ಚವ್ಹಾಣ ಅನಾಥ ಮಕ್ಕಳ ಪ್ರಭು

15 ಹೆಣ್ಮಕ್ಕಳಿಗೆ ಹೊಸ ಬಾಳು•ಇಬ್ಬರಿಗೆ ಮದುವೆ ಮಾಡಿಸಿದ ಕೀರ್ತಿ

Team Udayavani, Aug 22, 2019, 11:03 AM IST

22-Agust-7

ಔರಾದ: ಮನೆ ಮನೆಗೆ ತೆರಳಿ ಕನ್ನಡ ಪುಸ್ತಕ ವಿತರಿಸಿದ್ದ ಪ್ರಭು ಚವ್ಹಾಣ. (ಸಂಗ್ರಹ ಚಿತ್ರ)

ರವೀಂದ್ರ ಮುಕ್ತೇದಾರ
ಔರಾದ
: ಹೈದರಾಬಾದ ಕರ್ನಾಟಕದ ಪ್ರದೇಶದಲ್ಲಿ ಏಕೈಕ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಪ್ರಭು ಚವ್ಹಾಣ ಅನಾಥವಾಗಿದ್ದ ತಾಲೂಕಿನ ಹದಿನೈದು ಹೆಣ್ಣು ಮಕ್ಕಳಿಗೆ ಹೊಸ ಬಾಳು ದೊರೆಸಿಕೊಟ್ಟು ಕರುಣಾಮಯಿಯಾಗಿದ್ದಾರೆ.

ತಂದೆ ತಾಯಿ ಕಳೆದುಕೊಂಡು ರಸ್ತೆಯಲ್ಲಿ ಅಲೆಯುತ್ತಿದ್ದ ತಾಲೂಕಿನ ಹದಿನೈದು ಮಕ್ಕಳನ್ನು ಪಾಲನೆ ಪೋಷಣೆ ಹಾಗೂ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟಿದ್ದಾರೆ. ಕಾಳಗಾಪುರದ ಅಶ್ವಿ‌ನಿ ಹಾಗೂ ಇನ್ನೊಬ್ಬ ಹೆಣ್ಣು ಮಗಳ ಮದುವೆ ಮಾಡಿದ್ದಾರೆ. ಇದಷ್ಟೇ ಅಲ್ಲದೇ ತವರು ಮನೆಯಿಂದ ಮದುವೆ ಸಮಾರಂಭದಲ್ಲಿ ಉಡುಗೆ ಸಹ ನೀಡಿ ಪಾಲಕರ ಜವಾಬ್ದಾರಿ ನಿಭಾಯಿಸಿದ್ದಾರೆ. ಅದರಂತೆ ಇನ್ನುಳಿದ ಹದಿಮೂರು ಮಕ್ಕಳಿಗೆ ಕಾರ್ಯಕರ್ತರ ಮೂಲಕ ಶಿಕ್ಷಣ ಹಾಗೂ ಪ್ರತಿನಿತ್ಯದ ಮನೆ ಖರ್ಚು ಮತ್ತು ಅಗತ್ಯ ಸಾಮಗ್ರಿ ಪೂರೈಸಿದ್ದಾರೆ ಪ್ರಭು ಚವ್ಹಾಣ. ನಾಗರ ಪಂಚಮಿ, ದಸರಾ ಮತ್ತು ದೀಪಾವಳಿ ಹಬ್ಬದಲ್ಲಿ ಮಕ್ಕಳನ್ನು ತಮ್ಮ ಮನೆಗೆ ಕರೆತಂದು ಅಥವಾ ಅವರು ಇರುವ ಸ್ಥಳಕ್ಕೆ ಹಬ್ಬದ ಬಟ್ಟೆ ಮತ್ತು ಸಿಹಿ ಕಳುಹಿಸಿ ಕೊಟ್ಟಿದ್ದಾರೆ.

ಅನ್ಯ ಭಾಷಿಕರು ಹೆಚ್ಚಾಗಿ ವಾಸವಾಗಿರುವ ಗಡಿ ತಾಲೂಕಿನಲ್ಲಿ ಸಚಿವ ಪ್ರಭು ಚವ್ಹಾಣ ಕನ್ನಡದ ಕಲರವ ಮೂಡಿಸುವುದರ ಜತೆಗೆ ತಾವೂ ಕನ್ನಡ ಕಲಿತು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿರುವುದು ವಿಶೇಷ.

