ಜಿಪಂ ಅಧಿಕಾರಿ-ಸಿಬ್ಬಂದಿ ಮೇಲೆ ಕ್ಯಾಮೆರಾ ಕಣ್ಣು


Team Udayavani, Oct 17, 2019, 3:42 PM IST

17-October-16

ಬಾಗಲಕೋಟೆ: ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ಪಾರದರ್ಶಕತೆ ತರಲು ವಿವಿಧ ವಿಭಾಗಗಳ ಕಾರ್ಯವೈಖರಿ, ಆಡಳಿತ ಹಂತದ ಎಲ್ಲ ರೀತಿಯ ಕೆಲಸ-ಕಾರ್ಯ-ಕಡತಗಳನ್ನು ನೇರವಾಗಿ ವೀಕ್ಷಿಸಲು ಇಲ್ಲಿನ ನವನಗರ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಸಿಇಒ ಕಚೇರಿ ಸಹಿತ ಜಿಪಂನ ಆಡಳಿತ ಕಚೇರಿಯಲ್ಲಿ 20 ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತಿದೆ ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಪಂ ಆಡಳಿತದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಈ ಕ್ರಮ ಅನುಸರಿಸಲಾಗುತ್ತಿದೆ. ಸಿಇಒ ಕಚೇರಿ ವ್ಯಾಪ್ತಿಯಲ್ಲಿಯ ಎಲ್ಲ ವಿಭಾಗಗಳ ದಿನನಿತ್ಯದ ಕಾರ್ಯ-ಕಲಾಪಗಳನ್ನು ನೇರವಾಗಿ ತಮ್ಮ ಕಚೇರಿಯಿಂದಲೇ ವೀಕ್ಷಿಸಲು ಹಾಗೂ ಸಾರ್ವಜನಿಕರ ಸಮಸ್ಯೆ ಇತ್ಯರ್ಥಪಡಿಸಲು ಇದರಿಂದ ಅನುಕೂಲವಾಗಲಿದೆ. ಕಚೇರಿಗೆ ಅಹವಾಲು, ಸಮಸ್ಯೆ ಹೊತ್ತು ತರುವ ಸಾರ್ವಜನಿಕರ ಪ್ರಕರಣಗಳು, ಕಚೇರಿ ಕಡತಗಳ ವಿಳಂಬ, ಕೇಸ್‌ ವರ್ಕರ್‌ ಕಿರಿಕಿರಿ ತಪ್ಪಿಸಲು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಸಿಇಒ ಕಚೇರಿಯಲ್ಲಿಯ ಕೆಲಸ ಕಾರ್ಯದ ನೇರ ಪ್ರಸಾರವನ್ನು ಕಾರಿಡಾರ್‌ನ ಸ್ಕ್ರೀನ್‌ನಲ್ಲಿ ಸಾರ್ವಜನಿಕರು ಹಾಗೂ ಸಿಬ್ಬಂದಿಗಳು ನೇರವಾಗಿ ವೀಕ್ಷಿಸಬಹುದಾಗಿದೆ. ಸಿಇಒ ಕಚೇರಿ ಆಪ್ತ ಶಾಖೆ, ಉಪ ಕಾರ್ಯದರ್ಶಿ ಕಚೇರಿ, ಯೋಜನಾ ನಿರ್ದೇಶಕರ ಕಚೇರಿ, ಆಡಳಿತ ವಿಭಾಗ, ಯೋಜನಾ ವಿಭಾಗ, ಲೆಕ್ಕಪತ್ರ ಶಾಖೆ ಹಾಗೂ ಕಾರಿಡಾರ್‌ ಸೇರಿದಂತೆ ವಿವಿಧ ಪ್ರಮುಖ ಕೇಸ್‌ ವರ್ಕರ್‌ಗಳ ವಿಭಾಗಗಳು ಸೇರಿ ಒಟ್ಟು 20 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುತ್ತಿದೆ. ಇವುಗಳನ್ನು ತಮ್ಮ ಕಚೇರಿಯಿಂದ ವೀಕ್ಷಣೆ ಹಾಗೂ ನಿರ್ವಹಣೆ ಮಾಡಲಾಗುವುದು ಎಂದಿದ್ದಾರೆ.

ಪೇಪರ್‌ಲೆಸ್‌ ಇ-ಆಫೀಸ್‌ : ಪೇಪರ್‌ ಲೇಸ್‌ ಇ ಆಫೀಸ್‌ಗೆ ಕಳೆದೆರಡು ತಿಂಗಳಿನಿಂದಲೇ ಚಾಲನೆ ನೀಡಿದೆ. ಈ ತಿಂಗಳೊಳಗೆ ಸಂಪೂರ್ಣವಾಗಿ “ಇ’ ಕಚೇರಿಯಾಗಿ ಪರಿವರ್ತಿಸಲಾಗುವುದು. ಸದ್ಯ ಪ್ರತಿದಿನ 3-4 ಕಡತಗಳನ್ನು “ಇ’ ಕಚೇರಿಯಲ್ಲೇ ವ್ಯವಹರಿಸಲಾಗುತ್ತಿದೆ. ನುರಿತ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತಿದೆ.

ತುರ್ತು ಸಂದರ್ಭಗಳಲ್ಲಿ ತಮ್ಮ ಪ್ರವಾಸ ವೇಳೆ ಬೇರೆ ಕಡೆಯಿಂದಲೂ, ಗೃಹ ಕಚೇರಿಯಿಂದಲೂ ಕಡತ ವೀಕ್ಷಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.