ಜನಪದ ಸಂಸ್ಕೃತಿ ಸಂರಕ್ಷಣೆಯಾಗಲಿ

ಮೊಬೈಲ್‌ ಬಿಟ್ಟು ಜನಪದದತ್ತ ಮುಖ ಮಾಡಿ ಸಾಮಾಜಿಕ ಜಾಲತಾಣ ದಾಸ್ಯದಿಂದ ಸಮಯ ವ್ಯರ್ಥ

Team Udayavani, Dec 9, 2019, 4:09 PM IST

December-16

ಔರಾದ: ದೇಶದ ಮೂಲ ಸಂಸ್ಕೃತಿ ಉಳಿಯಬೇಕಾದರೆ ಜನಪದ ಕಲೆಯನ್ನು, ಜಾನಪದ ಸಾಹಿತ್ಯವನ್ನು ಸಂರಕ್ಷಿಸಿ ಬೆಳೆಸುವ ಕಾರ್ಯ ನಡೆಯಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಕರೆ ನೀಡಿದರು.

ಪಟ್ಟಣದ ಎಂ.ಐ. ಪ್ರಾಂಗಣದಲ್ಲಿ ರವಿವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿದ್ದ ಜನಪರ ಉತ್ಸವ ಕಾರ್ಯಕ್ರಮವನ್ನು ಕುಟ್ಟುವ ಮತ್ತು ಬೀಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಶ್ರೀಮಂತ ಸಂಸ್ಕೃತಿ ದಿನನಿತ್ಯದ ಬದುಕಿನಲ್ಲಿ ಬಳಸಬೇಕು ಎಂದು ಹೇಳಿದರು.

ಮೊಬೈಲ್‌ ಬಳಕೆಗೆ ಬಲಿಯಾಗುತ್ತಿರುವ ಯುವ ಜನಾಂಗ ಜನಪದ ಕಲೆಯತ್ತ ಮುಖ ಮಾಡಬೇಕಿದೆ. ದಿನವಿಡಿ ಸಾಮಾಜಿಕ ಜಾಲತಾಣಗಳ ದಾಸ್ಯಕ್ಕೆ ಬಲಿಯಾಗಿ ಜೀವನದಲ್ಲಿ ಎಂದಿಗೂ ಮರಳದಿರುವ ಸಮಯವನ್ನು ವ್ಯರ್ಥ ಮಾಡಿಕೊಳ್ಳುತ್ತಿರುವುದು ದುರಾದೃಷ್ಟ ಎಂದು ಬೇಸರ ವ್ಯಕ್ತಪಡಿಸಿದರು.

ಸಂತ, ಮಹಾತ್ಮ, ಶರಣ, ದಾಸರ ಪರಂಪರೆಯಿಂದ ಪ್ರಭಾವಿತವಾದ ನಮ್ಮ ನಾಡು ಇಡಿ ದೇಶದಲ್ಲಿಯೇ ವಿಭಿನ್ನ ಮತ್ತು ವಿಶೇಷ ಸಂಸ್ಕೃತಿ ಹೊಂದಿದ್ದು, ಕನ್ನಡದ ಸಂಸ್ಕೃತಿ ಸ್ವಾಭಿಮಾನದಿ ಮಾನವೀಯತೆ ಮೆರೆದ ಸಂಸ್ಕೃತಿಯ ತವರೂರು. ಇದನ್ನು ಯಾವತ್ತೂ ಅಳಿಸದಂತೆ ಕನ್ನಡ ತಾಯಿ ಭುವನೇಶ್ವರಿಯ ಸೇವೆ ಅತ್ಯಂತ ಪ್ರಾಮಾಣಿಕವಾಗಿ ನಡೆಯಬೇಕಿದೆ ಎಂದು ಹೇಳಿದರು.

ಜಿಪಂ ಅಧ್ಯಕ್ಷೆ ಗೀತಾ ಪಂಡಿತರಾವ್‌ ಚಿದ್ರಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಡಿ ತಾಲೂಕು ಔರಾದನಲ್ಲಿ ಜನಪದ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಕಾಣಸಿಗುತ್ತಾರೆ. ಅದೆಷ್ಟೋ ವಯಸ್ಸಾದ ಹಿರಿಯ ಜನಪದ ಕಲಾವಿದರು, ಜಾನಪದ ಹಾಡುಗಾರ್ತಿಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಸಮಸ್ಯೆ ಅನುಭವಿಸುತ್ತಿದ್ದು, ಅವರಿಗೆ ನೆರವು ನೀಡಬೇಕಿದೆ ಎಂದರು.

ಸ್ವಾಸ್ಥ್ಯ ಕಳೆದುಕೊಳ್ಳದೆ ಇಳಿ ವಯಸ್ಸಿನಲ್ಲಿಯೂ ಕೂಡ ತೋರುವ ಸಾಹಸ ಕಲೆಯನ್ನು ಹಣದ ಮೌಲ್ಯದಿಂದ ಅಳಿಯದೇ ನಮ್ಮ ಸಂಸ್ಕೃತಿಯ ಪ್ರತೀಕವಾಗಿ ಕಾಣಬೇಕಿದೆ. ಹೆಚ್ಚಿನ ಕಲಾವಿದರು ಇರುವ ಔರಾದ ಕಲಾವಿದರಿಗೆ ಮಾಸಾಶನ ವ್ಯವಸ್ಥೆಯನ್ನು ಸರಿಯಾಗಿ ಮಾಡಬೇಕಿದೆ ಎಂದು ಸಲಹೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ರಾಮ ಸಿಂಧೆ ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕಲಾವಿದರು ಹಲವು ಬಗೆಯ ಕಲೆಯನ್ನು ಪ್ರದರ್ಶಿಸಿದರು. ವೇದಿಕೆಯ ಮೇಲೆ ಕಸಾಪ ಅಧ್ಯಕ್ಷ ಜಗನ್ನಾಥ ಮೂಲಗೆ, ಜಾನಪದ ಅಕಾಡೆಮಿಯ ಮಾಜಿ ಸದಸ್ಯ ವಿಜಯಕುಮಾರ ಸೋನಾರೆ ಪ್ರಮುಖರಾದ ಸುರೇಶ ಭೋಸ್ಲೆ, ಮಾಣಿಕ ಚವ್ಹಾಣ, ಬಂಡೆಪ್ಪ ಕಂಟೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.