ಕನ್ನಡಕ್ಕೆ ಬೆಂಬಲ: ತಾಲೂಕಿನಲ್ಲಿ ಮರಾಠಿ, ಉರ್ದು ಮತ್ತು ತೆಲುಗು ಭಾಷಿಕರು ಹೆಚ್ಚಾಗಿದ್ದಾರೆ. ಈ ಭಾಗದಲ್ಲಿ ಹಂತ ಹಂತವಾಗಿ ಕನ್ನಡ ಭಾಷೆಗೆ ಜೀವ ಬರದೊಡಗಿದೆ. ಆದರೂ ಇಂದಿಗೂ ವ್ಯಾಪಾರ ಮತ್ತು ವ್ಯವಹಾರವೆಲ್ಲ ಮೋಡಿ ಮತ್ತು ಮರಾಠಿ ಭಾಷೆಗಳಲ್ಲಿಯೇ ನಡೆಯುತ್ತದೆ. ಮರಾಠಿ ಹಾಗೂ ಉರ್ದು ಭಾಷಿಕರು ಹೆಚ್ಚಾಗಿರುವ ಗಡಿ ತಾಲೂಕಿನಲ್ಲಿ ನಡೆಯುವ ಪ್ರತಿಯೊಂದು ಕನ್ನಡ ಕಾರ್ಯಕ್ರಮಗಳಿಗೆ ಬೆನ್ನೆಲುಬಾಗಿ ನಿಂತು ಕನ್ನಡ ಭಾಷೆ ಬೆಳವಣಿಗೆಗೆ ಸದಾ ಶ್ರಮಿಸುತ್ತಿದ್ದಾರೆ. ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಂದು ಕನ್ನಡದ ವಿವಿಧ ಸಾಹಿತಿಗಳ ಐದು ಸಾವಿರ ಪುಸ್ತಕಗಳನ್ನು ಮನೆ ಮನೆಗೆ ತೆರಳಿ ಹಂಚಿದ್ದಾರೆ. ಮರಾಠಿ ಭಾಷಿಕರ ಮಧ್ಯೆ ಬೆಳೆದು ಕನ್ನಡ ಮಾತಾಡಲು ಬಾರದೆ ಇರುವುದರಿಂದ ಹಲವು ಸಮಸ್ಯೆ ಅನುಭವಿಸಿ ಕನ್ನಡ ಭಾಷೆ ಕಲಿಯುವುದನ್ನೇ ಸವಾಲಾಗಿ ತೆಗೆದುಕೊಂಡ ಚವ್ಹಾಣ, ದಿನಗಳು ಕಳೆದಂತೆ ಕನ್ನಡ ಭಾಷೆ ಕಲಿತಿದ್ದಾರೆ.

ಹಿಂದಿನ ಶಾಸಕರಿಗಿಂತ ಮಾದರಿ ಕಾರ್ಯ: ಪ್ರಭು ಚವ್ಹಾಣ ತಮಗಿಂತ ಮೊದಲು ಅಧಿಕಾರ ನಡೆಸಿದ ಶಾಸಕರಿಗಿಂತಲೂ ಮಾದರಿ ಎನ್ನುವಂತೆ ಪ್ರತಿ ವರ್ಷ ಗ್ರಾಮ ಸಂಚಾರ ಎನ್ನುವ ಕಾರ್ಯಕ್ರಮದ ಮೂಲಕ ತಾಲೂಕಿನ ಪ್ರತಿಯೊಂದು ಗ್ರಾಮಕ್ಕು ತೆರಳಿ ಜನರ ಸಮಸ್ಯೆ ಆಲಿಸಿ ಬಗೆಹರಿಸುವ ಕೆಲಸ ಮಾಡಿದ್ದಾರೆ. ಹೀಗಾಗಿ ಸರ್ಕಾರಿ ಕಚೇರಿ ಕೆಲಸಕ್ಕೆ ತಾಲೂಕು ಕೇಂದ್ರ ಸ್ಥಾನಕ್ಕೆ ಬರುವ ಜನರ ಸಂಖ್ಯೆ ಕಡಿಮೆಯಾಗಿದೆ.

ಪ್ರಸಾದಕ್ಕೆ ಸಹಕಾರ: ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ನಡೆಯುವ ಪ್ರವಚನ ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಕ್ಕೆ ದೇವರ ಮಂದಿರದಲ್ಲಿ ನಡೆಯುವ ಪ್ರಸಾದಕ್ಕೆ ಅಗತ್ಯ ಸಹಕಾರ ನೀಡುವ ಮೂಲಕ ತಾಲೂಕಿನ ಜನರಿಗೆ ಅತಿ ವೇಗವಾಗಿ ಪರಿಚಯವಾಗಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.