ಹುಲಿಗೆಮ್ಮ ನಕೊಳ್ಳದಲ್ಲಿ ಚಾಲುಕ್ಯರ ಸಮಾಧಿ

ಪಟ್ಟದಕಲ್ಲು ಹತ್ತಿರದ ಭದ್ರನಾಯಕನ ಜಾಲಿಹಾಳ ಹತ್ತಿರದಲ್ಲಿವೆ ಸಮಾಧಿರೂಪದ ದೇವಾಲಯಗಳು

Team Udayavani, Oct 11, 2019, 5:40 PM IST

11-October-15

ವಿಶೇಷ ವರದಿ
ಬಾಗಲಕೋಟೆ: ಭಾರತದಲ್ಲಿ ಹಿಂದೂ ದೇವಾಲಯಗಳ ನಿರ್ಮಾಣದ ಅತಿ ದೊಡ್ಡ ಆಂದೋಲನ ಆರಂಭಿಸಿದ್ದ ಚಾಲುಕ್ಯರ
ರಾಜರ ಸಮಾಧಿಗಳು ಬಾದಾಮಿ ತಾಲೂಕು ವಿಶ್ವ ಪರಂಪರೆ ಪ್ರವಾಸಿ ತಾಣ ಪಟ್ಟದಕಲ್ಲು ಸಮೀಪದ ಹುಲಿಗೆಮ್ಮನಕೊಳ್ಳದಲ್ಲಿ ಪತ್ತೆಯಾಗಿವೆ.

ಚಾಲುಕ್ಯರು ತಾವು ಬಾಳಿದ ಅರಮನೆಗಳ ಬಗ್ಗೆ ಯಾವ ಉಲ್ಲೇಖವೂ ಇಲ್ಲ. ಅರಮನೆಗಳ ಯಾವುದೇ ಕುರುಹುಗಳು ಇಲ್ಲ. ತಮ್ಮ ಸಾವಿನ ನಂತರ ಆಡಂಬರದ ಸಮಾಧಿಗಳನ್ನು ಸಹ ಕೆತ್ತಿಸಲಿಲ್ಲ. ಇವರ ಸಮಾಧಿಗಳು ಎಲ್ಲಿವೆ ಎಂಬುದರ ಬಗ್ಗೆ ನೂರಾರು ಸಂಶೋಧಕರಿಗೆ ಸವಾಲಾಗಿಯೇ ಉಳಿದಿತ್ತು. ಶಿವ, ವಿಷ್ಣುವನ್ನು ನಂಬಿದ ಈ ಮಹಾನ್‌ ರಾಜರು ತಮ್ಮ ಸಾವನ್ನು ಸಹ
ರಹಸ್ಯಮಯಗೊಳಿಸಿದ್ದು ಆಶ್ಚರ್ಯ. ಚಾಲುಕ್ಯರ ನಾಡಿನಲ್ಲಿ 2005ರಿಂದ ಸತತ 14 ವರ್ಷಗಳ ಕಾಲ ನಡೆದ ಸಂಶೋಧನೆ ಹಾಗೂ ಛಾಯಾಗ್ರಹಣದ ಹಾದಿಯಲ್ಲಿ ಅನೇಕ ರೋಚಕ ವಿಷಯಗಳು ಕಂಡು ಬಂದಿದ್ದು, ಚಾಲುಕ್ಯರ ನಾಡಿನಲ್ಲಿ ಬೆಳಕಿಗೆ ಬಾರದ ಶಕ್ತಿ ಆರಾಧನೆ, ತಂತ್ರಸಾಧನೆಗಳು ಅನೇಕ ಅಚ್ಚರಿಯನ್ನುಂಟು ಮಾಡಿವೆ ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ ಸುಳ್ಳೊಳ್ಳಿ ಹೇಳಿದ್ದಾರೆ.

