ಔರಾದಲ್ಲಿ ಇನ್ನೂ ಟ್ಯಾಂಕರ್‌ ನೀರೇ ಗತಿ

ತಾಲೂಕಿನಲ್ಲಿ ವಾಡಿಕೆ ಮುಂಗಾರು ಮಳೆ ಕೊರತೆ ಬಹುತೇಕ ಕಡೆ ಅತಿವೃಷ್ಟಿ ಇದ್ದರೆ ಇಲ್ಲಿ ಕೆರೆ-ಬಾವಿಗಳಿನ್ನೂ ಖಾಲಿ ಖಾಲಿ

Team Udayavani, Aug 11, 2019, 10:27 AM IST

11-Agust-5

ಔರಾದ: ಪಟ್ಟಣದ ಜನತೆಗೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವ ಪಟ್ಟಣ ಪಂಚಾಯತ್‌ ವಾಹನ.

•ರವೀಂದ್ರ ಮುಕ್ತೇದಾರ
ಔರಾದ:
ನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಜನರ ಜೀವನ ಅಸ್ತವ್ಯಸ್ತವಾಗಿದ್ದರೆ ಔರಾದ ಹಾಗೂ ಕಮಲನಗರ‌ ತಾಲೂಕಿನಲ್ಲಿ ಮಾತ್ರ ವಾಡಿಕೆ ಮಳೆ ಇಲ್ಲದೇ ಮಳೆಗಾಲದಲ್ಲೂ ಜನರು ಟ್ಯಾಂಕರ್‌ ನೀರನ್ನು ಅವಲಂಬಿಸಿ ಬದುಕು ಸಾಗಿಸಬೇಕಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನಿರಂತರ ಮಳೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದರಿಂದ ಆ ಭಾಗದ ಜಲಮೂಲಗಳು ತುಂಬಿ ಅಪಾಯದ ಅಂಚಿನಲ್ಲಿವೆ. ಔರಾದ ತಾಲೂಕಿನ 11 ಗ್ರಾಮಗಳಿಗೆ ಹಾಗೂ ತಾಲೂಕು ಕೇಂದ್ರಲ್ಲಿ ಮಳೆ ಬಾರದಿರುವುದರಿಂದ ಕಂದಾಯ ಇಲಾಖೆ ಅಧಿಕಾರಿಗಳು ಬಡಾವಣೆಗಳಿಗೆ ನಿತ್ಯ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ. ಹಾಗಾಗಿ ಗಡಿ ತಾಲೂಕಿನ ಜನರಿಗೆ ನೀರಿನ ಸಮಸ್ಯೆ ತಪ್ಪಿಲ್ಲ.

ಮಳೆಗಾಲ ಆರಂಭವಾಗಿ ಮೂರು ತಿಂಗಳು ಕಳೆಯುತ್ತಿದ್ದರೂ ತಾಲೂಕಿನ ಜಲಮೂಲಗಳಿಗೆ ನೀರು ಹರಿದು ಬಂದಿಲ್ಲ. ಒಂದೇ ಒಂದು ಕೆರೆ, ಬಾವಿಗೆ ನೀರು ಬಂದಿಲ್ಲ. ಹೀಗಾಗಿಯೇ ಜನರು ಮಳೆಗಾಲದಲ್ಲೂ ಕುಡಿಯುವ ನೀರಿಗಾಗಿ ಪರದಾಡುವ ಸ್ಥಿತಿ ಇದೆ.

ಪ್ರಸಕ್ತ ಸಾಲಿನಲ್ಲಿ ತಾಲೂಕಿನಲ್ಲಿ ಸುರಿದ ಮಳೆಯಿಂದ ಬೆಳೆಗಳಿಗೆ ಅನುಕೂಲವಾಗಿದೆ. ಆದರೆ ಜನ, ಜಾನುವಾರುಗಳಿಗೆ ಮಾತ್ರ ಕುಡಿಯುವ ನೀರಿಲ್ಲದಾಗಿದ್ದು, ಈ ವರ್ಷವೂ ಮಳೆಗಾಲ ಹೀಗಾದರೆ ಮುಂದೆ ಹೇಗೆ ಎಂಬುದು ಜನರ ಮಾತು.

ಪೂಜೆಗೆ ಸಿಗಲಿಲ್ಲ ಫಲ: ಪ್ರಸಕ್ತ ಸಾಲಿನಲ್ಲಿ ತಾಲೂಕಿನಲ್ಲಿ ವಾಡಿಕೆಯಂತೆ ಮುಂಗಾರು ಮಳೆ ಬಂದಿಲ್ಲ ಎಂದು ಗಡಿ ಗ್ರಾಮದಲ್ಲಿ ಬಹತೇಕ ಜನರು ದೇವರಿಗೆ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರೂ ಕೂಡ ಫಲ ಸಿಕ್ಕಿಲ್ಲ. ಹಿಗಾಗಿಯೇ ಜಲಮೂಲಗಳು ಖಾಲಿಯಾಗೇ ಉಳಿದಿದ್ದು, ಈ ಭಾಗದ ಜನರು ಕುಡಿಯುವ ನೀರಿಗಾಗಿ ಟ್ಯಾಂಕರ್‌ ಅವಲಂಬಿಸಬೇಕಾಗಿದೆ. ತಾಲೂಕಿನ ಹನ್ನೊಂದು ಗ್ರಾಮಗಳಲ್ಲಿ ಏಳು ಟ್ಯಾಂಕರ್‌ನಿಂದ ಪ್ರತಿನಿತ್ಯ ಮೂವತ್ತೂಂದು ಟ್ರಿಪ್‌ ನೀರು ಸರಬರಾಜು ಮಾಡಲಾಗುತ್ತಿದೆ.

