ನೀರಾವರಿ ಕಚೇರಿ ಸ್ಥಳಾಂತರವಾಗಲಿ

•ಜಿಲ್ಲಾ ಕೇಂದ್ರದಲ್ಲೇ ಉಳಿದ ಕಚೇರಿ •ಇಲಾಖೆ ಸೌಲಭ್ಯಗಳಿಂದ ವಂಚಿತರಾದ ಜನ-ರೈತರು

Team Udayavani, Sep 16, 2019, 12:23 PM IST

Sepctember-8

ಔರಾದ: ಪಟ್ಟಣದಲ್ಲಿರುವ ಸಣ್ಣ ನೀರಾವರಿ ಇಲಾಖೆಯ ಸಿಬ್ಬಂದಿಯ ವಸತಿ ಗೃಹ.

ರವೀಂದ್ರ ಮುಕ್ತೇದಾರ
ಔರಾದ:
ಔರಾದ ಪಟ್ಟಣ ತಾಲೂಕು ಕೇಂದ್ರವಾಗಿ ದಶಕಗಳು ಕಳೆದರೂ ತಾಲೂಕು ಕೇಂದ್ರದಲ್ಲಿ ಸಣ್ಣ ನೀರಾವರಿ ಇಲಾಖೆಯ ಕಚೇರಿ ಇಲ್ಲದೇ ತಾಲೂಕಿನ ಜನರು ಇಲಾಖೆಯ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ.

ಸರ್ಕಾರ ಗ್ರಾಮೀಣ ಭಾಗದ ರೈತರಿಗೆ ನೀರಾವರಿ ಸೌಲಭ್ಯ ಹೆಚ್ಚಿಸುವ ಉದ್ದೇಶದಿಂದ ತಾಲೂಕಿನಲ್ಲಿ 33 ಕೆರೆಗಳನ್ನು ನಿರ್ಮಾಣ ಮಾಡಿದೆ. ಅವುಗಳ ನಿರ್ವಹಣೆ ಜವಾಬ್ದಾರಿ ಹೊಂದಿರುವ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಬೀದರ ಜಿಲ್ಲಾ ಕೇಂದ್ರದಲ್ಲಿ ಉಳಿದುಕೊಂಡಿದ್ದಾರೆ. ಇದರಿಂದ ತಾಲೂಕಿನ ಕೆರೆಗಳ ನಿರ್ವಹಣೆ ಕೊರತೆ ಉಂಟಾಗಿದ್ದು, ಕೆರೆಯ ನೀರು ಕಾಲುವೆ ಮೂಲಕ ರೈತರ ಹೊಲಗಳಿಗೆ ಹೋಗದೇ ಉಳಿದುಕೊಳ್ಳುತ್ತಿದೆ.

ಗಡಿ ತಾಲೂಕಿನ ರೈತರು ಸಂಪೂರ್ಣವಾಗಿ ಮಳೆಯ ಮೇಲೆ ಅವಲಂಬನೆಯಾಗಿರುವುದರಿಂದ ಸರ್ಕಾರ ತಾಲೂಕಿನ ಬೆಳಕುನಿ, ತೇಗಂಪೂರ, ಕೊರೆಕಲ್, ಕಮಲನಗರ, ಹಕ್ಯಾಳ, ರಂಡ್ಯಾಳ, ಎಕಂಬಾ, ಬಾವಲಗಾಂವ, ಅಕನಾಪೂರ, ಬಾವಲಗಾಂವ ಸೇರಿದಂತೆ ತಾಲೂಕಿನ 33 ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಕೆರೆ ನಿರ್ಮಾಣ ಮಾಡಿದೆ. ಅವುಗಳ ನಿರ್ವಹಣೆ ಕೊರತೆಯಿಂದ ರೈತರ ಹೊಲಕ್ಕೆ ಕಾಲುವೆಯ ಮೂಲಕ ನೀರು ಬರುತ್ತಿಲ್ಲ. ಕಾಲುವೆಗಳಲ್ಲಿ ಹುಲ್ಲು ಬೆಳೆದು, ಕೆಲವೆಡೆ ಕಾಲುವೆಗಳು ಒಡೆದು ಹಾಳಾಗಿವೆ. ಇದರಿಂದ ರೈತರು ಕಚೇರಿಗೆ ಅಲೆಯುತ್ತಿದ್ದಾರೆ.

ತಾಲೂಕಿನಲ್ಲಿ ಇಲಾಖೆಯಿಂದ ನಿರ್ಮಾಣ ಮಾಡಿದ ಕೆರೆಗಳ ಪೈಕಿ ಒಂದು ಕೆರೆಯ ಕಾಲುವೆಯಿಂದ ರೈತರ ಹೊಲಕ್ಕೆ ನೀರು ಬರುತ್ತಿಲ್ಲ ಎಂಬುದನ್ನು ತಿಳಿಸಲು ಸಹ ಜಿಲ್ಲಾ ಕೇಂದ್ರಕ್ಕೆ ಹೋಗಬೇಕು. ಅಲ್ಲದೇ ತಮ್ಮ ನಿತ್ಯದ ಇನ್ನಿತರ ಕೆಲಸಗಳನ್ನು ಬಿಟ್ಟು ಹೋದರೂ ಕೂಡ ಸಕಾಲಕ್ಕೆ ಕೆಲಸಗಳಾಗದೇ ರೈತರು ಬರಿ ಕೈಯಲ್ಲಿ ವಾಪಸ್‌ ಬರುವಂತಾಗಿದೆ.