ಚಾಲುಕ್ಯರ ರಾಜವಂಶಸ್ಥರ ಮೂಲ ಸ್ಥಾನ ಹಾಗೂ ಇತಿಹಾಸದ ಬಗ್ಗೆ ಅನೇಕ ಸಂಶೋಧಕರು ತಮ್ಮ ತಮ್ಮ ವಿಚಾರಗಳನ್ನು ಮಂಡಿಸಿದ್ದು, ಅವರು ತುಂಗಭದ್ರಾ ಸುತ್ತಮುತ್ತಲಿನವರೆಂದು, ಸ್ಥಳೀಯ ಆಂಧ್ರದ ಗಡಿ ಭಾಗದವರೆಂದು, ಸ್ಥಳೀಯ ಪಾಳೆಗಾರರೆಂದು ತಿಳಿಸಲಾಗಿದೆ.

ಬಾದಾಮಿಯ ಡಾ| ಶೀಲಾಕಾಂತ ಪತ್ತಾರ ಅವರ ಪ್ರಕಾರ ಚಾಲುಕ್ಯರು ಕನ್ನಡ ನಾಡಿನವರು. ಸ್ಥಳೀಯ ಚಲಕಿ, ಸಲುಕಿ, ಸಲಕಿ, ಎಲ್ಲವೂ ದೇಶಿಯ ನಾಮಗಳಿದ್ದು ಇವರೆಲ್ಲರೂ ಕೃಷಿಕರಾಗಿದ್ದರೆಂದು ತಿಳಿಸಿದ್ದಾರೆ.

ವಿದೇಶಿ ವಿದ್ವಾಂಸ ಏನನ್ನುತ್ತಾರೆ?: ಚಾಲುಕ್ಯರ ನಾಡಿನಲ್ಲಿ ಸತತ ಮೂವತ್ತು ವರ್ಷಗಳ ಸಂಶೋಧನೆ ಕೈಗೊಂಡಿರುವ ವಿದೇಶಿ ವಿದ್ವಾಂಸ ಲಂಡನ್‌ನ ಡಾ|ಜಾರ್ಜ್‌ ಮಿಶೆಲ್‌ ಪ್ರಕಾರ ಒಟ್ಟು 16 ರಾಜವಂಶಸ್ಥರ ಪೀಳಿಗೆಯಲ್ಲಿ 7 ಪ್ರಮುಖರನ್ನು ಉಲ್ಲೇಖೀಸಿದ್ದಾರೆ. 6ನೇ ಶತಮಾನದ ಆರಂಭದಲ್ಲಿ ಜಯಸಿಂಹನಿಂದ ಆರಂಭಗೊಂಡ ಈ ವಂಶ 757ರಲ್ಲಿ ಕೀರ್ತಿವರ್ಮನಿಂದ ಮುಕ್ತಾಯಗೊಳ್ಳುತ್ತದೆ ಎಂದು ಹೇಳಿಕೊಂಡಿದ್ದಾರೆ.

ಹುಲಿಗೆಮ್ಮನ ಕೊಳ್ಳದ ಸಮಾಧಿ ರೂಪದ ದೇವಾಲಯಗಳು, ಪಟ್ಟದಕಲ್ಲು ಹತ್ತಿರದ ಭದ್ರನಾಯಕನ ಜಾಲಿಹಾಳ ಹತ್ತಿರದಲ್ಲಿವೆ. ಹುಲಗೆಮ್ಮನ ಕೊಳ್ಳದ ಗುಡ್ಡದಲ್ಲಿ 2ನೇ ಪುಲಕೇಶಿ ಕೆಲ ಕಾಲ ವಾಸಿಸಿರುವುದರ ಬಗ್ಗೆ ಕೆಲ ಸಂಶೋಧಕರು ಉಲ್ಲೇಖೀಸಿದ್ದಾರೆ.

