ಬಿಟಿಡಿಎ ವಿರುದ್ಧ ರೈತನ ಆಕ್ರೋಶ

ಭೂಮಿ ಕೊಟ್ಟ ರೈತನಿಗೆ ಕೊಟ್ಟಿಲ್ಲ ಪರಿಹಾರ•ಕಚೇರಿಗೆ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆ

Team Udayavani, Jun 22, 2019, 1:09 PM IST

22–June-25

ಬಾಗಲಕೋಟೆ: ಬಿಟಿಡಿಎ ಮುಖ್ಯ ಗೇಟ್‌ಗೆ ಬೀಗ ಹಾಕಿ ಪ್ರತಿಭಟಿಸಿದ ರೈತ ಬಸಪ್ಪ ದೊಡ್ಡಮನಿ.

ಬಾಗಲಕೋಟೆ: ನವನಗರ-ಬಾಗಲಕೋಟೆಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗೆ ಭೂಮಿ ನೀಡಿದ ರೈತನಿಗೆ ಸೂಕ್ತ ಪರಿಹಾರ ಕೊಡದೇ ಬೇಜವಾಬ್ದಾರಿ ತೋರಿದ ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರದ ವಿರುದ್ಧ ರೈತನೊಬ್ಬ ಆಕ್ರೋಶ ವ್ಯಕ್ತಪಡಿಸಿದ್ದು, ಶುಕ್ರವಾರ ಬಿಟಿಡಿಎ ಮುಖ್ಯ ಕಚೇರಿಯ ಗೇಟ್ ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು.

ನಗರದ ಬಸಪ್ಪ ದೊಡ್ಡಮನಿ ಎಂಬ ರೈತ, ನವನಗರದ ಬಿಟಿಡಿಎ ಕಚೇರಿಯ ಮುಖ್ಯ ಗೇಟ್‌ಗೆ ಬೀಗ ಹಾಕಿ ಸುಮಾರು ಒಂದು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದ. ಈ ವೇಳೆ ಕಚೇರಿಯೊಳಗೆ ಇದ್ದ ಅಧಿಕಾರಿಗಳು ಹೊರ ಬರದೇ ಪರದಾಡಿದರೆ, ಬಿಟಿಡಿಎ ಕೆಲಸಕ್ಕಾಗಿ ಬಂದಿದ್ದ ಜನರು, ಒಳ ಹೋಗಲು ಆಗದೇ ಪರದಾಡಿದರು.

ಬಿಟಿಡಿಎ ಕೆಲ ಅಧಿಕಾರಿಗಳು, ರೈತ ಬಸಪ್ಪನ ಮನವೋಲಿಸಲು ಪ್ರಯತ್ನಿಸಿದರಾದರೂ, ಕಳೆದ ಹಲವು ವರ್ಷಗಳಿಂದ ಹೀಗೆ ಹೇಳಿ, ನನಗೆ ಪರಿಹಾರ ಕೊಟ್ಟಿಲ್ಲ. ಪರಿಹಾರ ಕೊಡುವವರೆಗೂ ಗೇಟ್ ತೆಗೆಯುವುದಿಲ್ಲ ಎಂದು ಪಟ್ಟು ಹಿಡಿದರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ, ಬಿಟಿಡಿಎ ಅಧಿಕಾರಿಗಳಿಗೆ ಪರಿಹಾರ ಕೊಡಲು ತಿಳಿಸಿದರು. ಸುಮಾರು ಹೊತ್ತಿನ ಬಳಿಕ, ಬೀಗ ಹಾಕಿದ ಗೇಟ್ ತೆರವುಗೊಳಿಸಲಾಯಿತು.

ಏನಿದು ಪರಿಹಾರ: ಬಸಪ್ಪ ದೊಡ್ಡಮನಿ ಅವರು ನಗರದ ದಡ್ಡೇನವರ ಕ್ರಾಸ್‌ ಬಳಿ ಭೂಮಿ ಹೊಂದಿದ್ದು, ಕಳೆದ 20 ವರ್ಷಗಳ ಹಿಂದೆ ಬಾಗಲಕೋಟೆ ನಗರ ಆಲಮಟ್ಟಿ ಹಿನ್ನೀರಿನಲ್ಲಿ ಮುಳುಗಡೆಯಾದಾಗ, ನವನಗರಕ್ಕೆ ಸ್ಥಳಾಂತರಿಸಲಾಗಿತ್ತು. ಹಳೆಯ ನಗರ ಮತ್ತು ನವನಗರಕ್ಕೆ ಸಂಪರ್ಕ ಕಲ್ಪಿಸಲು ದಡ್ಡೇನವರ ಕ್ರಾಸ್‌ ಬಳಿ, ರೈತ ಬಸಪ್ಪ ಅವರ 1.20 ಎಕರೆ ಜಾಗೆಯನ್ನು ಬಿಟಿಡಿಎ ಸ್ವಾಧೀನಪಡಿಸಿಕೊಂಡಿದೆ. ಆದರೆ, ಈ ಭೂಮಿಗೆ ಈ ವರೆಗೆ ಪರಿಹಾರ ಕೊಟ್ಟಿಲ್ಲ ಎಂಬುದು ರೈತನ ಆಕ್ರೋಶ.

ಬಿಟಿಡಿಎ ಪರಿಹಾರ ಕೊಡದ ಹಿನ್ನೆಲೆಯಲ್ಲಿ ಇದೇ ರೈತ, ಕಳೆದ ವರ್ಷ, ನವನಗರ-ಬಾಗಲಕೋಟೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯನ್ನು ಜೆಸಿಬಿ ಮೂಲಕ ಅಗೆದು ರಸ್ತೆ ಸಂಚಾರ ಸ್ಥಗಿತಗೊಳಿಸಿದ್ದ. ಇದಕ್ಕೂ ಮುಂಚೆ ತನ್ನ ಭೂಮಿಯಲ್ಲಿ ಹಾಯ್ದು ಹೋಗಿರುವ ಬಿಎಸ್‌ಎನ್‌ಎಲ್ ಕೇಬಲ್ ತಂತಿಗಳನ್ನು ಕಟ್ ಮಾಡಿದ್ದ. ಇದರಿಂದ ಇಡೀ ಜಿಲ್ಲಾಡಳಿತ ಭವನ, ದೂರವಾಣಿ ಸಂಪರ್ಕ ಹಾಗೂ ಇಂಟರ್‌ನೆಟ್ ಸಂಪರ್ಕದಿಂದ ಇಡೀ ದಿನ ವಂಚಿತವಾಗಿತ್ತು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.