾದಾಶ ನೆಳಗೆ ಅಲ್ಪಸಂಖ್ಯಾತರ ನಿಲಯಕ್ಕೆ ಬಂದು, ಇಲ್ಲಿ ಸಮಸ್ಯೆಯಿದೆ ಬಗೆ ಹರಿಸಿಕೊಡಿ ಎಂದು ಮನವಿ ಮಾಡಿಕೊಂಡರು. ಆಗ ಜಿಪಂ ಅಧ್ಯಕ್ಷರು, ಅವರ ಕಷ್ಟಕ್ಕೆ ಬಾರದಿರುವ ಸಂಘಟನೆಯ ಮುಖಂಡರನ್ನು ನಾನು ಗುರುತಿಸಲ್ಲ ಎಂದು ಎಬಿವಿಪಿ ಪ್ರಮುಖರ ವಿರುದ್ಧ ಗರಂ ಆದರು.

ವಾರ್ಡನ್‌ ಗೈರು: ವಸತಿ ನಿಲಯದ ವಾರ್ಡನ್‌ ಆಗಿರುವ ಮೀನಾಕ್ಷಿ ಅವರು, ಜಿಪಂ ಅಧ್ಯಕ್ಷರು ಹಾಗೂ ಜಿಪಂ ಸಿಇಒ ಮತ್ತು ಔರಾದ ಸಿಪಿಐ ರಮೇಶ ಕುಮಾರ ಮೈಲುರಕರ್‌ ಬಂದಾಗ ಹಾಜರಿರಲಿಲ್ಲ.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.