ಇಲ್ಲಿರುವ 11 ಚಿಕ್ಕ ಚಿಕ್ಕ ದೇವಾಲಯಗಳು, 11 ರಾಜರ ಸಮಾಧಿಗಳು, ದೇಶದ ಪ್ರಮುಖ 12 ಜ್ಯೋತೀರ್ಲಿಂಗಗಳ ರೂಪವೆಂದು ಸ್ಥಳೀಯರು ತಪ್ಪಾಗಿ ಅರ್ಥೈಸಿದ್ದಾರೆ. ಹಿಂದೂ ಧರ್ಮದ ಪ್ರಕಾರ ಒಂದೇ ವಂಶಸ್ಥರ ಅಂತ್ಯಕ್ರಿಯೆಗಳನ್ನು ಒಂದೆಡೆ ಮಾಡುವುದು ಪರಂಪರಾಗತ ರೂಢಿ. ಅಲ್ಲದೆ ಚಾಲುಕ್ಯ ರಾಜರುಗಳ ಅಸ್ತಿಗಳ ಅಂತ್ಯಕ್ರಿಯೆಗಳನ್ನು ಹುಲಿಗೆಮ್ಮನ ಕೊಳ್ಳದ ಬೆಟ್ಟದಲ್ಲಿ ಮಾಡಿ ಅದರ ಮೇಲೆ ಲಿಂಗಗಳನ್ನು ಸ್ಥಾಪಿಸಿ ಚಿಕ್ಕ ಚಿಕ್ಕ ದೇವಸ್ಥಾನ ನಿರ್ಮಿಸಲಾಗಿದೆ.

ಈ ರಾಜವಂಶಸ್ಥರ ರುದ್ರಭೂಮಿ ಇಲ್ಲಿರುವುದರ ಬಗ್ಗೆ ಅನೇಕ ಐತಿಹ್ಯಗಳಿವೆ. ಇದಕ್ಕೆ ಪುಷ್ಟೀಕರಿಸುವಂತೆ ಶಿಖರವಲ್ಲದ ಒಂದು ದೇವಾಲಯದ ಮಂಟಪದಲ್ಲಿ 2ನೇ ವಿಕ್ರಮಾದಿತ್ಯನ ಅಸ್ತಿಗಳನ್ನು ಸಮಾಧಿ ಮಾಡಲಾಗಿರುವ ಬಗ್ಗೆ ಅಲ್ಲಿರುವ ಶಾಸನದಲ್ಲಿ ಉಲ್ಲೇಖೀಸಲಾಗಿದೆಯೆಂದು ಡಾ| ಜಾರ್ಜ್‌ ಮಿಶೆಲ್‌ ಸಂಶೋಧಿಸಿದ್ದಾರೆ.

ಉಳಿದ ಯಾವ ರಾಜರುಗಳ ಸಮಾಧಿಗಳ ಬಗ್ಗೆ ಉಲ್ಲೇಖವಿಲ್ಲವಾದರೂ ಹಿಂದೂ ಸಂಪ್ರದಾಯದಂತೆ ರಾಜವಂಶಸ್ಥರ ಸಮಾಧಿಗಳನ್ನು ಒಂದೆಡೆ ನಿರ್ಮಿಸುವುದು, ಸಮಾಧಿಗಳ ಮೇಲೆ ಲಿಂಗಗಳನ್ನು ಇಡುವುದು ಧಾರ್ಮಿಕ ಪರಂಪರೆಯಾಗಿದೆ.

ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಶೋಧನೆ ಅಗತ್ಯವಿದ್ದು, ಪ್ರಾಚ್ಯವಸ್ತು ಹಾಗೂ ಪುರಾತತ್ವ ಇಲಾಖೆಗಳು ಇಲ್ಲಿರುವ ಸಮಾಧಿಗಳ ಉತ್ಖನನ ನಡೆಸಿದಲ್ಲಿ ಸತ್ಯಾಸತ್ಯತೆ ತಿಳಿಯಲಿದೆ
ಎಂದು ಅಭಿಪ್ರಾಯ ಪಡಲಾಗಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

ಮಹಾಲಿಂಗಪುರ: ದೇಶ ರಕ್ಷಣೆಗಾಗಿ ಮೋದಿ ಪ್ರಧಾನಿಯಾಗಲಿ- ಸೂಲಿಬೆಲೆ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.