ಶೆಂಬೆಳ್ಳಿ, ಕಮಲನಗರ, ದಾಬಕಾ, ಅಕನಾಪೂರ್‌, ಕಿಶನನಾಯಕ್‌ ತಾಂಡಾ, ಹೋಳಸಮುದ್ರ, ವಡಗಾಂವ(ಡಿ), ವಡನಬಾಗ್‌, ವಡಗಾಂವ ತಾಂಡ, ಹಸಿಕೆರಿ, ಗೌಡಗಾಂವ ಗ್ರಾಮದ ವ್ಯಾಪ್ತಿಯ ಕಿಶನ ನಾಯಕ್‌ ಮತ್ತು ಭವಾನಿ ನಗರ ತಾಂಡಾದಲ್ಲಿ ಟ್ಯಾಂಕರ್‌ ನೀರು ಸರಬರಾಜು ಮಾಡಲಾಗುತ್ತಿದೆ. ಔರಾದ ಪಟ್ಟಣದಲ್ಲಿ ಪ್ರತಿನಿತ್ಯ ಏಳು ಟ್ಯಾಂಕರ್‌ನಿಂದ ಮೂರು ಟ್ರೀಪ್‌ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ತಾಲೂಕಿನ ಜನರು ಮೂರು ವರ್ಷಗಳಿಂದ ಭೀಕರ ಬರದಲ್ಲಿ ಕಷ್ಟದ ಜೀವನ ಸಾಗಿಸುತ್ತಿದ್ದು, ಈ ವರ್ಷವಾದರೂ ತಾಲೂಕಿನಲ್ಲಿ ಉತ್ತಮ ಮಳೆ ಬಂದು ಒಳ್ಳೆಯ ಜೀವನ ನಡೆಸಬಹುದು ಅಂದುಕೊಂಡಿದ್ದರೆ, ಮಳೆಯಿಲ್ಲದೆ ನೀರಿಗಾಗಿ ಪರದಾಡುವ ಸ್ಥಿತಿ ಬಂದಿದೆ.

ಮೂರು ವರ್ಷಗಳಿಂದ ಭೀಕರ ಬರದಲ್ಲಿ ಜೀವನ ಸಾಗಿಸಿದ್ದೇವೆ. ಈ ವರ್ಷವಾದರೂ ಉತ್ತಮ ಜೀವನ ಕಾಣಬಹುದು ಅಂದುಕೊಂಡಿದ್ದೆವು. ಆದರೆ ಈ ವರ್ಷವೂ ಸರಿಯಾಗಿ ಮಳೆ ಬರುವ ಲಕ್ಷಣವಿಲ್ಲ. ನಮ್ಮ ರೈತರ ಹಣೆ ಬರಹವೇ ಇಷ್ಟು ಎನ್ನುವಂತಾಗಿದೆ.
.ಗೋವಿಂದ ಇಂಗಳೆ, ರೈತ

ಪ್ರಸಕ್ತ ಸಾಲಿನಲ್ಲಿ ತಾಲೂಕಿನಲ್ಲಿ ವಾಡಿಕೆ ಮಳೆಯಾಗಿಲ್ಲ. ಇದರಿಂದ ತಾಲೂಕಿನ ಜಲಮೂಲಗಳಿಗೆ ಹನಿ ನೀರು ಬಂದಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ತಾಲೂಕಿನ 11 ಗ್ರಾಮ ಹಾಗೂ ಪಟ್ಟಣಕ್ಕೆ ಟ್ಯಾಂಕರ್‌ ಮೂಲಕ ನೀರು ಪೂರೈಸಲಾಗುತ್ತಿದೆ. ಕೊಳವೆ ಬಾವಿಗಳಾದರೂ ನಮಗೆ ಎಷ್ಟು ದಿನ ಸಹಕಾರ ನೀಡುತ್ತವೆ ಎನ್ನುವುದು ತಿಳಿಸಿದಿಲ್ಲ. ಪ್ರಕೃತಿಯ ಕೋಪಕ್ಕೆ ನಾವು ಅಸಹಾಕರಾಗಿದ್ದೇವೆ.
ಎಂ. ಚಂದ್ರಶೇಖರ, ತಹಶೀಲ್ದಾರ್‌

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.