ಸಣ್ಣ ನೀರಾವರಿ ಇಲಾಖೆಯ ಕಚೇರಿ 1995ರ ತನಕ ಔರಾದ ತಾಲೂಕು ಕೇಂದ್ರದಲ್ಲಿಯೇ ಇತ್ತು. ಕೆಲಸ ಕಡಿಮೆಯಾಗಿದೆ ಎನ್ನುವ ಉದ್ದೇಶದಿಂದ ಕಚೇರಿಯನ್ನು ಬೀದರ ಜಿಲ್ಲಾ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ ಎನ್ನುವುದು ಇಲಾಖೆಯ ಹಿರಿಯ ಅಧಿಕಾರಿಗಳ ಮಾತು. ಹಿಗಾಗಿಯೇ ಸಣ್ಣ ನೀರಾವರಿ ಇಲಾಖೆಯ ಕಟ್ಟಡ ಹಾಗೂ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಸಿಬ್ಬಂದಿಗಳ 22 ವಸತಿ ನಿಲಯಗಳು ಇಂದಿಗೂ ಪಟ್ಟಣದಲ್ಲಿಯೇ ಇವೆ. ಇಲಾಖೆಯ ವಸತಿ ನಿಲಯದಲ್ಲಿ ಇತರ ಇಲಾಖೆಯ ಸಿಬ್ಬಂದಿ ವಾಸವಾಗಿದ್ದಾರೆ.

ಔರಾದ ಮತ್ತು ಸಂತಪೂರ ತಾಲೂಕು ಹೋರಾಟ ಸಮಿತಿ ಸದಸ್ಯರು ಹಾಗೂ ಈ ಭಾಗದ ಜನಪ್ರತಿನಿಧಿಗಳು ಹಾಗೂ ಸಚಿವರು ಸೇರಿ ಜಿಲ್ಲಾ ಕೇಂದ್ರದಲ್ಲಿರುವ ಸಣ್ಣ ನೀರಾವರಿ ಇಲಾಖೆಯ ಕಚೇರಿಯನ್ನು ತಾಲೂಕು ಕೇಂದ್ರಕ್ಕೆ ಸ್ಥಳಾಂತರ ಮಾಡಿ ರೈತರಿಗೆ ಅನುಕೂಲ ಮಾಡಬೇಕೆಂಬುದು ರೈತರ ಮಾತು.

ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಸಣ್ಣ ನಿರಾವರಿ ಇಲಾಖೆ ಕಚೇರಿಯನ್ನು ಔರಾದ ತಾಲೂಕಿಗೆ ಸ್ಥಳಾಂತರ ಮಾಡುವಂತೆ ಎರಡು ದಿನಗಳಲ್ಲಿ ಆದೇಶ ಮಾಡುತ್ತೇನೆ. ಇದರಿಂದ ನಮ್ಮ ತಾಲೂಕಿನ ಜನರಿಗೆ ಇಲಾಖೆಯ ಸೌಕರ್ಯಗಳು ಸಿಗುವುದರ ಜೊತೆಗೆ ಕೆರೆ ನಿರ್ವಹಣೆಯೂ ಸಕಾಲಕ್ಕೆ ಆಗುತ್ತದೆ.
ಪ್ರಭು ಚವ್ಹಾಣ,
 ಪಶುಸಂಗೋಪನೆ ಸಚಿವ

ತಾಲೂಕು ಕೇಂದ್ರದಲ್ಲಿ ಈ ಹಿಂದೆ ಇದ್ದ ಕಚೇರಿಯನ್ನು ತಾಲೂಕಿಗೆ ತರುವುದರ ಜೊತೆಗೆ ನೀರಾವರಿ ಇಲಾಖೆಗೆ ಹೆಚ್ಚು ಒತ್ತು ನೀಡಲು ಸಚಿವರು ಹಾಗೂ ಸರ್ಕಾರ ಮುಂದಾಗಬೇಕು. ಆಗ ಗಡಿ ತಾಲೂಕಿನ ಜನರು ನೀರಾವರಿ ಬೆಳೆಗಳ ಮೊರೆ ಹೋಗಿ ಆರ್ಥಿಕವಾಗಿ ಸದೃಡವಾಗುತ್ತಾರೆ.
ಗೋವಿಂದ ಇಂಗಳೆ,
 ಪ್ರಗತಿಪರ ರೈತ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.